logo
ಕನ್ನಡ ಸುದ್ದಿ  /  ಮನರಂಜನೆ  /  Vikram On Thangalaan: ‘ಕೆಜಿಎಫ್‌’ನ ಇನ್ನೊಂದು ಮುಖ ಅನಾವರಣ ಮಾಡಲು ಹೊರಟ ತಮಿಳು ನಟ ಚಿಯಾನ್‌ ವಿಕ್ರಮ್!‌

Vikram on Thangalaan: ‘ಕೆಜಿಎಫ್‌’ನ ಇನ್ನೊಂದು ಮುಖ ಅನಾವರಣ ಮಾಡಲು ಹೊರಟ ತಮಿಳು ನಟ ಚಿಯಾನ್‌ ವಿಕ್ರಮ್!‌

HT Kannada Desk HT Kannada

Oct 26, 2022 11:21 AM IST

‘ಕೆಜಿಎಫ್‌’ನ ಇನ್ನೊಂದು ಮುಖ ಅನಾವರಣ ಮಾಡಲು ಹೊರಟ ತಮಿಳು ನಟ ಚಿಯಾನ್‌ ವಿಕ್ರಮ್!‌

    • ಚಿಯಾನ್ ವಿಕ್ರಮ್ ಅಭಿನಯದ, ಪ. ರಂಜಿತ್ ನಿರ್ದೇಶನದ ಹೊಸ ಚಿತ್ರಕ್ಕೆ ಕೊನೆಗೂ ಟೈಟಲ್ ಸಿಕ್ಕಿದೆ. ಈ ಚಿತ್ರಕ್ಕೆ ‘ತಂಗಲಾನ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.
‘ಕೆಜಿಎಫ್‌’ನ ಇನ್ನೊಂದು ಮುಖ ಅನಾವರಣ ಮಾಡಲು ಹೊರಟ ತಮಿಳು ನಟ ಚಿಯಾನ್‌ ವಿಕ್ರಮ್!‌
‘ಕೆಜಿಎಫ್‌’ನ ಇನ್ನೊಂದು ಮುಖ ಅನಾವರಣ ಮಾಡಲು ಹೊರಟ ತಮಿಳು ನಟ ಚಿಯಾನ್‌ ವಿಕ್ರಮ್!‌ (Twitter)

ಚಿಯಾನ್ ವಿಕ್ರಮ್ ಅಭಿನಯದ, ಪ. ರಂಜಿತ್ ನಿರ್ದೇಶನದ ಹೊಸ ಚಿತ್ರಕ್ಕೆ ಕೊನೆಗೂ ಟೈಟಲ್ ಸಿಕ್ಕಿದೆ. ಈ ಚಿತ್ರಕ್ಕೆ ‘ತಂಗಲಾನ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

ಟ್ರೆಂಡಿಂಗ್​ ಸುದ್ದಿ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕುರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಈ ಹಿಂದೆ ರಜನಿಕಾಂತ್ ಅಭಿನಯದ ಕಬಾಲಿ, ಕಾಲ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಪಾ. ರಂಜಿತ್, ವಿಕ್ರಮ್ ಅಭಿನಯದಲ್ಲಿ ಕೋಲಾರ ಗೋಲ್ಡ್ ಫೀಲ್ಡ್ ಹಿನ್ನೆಲೆಯಲ್ಲಿ ಒಂದು ಚಿತ್ರ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಈ ಚಿತ್ರ ಈಗ ಅಧಿಕೃತವಾಗಿರುವುದಷ್ಟೇ ಅಲ್ಲ, ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದ ಟೈಟಲ್ ಟೀಸರ್ ಸಹ ಅನಾವರಣಗೊಂಡಿದೆ.

‘ತಂಗಲಾನ್’ ಚಿತ್ರದಲ್ಲಿ ವಿಕ್ರಮ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹಬ್ಬದ ದಿನ ಅವರ ಚಿತ್ರವೊಂದರ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಈ ಚಿತ್ರದಲ್ಲಿ ವಿಕ್ರಮ್ ಜೊತೆಗೆ ಪಾರ್ವತಿ, ಮಾಳವಿಕಾ ಮೋಹನನ್, ಪಶುಪತಿ, ಹರಿಕೃಷ್ಣನ್, ಅನ್ಬುದುರೈ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ. ಈ ಚಿತ್ರಕ್ಕೆ ಎ. ಕಿಶೋರ್ ಛಾಯಾಗ್ರಹಣ ಮಾಡುತ್ತಿದ್ದು, ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ. ರಂಜಿತ್ ಅವರೇ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು ಅವರಿಗೆ ಬರವಣಿಗೆಯಲ್ಲಿ ತಮಿಳ್ ಪ್ರಭಾ ಸಹಾಯ ಮಾಡಿದ್ದಾರೆ. ಎಸ್.ಎಸ್. ಮೂರ್ತಿ ಕಲಾನಿರ್ದೇಶನ ಮತ್ತು ಆರ್.ಕೆ. ಸೆಲ್ವಾ ಅವರ ಸಂಕಲನವಿದೆ.

ಕೆಜಿಎಫ್ ಹಿನ್ನೆಲೆಯಲ್ಲಿ ಸಾಗುವ ಈ ಆಕ್ಷನ್ ಚಿತ್ರವನ್ನು ಸ್ಟುಡಿಯೋ ಗ್ರೀನ್ ಸಂಸ್ಥೆಯಡಿ ಕೆ.ಇ. ಜ್ಞಾನವೇಲ್ ರಾಜ ನಿರ್ಮಿಸುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ನಿರ್ಮಾಣದಲ್ಲಿ ಪ. ರಂಜಿತ್ ಅವರ ನೀಲಂ ಪ್ರೊಡಕ್ಷನ್ಸ್ ಸಹ ಕೈಜೋಡಿಸಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ