logo
ಕನ್ನಡ ಸುದ್ದಿ  /  ಮನರಂಜನೆ  /  Niveditha Shivarajkumar: ಧಾರಾವಾಹಿ, ವೆಬ್‌ ಸೀರಿಸ್‌ ಜೊತೆಗೆ ಸಿನಿಮಾ ನಿರ್ಮಾಣಕ್ಕೆ ಇಳಿದ ಶಿವ ರಾಜ್‌ಕುಮಾರ್‌ ಪುತ್ರಿ ನಿವೇದಿತಾ

Niveditha Shivarajkumar: ಧಾರಾವಾಹಿ, ವೆಬ್‌ ಸೀರಿಸ್‌ ಜೊತೆಗೆ ಸಿನಿಮಾ ನಿರ್ಮಾಣಕ್ಕೆ ಇಳಿದ ಶಿವ ರಾಜ್‌ಕುಮಾರ್‌ ಪುತ್ರಿ ನಿವೇದಿತಾ

Rakshitha Sowmya HT Kannada

May 01, 2023 01:19 PM IST

ಸಿನಿಮಾ ನಿರ್ಮಾಣಕ್ಕೆ ಮುಂದಾದ ನಿವೇದಿತಾ ಶಿವ ರಾಜ್‌ಕುಮಾರ್‌

    • ವೆಬ್‌ ಸೀರೀಸ್‌, ಧಾರಾವಾಹಿಗಳನ್ನು ನಿರ್ಮಿಸಿರುವ ನಿವೇದಿತಾ ಶಿವರಾಜ್‌ಕುಮಾರ್‌ ಈಗ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಡಾ. ರಾಜ್‌ಕುಮಾರ್‌ ಕುಟುಂಬದ ಎಲ್ಲರಿಗೂ ಕಲೆ ರಕ್ತಗತವಾಗಿ ಬಂದಿದೆ. ಇಡೀ ಕುಟುಂಬವೇ ಕಲಾಸೇವೆಗೆ ತಮ್ಮ ಜೀವನ ಮುಡುಪಾಗಿಟ್ಟಿದ್ದಾರೆ.
ಸಿನಿಮಾ ನಿರ್ಮಾಣಕ್ಕೆ ಮುಂದಾದ ನಿವೇದಿತಾ ಶಿವ ರಾಜ್‌ಕುಮಾರ್‌
ಸಿನಿಮಾ ನಿರ್ಮಾಣಕ್ಕೆ ಮುಂದಾದ ನಿವೇದಿತಾ ಶಿವ ರಾಜ್‌ಕುಮಾರ್‌

ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ತಾವೊಬ್ಬ ಸ್ಟಾರ್‌ ಆದರೂ ಚಿತ್ರರಂಗಕ್ಕೆ ಬರುವ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಈ ಯುವ ಪ್ರತಿಭೆಗಳಲ್ಲಿ ಅವರ ಪುತ್ರಿ ನಿವೇದಿತಾ ಕೂಡಾ ಇದ್ದಾರೆ. ಬಾಲನಟಿಯಾಗಿ ಅಪ್ಪನೊಂದಿಗೆ ಅಂಡಮಾನ್‌ ಚಿತ್ರದಲ್ಲಿ ನಟಿಸಿದ್ದ ನಿವೇದಿತಾ ಈಗ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಐಶ್ವರ್ಯಾ ಅರ್ಜುನ್‌- ಉಮಾಪತಿ ರಾಮಯ್ಯ ಮದುವೆ ಆಮಂತ್ರಣ ಬಂತು; ಅರ್ಜುನ್‌ ಸರ್ಜಾ ಮಗಳಿಗೆ ಮುಂದಿನ ತಿಂಗಳೇ ಶುಭವಿವಾಹ

Casting Couch: ಕಾಸ್ಟಿಂಗ್‌ ಡೈರೆಕ್ಟರ್‌ ವಿರುದ್ಧ ದೂರು ನೀಡಿದ ನಟಿ ಅಮೂಲ್ಯ ಗೌಡ; ಅಶ್ಲೀಲ ಸಂದೇಶ ಕಳುಹಿಸಿ ಅಡಿಷನ್‌ಗೆ ಆಹ್ವಾನ

ಮೊಟ್ಟೆ ಉಡುಗೆ ತೊಟ್ಟ ನಟಿ ಉರ್ಫಿ ಜಾವೇದ್‌; ಮೊಟ್ಟೆಗಳ ಮೇಲೆ ಕಣ್ಣು ನೆಟ್ಟ ನೆಟ್ಟಿಗರು ಹೇಳಿದ್ದೇ ಬೇರೆ

Manjummel Boys: ಮಂಜುಮ್ಮೆಲ್ ಬಾಯ್ಸ್‌ನ ಈ 2 ಸೀನ್‌ಗಳ ಕುರಿತು ನಡೆಯುತ್ತಿದೆ ಬಿಸಿಬಿಸಿ ಚರ್ಚೆ, ಅದ್ಭುತ ಅಂದ್ರು ಒಟಿಟಿ ಪ್ರೇಕ್ಷಕರು

ಇದುವರೆಗೂ ವೆಬ್‌ ಸೀರೀಸ್‌, ಧಾರಾವಾಹಿಗಳನ್ನು ನಿರ್ಮಿಸಿರುವ ನಿವೇದಿತಾ ಶಿವರಾಜ್‌ಕುಮಾರ್‌ ಈಗ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಡಾ. ರಾಜ್‌ಕುಮಾರ್‌ ಕುಟುಂಬದ ಎಲ್ಲರಿಗೂ ಕಲೆ ರಕ್ತಗತವಾಗಿ ಬಂದಿದೆ. ಇಡೀ ಕುಟುಂಬವೇ ಕಲಾಸೇವೆಗೆ ತಮ್ಮ ಜೀವನ ಮುಡುಪಾಗಿಟ್ಟಿದ್ದಾರೆ. ಅಂದು ಅಣ್ಣಾವ್ರು ತೆರೆ ಮೇಲೆ ರಾರಾಜಿಸುತ್ತಿದ್ದರೆ, ತೆರೆ ಹಿಂದೆ ಅವರ ಬೆನ್ನೆಲುಬಾಗಿ ನಿಂತಿದ್ದವರು ಅವರ ಪತ್ನಿ ಪಾರ್ವತಮ್ಮನವರು. ಪೂರ್ಣಿಮಾ ಎಂಟರ್‌ಪ್ರೈಸನ್ ಬ್ಯಾನರ್‌ ಅಡಿ ಪಾರ್ವತಮ್ಮ ರಾಜ್‌ಕುಮಾರ್‌ ಅವರು ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್ ಡೂಪರ್ ಹಿಟ್ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅದೇ ಲೆಗಸಿ ಈಗ ಮುಂದುವರೆದಿದೆ. ಗೀತಾ ಪಿಕ್ಚರ್ಸ್ ಬ್ಯಾನರ್‌ ಅಡಿ ಗೀತಾ ಶಿವರಾಜ್ ಕುಮಾರ್, ಪಿಆರ್‌ಕೆ ಪ್ರೊಡಕ್ಷನ್ ಬ್ಯಾನರ್‌ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿ ಚಿತ್ರರಂಗಕ್ಕೆ ದುಡಿಯುತ್ತಿದ್ದಾರೆ. ಈಗ ಶಿವಣ್ಣನ ಎರಡನೇ ಪುತ್ರಿ ನಿವೇದಿತಾ ಶಿವ ರಾಜ್‌ಕುಮಾರ್ ಕೂಡಾ ತಮ್ಮ ಸ್ವಂತ ಬ್ಯಾನರ್‌ ಶ್ರೀ ಮುತ್ತು ಸಿನಿ ಸರ್ವಿಸ್ ಅಡಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಶ್ರೀ ಮುತ್ತು ಸಿನಿ ಸರ್ವಿಸ್, ನಿವೇದಿತಾ ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ವೇದಿಕೆ ನೀಡಲೆಂದು ಸೃಷ್ಟಿಯಾಗಿರುವ ನಿರ್ಮಾಣ ಸಂಸ್ಥೆ ಇದು. ಈ ಸಂಸ್ಥೆ ಮೂಲಕ ನಿವೇದಿತಾ ಈಗಾಗಲೇ ಒಂದು ಧಾರಾವಾಹಿ ಹಾಗೂ ಮೂರು ವೆಬ್ ಸೀರೀಸ್‌ಗಳನ್ನು ನಿರ್ಮಿಸಿದ್ದಾರೆ. ಈಗ ಇದೇ ಬ್ಯಾನರ್ ಅಡಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಹೊಂಬಿಸಿಲ ಕಿರಣಗಳಲ್ಲಿ ತಂಗಾಳಿಯೊಂದು ಮೂಡಿದೆ, ಹುಟ್ಟು ಸಾವಿನ ಸ್ವಾರಸ್ಯವನ್ನು ಅನ್ವೇಷಿಸಲು ಹೊರಟಿದೆ. ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ ಎಂಬ ಪೋಸ್ಟರ್ ಮೂಲಕ ತಮ್ಮ ಹೊಸ ಹೆಜ್ಜೆಯ ಬಗ್ಗೆ ತಿಳಿಸಿದ್ದಾರೆ.

ನಿವೇದಿತಾ ಶಿವರಾಜ್ ಕುಮಾರ್ ಒಡೆತನದ ಶ್ರೀ ಮುತ್ತು ಸಿನಿ ಸರ್ವಿಸ್ ಬ್ಯಾನರ್‌ ಅಡಿ ತಯಾರಾಗುತ್ತಿರುವ ಮೊದಲ ಸಿನಿಮಾಗೆ ವಂಶಿ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವಂಶಿ, ಮೊದಲ ಬಾರಿಗೆ ಸ್ವತಂತ್ರ್ಯ ನಿರ್ದೇಶಕನಾಗಿ ಕೆಲಸ ಮಾಡುತ್ತಿರುವುದು ಅಲ್ಲದೆ ಪೂರ್ಣ ಪ್ರಮಾಣದ ನಾಯಕನಾಗಿ ನಟಿಸುತ್ತಿದ್ದಾರೆ. ಇದಕ್ಕೂ ಮುನ್ನ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಪಿಆರ್‌ಕೆ ನಿರ್ಮಾಣ ಸಂಸ್ಥೆ ಅಡಿ ತಯಾರಾದ ಮಾಯಾ ಬಜಾರ್ ಸಿನಿಮಾದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವ ಇವರಿಗೆ ಇದೆ. ಜೊತೆಗೆ ಐದು ಕಥೆಗಳ ಪೆಂಟಗನ್ ಸಿನಿಮಾದಲ್ಲಿ ಕೂಡಾ ವಂಶಿ ನಟಿಸಿದ್ದಾರೆ.

ಲೈಫ್ ಡ್ರಾಮಾ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಬಾನ ದಾರಿಯಲಿ ಸಿನಿಮಾ ಛಾಯಾಗ್ರಹಕ ಅಭಿಲಾಷ್ ಕಲ್ಲಟ್ಟಿ ಕ್ಯಾಮೆರಾ ಕೆಲಸ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಚರಣ್ ರಾಜ್ ಸಂಗೀತ ಇದ್ದು, ರಘು ನಿಡುವಳ್ಳಿ ಸಂಭಾಷಣೆ ಇದೆ. ಜಯ್ ರಾಮ್ ಸಹ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಶೂಟಿಂಗ್‌ ಆರಂಭವಾಗಲಿದೆ. ನಿವೇದಿತಾ ಶಿವರಾಜ್‌ಕುಮಾರ್‌ ಹಾಗೂ ವಂಶಿ ಅವರ ಹೊಸ ಜರ್ನಿಗೆ ಸಿನಿಪ್ರಿಯರು ಶುಭ ಹಾರೈಸುತ್ತಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು