logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬ ಕಲಹಕ್ಕೆ ಸುಲಭ ಪರಿಹಾರ, ಕೆಲಸದಲ್ಲಿ ಯಶಸ್ಸು; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today: ಕುಟುಂಬ ಕಲಹಕ್ಕೆ ಸುಲಭ ಪರಿಹಾರ, ಕೆಲಸದಲ್ಲಿ ಯಶಸ್ಸು; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Raghavendra M Y HT Kannada

May 04, 2024 05:10 AM IST

ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

    • 4 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th May 2024 Daily Horoscope).
ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th May 2024 Horoscope)

ತಾಜಾ ಫೋಟೊಗಳು

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ: ಏಕಾದಶಿ ಸ. 05.51 ರವರೆಗು ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಭಾದ್ರ ನಕ್ಷತ್ರವು ರಾ. 07.44 ರವರೆಗು ಇರುತ್ತದೆ. ಆನಂತರ ಉತ್ತರಾಭಾದ್ರ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.34

ರಾಹುಕಾಲ : ಬೆ. 09.11 ರಿಂದ ಬೆ. 10.46

ಧನಸ್ಸು ರಾಶಿ

ಸಮರ್ಪಣಾ ಮನೋಭಾವನೆಗೆ ನೆಚ್ಚಿನ ಫಲಿತಾಂಶಕ್ಕೆ ದೊರೆಯತ್ತದೆ. ವಿಚಾರಗಳನ್ನು ಅರ್ಥಮಾಡಿಕೊಂಡಮೇಲೆ ಸೂಕ್ತವಾದ ಸರಿಯಾದಂತಹ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಹೆಚ್ಚುತ್ತದೆ. ಹಣಕಾಸಿನ ವಿಚಾರದಲ್ಲಿ ಮನಸ್ಸು ಬದಲಾಯಿಸುವ ಕಾರಣ ಕೊಂಚ ನಷ್ಟವಾಗುತ್ತದೆ. ಕುಟುಂಬದಲ್ಲಿ ಮಕ್ಕಳಿಂದಾಗಿ ಸಂತೋಷದ ವಾತಾವರಣ ಇರುತ್ತದೆ. ವೈದ್ಯಕೀಯ ಉಪಕರಣಗಳ ಮಾರಾಟದಲ್ಲಿ ಹೆಚ್ಚಿನ ಲಾಭವಿರುತ್ತೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಮೌನದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ವಿವಾಹ ಯೋಗವಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಮಕರ ರಾಶಿ

ಮನೆಯವರ ಕೆಲಸ ಕಾರ್ಯಗಳನ್ನು ಮನಸ್ಸಿಟ್ಟು ಪೂರ್ಣಗೊಳಿಸುವಿರಿ. ಒಳ್ಳೆಯ ಗುಣವಿದ್ದರೂ ದುಡುಕಿ ಮಾತನಾಡುವ ಕಾರಣಕ್ಕೆ ಕೆಟ್ಟ ಹೆಸರನ್ನು ಗಳಿಸುವಿರಿ. ಶಾಂತಿ ಸಂಯಮದಿಂದಷ್ಟು ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಮಟ್ಟದ ಲಾಭ ದೊರೆಯಲಿದೆ. ಯಂತ್ರೋಪಕರಣಗಳ ದುರಸ್ತಿವೇಳೆ ಎಚ್ಚರಿಕೆಯಿಂದ ಇರಿ. ಹೊಸ ವ್ಯಾಪಾರ ವ್ಯವಹಾರವನ್ನು ಆರಂಭಿಸುವ ಆಸೆ ಈಡೇರದು. ಸಮಾಜ ಸೇವೆ ಮಾಡುವ ಆಸೆಯಿಂದ ರಾಜಕೀಯ ಪ್ರವೇಶಿಸುವಿರಿ.

ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕುಂಭ ರಾಶಿ

ಮನಸ್ಸಿನಲ್ಲಿರುವ ಕಾರ್ಯಯೋಜನೆಗಳನ್ನು ರಹಸ್ಯವಾಗಿಡುವಿರಿ. ಕುಟುಂಬಕ್ಕೆ ಸಂಬಂಧಿಸಿದ ವಿವಾದ ಒಂದರಲ್ಲಿ ಏಕಾಂಗಿಯಾಗಿ ಹೋರಾಡಿ ಯಶಸ್ಸು ಗಳಿಸುವಿರಿ. ನಿಮ್ಮಲ್ಲಿನ ಗೆಲ್ಲುವ ಛಲ ಎಲ್ಲರಿಗೂ ಸ್ಪೂರ್ತಿಯಾಗುತ್ತದೆ. ಆರಂಭಿಸುವ ಕೆಲಸ ಕಾರ್ಯಗಳು ನಿಧಾನವಾಗುವ ಕಾರಣ ತೊಂದರೆಯನ್ನು ಅನುಭವಿಸುವಿರಿ. ವಿದೇಶಿ ಸಂಸ್ಥೆಯೊಂದರ ಪಾಲುಗಾರಿಕೆಯು ದೊರೆಯುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ತೆರೆಮರೆಯ ಕಲಾವಿದರಿಗೆ ವಿಶೇಷ ಗೌರವ ಮತ್ತು ಪ್ರಶಸ್ತಿ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆ ಇರದು. ಉದ್ಯೋಗದಲ್ಲಿ ನಿರೀಕ್ಷಿತ ಫಲಿತಾಂಶಗಳು ದೊರೆಯುತ್ತವೆ.

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮೀನ ರಾಶಿ

ಕುಟುಂಬದ ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಕಾರ್ಯದಕ್ಷತೆಗೆ ಬೆಲೆ ಕೊಟ್ಟು ಉದ್ಯೋಗದಲ್ಲಿ ಉನ್ನತ ಅಧಿಕಾರ ನೀಡುತ್ತಾರೆ. ಮನೆಕಟ್ಟಲು ಬೇಕಾದ ಪದಾರ್ಥಗಳ ಸರಬರಾಜಿನಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ಹವ್ಯಾಸಕ್ಕೆ ಎಂದು ಆರಂಭಿಸಿದ ಕೆಲಸವೊಂದು ಜೀವನ ನಡೆಸಲು ಸಹಕಾರಿಯಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಿಯಮಿತ ಲಾಭ ದೊರೆಯಲಿದೆ. ತಂದೆಯವರಿಗೆ ಅನಿರೀಕ್ಷಿತ ಧನ ಲಾಭವಿದೆ. ಕುಟುಂಬದಲ್ಲಿರುವ ಕಲಹ ಒಂದನ್ನು ಸುಲಭವಾಗಿ ಪರಿಹರಿಸುವಿರಿ. ಪಾಲುಗಾರಿಕೆ ವ್ಯವಹಾರದಲ್ಲಿ ವಿಶೇಷ ಲಾಭ ದೊರೆಯುತ್ತದೆ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ಕೆಂಪುಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ