logo
ಕನ್ನಡ ಸುದ್ದಿ  /  ಮನರಂಜನೆ  /  Saalumarada Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿದ ಬಾಲಿವುಡ್‌ ನಟಿ.. ವಿಡಿಯೋ ವೈರಲ್

Saalumarada Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿದ ಬಾಲಿವುಡ್‌ ನಟಿ.. ವಿಡಿಯೋ ವೈರಲ್

HT Kannada Desk HT Kannada

Mar 20, 2023 07:18 AM IST

ಸಾಲುಮರದ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿದ ಬಾಲಿವುಡ್‌ ನಟಿ

    • ಹಿಂದಿ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಿಯಾಂಕ ಚಹರ್‌ ಚೌಧರಿ, ರಿಯಾಲಿಟಿ ಶೋನಿಂದ ಹೊರ ಬಂದಾಗಿನಿಂದ ಅವರು ಬಹಳ ಫೇಮಸ್.‌ ಇತ್ತೀಚೆಗೆ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅದೇ ಕಾರ್ಯಕ್ರಮಕ್ಕೆ ಬಂದಿದ್ದ ಸಾಲುಮರದ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿದ ಬಾಲಿವುಡ್‌ ನಟಿ
ಸಾಲುಮರದ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿದ ಬಾಲಿವುಡ್‌ ನಟಿ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಹೆಸರು ಹೊರ ರಾಜ್ಯದಲ್ಲಿ ಹಾಗೂ ವಿದೇಶದಲ್ಲಿ ಕೂಡಾ ಬಹಳ ಫೇಮಸ್.‌ ಮಕ್ಕಳು ಇಲ್ಲದ ತಿಮ್ಮಕ್ಕ ಅವರು ಗಿಡಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಪೋಷಿಸಿ, ಸಾಲುಮರದ ತಿಮ್ಮಕ್ಕ ಎಂದೇ ಹೆಸರಾಗಿದ್ದಾರೆ. 8 ಸಾವಿರಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪರಿಸರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬ್ಲಿಂಕ್‌ಗೆ ಬಹುಪರಾಕ್‌ ಸಿಗ್ತಿದ್ದಂತೆ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದ ಜತೆಗೆ ಬರ್ತಿದ್ದಾರೆ ದೀಕ್ಷಿತ್‌ ಶೆಟ್ಟಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಸಾಲುಮರದ ತಿಮ್ಮಕ್ಕ ಅವರಿಗೆ ಈಗ 110 ವರ್ಷ ವಯಸ್ಸು. ಪದ್ಮಶ್ರೀ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಅವರನ್ನು ಅರಿಸಿ ಬಂದಿವೆ. ಹಿರಿಜೀವದ ಆಶೀರ್ವಾದ ಪಡೆಯಲು ಪ್ರತಿದಿನ ನೂರಾರು ಜನರು ಅವರನ್ನು ಭೇಟಿ ಮಾಡುತ್ತಾರೆ. ಇದೀಗ ಬಾಲಿವುಡ್‌ ನಟಿಯೊಬ್ಬರು ಸಾಲುಮರದ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದು ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಹಿಂದಿ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಿಯಾಂಕ ಚಹರ್‌ ಚೌಧರಿ, ರಿಯಾಲಿಟಿ ಶೋನಿಂದ ಹೊರ ಬಂದಾಗಿನಿಂದ ಅವರು ಬಹಳ ಫೇಮಸ್.‌ ಇತ್ತೀಚೆಗೆ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅದೇ ಕಾರ್ಯಕ್ರಮಕ್ಕೆ ಬಂದಿದ್ದ ಸಾಲುಮರದ ತಿಮ್ಮಕ್ಕ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಈ ವಿಡಿಯೋ ಈಗ ವೈರಲ್‌ ಆಗುತ್ತಿದೆ. ಪ್ರಿಯಾಂಕ ವಿಡಿಯೋ ನೋಡಿ ನೆಟಿಜನ್ಸ್‌ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಎಷ್ಟೇ ಫ್ಯಾಷನೇಟ್‌ ಆದ್ರೂ ಈ ಹುಡುಗಿ ನಮ್ಮ ಭಾರತೀಯ ಸಂಪ್ರದಾಯ ಪಾಲಿಸುವುದನ್ನು ಮಾತ್ರ ಮರೆದಿಲ್ಲ ಎಂದು ಹೊಗಳುತ್ತಿದ್ದಾರೆ.

ಸಾಲು ಮರದ ತಿಮ್ಮಕ್ಕ ಅವರ ಬಗ್ಗೆ ಮಾತನಾಡಿದ್ದ ತಮಿಳು ನಟ ವಿವೇಕ್‌

ತಮಿಳು ಹಾಸ್ಯ ನಟ ವಿವೇಕ್‌ ಇಂದು ನಮ್ಮೊಂದಿಗೆ ಇಲ್ಲ. ಆದರೆ ಅವರ ನೆನಪು ಮಾತ್ರ ಎಂದಿಗೂ ಸಿನಿಪ್ರಿಯರನ್ನು ಕಾಡುತ್ತಿರುತ್ತದೆ. ನಟ ವಿವೇಕ್‌ ಕೂಡಾ ಕಾರ್ಯಕ್ರಮವೊಂದರಲ್ಲಿ ಸಾಲು ಮರದ ತಿಮ್ಮಕ್ಕ ಅವರ ಬಗ್ಗೆ ಮಾತನಾಡಿದ್ದರು. 2019ರಲ್ಲಿ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾಲುಮರದ ತಿಮ್ಮಕ್ಕ ಅವರನ್ನು ಗೌರವಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಹುಭಾಷಾ ನಟಿ ರಶ್ಮಿಕಾ ಕೂಡಾ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ತಿಮ್ಮಕ್ಕ ಅವರು ಕನ್ನಡದಲ್ಲಿ ಮಾತನಾಡುತ್ತಿದ್ದಂತೆ ಅದನ್ನು ತಮಿಳಿನಲ್ಲಿ ತರ್ಜುಮೆ ಮಾಡುವಂತೆ ನಿರೂಪಕಿ, ಅಲ್ಲಿದ್ದ ರಶ್ಮಿಕಾಗೆ ಮನವಿ ಮಾಡಿದರು. ವೇದಿಕೆ ಮೇಲೆ ಬಂದ ರಶ್ಮಿಕಾ ತಿಮ್ಮಕ್ಕ ಅವರ ಬಗ್ಗೆ ಮಾತನಾಡಲು ತಡಬಡಾಯಿಸಿದ್ದಾಗ ನಟ ವಿವೇಕ್‌, ತಿಮ್ಮಕ್ಕ ಅವರ ಬಗ್ಗೆ ಪಟ ಪಟ ಮಾತನಾಡಿ ಅಲ್ಲಿದ್ದವರು ಆಶ್ಚರ್ಯ ಪಡುವಂತೆ ಮಾತನಾಡಿದ್ದರು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ವಿವೇಕ್‌ ಅವರ ಬಗ್ಗೆ ಎಲ್ಲರೂ ಮೆಚ್ಚುಗೆ ಮಾತುಗಳನ್ನಾಡಿದ್ದರು.

ಮತ್ತಷ್ಟು ಮನರಂಜನೆ ಸುದ್ದಿಗಳು

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸುವ ಮೂಲಕ ತಮ್ಮ ಸಿನಿಮಾವನ್ನು ನೆನಪಿಸಿದ ರಿಷಬ್‌ ಶೆಟ್ಟಿ

ವಿಶ್ವಸಂಸ್ಥೆಗೆ ಭಾರತದ ಪ್ರತಿನಿಧಿಯಾಗಿ ತೆರಳಿದ್ದ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ, ನಿರ್ಮಾಪಕ ರಿಷಬ್‌ ಶೆಟ್ಟಿ ಭಾರತಕ್ಕೆ ವಾಪಸಾಗಿದ್ದಾರೆ. ಅಲ್ಲಿಂದ ಬರುತ್ತಿದ್ದಂತೆ ಡಿವೈನ್‌ ಸ್ಟಾರ್‌, ಬೆಂಗಳೂರಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದನ್ನು ಉದ್ಘಾಟನೆ ಮಾಡುವ ಮೂಲಕ ತಾವು ನಿರ್ಮಿಸಿ, ನಿರ್ದೇಶಿಸಿದ ಸಿನಿಮಾವೊಂದನ್ನು ನೆನಪು ಮಾಡಿದ್ದಾರೆ. ಪೂರ್ತಿ ಸ್ಟೋರಿ ಓದಲು ಈ ಲಿಂಕ್‌ ಒತ್ತಿ.

ವೈಷ್ಣವಿ ಗೌಡ ತಾಯಿ ಈಗ ಅಡ್ವೊಕೇಟ್‌... ಅಮ್ಮನ ಸಾಧನೆಯನ್ನು ಕೊಂಡಾಡಿದ ಮಗಳು!

'ಅಗ್ನಿಸಾಕ್ಷಿ' ಖ್ಯಾತಿಯ ವೈಷ್ಣವಿ ಗೌಡ ಕೆಲವು ದಿನಗಳ ಹಿಂದೆ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದರು. ಇದೀಗ ಆ ಬೇಸರದಿಂದ ಹೊರ ಬರುತ್ತಿರುವ ವೈಷ್ಣವಿ ಮೊದಲಿನಂತೆ ತಮ್ಮ ಯೂಟ್ಯೂಬ್‌, ಧಾರಾವಾಹಿ ಶೂಟಿಂಗ್‌ನಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ವೈಷ್ಣವಿ ತಾಯಿ ವಕೀಲೆಯಾಗಿ ಪ್ರಮೋಷನ್‌ ಪಡೆದಿದ್ದು ಈ ಸಂತೋಷದ ವಿಚಾರವನ್ನು ಸ್ವತ: ವೈಷ್ಣವಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂಪೂರ್ಣ ಮಾಹಿತಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ