Horoscope Today: ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಯಂತೆ ಲಾಭ ದೊರೆಯದೆ ಮನಸ್ಸಿಗೆ ಬೇಸರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
May 03, 2024 05:00 AM IST
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
3 ಮೇ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3rd May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3rd May 2024 Daily Horoscope).
ತಾಜಾ ಫೋಟೊಗಳು
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶುಕ್ರವಾರ
ತಿಥಿ : ದಶಮಿ ರಾತ್ರಿ 08.16 ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗುತ್ತದೆ.
ನಕ್ಷತ್ರ : ಶತಭಿಷ ನಕ್ಷತ್ರವು ರಾತ್ರಿ 09.22 ರವರೆಗೂ ಇದ್ದು ನಂತರ ಪೂರ್ವಾಭಾದ್ರ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.58
ಸೂರ್ಯಾಸ್ತ: ಸಂಜೆ 06.34
ರಾಹುಕಾಲ: 10.45 ರಿಂದ 12.19 ವರೆಗೆ
ರಾಶಿಫಲ
ಮೇಷ
ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆವ ಕಾರಣ ಮಾನಸಿಕ ಒತ್ತಡ ಕಡಿಮೆ ಆಗಲಿದೆ. ಕುಟುಂಬದ ಸದಸ್ಯರ ಮಧ್ಯೆ ಆನಂದ ಮನೆ ಮಾಡಿರುತ್ತದೆ. ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ಉದ್ಯೋಗದಲ್ಲಿ ಯಾವುದೇ ಅಡಚಣೆಗಳು ಇರುವುದಿಲ್ಲ. ವಿಶ್ರಾಂತಿ ಇಲ್ಲದೆ ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಲ್ಲೀನರಾಗುತ್ತಾರೆ. ಆದ್ಯತೆಯ ಪ್ರಕಾರ ಉದ್ಯೋಗದ ಜವಾಬ್ದಾರಿಯನ್ನು ಪೂರೈಸುವಿರಿ. ಅಪರಿಚಿತರ ಸಹಾಯ ಸ್ನೇಹವಾಗಿ ಪರಿವರ್ತಿತಗೊಳ್ಳುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಇಲ್ಲದೆ ಹೋದರೂ ನಷ್ಟವಾಗದು. ಸಾರಿಗೆ ಸಂಪರ್ಕ ವ್ಯವಸ್ಥೆಯ ನಿರ್ವಹಣೆಯಿಂದ ಉತ್ತಮ ಗಳಿಕೆ ಗಳಿಸುವಿರಿ.
ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಗುಲಾಬಿ
ವೃಷಭ
ಗೆಲುವಿನ ಆಸೆ ಇರದೆ ಹೋದರೂ ಸೋಲಿನ ಭಯವು ಇರುವುದಿಲ್ಲ. ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸಿ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುವಿರಿ. ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವ ಕಾರಣ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಬಹುದಿನದಿಂದ ಅಪೂರ್ಣಗೊಂಡ ದೊಡ್ಡ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿನ ಒತ್ತಡ ಯಾವುದೆ ಪ್ರಭಾವ ಬೀರುವುದಿಲ್ಲ. ವಿದ್ಯಾರ್ಥಿಗಳು ಹಟ ಮತ್ತು ಸಿಡುಕಿನ ಸ್ವಭಾವವನ್ನು ಬೆಳೆಸಿಕೊಳ್ಳುತ್ತಾರೆ. ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದು. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆಯಂತೆ ಲಾಭ ಗಳಿಸಲು ಸಾಧ್ಯವಾಗುವುದಿಲ್ಲ. ಧಾರ್ಮಿಕ ಕೇಂದ್ರಕ್ಕೆ ಪೂಜಾ ಸಾಮಗ್ರಿಗಳನ್ನು ನೀಡುವಿರಿ.
ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 8
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಬಿಳಿ ಬಣ್ಣ
ಮಿಥುನ
ಕುಟುಂಬದವರನ್ನೂ ಹೊರಗಿನವರನ್ನೂ ಗೌರವಿಸುವ ನಿಮಗೆ ಸಮಾಜದಲ್ಲಿ ಉನ್ನತ ಸ್ಥಾನ ದೊರೆಯುತ್ತದೆ. ಸ್ನೇಹಿತರನ್ನೂ ಪ್ರೀತಿಯಿಂದ ಕಾಣುವಿರಿ. ವಿರೋಧಿಗಳ ಬಗ್ಗೆಯೂ ಆತ್ಮೀಯತೆಯ ಭಾವನೆ ಮೂಡುತ್ತದೆ. ಇಷ್ಟಪಟ್ಟ ಕೆಲಸ ಕಾರ್ಯಗಳೆಲ್ಲಾ ಕೈಗೂಡುವುದರಿಂದ ಸಂತೋಷಕ್ಕೆ ಮಿತಿ ಇರದು. ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ವಿದ್ಯಾರ್ಥಿಗಳು ವಿಶೇಷ ಸೌಲಭ್ಯಗಳನ್ನು ಗಳಿಸುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣ ಉಳಿಸಲು ವಿವಿಧ ಯೋಜನೆಯನ್ನು ಅವಲಂಬಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಸ್ವಂತ ನಿರ್ಧಾರಗಳಿಗೆ ಬದ್ಧರಾಗುವಿರಿ. ಅನಾಥಾಶ್ರಮಕ್ಕೆ ಆಹಾರ ನೀಡುವಿರಿ. ಕಣ್ಣಿನ ನೋವಿರುತ್ತದೆ.
ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬೂದು
ಕಟಕ
ವಂಶದ ಹಿರಿಯ ವ್ಯಕ್ತಿಯೊಬ್ಬರನ್ನು ಭೇಟಿ ಮಾಡುವ ಅವಕಾಶ ಒದಗಿ ಬರುತ್ತದೆ. ಎದುರಾಗುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ಸನ್ನು ಕಾಣುವಿರಿ. ಕುಟುಂಬದಲ್ಲಿನ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಾದ ಜವಾಬ್ದಾರಿ ನಿಮ್ಮದಾಗಲಿದೆ. ಅವಶ್ಯಕತೆ ಇದ್ದಲ್ಲಿ ಮಾತ್ರ ಹಣವನ್ನು ಖರ್ಚು ಮಾಡುವಿರಿ. ಎಲ್ಲರೊಂದಿಗೆ ಸಂತೋಷದಿಂದ ಬಾಳುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕೌಟುಂಬಿಕ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸುವಿರಿ. ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಯಶಸ್ಸು ಲಭಿಸುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಆಸಕ್ತಿ ತೋರುವುದಿಲ್ಲ. ಹಣದ ತೊಂದರೆ ಇರುವುದಿಲ್ಲ. ಮಕ್ಕಳ ಜೊತೆಯಲ್ಲಿ ಪ್ರವಾಸಕ್ಕೆ ತೆರಳುವಿರಿ.
ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಂದು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).