logo
ಕನ್ನಡ ಸುದ್ದಿ  /  ಮನರಂಜನೆ  /  ಭಂಡಾರದೋಕುಳಿಯಲ್ಲಿ ‘45’ ಚಿತ್ರದ ಚಿತ್ರೀಕರಣ; ಇದು ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ

ಭಂಡಾರದೋಕುಳಿಯಲ್ಲಿ ‘45’ ಚಿತ್ರದ ಚಿತ್ರೀಕರಣ; ಇದು ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ

Jan 13, 2024 11:41 AM IST

ಭಂಡಾರದೋಕುಳಿಯಲ್ಲಿ ‘45’ ಚಿತ್ರದ ಚಿತ್ರೀಕರಣ; ಇದು ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ

    • ಅರ್ಜುನ್‌ ಜನ್ಯ  ನಿರ್ದೇಶನದ ಚೊಚ್ಚಲ ‘45’ ಹೆಸರಿನ ಚಿತ್ರ ಈಗಾಗಲೇ ಒಂದಷ್ಟು ಭಾಗದ ಶೂಟಿಂಗ್‌ ಮುಗಿಸಿಕೊಂಡಿದೆ. ಇದೀಗ ಚಿತ್ರದಲ್ಲಿ ಬರುವ ಪ್ರಮುಖ ಸನ್ನಿವೇಶವೊಂದರ ಚಿತ್ರೀಕರಣದಲ್ಲಿ ನಿರತವಾಗಿದೆ.   
ಭಂಡಾರದೋಕುಳಿಯಲ್ಲಿ ‘45’ ಚಿತ್ರದ ಚಿತ್ರೀಕರಣ; ಇದು ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ
ಭಂಡಾರದೋಕುಳಿಯಲ್ಲಿ ‘45’ ಚಿತ್ರದ ಚಿತ್ರೀಕರಣ; ಇದು ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ

45 movie Shooting Update: ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ‘45’ ಸಿನಿಮಾ, ಈಗಾಗಲೇ ಶೂಟಿಂಗ್‌ ಹಂತದಲ್ಲಿದೆ. ಬೆಂಗಳೂರಿನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನ ಮಾಡುತ್ತಿದ್ದಾರೆ. ಚೊಚ್ಚಲ ಚಿತ್ರದಲ್ಲಿಯೇ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

ಇತ್ತೀಚೆಗೆ ಬನ್ನೇರುಘಟ್ಟದ ಶ್ರೀಚಂಪಕಧಾಮ ಸ್ವಾಮಿ ದೇವಸ್ಥಾನದ ಬಳಿ ಚಿತ್ರದ ಅದ್ದೂರಿ ಸನ್ನಿವೇಶವೊಂದರ ಚಿತ್ರೀಕರಣ ನಡೆದಿದೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ಈ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಮೋಕೋಬೋಲ್ಟ್, ರೋಪ್ ಕ್ಯಾಮೆರಾ ಸೇರಿದಂತೆ ಇನ್ನೂ ಹಲವು ದುಬಾರಿ ಸಲಕರಣೆಗಳ ಬಳಸಿ ಈ ದೃಶ್ಯವನ್ನು ಚಿತ್ರಿಸಲಾಗಿದೆ.

ಒಂದು ಸನ್ನಿವೇಶಕ್ಕಾಗಿ 418ಕ್ಕೂ ಹೆಚ್ಚು ಕಲರ್ ಬಾಂಬ್‌ಗಳನ್ನು ಬಳಸಿರುವುದು ಕನ್ನಡದಲ್ಲಿ ಇದೇ ಮೊದಲು. ಈ ಅದ್ದೂರಿ ಸನ್ನಿವೇಶಕ್ಕೆ ಭಾರತ ಚಿತ್ರರಂಗದ ಜನಪ್ರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ಕೊರಿಯೋಗ್ರಫಿ ಮಾಡಿರುವುದು ವಿಶೇಷ. ಸತ್ಯ ಹೆಗಡೆ ಅವರ ಛಾಯಾಗ್ರಹಣ ಈ ಅದ್ದೂರಿ ಸನ್ನಿವೇಶದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

ಈಗಾಗಲೇ ಗಾಳಿಪಟ 2 ಸೇರಿ ಹಲವು ಚಿತ್ರಗಳನ್ನು ನೀಡುತ್ತಾ ಬಂದಿರುವ ರಮೇಶ್ ರೆಡ್ಡಿ, 45 ಚಿತ್ರಕ್ಕೂ ನಿರ್ಮಾಪಕರು. ಅವರ ನಿರ್ಮಾಣದಲ್ಲಿ ಮೂಡಿಬಂದ ಚಿತ್ರಗಳಲ್ಲಿ ಬಹುತಾರಾಗಣವೂ ಹೈಲೈಟ್.‌ ಇದೀಗ 45 ಚಿತ್ರದಲ್ಲೂ ಅದು ಮುಂದುವರಿದಿದೆ. ಈಗಾಗಲೇ ಸಂಗೀತದಲ್ಲಿ ಜನರ ಮನ ಗೆದ್ದಿರುವ ಅರ್ಜುನ್ ಜನ್ಯ, ನಿರ್ದೇಶಕನಾಗಿಯೂ ಮೊದಲ ಹೆಜ್ಜೆಯನಿಡುತ್ತಿದ್ದಾರೆ. ಇದರೊಟ್ಟಿಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಸಹ ಒಂದೇ ಸಿನಿಮಾದಲ್ಲಿ ಕೈ ಜೋಡಿಸಿರುವುದು ನಿರೀಕ್ಷೆ ದ್ವಿಗುಣಗೊಳಿಸಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ