ಕನ್ನಡ ಸುದ್ದಿ  /  ಮನರಂಜನೆ  /  Yogaraj Bhat: ಆಪಲ್ ಕಟ್‌ ಟೀಸರ್​​​ಗೆ ಯೋಗರಾಜ್ ಭಟ್ ಧ್ವನಿ, ಅಡ್ವಾನ್ಸ್ ಬರ್ತಡೇ ಶುಭ ಕೋರಿ ಥ್ಯಾಂಕ್ಸ್ ಹೇಳಿದ ಚಿತ್ರತಂಡ

Yogaraj Bhat: ಆಪಲ್ ಕಟ್‌ ಟೀಸರ್​​​ಗೆ ಯೋಗರಾಜ್ ಭಟ್ ಧ್ವನಿ, ಅಡ್ವಾನ್ಸ್ ಬರ್ತಡೇ ಶುಭ ಕೋರಿ ಥ್ಯಾಂಕ್ಸ್ ಹೇಳಿದ ಚಿತ್ರತಂಡ

HT Kannada Desk HT Kannada

Oct 07, 2023 08:55 PM IST

ಯೋಗರಾಜ್ ಭಟ್ ಜೊತೆ ಆಪಲ್ ಕಟ್‌ ಚಿತ್ರತಂಡ

    • Yogaraj Bhat Birthday: ಹೊಸ ತಂಡದ ಹೊಸ ಪ್ರಯತ್ನಕ್ಕೆ ಸಾಥ್ ನೀಡಿರುವ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಆಪಲ್ ಕಟ್‌ ಚಿತ್ರತಂಡ ಧನ್ಯವಾದ ಹೇಳುವುದರೊಂದಿಗೆ, ಹುಟ್ಟುಹಬ್ಬದ (ಅಕ್ಟೋಬರ್ 8) ಶುಭಾಶಯವನ್ನೂ ತಿಳಿಸಿದೆ.
ಯೋಗರಾಜ್ ಭಟ್ ಜೊತೆ ಆಪಲ್ ಕಟ್‌ ಚಿತ್ರತಂಡ
ಯೋಗರಾಜ್ ಭಟ್ ಜೊತೆ ಆಪಲ್ ಕಟ್‌ ಚಿತ್ರತಂಡ

ಸ್ಯಾಂಡಲ್​​ವುಡ್ ನಿರ್ದೇಶಕ, ವಿಕಟ ಕವಿ ಯೋಗರಾಜ್ ಭಟ್ ಅಕ್ಟೋಬರ್ 8 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆ್ಯಪಲ್ ಕಟ್‌ ಚಿತ್ರತಂಡ, ಭಟ್ಟರಿಗೆ ಅಡ್ವಾನ್ಸ್ ಶುಭ ಕೋರಿರುವುದಲ್ಲದೆ ತಮ್ಮ ಚಿತ್ರದ ಭಾಗವಾಗಿರುವುದಕ್ಕೆ ಧನ್ಯವಾದ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಭರತ್‌ ಬೋಪಣ್ಣ ಜತೆಗೆ ‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ಬೃಂದಾ ಆಚಾರ್ಯ; ಇಲ್ಲಿದೆ ನೋಡಿ ಹೊಸ ಆಲ್ಬಂ ಹಾಡು

QPL 2024: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಶುರು; ಬ್ಯಾಟು ಬಾಲು ಹಿಡಿದು ಕ್ರಿಕೆಟ್ ಆಡಲು ಹೊರಟ ಕಿರುತೆರೆ, ಹಿರಿತೆರೆ ಹೆಣ್ಮಕ್ಕಳು

ಸೀತಾ ರಾಮ ಸೀರಿಯಲ್‌ ದೃಶ್ಯದಲ್ಲಿ ಹೆಲ್ಮೆಟ್‌ ಧರಿಸದೇ ಪ್ರಯಾಣ; ನಟಿ ವೈಷ್ಣವಿ ಗೌಡಗೆ ದಂಡ ವಿಧಿಸಿದ ಟ್ರಾಫಿಕ್‌ ಪೊಲೀಸರು

Pavitra Jayaram: ಭೀಕರ ರಸ್ತೆ ಅಪಘಾತದಲ್ಲಿ ಜೀ ಕನ್ನಡದ ತ್ರಿನಯನಿ ಧಾರಾವಾಹಿ ನಟಿ ಪವಿತ್ರಾ ಜಯರಾಂ ಸಾವು

ಕನ್ನಡದ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಪುತ್ರಿ ಸಿಂಧು ಗೌಡ ಆ್ಯಪಲ್‌ ಕಟ್ ಚಿತ್ರವನ್ನು ನಿರ್ದೇಶಿಸಿದ್ದು ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶಿಲ್ಪ ಪ್ರಸನ್ನ ನಿರ್ಮಾಣ ಮಾಡಿದ್ದಾರೆ. ಸಿನಿಮಾ ಟೀಸರ್​​ಗೆ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ. ಶೀಘ್ರದಲ್ಲೇ ಟೀಸರ್ ಬಿಡುಗಡೆಯಾಗಲಿದೆ.

ಹೊಸ ತಂಡದ ಹೊಸ ಪ್ರಯತ್ನಕ್ಕೆ ಸಾಥ್ ನೀಡಿರುವ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಚಿತ್ರತಂಡ ಧನ್ಯವಾದ ಹೇಳುವುದರೊಂದಿಗೆ, ಹುಟ್ಟುಹಬ್ಬದ (ಅಕ್ಟೋಬರ್ 8) ಶುಭಾಶಯವನ್ನೂ ತಿಳಿಸಿದೆ.

ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ‌ ಆ್ಯಪಲ್ ಕಟ್ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಅವರ ನಿರ್ದೇಶನದ ಮೊದಲ ಸಿನಿಮಾ.

ಚಿತ್ರದಲ್ಲಿ ಸೂರ್ಯ ಗೌಡ ನಾಯಕನಾಗಿ ನಟಿಸಿದ್ದು , ನಾಯಕಿಯಾಗಿ ಅಶ್ವಿನಿ ಪೋಲೆಪಲ್ಲಿ ಅಭಿನಯಿಸಿದ್ದಾರೆ. ಅಪ್ಪಣ್ಣ, ಅಭಿಜಿತ್, ಮೀನಾಕ್ಷಿ, ಬಾಲ ರಾಜವಾಡಿ‌ ಹಾಗೂ ಇನ್ನಿತರರು ಸಿನಿಮಾದಲ್ಲಿ ನಟಿಸಿದ್ದಾರೆ.

ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಆ್ಯಪಲ್ ಕಟ್ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಸತ್ಯ‌ ಪ್ರಕಾಶ್ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ ಹಾಗೂ ಸುಚೇಂದ್ರ ಎನ್ ಮೂರ್ತಿ ಸಂಕಲನ ಈ ಸಿನಿಮಾಗೆ ಇದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ