logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಾದ, ಬೇಸರದ ವಾತಾವರಣ: ಮೇ 1 ರ ದಿನ ಭವಿಷ್ಯ

Horoscope Today: ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಾದ, ಬೇಸರದ ವಾತಾವರಣ: ಮೇ 1 ರ ದಿನ ಭವಿಷ್ಯ

Rakshitha Sowmya HT Kannada

May 01, 2024 05:05 AM IST

ಮೇ 1 ರ ದಿನ ಭವಿಷ್ಯ

  • 1 ಮೇ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (1st May 2024 Daily Horoscope).

ಮೇ 1 ರ ದಿನ ಭವಿಷ್ಯ
ಮೇ 1 ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (1st May 2024 2024 Daily Horoscope).

ತಾಜಾ ಫೋಟೊಗಳು

ಮೇ 19 ರಂದು ವೃಷಭ ರಾಶಿಗೆ ಶುಕ್ರನ ಸಂಚಾರ; ಈ ರಾಶಿಯವರಿಗೆ ಶುಕ್ರಾದಿತ್ಯ ಯೋಗ ತರಲಿದೆ ಸಕಲ ಸುಖ ಸಮೃದ್ಧಿ

May 19, 2024 01:38 PM

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಅಷ್ಟಮಿ ರಾತ್ರಿ 12.44 ರವರೆಗೂ ಇದ್ದು ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಶ್ರವಣ ನಕ್ಷತ್ರವು ರಾತ್ರಿ 12.17 ರವರೆಗೂ ಇದ್ದು ನಂತರ ಧನಿಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.59

ಸೂರ್ಯಾಸ್ತ: ಸಂಜೆ 06.34

ರಾಹುಕಾಲ: 12.20 ರಿಂದ 01.54

ರಾಶಿಫಲ

ಸಿಂಹ

ಸದ್ಧಿಲ್ಲದೆ ಮನಸ್ಸಿನ ಲೆಕ್ಕಾಚಾರದಂತೆ ಕೆಲಸ ಕಾರ್ಯವನ್ನು ಆರಂಭಿಸುವಿರಿ. ಕುಟುಂಬದಲ್ಲಿ ಪರಸ್ಪರ ನಂಬಿಕೆ ಮತ್ತು ವಿಶ್ವಾಸ ಮನೆಮಾಡಿರುತ್ತದೆ. ಚಿಕ್ಕ ಪುಟ್ಟ ತಪ್ಪುಗಳಿಗೂ ಸಿಡುಕಿನಿಂದ ವರ್ತಿಸುವಿರಿ. ಜಗಳದಿಂದ ದೂರ ಉಳಿದು ಎಲ್ಲರೊಂದಿಗೆ ಸಮಾಧಾನದಿಂದ ಬಾಳುವಿರಿ. ಮೃದುವಾದ ಮಾತುಕತೆಯಿಂದಲೇ ಎದುರಾಗುವ ತೊಂದರೆಗಳನ್ನು ಗೆಲ್ಲುವಿರಿ. ಸೋದರರ ನಡುವೆ ಹಣದ ವಿಚಾರವಾಗಿ ವಿವಾದಗಳು ಇರುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಾದದಲ್ಲಿ ತೊಡಗುವಿರಿ. ಮನದ ಬೇಸರ ಕಳೆಯಲು ದೂರದ ಪ್ರದೇಶಕ್ಕೆ ಪ್ರವಾಸ ಮಾಡುವಿರಿ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಗೆಲ್ಲಲೇಬೇಕೆಂಬ ಹಟವಿರುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟದ ಮಾತಿಲ್ಲ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 5

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ : ಬೂದು

ಕನ್ಯಾ

ಬಹುದಿನಗಳಿಂದ ನಡೆಯದಿದ್ದ ಕೆಲಸವನ್ನು ಸುಲಭವಾಗಿ ಪೂರೈಸುವಿರಿ. ಅಧಿಕಾರಯುತ ಮಾತುಕತೆಯಿಂದ ಕೆಲವರ ವಿರೋಧ ಎದುರಿಸುವಿರಿ. ಮನಸ್ಸಿಗೆ ಹತ್ತಿರವಾಗದವರಿಂದ ದೂರ ಉಳಿಯುವಿರಿ. ಅನಾರೋಗ್ಯದಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸಬೇಕು. ಬುದ್ದಿವಂತಿಕೆಯಿಂದ ನಿಮ್ಮಿಂದ ಸಹಾಯ ಪಡೆಯುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಉದ್ಯೋಗದಲ್ಲಿ ಅಹಿತಕರ ವಾತಾವರಣ ಉಂಟಾಗಬಹುದು. ಪ್ರಯತ್ನಪಟ್ಟಲ್ಲಿ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಬಹುದು. ವ್ಯಾಪಾರ ವ್ಯವಹಾರಗಳು ಮಧ್ಯಮ ಮಟ್ಟದಲ್ಲಿ ಸಾಗುತ್ತವೆ. ಅಶಕ್ತ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡುವಿರಿ. ಸುಲಭವಾಗಿ ಯಾರ ಪ್ರಭಾವಕ್ಕೂ ಮಣಿಯುವುದಿಲ್ಲ. ಏಕಾಂಗಿತನ ಇಷ್ಟಪಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಆಕಾಶ ನೀಲಿ

ತುಲಾ

ಎಲ್ಲರೂ ಮೆಚ್ಚುವಂತೆ ವರ್ತಿಸುವ ಬುದ್ಧಿವಂತಿಕೆ ನಿಮ್ಮಲ್ಲಿ ಇರುತ್ತದೆ. ಲಾಭ ಇರದ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ಉದ್ಯೋಗದಲ್ಲಿ ಅಧಿಕಾರಿಗಳಿಗೆ ವಿಶೇಷ ಸವಲತ್ತುಗಳು ದೊರೆಯಲಿವೆ. ತಂದೆಯವರ ಕೆಲಸ ಕಾರ್ಯಗಳಲ್ಲಿ ನೆರವಾಗುವಿರಿ. ತಾಯಿಯವರ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ವಿದ್ಯಾರ್ಥಿಗಳು ಒತ್ತಡದಿಂದ ಹೊರಬಂದು ಕ್ರೀಡೆ ಮನರಂಜನೆಯಲ್ಲಿ ಪಾಲ್ಗೊಳ್ಳುತ್ತಾರೆ. ಕಷ್ಟ ನಷ್ಟಗಳಿಗೆ ಹೆದರದ ಮನಸ್ಥಿತಿ ಇರುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ವ್ಯವಸಾಯ ಮತ್ತು ಪಶು ಸಂಗೋಪನೆಯಲ್ಲಿ ಆಸಕ್ತಿ ಮೂಡಲಿದೆ. ಧಾರ್ಮಿಕ ಕೇಂದ್ರಕ್ಕೆ ಮನೆ ಮಂದಿಯೊಡನೆ ಭೇಟಿ ನೀಡುವಿರಿ. ವಾಹನವನ್ನು ವೇಗವಾಗಿ ಚಾಲನೆ ಮಾಡದಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ಕೆಂಪು

ವೃಶ್ಚಿಕ

ತಲೆಮಾರಿನಿಂದ ಬಂದ ತೊಂದರೆಯೊಂದನ್ನು ಮಾತಿನ ಮುಖಾಂತರ ಪರಿಹರಿಸಿಕೊಳ್ಳುವಿರಿ. ಹಣಕಾಸಿನ ಕೊರತೆ ಕಡಿಮೆಯಾಗುತ್ತದೆ. ಕುಟುಂಬದಲ್ಲಿ ತಾಯಿಯವರ ತೀರ್ಮಾನವನ್ನು ಎಲ್ಲರೂ ಗೌರವಿಸುವಿರಿ. ನಿಮ್ಮ ಪ್ರಯತ್ನದಿಂದಾಗಿ ಕುಟುಂಬದಲ್ಲಿ ಸಂತೋಷ ನೆಮ್ಮದಿ ತುಂಬಿರುತ್ತದೆ. ಮುಂಗೋಪಿಗಳು. ಆದರೆ ಕೋಪದಲ್ಲಿಯೂ ತಪ್ಪು ಮಾಡುವುದಿಲ್ಲ. ಉದ್ಯೋಗದಲ್ಲಿ ಯಾವುದೇ ರೀತಿಯ ತೊಂದರೆ ಎದುರಾಗದು. ವಿದ್ಯಾರ್ಥಿಗಳಿಗೆ ಕಲಿಕೆಯನ್ನು ಮರೆತು ವಿಶ್ರಾಂತಿಗೆ ಸಾಗುತ್ತಾರೆ. ಸಂಗಾತಿಯೊಂದಿಗೆ ಸಂಬಂಧಿಕರ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿದ್ದರೂ ಹಣವನ್ನು ಉಳಿಸಲು ಸಾಧ್ಯವಾಗದು. ಕೈಕಾಲುಗಳಿಗೆ ಪೆಟ್ಟಾಗುವ ಸಂಭವವಿದೆ ಎಚ್ಚರಿಕೆ ಇರಲಿ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ