logo
ಕನ್ನಡ ಸುದ್ದಿ  /  ಮನರಂಜನೆ  /  Chetan Ahimsa: ಮೇಕೆದಾಟು ಯೋಜನೆ ಜಾರಿಗೆ ತಂದೇ ತರ್ತೀವಿ ಎಂದ ಕಾಂಗ್ರೆಸ್‌; ಇದೊಂದು ಕೆಟ್ಟ ಯೋಜನೆಯೆಂದು ಜರಿದ ನಟ ಚೇತನ್‌ ಅಹಿಂಸಾ

Chetan Ahimsa: ಮೇಕೆದಾಟು ಯೋಜನೆ ಜಾರಿಗೆ ತಂದೇ ತರ್ತೀವಿ ಎಂದ ಕಾಂಗ್ರೆಸ್‌; ಇದೊಂದು ಕೆಟ್ಟ ಯೋಜನೆಯೆಂದು ಜರಿದ ನಟ ಚೇತನ್‌ ಅಹಿಂಸಾ

Jul 07, 2023 06:50 PM IST

ಮೇಕೆದಾಟು ಯೋಜನೆ ಜಾರಿಗೆ ತಂದೇ ತರ್ತೀವಿ ಎಂದ ಕಾಂಗ್ರೆಸ್‌; ಇದೊಂದು ಕೆಟ್ಟ ಯೋಜನೆಯೆಂದು ಜರಿದ ಚೇತನ್‌ ಅಹಿಂಸಾ

    • ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಮೇಕೆದಾಟು ಯೋಜನೆಗೆ 1000 ಕೋಟಿ ಮೀಸಲಿರಿಸಲಾಗಿದೆ. ಆದರೆ, ಈ ಬಗ್ಗೆ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ಇದೊಂದು ಕೆಟ್ಟ ಯೋಜನೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. 
ಮೇಕೆದಾಟು ಯೋಜನೆ ಜಾರಿಗೆ ತಂದೇ ತರ್ತೀವಿ ಎಂದ ಕಾಂಗ್ರೆಸ್‌; ಇದೊಂದು ಕೆಟ್ಟ ಯೋಜನೆಯೆಂದು ಜರಿದ ಚೇತನ್‌ ಅಹಿಂಸಾ
ಮೇಕೆದಾಟು ಯೋಜನೆ ಜಾರಿಗೆ ತಂದೇ ತರ್ತೀವಿ ಎಂದ ಕಾಂಗ್ರೆಸ್‌; ಇದೊಂದು ಕೆಟ್ಟ ಯೋಜನೆಯೆಂದು ಜರಿದ ಚೇತನ್‌ ಅಹಿಂಸಾ

Chetan Ahimsa: ಕಾವೇರಿ ನೀರಿನ ವಿಚಾರಕ್ಕೆ ತಮಿಳುನಾಡಿನೊಂದಿಗೆ ನಡೆಯುವ ಮುಸುಕಿನ ಗುದ್ದಾಟ ಇಂದು ನಿನ್ನೆಯದಲ್ಲ. ಕಳೆದ ಹಲವು ದಶಕಗಳಿಂದಲೇ ನಡೆಯುತ್ತಲೇ ಬಂದಿದೆ. ಆದರೆ, ಈವರೆಗೂ ತಾರ್ತಿಕ ಅಂತ್ಯ ಮಾತ್ರ ಕಂಡಿಲ್ಲ. ಈ ನಡುವೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ಮೇಕೆದಾಟು ಯೋಜನೆಯನ್ನು ಜಾರಿಗೆ ತಂದೇ ತರ್ತೀವಿ ಅನ್ನೋ ನಿರ್ಧಾರಕ್ಕೆ ಬಂದಿದೆ. ಅದಕ್ಕಾಗಿ ಇಂದು (ಜುಲೈ 7) ಮಂಡಣೆಯಾದ ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಸಲುವಾಗಿಯೇ ಸಾಕಷ್ಟು ಅನುದಾನವನ್ನೂ ನಿಗದಿಪಡಿಸಿದೆ.

ಟ್ರೆಂಡಿಂಗ್​ ಸುದ್ದಿ

OTT Movies: ಗುರುವಾಯೂರ್ ಅಂಬಲನಡಯಿಲ್‌ ಒಟಿಟಿಯಲ್ಲಿ ಬಿಡುಗಡೆ ಯಾವಾಗ? ಇದು ಪೃಥ್ವಿರಾಜ್‌ ಸುಕುಮಾರನ್‌ ಸಿನಿಮಾ

ರೇವ್‌ ಪಾರ್ಟಿ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರ ದಾಳಿ; ತೆಲುಗು ನಟಿಯರು, ಮಾಡೆಲ್‌ಗಳು, ಆರ್‌ಜೆಗಳು, ರಾಜಕಾರಣಿಗಳು ಭಾಗಿ? ಇಲ್ಲಿದೆ ವಿವರ

ಕಾಂತಾರದ ಕಂಬಳ ಕೋಣ ಬಳಸೋಣ ಅಲ? ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹೊಸ ಅಧ್ಯಾಯದ ಕುರಿತು ರಿಷಬ್‌ ಶೆಟ್ಟಿ ಪ್ರತಿಕ್ರಿಯೆ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಈ ಯೋಜನೆ ಒಂದು ವೇಳೆ ಸಾಕಾರಗೊಂಡರೆ, ಮೇಕೆದಾಟುವಿನಿಂದ 90 ಕಿ. ಮೀ ದೂರವಿರುವ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ದಾಹ ನೀಗಲಿದೆ. ಇದೀಗ ಈ ಯೋಜನೆಯ ಅನುಷ್ಠಾನಕ್ಕೆ ಹೊಸ ಸರ್ಕಾರದ ಈ ಅವಧಿಯಲ್ಲಿ ಬಜೆಟ್‌ ಮೂಲಕ ಅಡಿಗಲ್ಲು ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ಬಗ್ಗೆ ಪರ ವಿರೋಧ ಚರ್ಚೆಗಳೂ ಮುನ್ನೆಲೆಗೆ ಬರುತ್ತಿವೆ. ಇದೀಗ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಬೇರೆಯವ್ರಿಂದ ಅಶ್ಲೀಲ ಕಾಮೆಂಟ್ ಮಾಡಿಸಿ ಕಿರುಕುಳ ನೀಡುತ್ತಿದ್ದಾರೆ; ತಮಿಳು ಸ್ಟಾರ್‌ ನಟ ವಿಜಯ್‌ ವಿರುದ್ಧ ಮಹಿಳೆ ದೂರು

ಇದೊಂದು ಕೆಟ್ಟ ಯೋಜನೆ

ರಾಜಕೀಯ ಸೇರಿ ಹಲವು ವಿಚಾರಗಳ ಬಗ್ಗೆ ಸದಾ ತಮ್ಮ ಹೇಳಿಕೆಯನ್ನು ದಾಖಲಿಸುವ ನಟ ಚೇತನ್‌ ಅಹಿಂಸಾ, ಮೇಕೆದಾಟು ಯೋಜನೆಗೆ ಈ ಸಲದ ಬಜೆಟ್‌ನಲ್ಲಿ 1000 ಕೋಟಿ ಅನುದಾನವನ್ನು ಕಾಂಗ್ರೆಸ್‌ ಸರ್ಕಾರ ಮೀಸಲಿಟ್ಟಿದೆ. ಹೀಗೆ ಮೀಸಿಲಿಟ್ಟಿದ್ದೇ ತಡ, "ಈ ಮೇಕೆದಾಟು ಯೋಜನೆಯೇ ಒಂದು ಕೆಟ್ಟ ಯೋಜನೆ, ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಅಧಿಕ ಎಂದು ಚೇತನ್‌, ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ಚೇತನ್‌ ಪೋಸ್ಟ್‌ ಹೀಗಿದೆ..

"ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದೊಂದು ಕೆಟ್ಟ ಯೋಜನೆ. ವಿಪರ್ಯಾಸವೆಂದರೆ, ‘ಪರಿಸರ’ ಮತ್ತು ‘ಪ್ರವಾಹ ನಿರ್ವಹಣೆ’ಯೇ ನಮ್ಮ ಸರ್ಕಾರವು ಜಯಿಸಲು ಪ್ರಯತ್ನಿಸುತ್ತಿರುವ ಮುಖ್ಯ ಸವಾಲುಗಳು. ಮೇಕೆದಾಟು ಅಣೆಕಟ್ಟು ಪರಿಸರವನ್ನು ನಾಶಪಡಿಸುತ್ತದೆ. ಬೆಂಗಳೂರಿನ ಬಳಿಯ ಹಳ್ಳಿಗಳಲ್ಲಿ ಇದರಿಂದ ಪ್ರವಾಹ ಸಂಭವಿಸುತ್ತದೆ" ಎಂದು ಹೇಳಿಕೊಂಡಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ