logo
ಕನ್ನಡ ಸುದ್ದಿ  /  ಮನರಂಜನೆ  /  ‘ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ’; ನಟ ನಿಖಿಲ್‌ ಕುಮಾರಸ್ವಾಮಿ ಫಸ್ಟ್‌ ರಿಯಾಕ್ಷನ್‌

‘ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ’; ನಟ ನಿಖಿಲ್‌ ಕುಮಾರಸ್ವಾಮಿ ಫಸ್ಟ್‌ ರಿಯಾಕ್ಷನ್‌

May 04, 2024 05:30 PM IST

‘ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋಗಳನ್ನು ನಾನು ನೋಡುವ ಧೈರ್ಯ ಮಾಡಿಲ್ಲ’; ನಟ ನಿಖಿಲ್‌ ಕುಮಾರಸ್ವಾಮಿ ಫಸ್ಟ್‌ ರಿಯಾಕ್ಷನ್‌

    • ಎಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ, ಯುವ ರಾಜಕಾರಣಿ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. 
‘ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋಗಳನ್ನು ನಾನು ನೋಡುವ ಧೈರ್ಯ ಮಾಡಿಲ್ಲ’; ನಟ ನಿಖಿಲ್‌ ಕುಮಾರಸ್ವಾಮಿ ಫಸ್ಟ್‌ ರಿಯಾಕ್ಷನ್‌
‘ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋಗಳನ್ನು ನಾನು ನೋಡುವ ಧೈರ್ಯ ಮಾಡಿಲ್ಲ’; ನಟ ನಿಖಿಲ್‌ ಕುಮಾರಸ್ವಾಮಿ ಫಸ್ಟ್‌ ರಿಯಾಕ್ಷನ್‌

Nikhil Kumaraswamy on Prajwal Revanna case: ಹಾಸನದ ಜೆಡಿಎಸ್‌ ಮುಖಂಡ, ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ತನಿಖೆಯ ಹಾದಿಯಲ್ಲಿ SIT ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ವೆಸ್ಟಿಗೇಷನ್‌ ಮುಂದುವರಿಸಿದೆ. ಈ ನಡುವೆ ಎಚ್‌.ಡಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದ್ದು, ತಲೆ ಮರೆಸಿಕೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Aadujeevitham OTT: ಪೃಥ್ವಿರಾಜ್‌ ಸುಕುಮಾರನ್‌ ನಟನೆಯ ಆಡುಜೀವಿತಂ ಸಿನಿಮಾವನ್ನು ಮನೆಯಲ್ಲೇ ನೋಡಿ, ಇಲ್ಲಿದೆ ಒಟಿಟಿ ಬಿಡುಗಡೆ ವಿವರ

Dhurva Sarja: ಅಪ್ಪ ಮಗಳ ಬಾಂಧವ್ಯದ C ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಿದ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ

ನಟಿ ಪವಿತ್ರಾ ಜಯರಾಮ್‌ಗೆ ನನ್ನ ಗಂಡ ಆರನೇಯವನು; ಅಕ್ರಮ ಸಂಬಂಧದ ಬಗ್ಗೆ ಮೌನ ಮುರಿದ ಮೃತ ಚಂದ್ರಕಾಂತ್‌ ಪತ್ನಿ ಶಿಲ್ಪಾ

Amruthadhaare: ಜೈದೇವ್‌ ಕಿಡ್ನ್ಯಾಪ್‌ ಕಥೆ ಕೇಳಿ ಹೆಸರಘಟ್ಟಕ್ಕೆ ಬಂದಳು ಮಲ್ಲಿ; ಚಿಕ್ಕಮಗಳೂರಿನಲ್ಲಿ ಹನಿಮೂನ್‌ ನಡುವೆಯೇ ಅಲರ್ಟ್‌ ಆದ ಭೂಮಿ

ಇದೆಲ್ಲದರ ನಡುವೆ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಒಂದಷ್ಟು ಮಹಿಳೆಯರು ದೂರು ನೀಡುವ ಪ್ರಕ್ರಿಯೆಯೂ ಮುಂದುವರಿದೆ. ಅದರಂತೆ ಶುಕ್ರವಾರ, ಬಂದೂಕು ಬೆದರಿಕೆಯಡಿ ಅತ್ಯಾಚಾರ ಎಸಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸದ್ಯಸೆಯೊಬ್ಬರು ದೂರು ನೀಡಿದ್ದಾರೆ. ಈ ಎಲ್ಲ ಘಟನಾವಳಿಗಳ ಬೆನ್ನಲ್ಲೆ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸಹ ಮೊದಲ ಸಲ ಈ ಕೇಸ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಜ್ಜಿ ತಾತ ನೋವಲ್ಲಿದ್ದಾರೆ..

“ನಮ್ಮ ಅಜ್ಜಿ ತಾತ ಸಾಕಷ್ಟು ನೋವಲ್ಲಿದ್ದಾರೆ. ಈಗಾಗಲೇ SIT ರಚನೆಯಾಗಿದೆ. ತನಿಖೆ ಆರಂಭವಾಗ್ತಿದೆ. ನನಗೆ ದುಃಖ ತಂದುಕೊಟ್ಟ ವಿಚಾರ ಏನೆಂದರೆ, ಆ ದೃಶ್ಯಾವಳಿಗಳನ್ನು ನೋಡುವ ಧೈರ್ಯ ನಾನು ಮಾಡಲಿಲ್ಲ. ನನ್ನ ಕೆಲವೊಂದಿಷ್ಟು ಸುತ್ತಮುತ್ತಲಿನ  ಆಪ್ತ ವರ್ಗ ಫೋನ್‌ ಮಾಡಿ ಹೇಳಿದಾಗ, ಮನಸ್ಸಿಗೆ ಬೇಜಾರಾಯ್ತು”

ಹೆಣ್ಣುಮಕ್ಕಳ ಮಾನಹಾನಿ ಖಂಡನೀಯ

"ಸಹಜವಾಗಿ, ಈ ರೀತಿಯ ಡಿಸ್ಟರ್ಬಿಂಗ್‌ ವಿಡಿಯೋಗಳು ಇದ್ದ ಸಂದರ್ಭದಲ್ಲಿ ಕನಿಷ್ಠ ಪಕ್ಷ ಬ್ಲರ್‌ ಆದ್ರೂ ಮಾಡಬೇಕಿತ್ತು.  ಇವತ್ತು ಆ ಹೆಣ್ಣು ಮಕ್ಕಳ ವಿಡಿಯೋಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಶೇರ್‌ ಮಾಡುತ್ತಿದ್ದಾರೆ. ಓಪನ್‌ ಆಗಿಯೇ ಅವರ ಮುಖ ಕಾಣುವ ರೀತಿಯಲ್ಲಿ ರಾಜ್ಯದ ಜನತೆಗೆ ತೋರಿಸಿದ್ದಾರೆ. ಈ ಬಗ್ಗೆಯೂ ಹೆಚ್ಚಿನ ತನಿಖೆ ಆಗಬೇಕು ಎಂಬುದು ವೈಯಕ್ತಿಕ ಅಭಿಪ್ರಾಯ" ಎಂದಿದ್ದಾರೆ.

ಕಾನೂನಿಗಿಂತ ಯಾರೂ ದೊಡ್ಡವರಿಲ್ಲ

ದೇವೇಗೌಡ ಅವರನ್ನು, ಕುಮಾರಣ್ಣ ಅವರನ್ನು ಈ ಪ್ರಕರಣದಲ್ಲಿ ಎಳೆದು ತರುವುದು ಸಮಂಜಸ ಅಲ್ಲ.‌ ಈಗಾಗಲೇ ಆರೋಪಿ ಸ್ಥಾನದಲ್ಲಿ ಪ್ರಜ್ವಲ್‌ ಇದ್ದಾರೆ. ಅಂತಿಮವಾಗಿ ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ತಪ್ಪು ಮಾಡಿದವರು ತಲೆ ಬಾಗಲೇಬೇಕು. ತಪ್ಪಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ತನಿಖಾವರದಿ ನಮ್ಮ ಮುಂದೆ ಪ್ರಕಟವಾಗುತ್ತೋ ಆಗ ಮುಂದಿನದನ್ನು ಮಾತನಾಡೋಣ" ಎಂದರು. 

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ