Kousalya Supraja Rama: ‘ಇಂಗ್ಲಿಷ್ ಸಾಕಾಗಿತ್ತು ‘ಕೌಸಲ್ಯಾ ಸುಪ್ರಜಾ ರಾಮ’ದಿಂದ ಕನ್ನಡ ಸಿಕ್ತು’; ಶಶಾಂಕ್ ಜತೆ ಕೈ ಜೋಡಿಸಿದ ಕೃಷ್ಣ..
Oct 16, 2022 07:37 PM IST
‘ಇಂಗ್ಲಿಷ್ ಸಾಕಾಗಿತ್ತು ‘ಕೌಸಲ್ಯಾ ಸುಪ್ರಜಾ ರಾಮ’ದಿಂದ ಕನ್ನಡ ಸಿಕ್ತು’; ಶಶಾಂಕ್ ಜತೆ ಕೈ ಜೋಡಿಸಿದ ಸೇರಿದ ಕೃಷ್ಣ..
- ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ.
ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.
ತಾಯಿ ಮಗನ ಸೆಂಟಿಮೆಂಟ್ನ ಸಿನಿಮಾ..
ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ ಶಶಾಂಕ್., "ಕೌಸಲ್ಯಾ ಸುಪ್ರಜಾ ರಾಮ" ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಹೆಸರೇ ಹೇಳುವಂತೆ ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಸೆಂಟಿಮೆಂಟ್ ಎರಡು ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ" ಎಂದು ಮಾಹಿತಿ ನೀಡುತ್ತಾರೆ.
ಮುಂದುವರಿದು ಮಾತನಾಡುವ ಅವರು, "ಈ ಚಿತ್ರದ ನಾಯಕರಾಗಿ ಡಾರ್ಲಿಂಗ್ ಕೃಷ್ಣ ನಟಿಸುತ್ತಿದ್ದರೆ, ಅವರ ತಾಯಿ - ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಅಚ್ಯುತ್ಕುಮಾರ್, ಗಿರಿರಾಜ್ ಸಹ ತಾರಾಬಳಗದಲ್ಲಿದ್ದಾರೆ. ಇಬ್ಬರು ನಾಯಕಿಯರಿರುತ್ತಾರೆ. ಅದರಲ್ಲಿ ಒಬ್ಬರು ಹೊಸಬರು. ಸದ್ಯದಲ್ಲೇ ನಾಯಕಿಯರ ಪರಿಚಯ ಮಾಡಿಸಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಐದು ಹಾಡುಗಳಿರಲಿವೆ" ಎಂದರು.
ಆಸೆ ಈಡೇರಿತು..
"ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಈಗ ಈಡೇರಿದೆ. "ಕೌಸಲ್ಯಾ ಸುಪ್ರಜಾ ರಾಮ" ಸುಂದರ ಶೀರ್ಷಿಕೆ. "ಲವ್ ಮಾಕ್ಟೇಲ್", " ಲಕ್ಕಿ ಮ್ಯಾನ್" ಸೇರಿ ನನ್ನ ಅನೇಕ ಚಿತ್ರಗಳ ಶೀರ್ಷಿಕೆ ಇಂಗ್ಲಿಷ್ ನಲ್ಲಿದೆ. ಈಗ ಇಂಗ್ಲಿಷ್ ಇಲ್ಲದ ಶೀರ್ಷಿಕೆ ಸಿಕ್ಕಿದೆ. ಕಥೆ ಹಾಗೂ ನನ್ನ ಪಾತ್ರ ತುಂಬಾ ಚೆನ್ನಾಗಿದೆ" ಎಂದರು ನಾಯಕ ಡಾರ್ಲಿಂಗ್ ಕೃಷ್ಣ.
"ನಾನು ಶಶಾಂಕ್ ಅವರನ್ನು ಬಹಳ ದಿನಗಳಿಂದ ನಿಮ್ಮ ಚಿತ್ರದಲ್ಲಿ ನಟಿಸಬೇಕೆಂದು ಕೇಳುತ್ತಿದೆ. ಈಗ ಅವಕಾಶ ಕೊಟ್ಟಿದ್ದಾರೆ" ಎಂದರು ನಿರ್ದೇಶಕ ಹಾಗೂ ನಟ ಗಿರಿರಾಜ್. ಸಹ ನಿರ್ಮಾಪಕ ಹನುಮಂತ ರಾವ್, ಛಾಯಾಗ್ರಾಹಕ ಸುಜ್ಞಾನ್, ಶಶಾಂಕ್ ಅವರೊಂದಿಗೆ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಯದುನಂದನ್ ಹಾಗೂ ಟೈಟಲ್ ಅನಿಮೇಷನ್ ಮಾಡಿರುವ ಸಂತೋಷ್ ರಾಧಾಕೃಷ್ಣನ್ ಈ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಅರ್ಜುನ್ ಜನ್ಯ ಸಂಗೀತ, ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಗಿರಿ ಮಹೇಶ್ ಈ ಚಿತ್ರದ ಸಂಕಲನಕಾರರು.