logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ, ಕುಟುಂಬದಲ್ಲಿ ಶುಭ ಕಾರ್ಯ; ಧನಸ್ಸು, ಮಕರ, ಕುಂಭ, ಮೀನ ರಾಶಿಯ ದಿನ ಭವಿಷ್ಯ

Horoscope Today: ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ, ಕುಟುಂಬದಲ್ಲಿ ಶುಭ ಕಾರ್ಯ; ಧನಸ್ಸು, ಮಕರ, ಕುಂಭ, ಮೀನ ರಾಶಿಯ ದಿನ ಭವಿಷ್ಯ

Rakshitha Sowmya HT Kannada

May 08, 2024 05:10 AM IST

ಧನಸ್ಸು, ಮಕರ, ಕುಂಭ, ಮೀನ ರಾಶಿಯ ದಿನ ಭವಿಷ್ಯ

  • 8 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (8th May 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(8th May 2024 Daily Horoscope).

ತಾಜಾ ಫೋಟೊಗಳು

ಮೇ 19 ರಂದು ವೃಷಭ ರಾಶಿಗೆ ಶುಕ್ರನ ಸಂಚಾರ; ಈ ರಾಶಿಯವರಿಗೆ ಶುಕ್ರಾದಿತ್ಯ ಯೋಗ ತರಲಿದೆ ಸಕಲ ಸುಖ ಸಮೃದ್ಧಿ

May 19, 2024 01:38 PM

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ: ಅಮಾವಾಸ್ಯೆ ಬೆಳಗ್ಗೆ 08.42 ರವರೆಗೂ ಇದ್ದು ನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ: ಭರಣಿ ನಕ್ಷತ್ರವು 01.49 ರವರೆಗೂ ಇದ್ದು ನಂತರ ಕೃತ್ತಿಕಾ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ05.56

ಸೂರ್ಯಾಸ್ತ: ಸಂಜೆ 06.35

ರಾಹುಕಾಲ: 12.20 ರಿಂದ 01.55

ರಾಶಿಫಲ

ಧನಸ್ಸು

ಆತ್ಮೀಯರನ್ನು ನಿಮ್ಮೊಡನೆ ಸರಿ ದಾರಿಯಲ್ಲಿ ನಡೆಯುವಂತೆ ಮಾಡುವಿರಿ. ಮಿತ್ರನೊಬ್ಬನ ಸಹಾಯದಿಂದ ಉತ್ತಮ ಉದ್ಯೋಗ ದೊರೆಯುತ್ತದೆ. ಕುಟುಂಬದವರ ಹೊಂದಾಣಿಕೆಯ ಬುದ್ಧಿ ಮನಸ್ಸಿಗೆ ಸಂತೋಷ ನೀಡುತ್ತದೆ. ಕುಟುಂಬದ ಕೆಲಸ ಕಾರ್ಯಗಳ ಜವಾಬ್ದಾರಿ ನಿಮ್ಮದಾಗುತ್ತದೆ. ಸಂತಸದಿಂದ ಸಂಗಾತಿ ಮತ್ತು ಮಕ್ಕಳ ಜೊತೆ ಸಂತಸದ ಕ್ಷಣಗಳನ್ನು ಕಳೆಯುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಕುಟುಂಬದ ಸದಸ್ಯರಿಂದ ಖರ್ಚಿನ ಪಾಲು ದೊರೆಯುತ್ತದೆ. ಉದ್ಯೋಗದಲ್ಲಿನ ಸಮಸ್ಯೆಗಳು ಕ್ರಮೇಣವಾಗಿ ಮರೆಯಾಗಲಿವೆ. ವಿದ್ಯಾರ್ಥಿಗಳಿಗೆ ವಿಶೇಷ ಅನುಕೂಲತೆಗಳು ದೊರೆಯುತ್ತವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು

ಮಕರ

ಬೇರೆಯವರು ಆಡುವ ಮಾತುಗಳೆಲ್ಲಾ ನಿಜ ಎಂದು ನಂಬುವಿರಿ. ನಿಮ್ಮ ಒಳ್ಳೆಯತನವನ್ನು ಮೆಚ್ಚುವ ಜನರು ನಿಮ್ಮೊಡನೆ ಇರುತ್ತಾರೆ. ಕಷ್ಟಪಟ್ಟು ದುಡಿವ ಕಾರಣ ಯಾವುದೇ ಕೆಲಸವನ್ನು ಮಾಡಬಲ್ಲಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಆತಂಕ ಬಿಟ್ಟು ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸ್ವತಂತ್ರವಾಗಿ ನಿರ್ವಹಿಸುವ ವ್ಯಾಪಾರ ವ್ಯವಹಾರ ಒಳ್ಳೆಯದು. ಪಾಲುಗಾರಿಕೆಯಲ್ಲಿ ಹಣದ ವ್ಯವಹಾರವನ್ನು ಆರಂಭಿಸಿ ಉತ್ತಮ ಆದಾಯ ಗಳಿಸುವಿರಿ. ಭೂ ವ್ಯವಹಾರದಲ್ಲಿ ವಿವಾದ ಎದುರಿಸುವಿರಿ. ಚರ್ಮದ ವಸ್ತುಗಳನ್ನು ಬಳಸದೆ ಇದ್ದಲ್ಲಿ ಶುಭ ಫಲಗಳು ದೊರೆಯುತ್ತವೆ. ಹೊಸ ವಾಹನ ಕೊಳ್ಳುವಿರಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ

ಕುಂಭ

ಕುಟುಂಬದ ಹಿರಿಯರ ನಿಯಮಗಳಿಗೆ ತಲೆಬಾಗಿ ಮುಖ್ಯವಾದ ತೀರ್ಮಾನವನ್ನು ಕೈಗೊಳ್ಳುವಿರಿ. ಹೊಸ ಕೆಲಸ ಕಾರ್ಯಗಳನ್ನು ಆರಂಭಿಸಲು ಬೇಸರ ಇರುತ್ತದೆ. ಸುಲಭವಾಗಿ ನಿಮ್ಮ ತೀರ್ಮಾನಗಳನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಾಗದು. ಹಣಕಾಸಿನ ವಿಚಾರದಲ್ಲಿ ಯಾರ ಬಲವಂತಕ್ಕೂ ನೀವು ಒಪ್ಪುವುದಿಲ್ಲ. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸಿ ಉನ್ನತ ಫಲವನ್ನು ಪಡೆಯುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ವಯಸ್ಸಿನ ಗುಂಪಿನ ನಾಯಕತ್ವ ದೊರೆಯುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಜಗಳ ಕದನಗಳನ್ನು ತೊರೆದು ಸಂಧಾನದಿಂದ ವಿವಾದ ಪರಿಹರಿಸುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಗುಲಾಬಿ

ಮೀನ

ಆತುರದ ನಿರ್ಧಾರದಿಂದ ತೊಂದರೆ ಎದುರಾಗುತ್ತದೆ. ಸ್ವಪ್ರಯತ್ನದಿಂದಾಗಿ ಉದ್ಯೋಗದಲ್ಲಿ ವಿಶೇಷ ಗೌರವ ಗಳಿಸುವಿರಿ. ಉತ್ತಮ ಅವಕಾಶ ದೊರೆತು ಉದ್ಯೋಗವನ್ನು ಬದಲಿಸುವಿರಿ. ಕುಟುಂಬಕ್ಕೆ ಸಂಬಂಧಿಸಿದಂತೆ ತ್ವರಿತಗತಿಯಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ನಿಧಾನವಾದಷ್ಟು ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಕುಟುಂಬದವರ ಸಹಾಯ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭವಿದೆ. ವಿದ್ಯಾರ್ಥಿಗಳು ಕಷ್ಟವೆನಿಸಿದರೂ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಚಂಚಲದ ಸ್ವಭಾವದಿಂದ, ದೊರೆಯುವ ಅವಕಾಶವನ್ನು ಕಳೆದುಕೊಳ್ಳಬಹುದು. ಕುಟುಂಬದ ಮಂಗಳ ಕಾರ್ಯವನ್ನು ಯಶಸ್ವಿಯಾಗಿ ನಡೆಸಿಕೊಡುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ