logo
ಕನ್ನಡ ಸುದ್ದಿ  /  ಮನರಂಜನೆ  /  Banaras Event: ‘ನನ್ನಪ್ಪ ಮತ್ತು ದರ್ಶನಣ್ಣ ನನ್ನ ಜೀವನದ ಎರಡು ಶಕ್ತಿ..’ ಎಂದ ‘ಬನಾರಸ್‌’ ಹೀರೋ ಝೈದ್‌ ಖಾನ್‌

Banaras Event: ‘ನನ್ನಪ್ಪ ಮತ್ತು ದರ್ಶನಣ್ಣ ನನ್ನ ಜೀವನದ ಎರಡು ಶಕ್ತಿ..’ ಎಂದ ‘ಬನಾರಸ್‌’ ಹೀರೋ ಝೈದ್‌ ಖಾನ್‌

HT Kannada Desk HT Kannada

Oct 24, 2022 11:29 AM IST

‘ನನ್ನಪ್ಪ ಮತ್ತು ದರ್ಶನಣ್ಣ ನನ್ನ ಜೀವನದ ಎರಡು ಶಕ್ತಿ..’ ಎಂದ ‘ಬನಾರಸ್‌’ ಹೀರೋ ಝೈದ್‌ ಖಾನ್‌

    • ಇಂದು ನನ್ನ ಜೀವನದಲ್ಲಿ ತುಂಬ ದೊಡ್ಡ ದಿನ. ನನ್ನ ಜೀವನದ ಇಬ್ಬರು ದೊಡ್ಡ ಶಕ್ತಿಗಳು ಇಲ್ಲಿ ಬಂದಿದ್ದಾರೆ. ನನಗೆ ಅಣ್ಣನ ಸಮಾನರಾದ ದರ್ಶನ್ ಹಾಗೂ ನನ್ನಪ್ಪ…
‘ನನ್ನಪ್ಪ ಮತ್ತು ದರ್ಶನಣ್ಣ ನನ್ನ ಜೀವನದ ಎರಡು ಶಕ್ತಿ..’ ಎಂದ ‘ಬನಾರಸ್‌’ ಹೀರೋ ಝೈದ್‌ ಖಾನ್‌
‘ನನ್ನಪ್ಪ ಮತ್ತು ದರ್ಶನಣ್ಣ ನನ್ನ ಜೀವನದ ಎರಡು ಶಕ್ತಿ..’ ಎಂದ ‘ಬನಾರಸ್‌’ ಹೀರೋ ಝೈದ್‌ ಖಾನ್‌

ಶಾಸಕ ಜಮೀರ್ ಅಹ್ಮದ್‌ಖಾನ್ ಅವರ ಪುತ್ರ ಝೈದ್‌ ಖಾನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಬನಾರಸ್‌’. ಬೆಲ್‌ಬಾಟಂ ಖ್ಯಾತಿಯ ಜಯತೀರ್ಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ಶನಿವಾರ ಸಂಜೆ ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.

ಟ್ರೆಂಡಿಂಗ್​ ಸುದ್ದಿ

Deepfake: ತಲೆ ಆಲಿಯಾ ಭಟ್‌ರದ್ದು, ದೇಹ ಯಾರದ್ದು? ಆಲಿಯಾ ಭಟ್‌ರ ಮತ್ತೊಂದು ಡೀಫ್‌ಫೇಕ್‌ ವಿಡಿಯೋ ವೈರಲ್‌, ಅಸಲಿ- ನಕಲಿ ವಿಡಿಯೋ ನೋಡಿ

ದ ಸೂಟ್‌ ಕನ್ನಡ ಸಿನಿಮಾ ಮೇ 17ರಂದು ಬಿಡುಗಡೆ; ಟ್ರೇಲರ್‌ ನೋಡಿ ಖುಷಿಪಟ್ಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

Choo Mantar: ಶರಣ್‌ ಲಕ್‌ ಬದಲಾಯಿಸಬಹುದೇ ಛೂ ಮಂತರ್‌? ಬಹುನಿರೀಕ್ಷಿತ ಸಿನಿಮಾ ರಿಲೀಸ್‌ ಮುಂದೂಡಿಕೆ

Tejasswi Prakash: ಉರ್ಫಿ ಹಾಕುವ ಬಟ್ಟೆಗಳು ಇದಕ್ಕಿಂತಲೂ ಚೆನ್ನಾಗಿರುತ್ವೆ: ತೇಜಸ್ವಿ ಪ್ರಕಾಶ್‌ ಎದೆಗಾರಿಕೆಗೆ ನೆಟ್ಟಿಗರಿಂದ ಕ್ಲಾಸ್‌

ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ಮೂಲಕ ಜನಪ್ರಿಯವಾಗಿರುವ ‘ಬನಾರಸ್‌’ ಚಿತ್ರದ ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನೋದ್ ಪ್ರಭಾಕರ್, ನೆನಪಿರಲಿ ಪ್ರೇಮ್, ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜಯತೀರ್ಥ ಸೇರಿದಂತೆ ಚಿತ್ರರಂಗದ ಹಲವಾರು ಪ್ರಮುಖರು ಭಾಗವಹಿಸಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ನಡೆದ ವಿವಿಧ ಮನಮೋಹಕ ನೃತ್ಯ-ಗಾಯನಗಳನ್ನು ನೆರೆದಿದ್ದ ಜನತೆ ತದೇಕಚಿತ್ತದಿಂದ ವೀಕ್ಷಿಸಿದರು.

ಅಪ್ಪ ಮತ್ತು ದರ್ಶನಣ್ಣ ನನ್ನ ಜೀವನದ ಎರ ಶಕ್ತಿ..

‘ಇಂದು ನನ್ನ ಜೀವನದಲ್ಲಿ ತುಂಬಾ ದೊಡ್ಡ ದಿನ. ನನ್ನ ಜೀವನದ ಇಬ್ಬರು ದೊಡ್ಡ ಶಕ್ತಿಗಳು ಇಲ್ಲಿ ಬಂದಿದ್ದಾರೆ. ನನಗೆ ಅಣ್ಣನ ಸಮಾನರಾದ ದರ್ಶನ್ ಹಾಗೂ ನನ್ನಪ್ಪ, ಅವರು ಇದೇ ಮೊದಲ ಬಾರಿಗೆ ನನ್ನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅಪ್ಪನಿಗೆ ಈ ವೇದಿಕೆಯ ಮೇಲೆ ಭರವಸೆ ನೀಡುತ್ತೇನೆ. ಅಪ್ಪಾ, ನೀವು ತಲೆತಗ್ಗಿಸುವ ಕೆಲಸ ಎಂದೂ ಮಾಡಲ್ಲ. ಇವತ್ತು ನಾನಿಲ್ಲಿ ನಿಂತಿದ್ದೇನೆ ಎಂದರೆ ಅದಕ್ಕೆ ನನ್ನಪ್ಪನೇ ಕಾರಣ. ಅಲ್ಲದೆ ದರ್ಶನಣ್ಣ ನನಗೆ ಮೊದಲಿಂದಲೂ ತುಂಬಾ ಸಪೋರ್ಟ್ ಮಾಡುತ್ತಿದ್ದಾರೆ. ಇನ್ನು ಬನಾರಸ್ ಚಿತ್ರದ ಬಗ್ಗೆ ಹೇಳುವುದಾದರೆ ಇದರಲ್ಲಿ ತುಂಬಾನೇ ವಿಶೇಷತೆಗಳಿವೆ. ಚಿತ್ರಕ್ಕಾಗಿ ನಾನು ತುಂಬಾನೇ ಕಷ್ಟಪಟ್ಟಿದ್ದೇನೆ. ಜಯತೀರ್ಥ ಅವರು ಒಂದು ಅದ್ಭುತ ಚಿತ್ರವನ್ನು ನನಗಾಗಿ ಮಾಡಿ ಕೊಟ್ಟಿದ್ದಾರೆ. ನ. 4ರಂದು ಚಿತ್ರ ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಸಿನಿಮಾ ಜನರ ಮನಸನ್ನು ಗೆದ್ದೇ ಗೆಲ್ಲುತ್ತೆ ಎಂಬ ಭರವಸೆಯಿದೆ. ಚಿತ್ರ ನೋಡಿ ಹರಸಿ’ ಎಂದು ಕೇಳಿಕೊಂಡರು.

ಶೋಕಿಗೆ ಸಿನಿಮಾ ಮಾಡಿರಬಹುದು ಅನ್ಕೊಂಡಿದ್ದೆ...

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್, ‘ನಾನು ಈಗಾಗಲೇ ‘ಬನಾರಸ್‌’ ಚಿತ್ರವನ್ನು ನೋಡಿದ್ದೇನೆ. ಝೈದ್ ನನಗೆ ಮೊದಲೇ ಸಿನಿಮಾ ತೋರಿಸಿದ್ದಾನೆ, ಆರಂಭದಲ್ಲಿ ನಾನೂ ಸಹ ಶ್ರೀಮಂತರ ಮಗ, ಏನೋ ಮಾಡಿರಬಹುದು ಎಂದುಕೊಂಡಿದ್ದೆ. ಆದರೆ ಚಿತ್ರ ನೋಡುತ್ತ ನನಗೇ ಆಶ್ಚರ್ಯವಾಯಿತು. ಅಷ್ಟು ಅದ್ಭುತವಾಗಿ ಅಭಿನಯಿಸಿದ್ದಾನೆ. ಜೊತೆಗೆ ಕಥೆ, ನಿರ್ದೇಶನ ಎಲ್ಲವೂ ಚೆನ್ನಾಗಿದೆ. ಚಿತ್ರ ಖಂಡಿತ ಯಶಸ್ವಿಯಾಗುತ್ತದೆ’ ಎಂದು ಹೇಳಿದರು.

ಬನಾರಸ್ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹೀಗೆ ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತಯಾರಾಗಿರುವ ಪ್ಯಾನ್ ಇಂಡಿಯಾ ಚಿತ್ರ. ತಿಲಕ್‌ರಾಜ್ ಬಲ್ಲಾಳ್ ಅವರು ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ಪಂಚರಂಗಿ ಖ್ಯಾತಿಯ ಸೋನಲ್ ಮೊಂತೇರೋ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.

ಸುಜಯ್ ಶಾಸ್ತ್ರಿ, ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಬನಾರಸ್ ಚಿತ್ರ ನವೆಂಬರ್ 4ರಂದು ದೇಶಾದ್ಯಂತ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಬನಾರಸ್‌ ಇವೆಂಟ್‌ನಲ್ಲಿ ದರ್ಶನ್...
ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು