logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Chitra Pournami: ಏ. 23 ರಂದು ಚೈತ್ರ ಹುಣ್ಣಿಮೆ; ಆಂಜನೇಯನ ಕೃಪೆಯಿಂದ ಈ 5 ರಾಶಿಗಳಿಗೆ ಅದೃಷ್ಟವೋ ಅದೃಷ್ಟ

Chitra Pournami: ಏ. 23 ರಂದು ಚೈತ್ರ ಹುಣ್ಣಿಮೆ; ಆಂಜನೇಯನ ಕೃಪೆಯಿಂದ ಈ 5 ರಾಶಿಗಳಿಗೆ ಅದೃಷ್ಟವೋ ಅದೃಷ್ಟ

Rakshitha Sowmya HT Kannada

Apr 22, 2024 12:53 PM IST

ಚೈತ್ರ ಹುಣ್ಣಿಮೆಯಂದು ಆಂಜನೇಯನ ಕೃಪೆಯಿಂದ ಬದಲಾಗಲಿದೆ ಈ ರಾಶಿಯವರ ಜೀವನ

  • Chaitra Pournami 2024: ಹಿಂದೂ ಧರ್ಮದಲ್ಲಿ ಚೈತ್ರ ಪೂರ್ಣಿಮೆಗೆ ಹೆಚ್ಚಿನ ಮಹತ್ವವಿದೆ. ಈ ದಿನ ಚಂದ್ರನು ಭೂಮಿಗೆ ಹತ್ತಿರ ಬರುತ್ತಾನೆ. ಅದರ ಗಾತ್ರವು ಕೂಡಾ ದೊಡ್ಡದಾಗಿರುತ್ತದೆ ಮತ್ತು ಪ್ರಕಾಶಮಾನವಾಗಿರುತ್ತದೆ. ಈ ಸಮಯದಲ್ಲಿ ಚಂದ್ರನನ್ನು ಪಿಂಕ್ ಮೂನ್ ಎಂದು ಕರೆಯಲಾಗುತ್ತದೆ. ಈ ದಿನ ಕೆಲವೊಂದು ರಾಶಿಯವರ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ.

ಚೈತ್ರ ಹುಣ್ಣಿಮೆಯಂದು ಆಂಜನೇಯನ ಕೃಪೆಯಿಂದ ಬದಲಾಗಲಿದೆ ಈ ರಾಶಿಯವರ ಜೀವನ
ಚೈತ್ರ ಹುಣ್ಣಿಮೆಯಂದು ಆಂಜನೇಯನ ಕೃಪೆಯಿಂದ ಬದಲಾಗಲಿದೆ ಈ ರಾಶಿಯವರ ಜೀವನ (PC: Unsplash)

ಹಿಂದೂ ಧರ್ಮದಲ್ಲಿ ಚೈತ್ರ ತಿಂಗಳ ಹುಣ್ಣಿಮೆಗೆ ಬಹಳ ಪ್ರಾಮುಖ್ಯತೆ ಇದೆ. ಇದೇ ಸಮಯದಲ್ಲಿ ಹನುಮಾನ್‌ ಜಯಂತಿಯನ್ನು ಕೂಡಾ ಆಚರಿಸಲಾಗುತ್ತದೆ. ದೃಕ್ ಪಂಚಾಂಗದ ಪ್ರಕಾರ ಈ ವರ್ಷ ಏಪ್ರಿಲ್ 23 ರಂದು ಚೈತ್ರ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಚೈತ್ರ ಪೂರ್ಣಿಮೆಯ ಚಂದ್ರನನ್ನು ಪಿಂಕ್ ಮೂನ್,

ತಾಜಾ ಫೋಟೊಗಳು

ಶನಿ ಸಂಕ್ರಮಣದಿಂದ ರೂಪುಗೊಳ್ಳಲಿದೆ ಶಶ ರಾಜಯೋಗ; 2025ವರೆಗೆ ಈ ಮೂರೂ ರಾಶಿಯವರಿಗೆ ಹೋದಲೆಲ್ಲಾ ಹಿಂಬಾಲಿಸಲಿದೆ ಅದೃಷ್ಟ

May 09, 2024 08:25 AM

Trigrahi Yoga: ಮೇ ತಿಂಗಳಲ್ಲಿ ತ್ರಿಗ್ರಹಿ ಯೋಗ; ಈ 3 ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ

May 09, 2024 06:00 AM

ಇಂದು ವೈಶಾಖ ಅಮಾವಾಸ್ಯೆ; ಧಾರ್ಮಿಕ ಕಾರ್ಯಗಳಿಗೆ ಮೀಸಲಾದ ಈ ದಿನ ಇಂಥ ಕೆಲಸಗಳನ್ನು ಮಾಡಿ ಆರ್ಥಿಕ ಸಂಕಷ್ಟ ತಂದುಕೊಳ್ಳದಿರಿ

May 08, 2024 08:40 AM

Amavasya 2024: ಪಿತೃದೋಷ, ಕಾಳಸರ್ಪ ದೋಷ , ಶನಿ ದೋಷ ಪರಿಹಾರಕ್ಕೆ ಅಮಾವಾಸ್ಯೆಯಂದು ಈ ಕೆಲಸಗಳನ್ನು ಮಾಡಿ

May 07, 2024 03:00 PM

Mars Transit: ಮೀನ ರಾಶಿಗೆ ಮಂಗಳನ ಪ್ರವೇಶ; ಸಿಂಹ, ಕನ್ಯಾ ಸೇರಿ ಈ ರಾಶಿಗಳಿಗೆ ಕಷ್ಟಕಷ್ಟ

May 06, 2024 10:00 AM

ಲಕ್ಷ್ಮೀದೇವಿಯ ಕೃಪೆ ಬೇಕು ಅಂದ್ರೆ ಈ 5 ಅಭ್ಯಾಸ ಬಿಟ್ಟುಬಿಡಿ; ಮನೆಯಲ್ಲಿ ಸಂತೋಷದೊಂದಿಗೆ ಸಮೃದ್ಧಿ ನೆಲೆಸುತ್ತೆ

May 06, 2024 09:00 AM

ಸೂಪರ್ ಮೂನ್ ಮತ್ತು ಪ್ಯಾಸ್ಕಲ್ ಮೂನ್ ಸೇರಿದಂತೆ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಚಂದ್ರನು ಭೂಮಿಗೆ ಬಹಳ ಹತ್ತಿರ ಬಂದಾಗ. ಈ ಕಾರಣದಿಂದಾಗಿ ಚಂದ್ರನ ಗಾತ್ರವು ದೊಡ್ಡದಾಗಿ ಮತ್ತು ಪ್ರಕಾಶಮಾನವಾಗಿ ಕಾಣುತ್ತದೆ. ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರದ ಪ್ರಕಾರ, ಚೈತ್ರ ಪೂರ್ಣಿಮೆಯ ದಿನದಿಂದ ಕೆಲವು ರಾಶಿಚಕ್ರದವರು ವಿಶೇಷವಾಗಿ ಹನುಮಂತನ ಆಶೀರ್ವಾದ ಪಡೆಯುತ್ತಾರೆ.

ಮೇಷ ರಾಶಿ : ಸೂಪರ್ ಮೂನ್ ಪ್ರಭಾವದಿಂದ ಮೇಷ ರಾಶಿಯ ಜನರ ಭಾವನೆಗಳಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಂಧವು ಬಲವಾಗಿರುತ್ತದೆ. ಒಂಟಿ ಜನರು ವಿಶೇಷ ವ್ಯಕ್ತಿಗಳ ಕಡೆಗೆ ಆಕರ್ಷಿತರಾಗುತ್ತಾರೆ. ಆದರೆ ಸಂಬಂಧಕ್ಕೆ ಆತುರ ಪಡಬೇಡಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಪ್ರಯತ್ನಿಸಿ. ಹೂಡಿಕೆ ನಿರ್ಧಾರಗಳನ್ನು ಚಿಂತನಶೀಲವಾಗಿ ತೆಗೆದುಕೊಳ್ಳಿ. ವೃತ್ತಿ ಗುರಿಗಳ ಮೇಲೆ ಕೇಂದ್ರೀಕರಿಸಿ.

ವೃಷಭ: ಸಂಬಂಧಗಳಲ್ಲಿ ದೊಡ್ಡ ಬದಲಾವಣೆಗಳಾಗಲಿವೆ. ಹುಣ್ಣಿಮೆಯ ಪ್ರಭಾವದಿಂದಾಗಿ, ಸಂಬಂಧಗಳಲ್ಲಿ ಪ್ರೀತಿ ಮತ್ತು ಪ್ರಣಯವು ಹಾಗೇ ಉಳಿಯುತ್ತದೆ. ನಿಮ್ಮ ಭಾವನೆಗಳನ್ನು ನಿಮ್ಮ ಸಂಗಾತಿಯೊಂದಿಗೆ ಪ್ರಾಮಾಣಿಕವಾಗಿ ಹಂಚಿಕೊಳ್ಳಿ. ಪಾಲುದಾರಿಕೆ ವ್ಯವಹಾರದಲ್ಲಿ ಆರ್ಥಿಕ ಲಾಭ ಇರುತ್ತದೆ. ತಮ್ಮ ಸಂಬಂಧದ ಬಗ್ಗೆ ಗಂಭೀರವಾಗಿರುವವರು ಪೋಷಕರೊಂದಿಗೆ ಮದುವೆಯ ಬಗ್ಗೆ ಚರ್ಚಿಸಬಹುದು.

ಮಿಥುನ: ಕೆಲಸದ ಜವಾಬ್ದಾರಿ ಹೆಚ್ಚಲಿದೆ. ಕಚೇರಿ ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿ ನಿಮ್ಮದಾಗಲಿದೆ. ಹೊಸ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಕೆಲವು ಜನರು ಉದ್ಯೋಗ ಬದಲಾಯಿಸಲು ಯೋಜಿಸಬಹುದು. ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಸ್ವಯಂ ಕಾಳಜಿಯ ಮೇಲೆ ಕೇಂದ್ರೀಕರಿಸಿ.

ಕರ್ಕಾಟಕ: ಜೀವನದಲ್ಲಿ ಸಂತೋಷ, ಸಮೃದ್ಧಿ ಇರುತ್ತದೆ. ಪ್ರೇಮ ಜೀವನದಲ್ಲಿ ಹೊಸ ರೋಚಕ ತಿರುವುಗಳಿರುತ್ತವೆ. ಒಂಟಿಯಾಗಿರುವವರು ಹೊಸ ಜನರನ್ನು ಭೇಟಿಯಾಗುತ್ತಾರೆ. ಅಲ್ಲದೆ, ನಿಜವಾದ ಜೀವನ ಸಂಗಾತಿಯ ಹುಡುಕಾಟವು ಪೂರ್ಣಗೊಳ್ಳುತ್ತದೆ. ಸಂಬಂಧದಲ್ಲಿರುವವರು, ತಮ್ಮ ಸಂಗಾತಿಯೊಂದಿಗೆ ಅವರ ಸಂಬಂಧವು ಗಟ್ಟಿಯಾಗುತ್ತದೆ. ನಿಮ್ಮ ಮೆಚ್ಚಿನ ಕೆಲಸ ಮಾಡಲು ಸಮಯ ತೆಗೆದುಕೊಳ್ಳಿ. ವೆಚ್ಚಗಳನ್ನು ನಿಯಂತ್ರಿಸಿ. ಮಕ್ಕಳ ಆರೋಗ್ಯದ ಕಡೆ ಗಮನ ಕೊಡಿ. ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಿರಿ.

ಸಿಂಹ: ಈ ರಾಶಿಯವರಿಗೆ ಚೈತ್ರ ಪೂರ್ಣಿಮೆಯ ಕಾರಣ ಭಾವನೆಗಳಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹಿಂದಿನ ನೆನಪುಗಳು ನಿಮ್ಮನ್ನು ಕಾಡಬಹುದು. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ಹೊಸ ಮನೆಯನ್ನು ಪ್ರವೇಶಿಸಬಹುದು. ಕುಟುಂಬದಿಂದ ಬೆಂಬಲ ಸಿಗಲಿದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲಸುತ್ತದೆ.

ಕನ್ಯಾ: ಜೀವನದಲ್ಲಿ ಶಕ್ತಿ ಮತ್ತು ಉತ್ಸಾಹದ ಕೊರತೆ ಇರುವುದಿಲ್ಲ. ಹೊಸ ಕೌಶಲ್ಯಗಳನ್ನು ಕಲಿಯಲಿದ್ದೀರಿ. ಅಧ್ಯಯನದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಸೂಪರ್ ಮೂನ್ ಪ್ರಭಾವದಿಂದ ಮಾತಿನಲ್ಲಿ ಸೌಮ್ಯತೆ ಇರುತ್ತದೆ. ಹೊಸ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಜೀವನದಲ್ಲಿ ಹೊಸ ವಿಷಯಗಳನ್ನು ಅನ್ವೇಷಿಸಲಿದ್ದೀರಿ.

ತುಲಾ: ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಗಮನ ಕೊಡಿ. ಆದಾಯದ ಹೊಸ ಮೂಲಗಳನ್ನು ರಚಿಸಲಾಗುವುದು, ಆದರೆ ಹೆಚ್ಚುವರಿ ವೆಚ್ಚಗಳು ಸಹ ಇರುತ್ತದೆ. ಕೆಲವರು ಉತ್ತಮ ಸಂಬಳದೊಂದಿಗೆ ಹೊಸ ಕೆಲಸ ದೊರೆಯಬಹುದು. ಈ ಅವಧಿಯಲ್ಲಿ ನಿಮ್ಮ ಹಣವನ್ನು ಬುದ್ಧಿವಂತಿಕೆಯಿಂದ ನಿರ್ವಹಿಸಬೇಕು. ಹೊಸ ಬಜೆಟ್ ರಚಿಸಿ. ಹಣಕಾಸನ್ನು ಸೂಕ್ತವಾಗಿ ನಿರ್ವಹಿಸಿ.

ವೃಶ್ಚಿಕ: ಸೂಪರ್ ಮೂನ್ ವೃಶ್ಚಿಕ ರಾಶಿಯ ಜನರ ಜೀವನದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರುತ್ತದೆ. ಈ ಖಗೋಳ ಘಟನೆಯು ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಪ್ರಗತಿಗೆ ಅನೇಕ ಅವಕಾಶಗಳನ್ನು ಒದಗಿಸುತ್ತದೆ. ವೃತ್ತಿಗೆ ಸಂಬಂಧಿಸಿದ ಒಳ್ಳೆಯ ಸುದ್ದಿಯನ್ನು ನೀವು ಪಡೆಯುತ್ತೀರಿ. ಸಂಬಂಧಗಳಲ್ಲಿ ಹೊಸ ರೋಚಕ ತಿರುವುಗಳಿರುತ್ತವೆ. ಬದಲಾವಣೆಗಳನ್ನು ಸ್ವೀಕರಿಸಲು ಸಿದ್ಧರಾಗಿರಿ. ಇದು ಜೀವನದ ಪ್ರತಿಯೊಂದು ವಿಷಯದಲ್ಲೂ ಅಪಾರ ಯಶಸ್ಸನ್ನು ತರುತ್ತದೆ.

ಧನು ರಾಶಿ : ನಿಮ್ಮ ದಿನಚರಿಯಿಂದ ಸ್ವಲ್ಪ ವಿರಾಮ ತೆಗೆದುಕೊಳ್ಳಿ. ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದ ಎಲ್ಲಾ ಕೆಲಸಗಳನ್ನು ಮಾಡಿ. ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ. ನಿಮ್ಮನ್ನು ನೀವು ಆರೈಕೆ ಮಾಡುವತ್ತ ಗಮನ ಹರಿಸಿ. ನೀವು ಹೊಸ ಯೋಜನೆಯ ಜವಾಬ್ದಾರಿಯನ್ನು ಪಡೆಯಬಹುದು. ವೃತ್ತಿ ಬೆಳವಣಿಗೆಗೆ ಹೊಸ ಅವಕಾಶಗಳ ಮೇಲೆ ನಿಮ್ಮ ಗಮನವಿರಲಿ.

ಮಕರ: ಕಠಿಣ ಪರಿಶ್ರಮಕ್ಕೆ ಫಲ ಸಿಗಲಿದೆ. ಜೀವನದಲ್ಲಿ ಸಂತೋಷ, ಸಮೃದ್ಧಿ ಇರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳನ್ನು ಆಯೋಜಿಸಲು ಸಾಧ್ಯವಿದೆ. ಕೆಲವರಿಗೆ ಮಿತ್ರರ ನೆರವಿನಿಂದ ಆರ್ಥಿಕ ಲಾಭಕ್ಕಾಗಿ ಹೊಸ ಅವಕಾಶಗಳು ಸಿಗಲಿವೆ.

ಕುಂಭ: ವೃತ್ತಿ ಜೀವನದಲ್ಲಿ ಉತ್ತಮ ಯಶಸ್ಸನ್ನು ಪಡೆಯುವಿರಿ. ಕಠಿಣ ಪರಿಶ್ರಮ ಮತ್ತು ಶ್ರದ್ಧೆ ಫಲ ನೀಡಲಿದೆ. ಹೊಸ ಸಾಧನೆಗಳು ನಿಮ್ಮ ದಾರಿಯಲ್ಲಿ ಬರಲಿದೆ. ಕಚೇರಿಯಲ್ಲಿ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಿ. ಇದು ಯಶಸ್ಸಿನ ಹಾದಿಯಲ್ಲಿ ಮಾರ್ಗದರ್ಶನ ನೀಡುತ್ತದೆ.

ಮೀನ: ನಿಮ್ಮ ಆರಾಮ ವಲಯದಿಂದ ಹೊರ ಬರಲು ಮತ್ತು ಜೀವನದಲ್ಲಿ ಹೊಸ ವಿಷಯಗಳನ್ನು ಅನ್ವೇಷಿಸಲು ಸಿದ್ಧರಾಗಿರಿ. ನೀವು ಪ್ರಯಾಣದ ಯೋಜನೆಗಳನ್ನು ಮಾಡಬಹುದು. ನೀವು ಶೈಕ್ಷಣಿಕ ಕೆಲಸದಲ್ಲಿ ಅಪಾರ ಯಶಸ್ಸನ್ನು ಪಡೆಯುತ್ತೀರಿ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಲಿದ್ದೀರಿ.

ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಂಪೂರ್ಣವಾಗಿ ನಿಜ ಮತ್ತು ನಿಖರವಾಗಿದೆ ಎಂದು ನಾವು ಹೇಳಿಕೊಳ್ಳುವುದಿಲ್ಲ.

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

    ಹಂಚಿಕೊಳ್ಳಲು ಲೇಖನಗಳು