logo
ಕನ್ನಡ ಸುದ್ದಿ  /  ಮನರಂಜನೆ  /  Rangina Rate Trailer: ರಾಜೀವ್‌ ರಶ್ಮಿಯ 'ರಂಗಿನ ರಾಟೆ' ತಿರುಗಿಸಿದ ರಾಗಿಣಿ!

Rangina Rate Trailer: ರಾಜೀವ್‌ ರಶ್ಮಿಯ 'ರಂಗಿನ ರಾಟೆ' ತಿರುಗಿಸಿದ ರಾಗಿಣಿ!

HT Kannada Desk HT Kannada

Oct 01, 2022 12:09 PM IST

ರಾಜೀವ್‌ ರಶ್ಮಿಯ 'ರಂಗಿನ ರಾಟೆ' ತಿರುಗಿಸಿದ ರಾಗಿಣಿ!

    • ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ 'ರಂಗಿನ ರಾಟೆ' ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟಿ ರಾಗಿಣಿ ದ್ವಿವೇದಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು
ರಾಜೀವ್‌ ರಶ್ಮಿಯ 'ರಂಗಿನ ರಾಟೆ' ತಿರುಗಿಸಿದ ರಾಗಿಣಿ!
ರಾಜೀವ್‌ ರಶ್ಮಿಯ 'ರಂಗಿನ ರಾಟೆ' ತಿರುಗಿಸಿದ ರಾಗಿಣಿ!

ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ 'ರಂಗಿನ ರಾಟೆ' ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟಿ ರಾಗಿಣಿ ದ್ವಿವೇದಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. 'ನಾನು ಚಿತ್ರದ ಕೆಲವು ಸನ್ನಿವೇಶಗಳನ್ನು ನೋಡಿದ್ದೀನಿ. ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ' ಎಂದು ರಾಗಿಣಿ ಹಾರೈಸಿದರು.

ಟ್ರೆಂಡಿಂಗ್​ ಸುದ್ದಿ

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕುರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಗಾಯಗೊಂಡ ನಟಿ ಐಶ್ವರ್ಯಾ ರೈ ಕೈಬಿಟ್ಟು ನಡೆಯಲೊಪ್ಪದ ಆರಾಧ್ಯ ಬಚ್ಚನ್‌; ಮಗಳೆಂದರೆ ಹೀಗಿರಬೇಕು ಅಂದ್ರು ಫ್ಯಾನ್ಸ್‌

'ಚಿತ್ರದ ಪ್ರಮುಖ ಪಾತ್ರಧಾರಿ ರಾಜೀವ್ ರಾಥೋಡ್ ನನ್ನ ಅಳಿಯಂದಿರು. ಅವರ ಜೊತೆಗೆ ಮಂಡ್ಯದ ಇಬ್ಬರು, ಮೂವರು ಹುಡುಗರು ಇದರಲ್ಲಿರುವುದು ತಿಳಿದು ಖುಷಿಯಾಯಿತು. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಚೆನ್ನಾಗಿದೆ. ಚಿತ್ರ ಕೂಡ ನಿರೀಕ್ಷೆಗೂ ಮೀರಿ ಜಯಭೇರಿ ಬಾರಿಸಲಿ' ಎಂದರು ಮಾಜಿ ಸಂಸದರಾದ ಶಿವರಾಮೇಗೌಡ.

'ಏಳು ಪ್ರಮುಖಪಾತ್ರಗಳ ಸುತ್ತ ನಡೆಯುವ ಕಥೆಯಿದು. ಕೆಟ್ಟದ್ದನ್ನು ಮಾಡಿದವರು ಇಲ್ಲೇ ಅನುಭವಿಸುತ್ತಾರೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಇಂದು ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ ಪ್ರೋತ್ಸಾಹಿಸಿ' ಎಂದು ನಿರ್ದೇಶಕ ಆರ್ಮುಗಂ ತಿಳಿಸಿದರು.

'ಇದೊಂದು ಕಾಡಿನಲ್ಲಿ ನಡೆಯುವ ಕಥೆ. ನನ್ನ ಜೊತೆಗಿರುವವರು ಅನಿವಾರ್ಯ ಕಾರಣದಿಂದ ಕಷ್ಟಕ್ಕೆ ಸಿಲುಕಿ ಕೊಳ್ಳುತ್ತಾರೆ. ಅವರನೆಲ್ಲಾ ಕಷ್ಟದಿಂದ ಪಾರು ಮಾಡುವ ಪಾತ್ರ ನನ್ನದು' ಎಂದು ತಮ್ಮ ಪಾತ್ರದ ಬಗ್ಗೆ ರಾಜೀವ್ ರಾಥೋಡ್ ವಿವರಿಸಿದರು.

ನಿರ್ದೇಶಕ ಮುರಳಿ ಮೋಹನ್ ಸಹ ತಮಗೆ ಈ ಚಿತ್ರದಲ್ಲಿ ಉತ್ತಮ ಪಾತ್ರ ಸಿಕ್ಕಿರುವುದಾಗಿ ಹೇಳಿಕೊಂಡರು. ನಿರ್ಮಾಪಕಿ ಕವಿತಾ ಅರುಣ್ ಕುಮಾರ್, ಸಹನಾಯಕಿ ಸ್ವಪ್ನ ಶೆಟ್ಟಿಗಾರ್, ಸಂತೋಷ್ ಮಳವಳ್ಳಿ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ಆಗಮಿಸಿದ್ದ ಅನೇಕ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.

ಆರ್ಮುಗಂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿ ಸುವರ್ಣ ಛಾಯಾಗ್ರಹಣ ಹಾಗೂ ಚಂದ್ರು ಓಬ್ಬಯ್ಯ ಅವರ ಸಂಗೀತ ನಿರ್ದೇಶನವಿದೆ. ರಾಜೀವ್ ರಾಥೋಡ್, ಮುರಳಿ ಮೋಹನ್ (ಸಂತ), ದುನಿಯಾ ರಶ್ಮಿ, ಸಂತೋಷ್ ಮಳವಳ್ಳಿ, ಭವ್ಯ, ರಾಂಕಲ್ ಚಂದ್ರು, ಸ್ವಪ್ನ ಶೆಟ್ಟಿಗಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ