logo
ಕನ್ನಡ ಸುದ್ದಿ  /  ಮನರಂಜನೆ  /  ರೆಬಲ್‌ ಸ್ಟಾರ್‌ ಅಂಬರೀಶ್‌ಗೆ ಜೂನಿಯರ್‌, ಅಭಿಷೇಕ್‌ ಅಂಬರೀಶ್‌ಗೆ ಸೀನಿಯರ್‌, ಯಾರಿವರು; ಬ್ಯಾಡ್‌ ಮ್ಯಾನರ್ಸ್‌ ವೇದಿಕೆಯಲ್ಲಿ ದರ್ಶನ್‌ ಗುಣಗಾನ

ರೆಬಲ್‌ ಸ್ಟಾರ್‌ ಅಂಬರೀಶ್‌ಗೆ ಜೂನಿಯರ್‌, ಅಭಿಷೇಕ್‌ ಅಂಬರೀಶ್‌ಗೆ ಸೀನಿಯರ್‌, ಯಾರಿವರು; ಬ್ಯಾಡ್‌ ಮ್ಯಾನರ್ಸ್‌ ವೇದಿಕೆಯಲ್ಲಿ ದರ್ಶನ್‌ ಗುಣಗಾನ

Praveen Chandra B HT Kannada

Nov 15, 2023 10:43 AM IST

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮತ್ತು ಅಭಿಷೇಕ್‌ ಅಂಬರೀಶ್‌

    • Bad Manners Trailer: ಅಭಿಷೇಕ್‌ ಅಂಬರೀಶ್‌ ನಟನೆಯ ಬ್ಯಾಡ್‌ ಮ್ಯಾನರ್ಸ್‌ ಕನ್ನಡ ಸಿನಿಮಾ ಇದೇ ನವೆಂಬರ್‌ 24ರಂದು ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಅಭಿಷೇಕ್‌ ಅಂಬರೀಶ್‌ ಅವರು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಹಾಡಿ ಹೊಗಳಿದ್ದಾರೆ.
ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮತ್ತು ಅಭಿಷೇಕ್‌ ಅಂಬರೀಶ್‌
ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮತ್ತು ಅಭಿಷೇಕ್‌ ಅಂಬರೀಶ್‌

ಬೆಂಗಳೂರು: ಇತ್ತೀಚೆಗೆ ಬ್ಯಾಡ್‌ ಮ್ಯಾನರ್ಸ್‌ ಕನ್ನಡ ಚಲನಚಿತ್ರದ ಟ್ರೈಲರ್‌ ಬಿಡುಗಡೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಒಂದೆಡೆ ದರ್ಶನ್‌ ಅವರು ಅಭಿಷೇಕ್‌ ಅಂಬರೀಶ್‌ ಅವರನ್ನು ಹಾಡಿಹೊಗಳಿದರೆ, ಇನ್ನೊಂದೆಡೆ ಅಭಿಷೇಕ್‌ ಅಂಬರೀಶ್‌ ಅವರು ದರ್ಶನ್‌ ಗುಣಗಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ "ರೆಬಲ್‌ ಸ್ಟಾರ್‌ ಅಂಬರೀಶ್‌ಗೆ ಜೂನಿಯರ್‌, ಅಭಿಷೇಕ್‌ ಅಂಬರೀಶ್‌ಗೆ ಸೀನಿಯರ್‌- ನಮ್ಮ ಪ್ರೀತಿಯ ಡಿಬಾಸ್‌ ಬಂದಿದ್ದಾರೆ ಇವತ್ತು. ನೀವು ಟ್ರೈಲರ್‌ ಲಾಂಚ್‌ ಮಾಡಿದ ಬಳಿಕ ಟ್ರೈಲರ್‌ ವೀಕ್ಷಣೆ ಜಾಸ್ತಿಯಾಗ್ತ ಇದೆ" ಎಂದು ಅಭಿಷೇಕ್‌ ಅಂಬರೀಶ್‌ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

ಮತ್ತಷ್ಟು ಹಿರಿದಾಯ್ತು ಕಣ್ಣಪ್ಪ ಸಿನಿಮಾ ತಾರಾಬಳಗ; ಅಕ್ಷಯ್‌ ಕುಮಾರ್‌, ಪ್ರಭಾಸ್‌ ಬಳಿಕ ಕಾಜಲ್‌ ಅಗರ್ವಾಲ್ ಎಂಟ್ರಿ

Aadujeevitham OTT: ಪೃಥ್ವಿರಾಜ್‌ ಸುಕುಮಾರನ್‌ ನಟನೆಯ ಆಡುಜೀವಿತಂ ಸಿನಿಮಾವನ್ನು ಮನೆಯಲ್ಲೇ ನೋಡಿ, ಇಲ್ಲಿದೆ ಒಟಿಟಿ ಬಿಡುಗಡೆ ವಿವರ

"ಬ್ಯಾಡ್ ಮಾನರ್ಸ್" ನನ್ನ ಅಭಿನಯದ ಎರಡನೇ ಚಿತ್ರ. ನವೆಂಬರ್ 24 ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ನಿರ್ಮಾಪಕ ಸುಧೀರ್, ನಿರ್ದೇಶಕ ಸೂರಿ ಅವರಿಗೆ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ನನ್ನ ಅಣ್ಣ ದರ್ಶನ್ ಅವರಿಗೆ ಹಾಗೂ ಇಲ್ಲಿ ಅಗಮಿಸಿರುವ ಪ್ರತಿಯೊಬ್ಬ ಸ್ನೇಹಿತರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ" ಎಂದು ಚಿತ್ರದ ನಾಯಕ ಅಭಿಷೇಕ್ ಅಂಬರೀಶ್ ಹೇಳಿದ್ದಾರೆ.

ಕೆ.ಎಂ.ಸುಧೀರ್ ನಿರ್ಮಾಣದ, "ದುನಿಯಾ" ಸೂರಿ ನಿರ್ದೇಶನದ ಹಾಗೂ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ "ಬ್ಯಾಡ್ ಮ್ಯಾನರ್ಸ್" ಚಿತ್ರದ ಟ್ರೇಲರ್ ದೀಪಾವಳಿ ಹಬ್ಬದ ಶುಭದಿನದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಿದೆ. ಸುಮಲತ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ಅವಿವಾ ಅಭಿಷೇಕ್, ವಿನೋದ್ ಪ್ರಭಾಕರ್, ವಿಕ್ರಮ್ ರವಿಚಂದ್ರನ್, ಧನ್ವೀರ್ ಮುಂತಾದವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಜಿ.ಟಿ.ಮಾಲ್ ನಲ್ಲಿ ನಡೆದ ಈ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

ನೀವೆಲ್ಲಾ ಟ್ರೇಲರ್ ನೋಡಿದ್ದೀರಾ. ನಾನು ಸಿನಿಮಾವನ್ನೇ ನೋಡಿದ್ದೇನೆ ಎಂದು ಮಾತನಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೂರಿ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಭಿಷೇಕ್ ಬಹಳ ಮುದ್ದಾಗಿ ಕಾಣುತ್ತಾರೆ. ಅಷ್ಟೇ ಚೆನ್ನಾಗಿ ಅಭಿನಿಯಿಸಿದ್ದಾರೆ. ನವೆಂಬರ್ 24 ರಂದು ಚಿತ್ರ ಬಿಡುಗಡೆಯಾಗಿತ್ತಿದೆ ನೋಡಿ ಹಾರೈಸಿ ಎಂದರು.

ನಮ್ಮ ಕುಟುಂಬದ ಮೇಲೆ ನೀವಿಟ್ಟಿರುವ ಪ್ರೀತಿಗೆ ಧನ್ಯವಾದ. ನಾನು, ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎಂದ ಮೇಲೆ ಕಥೆ ಕೇಳಲಿಲ್ಲ‌‌. ಅವರು ಚೆನ್ನಾಗಿ ಕಥೆ ಮಾಡಿಕೊಂಡಿರುತ್ತಾರೆ ಎಂಬ ನಂಬಿಕೆ ನನ್ನಗಿದೆ. ನವೆಂಬರ್ 24 ರಂದು ನನ್ನ ಮಗನ ಸಿನಿಮಾ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಆಶೀರ್ವಾದ ಅಭಿಷೇಕ್ ಮೇಲಿರಲಿ ಎಂದು ಸುಮಲತ ಅಂಬರೀಶ್ ತಿಳಿಸಿದರು.

ಈ ಸಂದರ್ಭದಲ್ಲಿ ನಾನು ಅಂಬರೀಶ್ ಹಾಗೂ ಪುನೀತ್ ರಾಜಕುಮಾರ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದರ್ಶನ್ ಅವರಿಗೆ ಧನ್ಯವಾದ. ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ. ಅಭಿಷೇಕ್ ಅವರ ಪಾತ್ರ ಈ ಚಿತ್ರದಲ್ಲಿ ವಿಭಿನ್ನವಾಗಿದೆ. ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ಸೂರಿ.

ನಿರ್ಮಾಪಕ ಕೆ.ಎಂ ಸುಧೀರ್ ಮಾತನಾಡಿ, ಇದೇ ತಿಂಗಳ 24 ರಂದು ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು. ಹಿರಿಯ ನಟರಾದ ಉಮೇಶ್, ದತ್ತಣ್ಣ, ಶರತ್ ಲೋಹಿತಾಶ್ವ ಸೇರಿದಂತೆ ಅನೇಕ ಕಲಾವಿದರು ಹಾಗೂ ತಂತ್ರಜ್ಞರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ