logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಜೀವನದಲ್ಲಿ ನಡೆಯುವ ಘಟನೆಯಿಂದ ದೊಡ್ಡ ಪಾಠ ಕಲಿಯಲಿದ್ದೀರಿ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಜೀವನದಲ್ಲಿ ನಡೆಯುವ ಘಟನೆಯಿಂದ ದೊಡ್ಡ ಪಾಠ ಕಲಿಯಲಿದ್ದೀರಿ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Rakshitha Sowmya HT Kannada

Apr 28, 2024 05:00 AM IST

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

  • 28 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (28th April 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th April 2024 Daily Horoscope).

ತಾಜಾ ಫೋಟೊಗಳು

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ಶನಿ ಸಂಕ್ರಮಣದಿಂದ ರೂಪುಗೊಳ್ಳಲಿದೆ ಶಶ ರಾಜಯೋಗ; 2025ವರೆಗೆ ಈ ಮೂರೂ ರಾಶಿಯವರಿಗೆ ಹೋದಲೆಲ್ಲಾ ಹಿಂಬಾಲಿಸಲಿದೆ ಅದೃಷ್ಟ

May 09, 2024 08:25 AM

Trigrahi Yoga: ಮೇ ತಿಂಗಳಲ್ಲಿ ತ್ರಿಗ್ರಹಿ ಯೋಗ; ಈ 3 ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ

May 09, 2024 06:00 AM

ಇಂದು ವೈಶಾಖ ಅಮಾವಾಸ್ಯೆ; ಧಾರ್ಮಿಕ ಕಾರ್ಯಗಳಿಗೆ ಮೀಸಲಾದ ಈ ದಿನ ಇಂಥ ಕೆಲಸಗಳನ್ನು ಮಾಡಿ ಆರ್ಥಿಕ ಸಂಕಷ್ಟ ತಂದುಕೊಳ್ಳದಿರಿ

May 08, 2024 08:40 AM

Amavasya 2024: ಪಿತೃದೋಷ, ಕಾಳಸರ್ಪ ದೋಷ , ಶನಿ ದೋಷ ಪರಿಹಾರಕ್ಕೆ ಅಮಾವಾಸ್ಯೆಯಂದು ಈ ಕೆಲಸಗಳನ್ನು ಮಾಡಿ

May 07, 2024 03:00 PM

Mars Transit: ಮೀನ ರಾಶಿಗೆ ಮಂಗಳನ ಪ್ರವೇಶ; ಸಿಂಹ, ಕನ್ಯಾ ಸೇರಿ ಈ ರಾಶಿಗಳಿಗೆ ಕಷ್ಟಕಷ್ಟ

May 06, 2024 10:00 AM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ : ಚೌತಿ ಬೆಳಗ್ಗೆ 06.11 ರವರೆಗೂ ಇದ್ದು ನಂತರ ಉಪರಿ ಪಂಚಮಿ ಇರುತ್ತದೆ.

ನಕ್ಷತ್ರ : ಮೂಲ ನಕ್ಷತ್ರವು ರಾತ್ರಿ 02.35 ರವರೆಗೂ ಇದ್ದು ನಂತರ ಪೂರ್ವಾಷಾಢ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಸಂಜೆ 05.03 ರಿಂದ 06.37

ರಾಶಿಫಲ

ಮೇಷ

ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದ ಯಶಸ್ಸು ದೊರೆಯುವ ಕಾರಣ ಮಾನಸಿಕ ನೆಮ್ಮದಿ ಇರುತ್ತದೆ. ಧಾರ್ಮಿಕ ಕೆಲಸವೊಂದನ್ನು ನಿರ್ವಹಿಸುವಿರಿ. ಕೆಲಸದಲ್ಲಿ ಒತ್ತಡವಿದ್ದರೂ ಮನರಂಜನೆಗೆ ಕೊರತೆ ಇರುವುದಿಲ್ಲ. ಬಂಧು ಬಳಗದವರ ಜೊತೆ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಜೀವನದಲ್ಲಿ ನಡೆದು ಹೋದ ಕೆಲವೊಂದು ಘಟನೆಗಳು ಉತ್ತಮ ಪಾಠವನ್ನು ಕಲಿಸುತ್ತದೆ. ನಿಮ್ಮ ಕಷ್ಟಕ್ಕೆ ತಕ್ಕಂತೆ ಫಲಿತಾಂಶವು ಲಭಿಸುತ್ತದೆ. ಅನಾವಶ್ಯಕವಾಗಿ ಸಮಯ ಹಾಳು ಮಾಡುವುದಿಲ್ಲ. ಕುಟುಂಬಕ್ಕೆ ಅಥವಾ ಸಮಾಜಕ್ಕೆ ಉಪಯುಕ್ತವಾದ ಕೆಲಸದಲ್ಲಿ ತಲ್ಲೀನರಾಗುವಿರಿ. ಅವಶ್ಯಕತೆ ಬಿದ್ದಲ್ಲಿ ಕುಟುಂಬದ ಸದಸ್ಯರಿಂದ ಸಹಾಯ ಪಡೆಯುವಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ವೃಷಭ

ದೂರವಾಗಿದ್ದ ಸ್ನೇಹಿತರ ಜೊತೆಗಿನ ಒಡನಾಟವು ಹೊಸ ಆಸೆ ಆಕಾಂಕ್ಷೆಯನ್ನು ಮೂಡಿಸುತ್ತದೆ. ಬೇಡದ ವಿಚಾರಗಳಿಗೆ ಕಷ್ಟಪಟ್ಟು ಸಂಪಾದಿಸಿದ ಹಣವು ವ್ಯರ್ಥವಾಗುತ್ತದೆ. ನಿಮ್ಮಲ್ಲಿರುವ ನಿಸ್ವಾರ್ಥ ಪ್ರೀತಿ ಎಲ್ಲರ ಮನ ಗೆಲ್ಲುತ್ತದೆ. ಉತ್ತಮ ಹಾಸ್ಯ ಪ್ರಜ್ಞೆ ಇರುತ್ತದೆ. ಸಂಬಂಧಿಕರ ಹಣಕಾಸಿನ ಕೊರತೆಯು ಕಡಿಮೆಯಾಗಲು ಸಹಾಯ ಮಾಡುವಿರಿ. ಗಳಿಸಿದ ಆದಾಯದಲ್ಲಿ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿಡುವಿರಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರಲಿದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಯಶಸ್ಸು ನಿಮ್ಮದಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ತೋರುವುದಿಲ್ಲ. ಬಿಡುವಿನ ವೇಳೆಯಲ್ಲಿ ಉಪವೃತ್ತಿಯೊಂದನ್ನು ಮಾಡುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಸಿರು

ಮಿಥುನ

ನೆರೆಹೊರೆಯವರ ಜೊತೆ ಸಂತಸದಿಂದ ಬಾಳುವಿರಿ. ಆರಂಭಿಸಿದ ಕೆಲಸ ಕಾರ್ಯಗಳು ಸುಲಭವಾಗಿ ನಡೆಯಲಾರವು. ಆತ್ಮೀಯರ ಸಹಾಯದಿಂದ ಮಾತ್ರ ಯಶಸ್ಸನ್ನು ಗಳಿಸುವಿರಿ. ಹಿಂದೊಮ್ಮೆ ಸಾಲವಾಗಿ ಪಡೆದ ಹಣವನ್ನು ಮರಳಿ ಕೊಡುವಿರಿ. ಸಂಗಾತಿ ಮತ್ತು ಮಕ್ಕಳಿಗೆ ಚಿನ್ನದ ಆಭರಣಗಳನ್ನು ಖರೀದಿಸಲು ನಿರ್ಧರಿಸುವಿರಿ. ಆದಾಯಕ್ಕಿಂತಲೂ ಹೆಚ್ಚು ಖರ್ಚು ವೆಚ್ಚಗಳು ಇರಲಿವೆ. ಕುಟುಂಬದ ದಂಪತಿಗಳಲ್ಲಿ ಅನುಬಂಧ ಉಂಟಾಗುತ್ತದೆ. ತಂದೆ ಮತ್ತು ತಾಯಿಯ ಜೊತೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಬಹುದಿನದಿಂದ ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ. ಉತ್ತಮ ವೇತನ ದೊರೆಯುವ ಉದ್ಯೋಗಕ್ಕೆ ಬದಲಾಗುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ

ಕಟಕ

ದೈಹಿಕವಾಗಿ ಸಬಲರಾಗುವಿರಿ. ಸಾಹಸ ಕ್ರೀಡೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಮಕ್ಕಳ ವಿದ್ಯಾಭ್ಯಾಸ ಅಥವಾ ಇನ್ನಿತರ ವಿಚಾರಗಳಿಗಾಗಿ ಹೆಚ್ಚಿನ ಹಣ ಬೇಕಾಗುತ್ತದೆ. ಹಣದ ವಿಚಾರದಲ್ಲಿ ದಂಪತಿ ನಡುವೆ ವಾದ ವಿವಾದಗಳಿರುತ್ತವೆ. ಕುಟುಂಬದಲ್ಲಿ ಬಿಗುವಿನ ವಾತಾವರಣ ಇರುತ್ತದೆ. ಮನದಲ್ಲಿ ಒಳ್ಳೆಯ ಯೋಚನೆಗಳು ಮೂಡಿದರೂ ಕಾರ್ಯ ರೂಪಕ್ಕೆ ಬಾರದು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಾಳಿನ ರೀತಿ ನೀತಿಗಳನ್ನು ಬದಲಾಯಿಸಿಕೊಳ್ಳಬೇಕು. ಉದ್ಯೋಗದಲ್ಲಿ ಮನಸ್ಸಿಗೆ ತೃಪ್ತಿ ನೀಡುವ ಸನ್ನಿವೇಶ ಉಂಟಾಗಲಿದೆ. ಕುಟುಂಬದಲ್ಲಿ ಮಂಗಳ ಕಾರ್ಯವನ್ನು ನಡೆಸಿಕೊಡುವಿರಿ. ಮನೆಯಲ್ಲಿರುವ ಮಕ್ಕಳ ಜೊತೆ ಮನರಂಜನಾ ಸ್ಥಳಕ್ಕೆ ತೆರಳುವಿರಿ.

ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ