logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಂಗಾತಿಯ ಸಹಕಾರದಿಂದ ಮಾನಸಿಕ ನೆಮ್ಮದಿ, ಸಮಾಜ ಸೇವೆಯಲ್ಲಿ ಆಸಕ್ತಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಸಂಗಾತಿಯ ಸಹಕಾರದಿಂದ ಮಾನಸಿಕ ನೆಮ್ಮದಿ, ಸಮಾಜ ಸೇವೆಯಲ್ಲಿ ಆಸಕ್ತಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Raghavendra M Y HT Kannada

May 04, 2024 05:05 AM IST

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯಗಳ ದಿನದ ಭವಿಷ್ಯ

    • 4 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th May 2024 Daily Horoscope).
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯಗಳ ದಿನದ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯಗಳ ದಿನದ ಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th May 2024 Horoscope)

ತಾಜಾ ಫೋಟೊಗಳು

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ: ಏಕಾದಶಿ ಸ. 05.51 ರವರೆಗು ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಭಾದ್ರ ನಕ್ಷತ್ರವು ರಾ. 07.44 ರವರೆಗು ಇರುತ್ತದೆ. ಆನಂತರ ಉತ್ತರಾಭಾದ್ರ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.34

ಸಿಂಹ ರಾಶಿ

ಮಾತಿನಲ್ಲಿ ನಿಮ್ಮನ್ನು ಗೆಲ್ಲಲು ಯಾರಿಂದಲೂ ಸಾಧ್ಯವಾಗದು. ಹಠದ ಗುಣದಿಂದ ಆತ್ಮೀಯರ ಸ್ನೇಹವನ್ನು ಕಳೆದುಕೊಳ್ಳೂವಿರಿ. ಸ್ವಂತ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಬೇಧ ಭಾವ ತೋರದೆ ಅವಶ್ಯಕ ಇದ್ದವರಿಗೆ ಸಹಾಯವನ್ನು ಮಾಡುವಿರಿ. ರಾಜಕೀಯದಲ್ಲಿನ ಆಸಕ್ತಿ ಕ್ರಮೇಣವಾಗಿ ಕಡಿಮೆ ಆಗಲಿದೆ. ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಮನೆಮಾಡುತ್ತದೆ. ಮಕ್ಕಳ ಆಸೆಯನ್ನು ಪೂರೈಸದ ಕಾರಣ ಜಗಳದ ಸನ್ನಿವೇಶ ಇರುತ್ತದೆ. ಉದ್ಯೋಗದಲ್ಲಿ ಸಕಾರಾತ್ಮಕ ಫಲಗಳನ್ನು ಪಡೆಯುವಿರಿ. ದೂರದ ಊರಿಗೆ ಪ್ರಯಾಣ ಮಾಡುವಿರಿ. ವಿದ್ಯಾರ್ಥಿಗಳು ಸಾಧಾರಣ ಯಶಸ್ಸನ್ನು ಗಳಿಸುತ್ತಾರೆ. .

ಪರಿಹಾರ: ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಹಾಲು ಬಣ್ಣ

ಕನ್ಯಾ ರಾಶಿ

ಅಚಲ ವಿಶ್ವಾಸದಿಂದ ಯಾವುದೇ ಕೆಲಸ ಕಾರ್ಯವನ್ನು ಆರಂಭಿಸುವಿರಿ. ದೃಢವಾದ ನಿಲುವು ನಿಶ್ಚಲ ಜಯವನ್ನು ನೀಡುತ್ತದೆ. ಬದಲಾಗುವ ಮನಸ್ಸು ಅಥವಾ ತೀರ್ಮಾನಗಳು ತೊಂದರೆಗೆ ಕಾರಣವಾಗುತ್ತದೆ. ಕುಟುಂಬದ ಸದಸ್ಯರ ನಡುವೆ ಒಮ್ಮತ ಕಂಡು ಬರುತ್ತದೆ. ಉದ್ಯೋಗದಲ್ಲಿ ಅತಿ ವಿಶೇಷತೆ ಏನು ಇರುವುದಿಲ್ಲ. ಆದರೆ ತೊಂದರೆಯೂ ಇರುವುದಿಲ್ಲ. ವಿದ್ಯಾರ್ಥಿಗಳು ಅನಾವಶ್ಯಕ ಮಾತು ಕಡಿಮೆ ಮಾಡಿ ಸಾಧನೆಯ ಕಡೆಗೆ ಗಮನ ನೀಡುತ್ತಾರೆ. ಆದಾಯ ಕಡಿಮೆ ಆದರೂ ಸಣ್ಣ ವ್ಯಾಪಾರವನ್ನು ಆರಂಭಿಸುವಿರಿ. ಸಮಾಜ ಸೇವೆ ಮಾಡುವಲ್ಲಿ ಆಸಕ್ತಿ ತೋರುವಿರಿ.

ಪರಿಹಾರ: ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ: 4

ಅಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ತುಲಾ ರಾಶಿ

ಕುಟುಂಬದಲ್ಲಿ ಎಲ್ಲರಲ್ಲಿಯೂ ಹಾಸ್ಯದ ಮನೋಭಾವನೆ ಇರಲಿದೆ. ದಿನನಿತ್ಯದ ಕೆಲಸಗಳು ಸುಲಭಗತಿಯಲ್ಲಿ ಪೂರ್ಣಗೊಳ್ಳಲಿವೆ. ಉತ್ತಮ ಧನಲಾಭದ ಕಾರಣ ಮನಸ್ಸು ಉಲ್ಲಸಿತವಾಗಿರುತ್ತದೆ. ಬೇಸರದ ಸನ್ನಿವೇಶಗಳು ಕುಟುಂಬದಲ್ಲಿ ಎದುರಾದರು ಕ್ಷಮಾ ಗುಣದಿಂದಾಗಿಸಮಸ್ಯೆಗಳು ದೂರವಾಗುತ್ತವೆ. ಉದ್ಯೋಗದಲ್ಲಿ ಸಹೋದ್ಯೋಗಗಳಿಂದಲೇ ಸವಾಲುಗಳನ್ನು ಎದುರಿಸುವಿರಿ. ಸಂಗಾತಿಯ ಸಹಾಯ ಸಹಕಾರದಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ. ಆತ್ಮಿಯರೊಬ್ಬರ ಒಡನಾಟ ಹೊಸ ಹಣಕಾಸಿನ ವ್ಯವಹಾರಕ್ಕೆ ನಾಂದಿಯಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ . ಉದ್ಯೋಗವನ್ನು ಬದಲಾಯಿಸುವ ಸೂಚನೆ ಕಂಡುಬರುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ವೃಶ್ಚಿಕ ರಾಶಿ

ನಿಮ್ಮಲ್ಲಿನ ಮೃದುವಾದ ಮನಸ್ಸು ಕುಟುಂಬವನ್ನು ತೊಂದರೆಗಳಿಂದ ದೂರಮಾಡಲಿದೆ. ಕುಟುಂಬದಲ್ಲಿ ಗಂಭೀರದ ವಾತಾವರಣ ಕಂಡುಬರುತ್ತದೆ. ಉದ್ಯೋಗದಲ್ಲಿ ಅಚಲವಾದ ವಿಶ್ವಾಸ ಉನ್ನತ ಮಟ್ಟವನ್ನು ನೀಡುತ್ತದೆ. ಆತ್ಮವಿಶ್ವಾಸದಿಂದ ಹಣಕಾಸಿನ ಸಮಸ್ಯೆಯಿಂದ ಪಾರಾಗುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದು ಜರುಗಲಿದೆ. ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ವಾತಾವರಣವಿರುತ್ತದೆ. ಅವಶ್ಯಕತೆಗೆ ಬೇಕಾದಷ್ಟು ಹಣವನ್ನು ಕಷ್ಟಪಟ್ಟು ಸಂಪಾದಿಸುವಿರಿ. ಕಷ್ಟ ಎನಿಸಿದರೂ ಹಣವನ್ನು ಉಳಿಸುವಿರಿ. ಮಕ್ಕಳಿಂದ ದೊಡ್ಡ ಮಟ್ಟದ ಸಾಧನೆ ಸಾಧ್ಯವಾಗಲಿದೆ.

ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ