logo
ಕನ್ನಡ ಸುದ್ದಿ  /  ಮನರಂಜನೆ  /  ಮಲೆನಾಡ ಗೊಂಬೆಗೆ ಮನಸೋತ ಮನೆಹಾಳ; ಕೆರೆಬೇಟೆ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

ಮಲೆನಾಡ ಗೊಂಬೆಗೆ ಮನಸೋತ ಮನೆಹಾಳ; ಕೆರೆಬೇಟೆ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

Feb 03, 2024 12:05 PM IST

ಮಲೆನಾಡ ಗೊಂಬೆಗೆ ಮನಸೋತ ಮನೆಹಾಳ; ಕೆರೆಬೇಟೆ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

    • ಗೌರಿಶಂಕರ್‌ ನಾಯಕನಾಗಿ ನಟಿಸಿರುವ ಕೆರೆಬೇಟೆ ಸಿನಿಮಾದ ಮೊದಲ ಹಾಡನ್ನು ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಮಲೆನಾಡ ಗೊಂಬೆಗೆ ಮನಸೋತ ಮನೆಹಾಳ ಸಾಹಿತ್ಯವಿರುವ ಈ ಹಾಡನ್ನು ಪ್ರಮೋದ್‌ ಮರವಂತೆ ರಚಿಸಿದ್ದಾರೆ. ರಾಜ್‌ ಗುರು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಮಾರ್ಚ್‌ 15ಕ್ಕೆ ಬಿಡುಗಡೆಯಾಗಿದೆ.
ಮಲೆನಾಡ ಗೊಂಬೆಗೆ ಮನಸೋತ ಮನೆಹಾಳ; ಕೆರೆಬೇಟೆ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ
ಮಲೆನಾಡ ಗೊಂಬೆಗೆ ಮನಸೋತ ಮನೆಹಾಳ; ಕೆರೆಬೇಟೆ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

Kerebete First Single: ಈಗಾಗಲೇ ಫಸ್ಟ್ ಲುಕ್, ಮೋಷನ್ ಪೋಸ್ಟರ್ ಮತ್ತು ಟೀಸರ್‌ ಮೂಲಕ ಸದ್ದು ಮಾಡಿತ್ತು ಗೌರಿಶಂಕರ್‌ ನಟನೆಯ ಕೆರೆಬೇಟೆ ಸಿನಿಮಾ. ಇದೀಗ ಇದೇ ಸಿನಿಮಾ, ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಇತ್ತೀಚೆಗಷ್ಟೇ ಕರೆಬೇಟೆ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದ್ದು, ರಿಯಲ್‌ ಸ್ಟಾರ್‌ ಉಪೇಂದ್ರ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ತಂಡದ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬ್ಲಿಂಕ್‌ಗೆ ಬಹುಪರಾಕ್‌ ಸಿಗ್ತಿದ್ದಂತೆ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದ ಜತೆಗೆ ಬರ್ತಿದ್ದಾರೆ ದೀಕ್ಷಿತ್‌ ಶೆಟ್ಟಿ

OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

'ಮಲೆನಾಡ ಗೊಂಬೆಗೆ ಮನಸೋತ ಮನೆಹಾಳ..' ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಮೂಡಿಬಂದಿರುವ ರೀತಿ ನೋಡಿ ಸ್ವತಃ ನಟ ಉಪೇಂದ್ರ ಕೂಡ ಫಿದಾ ಆಗಿದ್ದಾರೆ. ನಾಯಕ ನಾಯಕಿಯ ಸ್ಕ್ರೀನ್‌ ಮೇಲೆ ಕಾಣುವ ರೀತಿ, ಸಿನಿಮಾಟೋಗ್ರಾಫಿ ಮತ್ತು ಒಳ್ಳೆಯ ಸಂಗೀತಕ್ಕೆ ಬೆನ್ನುತಟ್ಟಿದ್ದಾರೆ. ಅಂದಹಾಗೆ ಈ ಹಾಡು, ಮಲೆನಾಡಿನ ಸುತ್ತಮುತ್ತವೇ ಚಿತ್ರೀಕರಣ ಆಗಿರುವುದು ವಿಶೇಷ.

'ಕೆರೆಬೇಟೆ' ಸಿನಿಮಾ ನಿರ್ದೇಶಕ ರಾಜ್ ಗುರು ಸಾರಥ್ಯದಲ್ಲಿ ಮೂಡಿ ಬಂದಿದೆ. ನಾಯಕ ಗೌರಿಶಂಕರ್ ಮತ್ತು ನಾಯಕಿ ಬಿಂಧು ಶಿವರಾಮ್ ಈ ಮಲೆನಾಡ ಬೊಂಬೆ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ. ಈ ಸುಂದರ ಹಾಡಿಗೆ 'ಕಾಂತಾರ' ಸಿನಿಮಾದ 'ಸಿಂಗಾರ ಸಿರಿಯೇ...' ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ. ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಾಯಿ ವಿಘ್ನೇಶ್ ಮತ್ತು ಐಶ್ವರ್ಯ ರಂಗರಾಜನ್ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ.

ಈ ಹಾಡಿನ ಬಗ್ಗೆ ಮಾತನಾಡುವ ನಿರ್ದೇಶಕರು, 'ಈ ಹಾಡನ್ನು ತುಂಬಾ ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ. ಅತಿಯಾದ ಮಳೆಯಿಂದ ಅನೇಕ ಬಾರಿ ಚಿತ್ರಿಕರಣ ನಿಲ್ಲಿಸಲಾಗಿತ್ತು. ಮನುಷ್ಯರೇ ಓಡಾಡದೇ ಇರುವ ಜಾಗದಲ್ಲಿ ಶೂಟಿಂಗ್ ಮಾಡಿದ್ದೇವೆ. ಪ್ರಾಣಿಗಳ ಭಯ ಕೂಡ ಇತ್ತು. ಮಲೆನಾಡಿನ ತುಂಬಾ ರಿಮೋಟ್ ಏರಿಯಾದಲ್ಲಿ ನಾಲ್ಕು ದಿನಗಳ ಕಾಲ ಈ ಹಾಡನ್ನು ಸೆರೆಹಿಡಿದಿದ್ದೇವೆ. ಈ ಹಾಡಿಗಾಗಿ ಹರಸಾಹಸ ಪಟ್ಟಿದ್ದೇವೆ' ಎನ್ನುತ್ತಾರೆ.

ಸದ್ಯ ರಿಲೀಸ್ ಗೆ ಸಿದ್ಧವಾಗಿರುವ 'ಕೆರೆಬೇಟೆ' ಸಿನಿಮಾ ಇದೀಗ ಹಾಡಿನ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಮುಂದಿನ ತಿಂಗಳು ಅಂದರೆ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಡಿ ಕೆರಬೇಟೆ ಸಿನಿಮಾ ಮೂಡಿ ಬಂದಿದೆ. ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿಯ ಬಗ್ಗೆ ಈ ಸಿನಿಮಾ ಮಾತನಾಡಲಿದೆ.

ಏನಿದು ಕೆರೆಬೇಟೆ?

ಕೆರೆಬೇಟೆ ಎಂದರೆ ಮಲೆನಾಡು ಭಾಗದದಲ್ಲಿ ಮೀನು ಬೇಟೆಯಾಡುವ ಒಂದು ಪದ್ಧತಿ. ಮಲೆನಾಡಿನಲ್ಲಿ ವರ್ಷಕೊಮ್ಮೆ ಕೆರೆ ಬೇಟೆಯಾಡುತ್ತಾರೆ. ಇದು ದೊಡ್ಡ ದೊಡ್ಡ ಕೆರೆಗಳಲ್ಲಿ ನಡೆಯುತ್ತದೆ. ಇದೇ ಈ ಸಿನಿಮಾದ ಮುಖ್ಯ ಎಳೆಯಾಗಿದೆ. ಕೆರೆಬೇಟೆ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. 'ಕೆರೆಬೇಟೆ ಜನಮನ ಸಿನಿಮಾ ಸಂಸ್ಥೆಯ ಹೆಮ್ಮೆಯ ಕಾಣಿಕೆ. ಇದುವರೆಗೂ ನೋಡಿರದ ಒಂದು ಹಳ್ಳಿ ಸೊಗಡಿನ ಕಥೆಯನ್ನು ಕನ್ನಡ ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ