logo
ಕನ್ನಡ ಸುದ್ದಿ  /  ಮನರಂಜನೆ  /  Culture: ತುಳುಭಾಷೆಯ ಮೊದಲ ಸಾಕ್ಷ್ಯಚಿತ್ರ ಬಿಡುಗಡೆಗೆ ಸಜ್ಜು; ಪುರ್ಸ ಕಟ್ಟುನ- ಸಿದ್ಧವೇಷ ಕುಣಿತದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ

Culture: ತುಳುಭಾಷೆಯ ಮೊದಲ ಸಾಕ್ಷ್ಯಚಿತ್ರ ಬಿಡುಗಡೆಗೆ ಸಜ್ಜು; ಪುರ್ಸ ಕಟ್ಟುನ- ಸಿದ್ಧವೇಷ ಕುಣಿತದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ

Praveen Chandra B HT Kannada

Sep 29, 2023 02:27 PM IST

ತುಳುನಾಡಿನ ಪುರುಷ ಕುಣಿತದ ಸಾಂದರ್ಭಿಕ ಚಿತ್ರ

    • Tulu Documentary: ತುಳುಭಾಷೆಯ ಮೊದಲ‌ ಸಂಶೋಧನಾತ್ಮಕ ಸಾಕ್ಷ್ಯಚಿತ್ರ "ಪುರ್ಸ ಕಟ್ಟುನ: ಇನಿ- ಕೋಡೆ - ಎಲ್ಲೆ” ಇದರ ಬಿಡುಗಡೆ ಸಮಾರಂಭ ಅ 2 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ತುಳುನಾಡಿನ ಪುರುಷ ಕುಣಿತದ ಸಾಂದರ್ಭಿಕ ಚಿತ್ರ
ತುಳುನಾಡಿನ ಪುರುಷ ಕುಣಿತದ ಸಾಂದರ್ಭಿಕ ಚಿತ್ರ (Wiki Commons)

ಮಂಗಳೂರು: ತುಳುಭಾಷೆಯ ಮೊದಲ‌ ಸಂಶೋಧನಾತ್ಮಕ ಸಾಕ್ಷ್ಯಚಿತ್ರ "ಪುರ್ಸ ಕಟ್ಟುನ: ಇನಿ- ಕೋಡೆ - ಎಲ್ಲೆ” ಇದರ ಬಿಡುಗಡೆ ಸಮಾರಂಭ ಅ 2 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ವಿಕಿಮೀಡಿಯ ಪೌಂಡೇಶನ್, CIS-A2K, ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಇವರ ಸಹಕಾರದಿಂದ ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಇವರು ನಿರ್ಮಾಪಕರಾಗಿ ತಯಾರಿಸಿರುವ ಡಾ ಸುಂದರ‌ ಕೇನಾಜೆ ನಿರ್ದೇಶನ ಮಾಡಿರುವ ಈ ಸಾಕ್ಷ್ಯಚಿತ್ರವು ಬೆಳ್ತಂಗಡಿ ಭಾಗದಲ್ಲಿ ಪ್ರಚಲಿತವಿರುವ ಪುರ್ಸ ಕಟ್ಟುನ ಕುಣಿತ ಹಾಗೂ ಸುಳ್ಯ ಪರಿಸರದಲ್ಲಿರುವ ಸಿದ್ಧವೇಷ ಕುಣಿತಕ್ಕೆ ಸಂಬಂಧಿಸಿದ್ದಾಗಿದೆ.

ಟ್ರೆಂಡಿಂಗ್​ ಸುದ್ದಿ

Jyothi Rai: ಹೆಸರು ಕೆಡಿಸುವ ಹುನ್ನಾರ, ಇದು ಪ್ರೀ ಪ್ಲಾನ್‌; ಖಾಸಗಿ ವಿಡಿಯೋ ಲೀಕ್‌ ಬಗ್ಗೆ ಜ್ಯೋತಿ ರೈಗೆ ಸಿಕ್ಕಿತ್ತು ಮುನ್ಸೂಚನೆ!

ದಕ್ಷಿಣ ಭಾರತದವ್ರು ಆಫ್ರಿಕನ್ನರಂತೆ ಕಾಣ್ತಾರೆ ಅನ್ನೋ ಸ್ಯಾಮ್‌ ಪಿತ್ರೋಡಾ ಹೇಳಿಕೆಗೆ ಗುನ್ನ ಕೊಟ್ಟ ಕನ್ನಡ ನಟಿ ಪ್ರಣೀತಾ ಸುಭಾಷ್‌

Bhagyalakshmi Serial:ರುಚಿಯಾದ ಒತ್ತು ಶ್ಯಾವಿಗೆ,ಮಾವಿನ ಸೀಕರಣೆ ಮಾಡಿಕೊಟ್ಟು ಹೋಟೆಲ್‌ನಲ್ಲಿ ಕೆಲಸ ಪಡೆದ ಕುಸುಮಾ; ಭಾಗ್ಯಲಕ್ಷ್ಮಿ ಧಾರಾವಾಹಿ

Brundavana Serial: ಆಕಾಶ್‌-ಪುಷ್ಪಾ ನಡುವೆ ಪ್ರೀತಿ ಚಿಗುರುವ ಹೊತ್ತಿನಲ್ಲೇ ಸಹನಾ ಮುಂದೆ ಸತ್ಯ ಬಿಚ್ಚಿಟ್ಟ ಸುನಾಮಿ

ತುಳು ಸಂಶೋಧನಾತ್ಮಕ ನೆಲೆಯಲ್ಲಿ ತಯಾರಾಗಿರುವ ಈ ಸಾಕ್ಷ್ಯಚಿತ್ರ ಪುರ್ಸ ಕುಣಿತದ ಹಿನ್ನಲೆ, ಕುಣಿತದ ಸ್ವರೂಪ ಹಾಗೂ ವಿದ್ವಾಂಸರ ವಿಶ್ಲೇಷಣೆ ಹಾಗೂ ಇಂದಿನ ಸ್ಥಿತಿಗತಿಗಳನ್ನು ಒಳಗೊಂಡದ್ದಾಗಿದ್ದು ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರವಾಗಿ ಬಿಡುಗಡೆಗೊಳ್ಳಲಿದೆ. ಬೆಳ್ತಂಗಡಿಯ ಪರಿಸರ, ಪುರ್ಸ ಕಟ್ಟುನ, ಕಂದ್ರಪ್ಪಾಡಿ ಪುರುಷ ದೈವ, ಗೌಡ ಸಮುದಾಯ ಮತ್ತು ಮಲೆಕುಡಿಯ ಸಮುದಾಯದ ಸಿದ್ಧವೇಷ ಹಾಗೂ ಮರಾಠಿ ಜನಾಂಗ ಬಾಲೆಸಾಂತು ಕುಣಿತವನ್ನು ತೌಲನಿಕವಾಗಿ ಈ ಸಾಕ್ಷ್ಯಚಿತ್ರದಲ್ಲಿ ಬಳಸಲಾಗಿದೆ.

ಮೈಸೂರಿನ ಕನ್ನಡಿ ಕ್ರಿಯೇಷನ್ ತಂಡ ಬೆಳ್ತಂಗಡಿ ಪರಿಸರದಲ್ಲಿ ಒಂದು ವಾರಗಳ ಕಾಲ ಚಿತ್ರೀಕರಣ ನಡೆಸಿ ಈ ಸಾಕ್ಷ್ಯಚಿತ್ರವನ್ನು ತಯಾರಿಸಿರುತ್ತಾರೆ. ಕರಾವಳಿಯ ಹಿರಿಯ ವಿದ್ವಾಂಸರು, ಕುಣಿತದ ಕಲಾವಿದರು ಹಾಗೂ ವಿಭಿನ್ನ ಕುಣಿತಗಳನ್ನು ಒಳಗೊಂಡ ಈ ಸಾಕ್ಷ್ಯಚಿತ್ರ ಪುರ್ಸ ಕಟ್ಟುವುದರದ ಬಗ್ಗೆ ಅನೇಕ ಹೊಸ ವಿಚಾರಗಳನ್ನು ಪ್ರಸ್ತುತಪಡಿಸುತ್ತಿದೆ. ಗುರು ಪ್ರಸಾದ್ ಸ್ವಾಮಿ ಹಿರೇಮಠ ಬೆಂಗಳೂರು ಮತ್ತು ತಂಡದ ಛಾಯಾಗ್ರಹಣ, ರಂಜಿತ್ ಸೇತು ಮೈಸೂರುರವರ ಸಂಕಲನ, ದೀಪು ನಾಯರ್ ಮೈಸೂರುರವರ ಸಂಗೀತ ಹಾಗೂ ಡಾ.ಗಿರೀಶರವರ ಇಂಗ್ಲೀಷ್ ಉಪಶೀರ್ಷಿಕೆ, ದಿನೇಶ್ ಕುಕ್ಕುಜಡ್ಕರ ರೇಖಾಚಿತ್ರಗಳನ್ನು ಈ ಸಾಕ್ಷ್ಯಚಿತ್ರ ಒಳಗೊಂಡಿದೆ.

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಮತ್ತು ಸಿಐಎಸ್ ಎ2ಕೆ ಬೆಂಗಳೂರು ಈ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಈ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳು ಅಧ್ಯಕ್ಷರಾದ ಪಿ. ಕುಶಾಲಪ್ಪ ಗೌಡ ಇವರು‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಕ್ಷ್ಯಚಿತ್ರ ಬಿಡುಗಡೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಬಯಿ ವಿಶ್ವವಿದ್ಯಾನಿಲಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ತಾಳ್ತಜೆ ವಸಂತ ಕುಮಾರ್ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಯದುಪತಿ ಗೌಡ, ಎಸ್.ಡಿ.ಎಂ. ಕಾಲೇಜು ಉಜಿರೆ ಇಲ್ಲಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ದಿವಾಕರ ಕೊಕ್ಕಡ ಇವರು ಭಾಗವಹಿಸಲಿದ್ದಾರೆ. ಬಿಡುಗಡೆಗೊಂಡ ಬಳಿಕ ಈ ಸಾಕ್ಷ್ಯಚಿತ್ರ ವಿಕಿಕಾಮನ್ಸ್ ಮತ್ತು ಯೂಟ್ಯೂಬ್ ಗಳಲ್ಲಿ ಲಭ್ಯವಾಗಲಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು