logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವ್ಯಾಪಾರದಲ್ಲಿ ಹೆಚ್ಚಿನ ಲಾಭ; ಸ್ವಂತ ಮನೆ, ಜಮೀನು ಕೊಳ್ಳುವ ಅದೃಷ್ಟ ಒಲಿದು ಬರಲಿದೆ; ಮೇ 7ರ ರಾಶಿಫಲ

Horoscope Today: ವ್ಯಾಪಾರದಲ್ಲಿ ಹೆಚ್ಚಿನ ಲಾಭ; ಸ್ವಂತ ಮನೆ, ಜಮೀನು ಕೊಳ್ಳುವ ಅದೃಷ್ಟ ಒಲಿದು ಬರಲಿದೆ; ಮೇ 7ರ ರಾಶಿಫಲ

Rakshitha Sowmya HT Kannada

May 07, 2024 05:10 AM IST

ಮೇ 7ರ ರಾಶಿಫಲ

  • 7 ಮೇ 2024 ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (7th May 2024 2024 Daily Horoscope).

ಮೇ 7ರ ರಾಶಿಫಲ
ಮೇ 7ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(7th May 2024 Daily Horoscope).

ತಾಜಾ ಫೋಟೊಗಳು

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ : ಚತುರ್ದಶಿ 10.45 ರವರೆಗೂ ಇದ್ದು ನಂತರ ಅಮಾವಾಸ್ಯೆ ಆರಂಭವಾಗುತ್ತದೆ.

ನಕ್ಷತ್ರ : ಅಶ್ವಿನಿ ನಕ್ಷತ್ರವು 03.02 ರವರೆಗೂ ಇದ್ದು ನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.56

ಸೂರ್ಯಾಸ್ತ: ಸಂಜೆ 06.37

ರಾಹುಕಾಲ: 03.29 ರಿಂದ 05.04

ರಾಶಿಫಲ

ಧನಸ್ಸು

ಕುಟುಂಬದ ಕೆಲಸ ಕಾರ್ಯದ ಬಗ್ಗೆ ವಿಶೇಷವಾದ ಆಸಕ್ತಿ ತೋರುವಿರಿ. ಹಿರಿಯರ ಸಹಕಾರದಿಂದ ಜೀವನದಲ್ಲಿ ಮುಂದುವರಿಯುವಿರಿ. ನಿರುದ್ಯೋಗಿಗಳಿಗೆ ಪ್ರಖ್ಯಾತ ವಾಣಿಜ್ಯ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಆರೋಗ್ಯ ಹಾಳು ಮಾಡುವ ಅಹಾರದಿಂದ ಅಜೀರ್ಣ ಕಾಡಲಿದೆ. ಗಣ್ಯವ್ಯಕ್ತಿಗಳ ಸ್ನೇಹ ಸಹಕಾರ ನಿಮಗೆ ದೊರೆಯುತ್ತದೆ. ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಕಂಡುಬರುತ್ತವೆ. ವಿದ್ಯಾರ್ಥಿಗಳು ಹಟದಿಂದ ತಮ್ಮ ಕೆಲಸದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಸ್ವಂತ ವ್ಯಾಪಾರ ವಹಿವಾಟಿನಲ್ಲಿ ಅಲ್ಪ ಪ್ರಮಾಣದ ಲಾಭ ದೊರೆಯುತ್ತದೆ. ಮನೆಯ ಸುತ್ತಮುತ್ತಲಿನ ಹೂವಿನ ಗಿಡಗಳು ಒಣಗದಂತೆ ನೋಡಿಕೊಳ್ಳುವಿರಿ. ಮನೆಯಲ್ಲಿ ಶುಭಕಾರ್ಯವೊಂದು ನಡೆಯಲಿವೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ತಿಳಿ ಹಸಿರು

ಮಕರ

ನಿತ್ಯ ಜೀವನದಲ್ಲಿ ಯಾರ ಮಾತನ್ನೂ ಗಂಭೀರವಾಗಿ ಪರಿಗಣಿಸುವುದಿಲ್ಲ. ಎಲ್ಲರೊಂದಿಗೆ ಸ್ನೇಹ ವಿಶ್ವಾಸದಿಂದ ನಡೆದುಕೊಳ್ಳುವಿರಿ. ವಿರೋಧಿಗಳ ನಡುವೆ ಅಂತರವನ್ನು ಕಾಯ್ದುಕೊಳ್ಳುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆಯೂ ಉಂಟಾಗದು. ದುಡುಕದೆ ಯೋಚಿಸಿ ಮಾತನಾಡಿದರೆ ವಾದ ವಿವಾದಗಳಿಂದ ದೂರ ಉಳಿಯುವಿರಿ. ಸ್ವಂತ ಮನೆ ಅಥವಾ ಜಮೀನನ್ನು ಖರೀದಿಸುವಿರಿ. ತಂದೆಗೆ ಸೇರಿದ ಹಣದಲ್ಲಿ ನಿಮಗೆ ಸಹಾಯ ದೊರೆಯುತ್ತದೆ. ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ದೃಢ ಸಂಕಲ್ಪದಿಂದ ತಮ್ಮ ಕರ್ತವ್ಯದಲ್ಲಿ ಮಗ್ನರಾಗುತ್ತಾರೆ. ಚಿನ್ನಾಭರಣ ಖರೀದಿಗೆ ಹೆಚ್ಚಿನ ಹಣ ಖರ್ಚು ಮಾಡುವಿರಿ. ಶಿಥಿಲಗೊಂಡ ಕಬ್ಬಿಣದ ವಸ್ತುಗಳಿಂದ ತೊಂದರೆ ಇರಲಿದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನಸು ಗೆಂಪು

ಕುಂಭ

ನೋಡಲು ಸಾಮಾನ್ಯರಂತೆ ಕಂಡರೂ ಅಸಾಮಾನ್ಯ ಕೆಲಸವೊಂದನ್ನು ಸಾಧಿಸುವಿರಿ. ನಿಮ್ಮಲ್ಲಿ ಅಪ್ರತಿಮ ಪ್ರತಿಭೆಗೆ ತಕ್ಕ ಅವಕಾಶ ದೊರೆಯಲಿದೆ. ನಿಮ್ಮಲ್ಲಿ ಹುದುಗಿರುವ ಕಲೆಗೆ ತಕ್ಕ ವೇದಿಕೆ ದೊರೆಯಲಿದೆ. ಸಂಕೋಚದ ವ್ಯಕ್ತಿತ್ವ ನಿಮ್ಮ ಅವಕಾಶಗಳನ್ನು ದೂರ ಮಾಡುತ್ತದೆ ಎಚ್ಚರಿಕೆ ಇರಲಿ. ಮಕ್ಕಳ ಸಹಾಯ ಸಹಕಾರದಿಂದ ಸ್ವಂತ ಸಂಸ್ಥೆಯೊಂದನ್ನು ಆರಂಭಿಸಿ ಯಶಸ್ಸನ್ನು ಕಾಣುವಿರಿ. ಉದ್ಯೋಗಸ್ಥರು ಸಾಮಾನ್ಯವಾದ ಯಶಸ್ಸಿಗೆ ಸಮಾಧಾನರಾಗಬೇಕು. ವಿದ್ಯಾರ್ಥಿಗಳಿಗೆ ಸರಿಯಾದ ಬೆಂಬಲ ದೊರೆತಲ್ಲಿ ಉನ್ನತ ಮಟ್ಟ ತಲುಪುವರು. ಅರೋಗ್ಯದ ಬಗ್ಗೆ ಗಮನವಿರಲಿ. ಆಸ್ಪತ್ರೆಯಲ್ಲಿ ಕುಡಿವ ನೀರಿನ ವ್ಯವಸ್ಥೆ ಮಾಡುವಿರಿ. ಬೆನ್ನಿನ ನೋವು ನಿಮ್ಮನ್ನು ಕಾಡುತ್ತದೆ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಮೀನ

ನಿಮ್ಮಲ್ಲಿ ನಿರ್ವಿಕಾರ ಮನೋಭಾವನೆ ಮೂಡುತ್ತದೆ. ನಿಮ್ಮ ಕಾರ್ಯ ದಕ್ಷತೆಯನ್ನುಅರಿತವರು ಸದಾ ನಿಮ್ಮೊಂದಿಗೆ ಸ್ನೇಹ ಸಂಬಂಧ ಬೆಳೆಸುತ್ತಾರೆ. ಉದ್ಯೋಗದಲ್ಲಿನ ತೊಂದರೆಯೊಂದು ದೂರವಾಗಲಿದೆ. ಆತುರದ ಸ್ವಭಾವ ಇರದು. ವಿದೇಶಿಯವರ ಜೊತೆಯಲ್ಲಿ ಕೆಲಸ ಮಾಡುವ ಅವಕಾಶ ದೊರೆಯುತ್ತದೆ. ಸೋದರನ ವ್ಯಾಪಾರದಲ್ಲಿ ಪಾಲುಗಾರಿಕೆ ಪಡೆಯುವಿರಿ. ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಮೂಲಕ ಎಲ್ಲರ ಮನಗೆಲ್ಲುತ್ತಾರೆ. ವಿಶೇಷವಾದ ಜ್ಞಾನ ಇರುತ್ತದೆ. ಅಶಕ್ತರಿಗಾಗಿ ಉಚಿತ ಬೋಧನಾ ಕೇಂದ್ರವನ್ನು ಆರಂಭಿಸುವಿರಿ. ಬಿಡುವಿಲ್ಲದ ಕೆಲಸ ಆರೋಗ್ಯದ ಸಮಸ್ಯೆ ಉಂಟುಮಾಡಲಿದೆ. ಮನದ ನೋವನ್ನು ಯಾರಿಗೂ ತಿಳಿಸುವುದಿಲ್ಲ. ಸಾಕುಪ್ರಾಣಿಗಳ ಬಗ್ಗೆ ಅನುಕಂಪ ಮೂಡುತ್ತದೆ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ