logo
ಕನ್ನಡ ಸುದ್ದಿ  /  Entertainment  /  Sandalwood Stars Kannada Rajyotsava Wishes

Sandalwood stars Rajyotsava wishes: 67ನೇ ಕನ್ನಡ ರಾಜ್ಯೋತ್ಸವಕ್ಕೆ ಯಾರೆಲ್ಲಾ ಸ್ಟಾರ್‌ಗಳು ಶುಭ ಕೋರಿದ್ದಾರೆ ನೋಡಿ

HT Kannada Desk HT Kannada

Nov 01, 2022 11:09 AM IST

ಸ್ಯಾಂಡಲ್‌ವುಡ್‌ ತಾರೆಯರಿಂದ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆ

    • ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಯಾಂಡಲ್‌ವುಡ್‌ನ ನಟ-ನಟಿಯರು ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ.
ಸ್ಯಾಂಡಲ್‌ವುಡ್‌ ತಾರೆಯರಿಂದ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆ
ಸ್ಯಾಂಡಲ್‌ವುಡ್‌ ತಾರೆಯರಿಂದ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆ

ಇಂದು ರಾಜ್ಯಾದ್ಯಂತ 67ನೇ ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತಿದೆ. ರಾಜ್ಯದ ಪ್ರತಿ ಊರು, ತಾಲೂಕು, ಜಿಲ್ಲೆಗಳ ಕಚೇರಿ, ಶಾಲೆ, ಕಾಲೇಜು ಸೇರಿದಂತೆ ಎಲ್ಲೆಡೆ ವಿವಿಧ ಕಾರ್ಯಕ್ರಮಗಳ ಮೂಲಕ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಗುತ್ತಿದೆ.

ಟ್ರೆಂಡಿಂಗ್​ ಸುದ್ದಿ

ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ನಲ್ಲಿ ‘ಕೆಂಡ’ಕ್ಕೆ ಪ್ರಶಸ್ತಿ; ಸಹದೇವ್ ಕೆಲವಡಿಗೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಅವಾರ್ಡ್

ರಿಷಿಯ ‘ರುದ್ರ ಗರುಡ ಪುರಾಣ’ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸಾಥ್‌; ಫಸ್ಟ್‌ ಲುಕ್‌ ರಿಲೀಸ್‌ ಮಾಡಿದ ದೊಡ್ಮನೆ ಸೊಸೆ

ಮದುವೆಗೆ ಒಪ್ಪಿಗೆ ಸಿಕ್ಕರೂ, ರಾಮ್‌ ಜತೆ ಮಕ್ಕಳು ಮಾಡಿಕೊಳ್ಳಲ್ವಂತೆ ಸ್ವಾರ್ಥಿ ಸೀತಾ! ಸೀತಮ್ಮ ನಿಂದ್ಯಾಕೋ ಓವರ್‌ ಆಯ್ತಮ್ಮ ಎಂದ ವೀಕ್ಷಕ

‘ಆಕೆ ಹಸಿದಾಗ ಅವಳ ಬಾಯಿಗೆ ಅನ್ನ ಹಾಕಿ, ಅದನ್ನಲ್ಲ!’ ಪ್ರಜ್ವಲ್‌ ರೇವಣ್ಣ ಕೇಸ್‌ ಬೆನ್ನಲ್ಲೇ ನಟಿಯ ಶಾಕಿಂಗ್‌ ಪೋಸ್ಟ್‌

ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ಒಂದೆಡೆಯಾದರೆ ಸಿನಿಪ್ರಿಯರಿಗೆ ಅಪ್ಪು ಉತ್ಸವದ ಖುಷಿ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಎದುರು ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌, ಇನ್ಫೋಸಿಸ್‌ ಮುಖ್ಯಸ್ಥೆ ಸುಧಾಮೂರ್ತಿ, ಖ್ಯಾತ ತೆಲುಗು ನಟ ಜ್ಯೂನಿಯರ್‌ ಎನ್‌ಟಿಆರ್‌ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಸಂಜೆಯ ಕಾರ್ಯಕ್ರಮವನ್ನು ನೋಡಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಯಾಂಡಲ್‌ವುಡ್‌ನ ತಾರೆಯರು ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ.

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್‌ ಟ್ವೀಟ್‌ ಮಾಡಿ, ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ.

ಕಿಚ್ಚ ಸುದೀಪ್‌ ಕನ್ನಡ ಬಾವುಟದೊಂದಿಗೆ "ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ" ಎಂದು ಟ್ವೀಟ್‌ ಮಾಡಿದ್ದಾರೆ.

'ಬೃಂದಾವನ' ಚಿತ್ರದ ನಾನು ಕನ್ನಡಿಗ…ಹಾಡಿನಲ್ಲಿ ಕನ್ನಡದ ಬಾವುಟ ಹಿಡಿದಿರುವ ಫೋಟೋ ಹಂಚಿಕೊಂಡಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್, ರಾಜ್ಯದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಹಾರೈಸಿದ್ದಾರೆ. ಜೊತೆ 'ಕ್ರಾಂತಿ' ಚಿತ್ರದ ಅಪ್‌ಡೇಟ್‌ ನೀಡಿದ್ದಾರೆ.

ರಾಷ್ಟ್ರಕವಿ ಕುವೆಂಪು ವಿರಚಿತ ಎಲ್ಲಾದರೂ ಇರು..ಹಾಡಿನ ಸಾಲುಗಳ ಮೂಲಕ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌, ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ರಿಯಲ್‌ ಸ್ಟಾರ್‌ ಉಪೇಂದ್ರ, ಕನ್ನಡಿಗರಿಗೆ ರಾಜ್ಯೋತ್ಸವದ ವಿಶ್‌ ಮಾಡಿದ್ದಾರೆ.

ತಮ್ಮ ಹೊಸ ಸಿನಿಮಾ KD ಚಿತ್ರದ ಪೋಸ್ಟರ್‌ನೊಂದಿಗೆ ನಿರ್ದೇಶಕ ಪ್ರೇಮ್‌, ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು