ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಂಗಾತಿಯೊಂದಿಗೆ ಮನಸ್ತಾಪ, ಮದುವೆ ವಿಚಾರದಲ್ಲಿ ವಿವಾದ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಸಂಗಾತಿಯೊಂದಿಗೆ ಮನಸ್ತಾಪ, ಮದುವೆ ವಿಚಾರದಲ್ಲಿ ವಿವಾದ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Rakshitha Sowmya HT Kannada

Apr 29, 2024 05:00 AM IST

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

  • 29 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th April 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th April 2024 Daily Horoscope).

ತಾಜಾ ಫೋಟೊಗಳು

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ಶನಿ ಸಂಕ್ರಮಣದಿಂದ ರೂಪುಗೊಳ್ಳಲಿದೆ ಶಶ ರಾಜಯೋಗ; 2025ವರೆಗೆ ಈ ಮೂರೂ ರಾಶಿಯವರಿಗೆ ಹೋದಲೆಲ್ಲಾ ಹಿಂಬಾಲಿಸಲಿದೆ ಅದೃಷ್ಟ

May 09, 2024 08:25 AM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ಷಷ್ಠಿ ರಾತ್ರಿ 04.09 ವರೆಗೂ ಇದ್ದು ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ರಾತ್ರಿ 02.11 ವರೆಗು ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.33

ರಾಹುಕಾಲ: ಬೆಳಗ್ಗೆ 07.39 ರಿಂದ 09.13

ರಾಶಿಫಲ

ಮೇಷ

ರಜೆಯ ಮಂಪರು ನಿಮ್ಮನ್ನು ಕಾಡುತ್ತದೆ. ಕೆಲಸ ಕಾರ್ಯಗಳನ್ನು ಮಾಡಲು ಆಸಕ್ತಿ ಇರುವುದಿಲ್ಲ. ಅನಿವಾರ್ಯದ ಕೆಲಸಗಳನ್ನು ಮಾತ್ರ ಆಯ್ಕೆ ಮಾಡುವಿರಿ. ಮಾನಸಿಕ ಸ್ಥೈರ್ಯ ಕಡಿಮೆಯಾಗುತ್ತದೆ. ಒತ್ತಡಕ್ಕೆ ಒಳಗಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ವಿಶ್ರಾಂತಿಯ ಅಗತ್ಯತೆ ಇದೆ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸುವಿರಿ. ಒಳ್ಳೆಯ ಮನಸ್ಸಿನಿಂದ ಕುಟುಂಬದ ಜನರೊಂದಿಗೆ ಪ್ರೀತಿಯಿಂದ ವರ್ತಿಸುವಿರಿ. ಎದುರಾದಾಗುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಹಿಡಿಯುವಿರಿ. ಮುಖ್ಯವಾದ ಕೆಲಸವನ್ನು ಮುಂದೂಡುವಿರಿ. ಸಂಗಾತಿಯ ಒಳ್ಳೆಯ ಮನಸ್ಸು ಜೀವನದಲ್ಲಿ ಹೊಸ ಆಸೆಯನ್ನು ಉಂಟುಮಾಡುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುತ್ತದೆ. ನಿಮ್ಮಕೆಲಸ ಕಾರ್ಯಗಳಿಗೆ ಎಲ್ಲರಿಂದ ಉತ್ತಮ ಪ್ರಶಂಸೆ ಲಭಿಸುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು

ವೃಷಭ

ಮಿತಿ ಮೀರಿದ ಖರ್ಚು ವೆಚ್ಚದಿಂದಾಗಿ ಕುಟುಂಬದಲ್ಲಿಆತಂಕವಿರುತ್ತದೆ. ಅಸಹಜ ಪರಿಸ್ಥಿತಿಯಲ್ಲಿ ಸಮರ್ಪಕ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ ನಿರೀಕ್ಷಿಸಿದ ಯಶಸ್ಸು ದೊರೆಯುತ್ತದೆ. ಯಾವುದೇ ವಿಷಯವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ದುಡುಕದೆ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಿರಿ. ವಿದ್ಯಾರ್ಥಿಗಳಿಗೆ ಶಿಕ್ಷಕರ ಮಾರ್ಗದರ್ಶನ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ದುಡುಕಿನ ನಿರ್ಣಯ ತೆಗೆದುಕೊಳ್ಳುವಿರಿ. ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ಮನರಂಜನಾ ಕೂಟ ಮತ್ತು ಓಡಾಟಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಆತ್ಮೀಯರೊಬ್ಬರ ಭೇಟಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುತ್ತದೆ. ಅನಾವಶ್ಯಕವಾದ ವಾದ ವಿವಾದಗಳು ಕುಟುಂಬದಲ್ಲಿ ಬೇಸರ ಉಂಟುಮಾಡುತ್ತದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು

ಮಿಥುನ

ಆತ್ಮವಿಶ್ವಾಸದಿಂದ ನೆಮ್ಮದಿಯ ಜೀವನ ನಡೆಸುವಿರಿ. ಹಣಕಾಸಿನ ಕೊರತೆ ಕಾಣದು. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ಲಭಿಸುತ್ತದೆ. ಮಾನಸಿಕವಾಗಿ ಸದೃಢವಾಗಿರುವಿರಿ. ಒತ್ತಡಕ್ಕೆ ಮಣಿಯದೆ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಿರಿ. ದಾಂಪತ್ಯ ಜೀವನದಲ್ಲಿ ಯಾವುದೇ ತೊಂದರೆ ಎದುರಾಗದು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಭ್ಯಾಸದಲ್ಲಿ ತಲ್ಲೀನರಾಗುತ್ತಾರೆ. ಕೆಲಸ ಕಾರ್ಯಗಳ ನಿರ್ವಹಣೆಯ ರೀತಿಗೆ ಎಲ್ಲರ ಮೆಚ್ಚುಗೆ ಗಳಿಸುವಿರಿ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಸಹಾಯ ಮಾಡುವಿರಿ. ಕೆಲಸದ ಒತ್ತಡದ ನಡುವೆಯೂ ಮನರಂಜನೆಗೆ ಆದ್ಯತೆ ನೀಡುವಿರಿ. ವಿವಾಹದ ವಿಚಾರದಲ್ಲಿ ವಿವಾದ ಎದುರಾಗಲಿವೆ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಪ್ರತಿಯೊಂದು ವಿಚಾರವನ್ನು ಕುಟುಂಬದಲ್ಲಿ ಚರ್ಚಿಸಿ ಮುಂದುವರೆಯುವಿರಿ. ಸಂತೋಷದಿಂದ ಎಲ್ಲರೊಡನೆ ಪ್ರವಾಸಕ್ಕೆ ತೆರಳುವಿರಿ. ಉದ್ಯೋಗದಲ್ಲಿ ಸೌಹಾರ್ದಕರ ವಾತಾವರಣ ಕಂಡುಬರುತ್ತದೆ. ಉದ್ಯೋಗದಲ್ಲಿನ ಬಹುತೇಕ ಜವಾಬ್ದಾರಿಯು ನಿಮ್ಮದಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯಲಿದೆ. ಆರೋಗ್ಯದ ಬಗ್ಗೆ ಮನಸ್ಸಿನಲ್ಲಿ ಆತಂಕವಿರುತ್ತದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಮನರಂಜನೆಯಲ್ಲಿ ತೊಡಗುತ್ತಾರೆ. ಹಣದ ಕೊರತೆ ಕಾಡಲಿದೆ. ಕೆಲಸ ಕಾರ್ಯಗಳಲ್ಲಿ ಆತ್ಮೀಯರ ಸಹಕಾರ ದೊರೆಯುತ್ತದೆ. ಆತ್ಮೀಯರಿಗೆ ಕೊಟ್ಟಿದ್ದ ಮಾತನ್ನು ಮರೆತು ಸಂದಿಗ್ಧತೆಗೆ ಸಿಲುಕುವಿರಿ. ಮಕ್ಕಳ ವಿಚಾರಗಳನ್ನು ಮೊದಲು ಪೂರೈಸುವಿರಿ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ