logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವಿನಾಕಾರಣ ಅಲೆದಾಟ, ಕುಟುಂಬದಲ್ಲಿ ನಡೆಯುವ ಘಟನೆಯಿಂದ ಮಾನಸಿಕ ಕಿರಿಕಿರಿ: ಮೇ 8ರ ದಿನ ಭವಿಷ್ಯ

Horoscope Today: ವಿನಾಕಾರಣ ಅಲೆದಾಟ, ಕುಟುಂಬದಲ್ಲಿ ನಡೆಯುವ ಘಟನೆಯಿಂದ ಮಾನಸಿಕ ಕಿರಿಕಿರಿ: ಮೇ 8ರ ದಿನ ಭವಿಷ್ಯ

Rakshitha Sowmya HT Kannada

May 08, 2024 05:05 AM IST

ವಿನಾಕಾರಣ ಅಲೆದಾಟ, ಕುಟುಂಬದಲ್ಲಿ ನಡೆಯುವ ಘಟನೆಯಿಂದ ಮಾನಸಿಕ ಕಿರಿಕಿರಿ: ಮೇ 8ರ ದಿನ ಭವಿಷ್ಯ

  • 8 ಮೇ 2024 ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (8th May 2024 Daily Horoscope).

ವಿನಾಕಾರಣ ಅಲೆದಾಟ, ಕುಟುಂಬದಲ್ಲಿ ನಡೆಯುವ ಘಟನೆಯಿಂದ ಮಾನಸಿಕ ಕಿರಿಕಿರಿ: ಮೇ 8ರ ದಿನ ಭವಿಷ್ಯ
ವಿನಾಕಾರಣ ಅಲೆದಾಟ, ಕುಟುಂಬದಲ್ಲಿ ನಡೆಯುವ ಘಟನೆಯಿಂದ ಮಾನಸಿಕ ಕಿರಿಕಿರಿ: ಮೇ 8ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th May 2024 Daily Horoscope).

ತಾಜಾ ಫೋಟೊಗಳು

ಮೇ 19 ರಂದು ವೃಷಭ ರಾಶಿಗೆ ಶುಕ್ರನ ಸಂಚಾರ; ಈ ರಾಶಿಯವರಿಗೆ ಶುಕ್ರಾದಿತ್ಯ ಯೋಗ ತರಲಿದೆ ಸಕಲ ಸುಖ ಸಮೃದ್ಧಿ

May 19, 2024 01:38 PM

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ: ಅಮಾವಾಸ್ಯೆ ಬೆಳಗ್ಗೆ 08.42 ರವರೆಗೂ ಇದ್ದು ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ಭರಣಿ ನಕ್ಷತ್ರವು 01.49 ರವರೆಗೂ ಇದ್ದು ನಂತರ ಕೃತ್ತಿಕಾ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ05.56

ಸೂರ್ಯಾಸ್ತ: ಸಂಜೆ 06.35

ರಾಹುಕಾಲ: 12.20 ರಿಂದ 01.55

ರಾಶಿಫಲ

ಸಿಂಹ

ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಹಟದಿಂದ ಯಶಸ್ಸನ್ನು ಗಳಿಸುವಿರಿ. ಮುಂಗೋಪದ ಕಾರಣ ಆತ್ಮೀಯರು ಸಹ ನಿಮ್ಮಿಂದ ದೂರ ಉಳಿಯುತ್ತಾರೆ. ಮನದ ವಿಚಾರಗಳನ್ನು ತಿಳಿಸಲು ಹಿಂಜರಿಯುವಿರಿ. ಅದೃಷ್ಟವಶಾತ್ ಹಣದ ತೊಂದರೆ ದೂರವಾಗಲಿದೆ. ತಪ್ಪು ಗ್ರಹಿಕೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ ಪ್ರತಿಯೊಂದು ವಿಚಾರಗಳು ನಿಮ್ಮ ನಿರೀಕ್ಷೆಯಂತೆ ನಡೆಯುತ್ತವೆ. ಉತ್ತಮ ನಾಯಕತ್ವದ ಗುಣದ ಕಾರಣ ಎಲ್ಲರ ಮನ ಗೆಲ್ಲುವಿರಿ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಅಭ್ಯಾಸದಲ್ಲಿ ನಿರತರಾಗುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳನ್ನು ಆರಂಭಿಸಲು ಚಿಂತನೆ ನಡೆಸುವಿರಿ. ಉಷ್ಣದ ತೊಂದರೆ ಇರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ

ಕನ್ಯಾ

ಸೋಲನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಗೆಲುವಿಗಾಗಿ ಸದಾಕಾಲ ಹೋರಾಟ ನಡೆಸುವಿರಿ. ಟೀಕೆ ಮತ್ತು ಪ್ರಶಂಸೆಗಳನ್ನು ಸಮಾನವಾಗಿ ಸ್ವೀಕರಿಸುವಿರಿ. ಎದುರಾಗುವ ಸಮಸ್ಯೆಯನ್ನು ಸುಲಭವಾಗಿ ಗೆಲ್ಲಬಲ್ಲಿರಿ. ದಿಢೀರನೆ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಉದ್ಯೋಗದಲ್ಲಿ ಏರುಪೇರು ಇದ್ದರೂ ಬುದ್ಧಿವಂತಿಕೆಯಿಂದ ಪಾರಾಗುವಿರಿ. ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಬಂಡವಾಳ ತೊಡಗಿಸಿಕೊಳ್ಳುವಿರಿ. ಕಷ್ಟಕ್ಕೆಂದು ಪರರಿಗೆ ನೀಡಿದ ಹಣ ಮರಳಿ ಕೈ ಸೇರುತ್ತದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸವು ಸಾಧಾರಣ ಮಟ್ಟದಲ್ಲಿರುತ್ತದೆ. ಪುಟ್ಟ ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕೆಂಪು

ತುಲಾ

ಕುಟುಂಬದಲ್ಲಿ ನಡೆಯುವ ಘಟನೆಯಿಂದ ಮಾನಸಿಕವಾಗಿ ಕುಗ್ಗುವಿರಿ. ಜೀವನದಲ್ಲಿ ವೈರಾಗ್ಯದ ಮನೋಭಾವ ಉಂಟಾಗುತ್ತದೆ. ಉದ್ಯೋಗದಲ್ಲಿ ವಿಶೇಷವಾದ ಬದಲಾವಣೆ ನಿಮಗೆ ಅನುಕೂಲಕರವಾಗಿರುತ್ತದೆ. ಉತ್ತಮ ಆದಾಯ ಇಲ್ಲದೇ ಹೋದರು ಹಣದ ತೊಂದರೆ ಬಾರದು. ಹಿರಿಯ ಅಧಿಕಾರಿಗಳ ಅಣತಿಯಂತೆ ನೌಕರರ ಗುಂಪಿನ ನಾಯಕತ್ವ ವಹಿಸುವಿರಿ. ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಮಣಿಯದೆ ವಿಶೇಷ ಸಾಧನೆ ಮಾಡಲಿದ್ದಾರೆ. ಭೂವ್ಯವಹಾರದಲ್ಲಿ ಹೇರಳ ಲಾಭವಿದೆ. ಸಂತೋಷ ಕೂಟವೊದರಲ್ಲಿ ಅತಿಥಿಗಳಾಗಿ ಭಾಗಿಯಾಗುವಿರಿ. ನಿಮಗೆ ಹಣದ ಕೊರತೆ ಇದ್ದರೂ ಬೇರೆಯವರಿಗೆ ಸಹಾಯ ಮಾಡುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ವೃಶ್ಚಿಕ

ಸುಲಭದ ಕೆಲಸ ಕಾರ್ಯಗಳನ್ನೂ ಹೆಚ್ಚಿನ ಪರಿಶ್ರಮದಿಂದ ಮಾಡುವಿರಿ. ವಿನಾಕಾರಣ ಅಲೆದಾಟ ಹೆಚ್ಚಾಗುತ್ತದೆ. ಬೇಸರ ಸಹಿಸಲಾರದೆ ಎಲ್ಲರೊಂದಿಗೆ ಸಿಡುಕುತನ ತೋರುವಿರಿ. ನೇರವಾಗಿ ನಿಷ್ಠುರದ ಮಾತಾಡುವ ಕಾರಣ ಕುಟುಂಬದಲ್ಲಿ ವಾತಾವರಣದಲ್ಲಿ ಸಂಧಿಗ್ದತೆ ಉಂಟಾಗುತ್ತದೆ. ದಿಟ್ಟತನದಿಂದ ಉದ್ಯೋಗದ ವಿರೋಧಿಗಳನ್ನು ಗೆದ್ದು ಪ್ರತಿಷ್ಠಿತ ಸ್ಥಾನಮಾನ ಗಳಿಸುವಿರಿ. ವಿದ್ಯಾರ್ಥಿಗಳು ವಿದ್ಯಾರ್ಜನೆಯ ಬಗ್ಗೆ ಹೆಚ್ಚಿನ ಗಮನ ನೀಡಲಿದ್ದಾರೆ. ಸಂಗಾತಿಯ ಹೆಸರಿನಲ್ಲಿ ಮಾಡುತ್ತಿರುವ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಕುಟುಂಬದ ಹಿರಿಯರ ಸಲಹೆ ಪಾಲಿಸಿದಲ್ಲಿ ಯಾವುದೇ ತೊಂದರೆ ಬಾರದು. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ ಮಾಡುವಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ