logo
ಕನ್ನಡ ಸುದ್ದಿ  /  ಮನರಂಜನೆ  /  Sandalwood News: ಮೈಸೂರಿನಲ್ಲಿ ಬೀಡು ಬಿಟ್ಟಿರುವ ಕೆಡಿ ಸಿನಿಮಾ ತಂಡ; ನಿರ್ದೇಶಕ ಪ್ರೇಮ್‌ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಸಂಜಯ್‌ ದತ್‌

Sandalwood News: ಮೈಸೂರಿನಲ್ಲಿ ಬೀಡು ಬಿಟ್ಟಿರುವ ಕೆಡಿ ಸಿನಿಮಾ ತಂಡ; ನಿರ್ದೇಶಕ ಪ್ರೇಮ್‌ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಸಂಜಯ್‌ ದತ್‌

Rakshitha Sowmya HT Kannada

Jul 18, 2023 04:20 PM IST

ಚಾಮುಂಡಿ ತಾಯಿಯ ದರ್ಶನ ಪಡೆದ ಸಂಜಯ್‌ ದತ್

  • ಸೋಮವಾರ ರಾಜ್ಯಾದ್ಯಂತ ಭೀಮನ ಅಮವಾಸ್ಯೆ ಆಚರಿಸಲಾಗಿದೆ. ಎಲ್ಲಾ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ವಿಶೇಷ ದಿನದಂದು ಸಂಜಯ್‌ ದತ್‌, ನಿರ್ದೇಶಕ ಪ್ರೇಮ್‌ ಜೊತೆ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.

ಚಾಮುಂಡಿ ತಾಯಿಯ ದರ್ಶನ ಪಡೆದ ಸಂಜಯ್‌ ದತ್
ಚಾಮುಂಡಿ ತಾಯಿಯ ದರ್ಶನ ಪಡೆದ ಸಂಜಯ್‌ ದತ್ (PC: Facebook)

'ಏಕ್‌ ಲವ್‌ ಯಾ' ಸಿನಿಮಾ ನಂತರ ನಿರ್ದೇಶಕ ಪ್ರೇಮ್‌ 'ಕೆಡಿ' ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಸಿನಿಮಾ ಚಿತ್ರೀಕರಣದ ಭರದಿಂದ ಸಾಗುತ್ತಿದೆ. ಧ್ರುವ ಸರ್ಜಾ ಈ ಸಿನಿಮಾದಲ್ಲಿ ನಾಯಕನಾಗಿ ನಟ್ಸುತ್ತಿದ್ದಾರೆ. ಇದು ಅವರ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು ಸಿನಿಮಾ ಅಪ್‌ಡೇಟ್‌ಗಾಗಿ ಸಿನಿಪ್ರಿಯರು ಕಾಯುತ್ತಿದ್ಧಾರೆ.

ಟ್ರೆಂಡಿಂಗ್​ ಸುದ್ದಿ

Bhagyalakshmi Serial: 10ನೇ ತರಗತಿ ಪಾಸ್‌ ಆದ ಖುಷಿಗೆ ಮೊದಲ ದಿನವೇ ಕೆಲಸಕ್ಕೆ ತಡವಾಗಿ ಹೊರಟ ಭಾಗ್ಯಾ, ಕುಸುಮಾ; ಭಾಗ್ಯಲಕ್ಷ್ಮೀ ಧಾರಾವಾಹಿ

Amruthadhaare: ರೌಡಿಗಳ ಕೈಯಿಂದ ಮಲ್ಲಿಯನ್ನು ಬಚಾವ್‌ ಮಾಡಿದ್ಲು ಮಹಿಮಾ; ಡುಮ್ಮ ಸರ್‌ ಟೈಟಾದ್ರು, ಐ ಅಂದ್ರು, ಲವ್‌ ಯು ಹೇಳ್ತಾರ

ಬರಲಿದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಯೋಪಿಕ್‌; ಮೋದಿ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಬಾಹುಬಲಿಯ ಕಟ್ಟಪ್ಪ

ಬ್ಲಿಂಕ್‌ಗೆ ಬಹುಪರಾಕ್‌ ಸಿಗ್ತಿದ್ದಂತೆ ಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿ ಚಿತ್ರದ ಜತೆಗೆ ಬರ್ತಿದ್ದಾರೆ ದೀಕ್ಷಿತ್‌ ಶೆಟ್ಟಿ

ಮೈಸೂರಿನಲ್ಲಿ 'ಕೆಡಿ' ಸಿನಿಮಾ ತಂಡ

ಬಾಲಿವುಡ್‌ ನಟ ಸಂಜಯ್‌ ದತ್‌ ಕೂಡಾ 'ಕೆಡಿ' ಚಿತ್ರದಲ್ಲಿ ನಟಿಸುತ್ತಿದ್ಧಾರೆ. ಸದ್ಯಕ್ಕೆ ಸಿನಿಮಾ ಚಿತ್ರೀಕರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಶೂಟಿಂಗ್‌ ನಡುವೆ ಬಿಡುವು ಮಾಡಿಕೊಂಡು ಸಂಜಯ್‌ ದತ್‌ ನಿರ್ದೇಶಕ ಸಂಜಯ್‌ ದತ್‌ ಜೊತೆ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಭೇಟಿ ಮಾಡಿ ಬಂದಿದ್ದಾರೆ. ಸೋಮವಾರ ರಾಜ್ಯಾದ್ಯಂತ ಭೀಮನ ಅಮವಾಸ್ಯೆ ಆಚರಿಸಲಾಗಿದೆ. ಎಲ್ಲಾ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ವಿಶೇಷ ದಿನದಂದು ಸಂಜಯ್‌ ದತ್‌ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.

‌ನಿರ್ದೇಶಕ ಪ್ರೇಮ್‌ ಜೊತೆಗೆ ಸಂಜಯ್‌ ದತ್

ಖುಷಿ ವ್ಯಕ್ತಪಡಿಸಿದ ಸಂಜಯ್‌ ದತ್

ಪೂಜೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜಯ್‌ ದತ್, ''ಇದಕ್ಕೂ ಮುನ್ನ ಅನೇಕ ಬಾರಿ ನಾನು ಮೈಸೂರಿಗೆ ಬಂದಿದ್ದೆ. ಆದರೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಈಗ ಪ್ರೇಮ್‌ ಅವರಿಂದ ಅದು ಸಾಧ್ಯವಾಗಿದೆ. ತಾಯಿಯೇ ನನ್ನನ್ನು ಕರೆಸಿಕೊಂಡಿದ್ದಾರೆ. ದೇವಿಯನ್ನು ನೋಡಿ ನನ್ನ ಮನಸ್ಸಿಗೆ ಬಹಳ ಶಾಂತಿ ನೆಮ್ಮದಿ ನೀಡಿದೆ'' ಎಂದು ಸಂಜಯ್‌ ದತ್‌ ಹೇಳಿದ್ದಾರೆ. ಸಂಜಯ್‌ ದತ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಫೋಟೋ ವೈರಲ್‌ ಆಗುತ್ತಿದೆ.‌

ಪ್ರೇಮ್‌ ನಿರ್ದೇಶನದ ಪ್ಯಾನ್‌ ಇಂಡಿಯಾ ಸಿನಿಮಾ

'ಕೆಡಿ' ಚಿತ್ರವನ್ನು ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಿಸುತ್ತಿದ್ದು ಪ್ರೇಮ್‌ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಸಿನಿಮಾ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ಬಾಲಿವುಡ್‌ ನಟ ಸಂಜಯ್‌ ದತ್‌ ಮಾತ್ರವಲ್ಲದೆ, ಶಿಲ್ಪಾ ಶೆಟ್ಟಿ ಕೂಡಾ ನಟಿಸುತ್ತಿದ್ದಾರೆ. ಈ ಮೂಲಕ ಶಿಲ್ಪಾ ಶೆಟ್ಟಿ ಹಲವು ವರ್ಷಗಳ ಬಳಿಕ ಮತ್ತೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಚಿತ್ರದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌ ಕೂಡಾ ಇದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ