Prem with Manvita Kamath: ಮಾನ್ವಿತಾ ಕಮ್ ಬ್ಯಾಕ್... ಲವ್ಲಿ ಸ್ಟಾರ್ ಪ್ರೇಮ್ಗೆ ಜೋಡಿಯಾದ ಟಗರು ನಟಿ
Feb 21, 2023 03:35 PM IST
ಪ್ರೇಮ್ ಜೊತೆ ಮಾನ್ವಿತಾ ಕಾಮತ್
- ಈ ಚಿತ್ರವನ್ನು ಕೆಆರ್ಎಸ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದೆ. ಸದ್ಯದಲ್ಲೇ ಚಿತ್ರತಂಡ ಟೈಟಲ್ ಅನೌನ್ಸ್ ಮಾಡಲಿದೆ. ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿರುವ ಅಥರ್ವ ಆರ್ಯ, ಇದಕ್ಕೂ ಮುನ್ನ 'ಜೂಟಾಟ', 'ಗುಬ್ಬಚ್ಚಿ' ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.
'ಟಗರು' ಸಿನಿಮಾ ಮೂಲಕ ಒಂದೊಳ್ಳೆ ಬ್ರೇಕ್ ಪಡೆದ ಮಾನ್ವಿತಾ ಆ ಸಿನಿಮಾ ನಂತರ ಬೇರೆ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ವಿದ್ಯಾಭ್ಯಾಸದಿಂದಾಗಿ ಚಿತ್ರರಂಗದಿಂದ ಕೆಲವು ದಿನಗಳ ಕಾಲ ಬ್ರೇಕ್ ಪಡೆದಿದ್ದ ಈ ಚೆಲುವೆ ಇದೀಗ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅಥರ್ವ ಆರ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರವೊದರಲ್ಲಿ ಮಾನ್ವಿತಾ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಲವ್ಲಿ ಸ್ಟಾರ್ ಪ್ರೇಮ್ಗೆ ಜೋಡಿಯಾಗಿ ಮಾನ್ವಿತಾ ಕಾಮತ್ ನಟಿಸುತ್ತಿದ್ದಾರೆ.
ತಂದೆ ಮಗನ ಸೆಂಟಿಮೆಂಟ್ ಕಥಾಹಂದರ ಒಳಗೊಂಡ ಕಂಟೆಂಟ್ ಬೇಸ್ಡ್ ಚಿತ್ರದಲ್ಲಿ ಲವ್ಲಿ ಸ್ಟಾರ್ ಪ್ರೇಮ್, ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಪ್ರೇಮ್ ಜೋಡಿಯಾಗಿ ಮಾನ್ವಿತಾ ಕಾಮತ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗಾಗಲೇ ಮಾನ್ವಿತಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಇದೇ ಮೊದಲ ಬಾರಿಗೆ ಈ ಇಬ್ಬರ ಕಾಂಬಿನೇಶನ್ ತೆರೆ ಮೇಲೆ ಬರುತ್ತಿದೆ. ಈ ಚಿತ್ರವನ್ನು ಕೆಆರ್ಎಸ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದೆ. ಸದ್ಯದಲ್ಲೇ ಚಿತ್ರತಂಡ ಟೈಟಲ್ ಅನೌನ್ಸ್ ಮಾಡಲಿದೆ. ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿರುವ ಅಥರ್ವ ಆರ್ಯ, ಇದಕ್ಕೂ ಮುನ್ನ 'ಜೂಟಾಟ', 'ಗುಬ್ಬಚ್ಚಿ' ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.
ತಂದೆಯಂದಿರ ಮಹತ್ವ ಸಾರುವ ಸಿನಿಮಾ ಇದು. ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ಆತ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎನ್ನುವುದು ಚಿತ್ರದ ಒನ್ ಲೈನ್ ಸ್ಟೋರಿ. ಚಿತ್ರದಲ್ಲಿ ತಬಲ ನಾಣಿ ತಂದೆ ಪಾತ್ರದಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಮೂಲಕ ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ, ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ಚಿತ್ರಕ್ಕೆ ನಾಗಾರ್ಜುನ ಆರ್. ಡಿ ಕ್ಯಾಮೆರಾ ವರ್ಕ್, ಆಕಾಶ್ ಪರ್ವ ಸಂಗೀತ ನಿರ್ದೇಶನ, ವೇದಿಕ್ ವೀರ ಸಂಕಲನವಿದೆ. ಬಾಲ ರಾಜ್ವಾಡಿ, ಗಿರೀಶ್ ಜತ್ತಿ, ವಿಜಯ್ ಚೆಂಡೂರ್, ಅರುಣ ಬಾಲರಾಜ್ ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಮತ್ತಷ್ಟು ಮನರಂಜನೆ ಸುದ್ದಿಗಳು
ತಮಗೆ ದೊರೆತ ಪ್ರತಿಷ್ಠಿತ ಪ್ರಶಸ್ತಿಯನ್ನು ಅಪ್ಪು ಹಾಗೂ ನಿರ್ದೇಶಕ ಭಗವಾನ್ ಅವರಿಗೆ ಅರ್ಪಿಸಿದ ಡಿವೈನ್ ಸ್ಟಾರ್!
ತಮ್ಮ ಮೇಲೆ ನಂಬಿಕೆ ಇಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಗೆ ಧನ್ಯವಾದ ಅರ್ಪಿಸಿದ್ದಾರೆ. ಕಾಂತಾರ ತಂಡ, ತಂತ್ರಜ್ಞರು, ಪತ್ನಿ ಪ್ರಗತಿ ಶೆಟ್ಟಿ ಎಲ್ಲರಿಗೂ ಥ್ಯಾಂಕ್ಸ್ ಹೇಳಿದ್ದಾರೆ. ಇನ್ಮುಂದೆ ಮತ್ತಷ್ಟು ಉತ್ತಮ ಸಿನಿಮಾಗಳನ್ನು ಮಾಡುತ್ತೇನೆ ಎಂದಿರುವ ರಿಷಬ್ ಶೆಟ್ಟಿ ''ತಮಗೆ ದೊರೆತ ಪ್ರಶಸ್ತಿಯನ್ನು ದೈವ ನರ್ತಕರು, ಕರ್ನಾಟಕ ಜನತೆ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹಾಗೂ ಸೋಮವಾರ ನಿಧನರಾದ ಖ್ಯಾತ ನಿರ್ದೇಶಕ ಎಸ್.ಕೆ. ಭಗವಾನ್ ಅವರಿಗೆ ಅರ್ಪಿಸುವುದಾಗಿ'' ಹೇಳಿದ್ದಾರೆ. ಪೂರ್ತಿ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಸೆಲ್ಫಿ ವಿಚಾರಕ್ಕೆ ಜಗಳ.. ಖ್ಯಾತ ಗಾಯಕ ಸೋನು ನಿಗಮ್ ಹಾಗೂ ತಂಡದವರ ಮೇಲೆ ಹಲ್ಲೆ ಆರೋಪ, ದೂರು ದಾಖಲು
ಸೆಲ್ಫಿ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ಹಾಗೂ ಮತ್ತೊಂದು ತಂಡದ ನಡುವೆ ಗಲಾಟೆ ನಡೆದಿದ್ದು ಈ ವಿಚಾರವಾಗಿ ಗಾಯಕ ಸೋನು ನಿಗಮ್, ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಂಪೂರ್ಣ ಸುದ್ದಿ ಓದಲು ಈ ಲಿಂಕ್ ಒತ್ತಿ.