logo
ಕನ್ನಡ ಸುದ್ದಿ  /  ಮನರಂಜನೆ  /  ರಣಹದ್ದು, ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ; ಒಬ್ಬ ಮಗ ನಾಯಕ, ಇನ್ನೊಬ್ಬ ಖಳನಾಯಕ

ರಣಹದ್ದು, ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ; ಒಬ್ಬ ಮಗ ನಾಯಕ, ಇನ್ನೊಬ್ಬ ಖಳನಾಯಕ

May 10, 2024 10:13 AM IST

ರಣಹದ್ದು, ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ; ಒಬ್ಬ ಮಗ ನಾಯಕ, ಇನ್ನೊಬ್ಬ ಖಳನಾಯಕ

    • ಕನ್ನಡ ಚಿತ್ರೋದ್ಯಮದಲ್ಲಿ ಕಳೆದ 4 ದಶಕಗಳಿಂದ ಪೋಷಕ ಕಲಾವಿದರಾಗಿ ನಟಿಸಿರುವ ನಟ ಪ್ರಸನ್ನಕುಮಾರ್‌, ಈಗ ನಿರ್ದೇಶಕರಾಗಿದ್ದಾರೆ. ತಮ್ಮಿಬ್ಬರು ಮಕ್ಕಳನ್ನೇ ರಣಹದ್ದು ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದಾರೆ.
ರಣಹದ್ದು, ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ; ಒಬ್ಬ ಮಗ ನಾಯಕ, ಇನ್ನೊಬ್ಬ ಖಳನಾಯಕ
ರಣಹದ್ದು, ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ; ಒಬ್ಬ ಮಗ ನಾಯಕ, ಇನ್ನೊಬ್ಬ ಖಳನಾಯಕ

Ranahaddu Movie Teaser: ಕಳೆದ ನಲವತ್ತು ವರ್ಷಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್ (ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ ರಣಹದ್ದು ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಇವರೆ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನಕುಮಾರ್ ಅವರ ಮಕ್ಕಳಾದ ಶಶಾಂಕ್ ಹಾಗೂ ಸೂರಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ‌. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕುರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಮೊದಲು ಮಾತನಾಡಿದ ನಿರ್ಮಾಪಕ, ನಿರ್ದೇಶಕ ಪ್ರಸನ್ನಕುಮಾರ್, ಕಳೆದ ನಲವತ್ತು ವರ್ಷಗಳಿಂದ ಕನ್ನಡ ಚಿತ್ರರಂಗ ನನಗೆ ಅನ್ನ ಹಾಕುತ್ತಿದೆ. ಅದಕ್ಕೆ ನಾನು ಹಾಗೂ ನನ್ನ ಕುಟುಂಬ ಚಿರ ಋಣಿ. ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ನನ್ನ ಕಾಲಿಗೆ ತೀವ್ರ ಪೆಟ್ಟಾಗಿತ್ತು. ಆ ಸಮಯದಲ್ಲಿ ತುಂಬಾ ಯೋಚನೆ ಮಾಡುತ್ತಿದೆ‌. ಸ್ವಲ್ಪ ದಿನಗಳ ನಂತರ ಚಿತ್ರವೊಂದನ್ನು ನಿರ್ಮಾಣದ ಜೊತೆಗೆ ನಿರ್ದೇಶನ ಕೂಡ ಮಾಡಬೇಕೆಂದು ಆಸೆಯಾಯಿತು. ಆ ಆಸೆಯನ್ನು ಮಕ್ಕಳ ಬಳಿ ಹೇಳಿಕೊಂಡೆ. ನನ್ನ ಆಸೆಗೆ ಮಕ್ಕಳು ಆಸರೆಯಾದರು" ಎಂದರು.

ಮುಂದುವರಿದು ಮಾತನಾಡಿದ ಪ್ರಸನ್ನಕುಮಾರ್‌, "ಈ ಚಿತ್ರದಲ್ಲಿ ನಟಿಸುವ ಮೂಲಕ ನನ್ನ ಇಬ್ಬರು ಮಕ್ಕಳು ಚಿತ್ರರಂಗ ಪ್ರವೇಶಿಸಿದ್ದಾರೆ‌‌. ಅನೇಕ ಜನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ‌. ಹಣವಿಲ್ಲದ ಮನುಷ್ಯನನ್ನು ಸಮಾಜ ಹೇಗೆ ನೋಡುತ್ತದೆ ಎಂಬುದೆ ಚಿತ್ರದ ಕಥಾ ಸಾರಾಂಶ‌. ಅಷ್ಟೇ ಅಲ್ಲದೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ‌‌‌. ಚಿತ್ರೀಕರಣ ಮುಕ್ತಾಯವಾಗಿ ಬಿಡುಗಡೆ ಹಂತದಲ್ಲಿದೆ‌ ಎಂದರು. ತಮ್ಮ ಪಾತ್ರದ ಬಗ್ಗೆ ಶಶಾಂಕ್, ಸೂರಜ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಾಲ್ಕು ಹಾಡುಗಳಿರುವುದಾಗಿ ಸಂಗೀತ ನಿರ್ದೇಶಕ ಸಿಂಗರ್ ಶ್ರೀನಿವಾಸ್ ತಿಳಿಸಿದರು.

ಇತ್ತೀಚಿಗೆ ಈ ಚಿತ್ರದ ಹಾಡುಗಳು ಹಾಗೂ ಟೀಸರ್ ಸಿರಿಮ್ಯೂಸಿಕ್ ಮೂಲಕ ಬಿಡುಗಡೆಯಾಯಿತು. ಡಾ. ರಾಜಕುಮಾರ್ ಪುತ್ರಿ ಲಕ್ಷ್ಮೀ ಗೋವಿಂದರಾಜು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್.ಎ.ಚಿನ್ನೇಗೌಡ, ಎಸ್ ಎ ಗೋವಿಂದರಾಜು, ಎಸ್ ಎ ಶ್ರೀನಿವಾಸ್ ಅವರು ಟೀಸರ್ ಅನಾವರಣಗೊಳಿಸಿದರು. ಖ್ಯಾತ ನಟ ಶರಣ್ ಹಾಡುಗಳನ್ನು ಲೋಕಾರ್ಪಣೆ ಮಾಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ ಆರ್ ಕೆ ವಿಶ್ವನಾಥ್, ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಪ್ರಸನ್ನ ಕುಮಾರ್(ಜಂಗ್ಲಿ ಪ್ರಸನ್ನ) ಅವರ ಒಡನಾಟವನ್ನು ನೆನಪಿಸಿಕೊಂಡು ಚಿತ್ರಕ್ಕೆ ಶುಭ ಕೋರಿದರು.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ