logo
ಕನ್ನಡ ಸುದ್ದಿ  /  ಮನರಂಜನೆ  /  ‘ಆ ಫೋಟೋ’ ಇಟ್ಟುಕೊಂಡು ಬ್ಲಾಕ್‌ಮೇಲ್‌! ‘ಪುಷ್ಪ’ ಚಿತ್ರದ ನಟನ ಕಿರುಕುಳದಿಂದ ಬೇಸತ್ತ ಮಹಿಳೆ ಆತ್ಮಹತ್ಯೆ, ಬಂಧನ

‘ಆ ಫೋಟೋ’ ಇಟ್ಟುಕೊಂಡು ಬ್ಲಾಕ್‌ಮೇಲ್‌! ‘ಪುಷ್ಪ’ ಚಿತ್ರದ ನಟನ ಕಿರುಕುಳದಿಂದ ಬೇಸತ್ತ ಮಹಿಳೆ ಆತ್ಮಹತ್ಯೆ, ಬಂಧನ

Dec 07, 2023 09:10 AM IST

‘ಆ ಫೋಟೋ’ ಇಟ್ಟುಕೊಂಡು ಬ್ಲಾಕ್‌ಮೇಲ್‌! ‘ಪುಷ್ಪ’ ಚಿತ್ರದ ನಟನ ಕಿರುಕುಳದಿಂದ ಬೇಸತ್ತ ಮಹಿಳೆ ಆತ್ಮಹತ್ಯೆ, ಬಂಧನ

  • ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್‌ ಮೇಲ್‌ ಮಾಡಿದ ಹಿನ್ನೆಲೆಯಲ್ಲಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಿರುಕುಳ ನೀಡಿದ ತೆಲುಗಿನ ಪುಷ್ಪ ಸಿನಿಮಾ ಖ್ಯಾತಿಯ ಜಗದೀಶ್‌ ಬಂಧಿತ ನಟ.

‘ಆ ಫೋಟೋ’ ಇಟ್ಟುಕೊಂಡು ಬ್ಲಾಕ್‌ಮೇಲ್‌! ‘ಪುಷ್ಪ’ ಚಿತ್ರದ ನಟನ ಕಿರುಕುಳದಿಂದ ಬೇಸತ್ತ ಮಹಿಳೆ ಆತ್ಮಹತ್ಯೆ, ಬಂಧನ
‘ಆ ಫೋಟೋ’ ಇಟ್ಟುಕೊಂಡು ಬ್ಲಾಕ್‌ಮೇಲ್‌! ‘ಪುಷ್ಪ’ ಚಿತ್ರದ ನಟನ ಕಿರುಕುಳದಿಂದ ಬೇಸತ್ತ ಮಹಿಳೆ ಆತ್ಮಹತ್ಯೆ, ಬಂಧನ

Tollywood News: ಅಲ್ಲು ಅರ್ಜುನ್‌ ನಾಯಕನಾಗಿ ನಟಿಸಿದ್ದ ಪುಷ್ಪ ಸಿನಿಮಾ ಎರಡು ವರ್ಷಗಳ ಹಿಂದೆ ತೆರೆಗೆ ಬಂದಿತ್ತು. ಬಾಕ್ಸ್‌ ಆಫೀಸ್‌ನಲ್ಲಿ ಹಿಟ್‌ ಆಗಿದ್ದ ಈ ಚಿತ್ರದ ಮೂಲಕ ಮುನ್ನೆಲೆಗೆ ಬಂದದ್ದು ಪುಷ್ಪರಾಜನ ಸ್ನೇಹಿತನ ಪಾತ್ರಧಾರಿ ಕೇಶವ ಅಲಿಯಾಸ್‌ ಜಗದೀಶ್‌ ಪ್ರತಾಪ್‌ ಭಂಡಾರಿ. ಇದೀಗ ಇದೇ ಜಗದೀಶ್‌ ಪೊಲೀಸರ ಅತಿಥಿಯಾಗಿದ್ದಾರೆ. ಮಹಿಳೆಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಪಂಜಗುಟ್ಟ ಪೊಲೀಸರು ಜಗದೀಶ್‌ನನ್ನು ವಶಕ್ಕೆ ಪಡೆದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಹಿಂದಿ ಚಿತ್ರರಂಗ ಫೇಕ್‌, ನಾನು ಅಲ್ಲಿರಲಾರೆ; ಲೋಕಸಭಾ ಚುನಾವಣೆ ಬಳಿಕ ಬಾಲಿವುಡ್‌ಗೆ ಗುಡ್‌ಬೈ ಹೇಳ್ತಾರಂತೆ ಕಂಗನಾ ರಣಾವತ್‌

ಸಂಭವಾಮಿ ಯುಗೇಯುಗೇ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆ; ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಗ್ಯಾರಂಟಿ

ಕಲರ್ಸ್‌ ಕನ್ನಡದ ನಿನಗಾಗಿ ಧಾರಾವಾಹಿ ಪ್ರಸಾರ ದಿನಾಂಕ ಪ್ರಕಟ; ದಿವ್ಯ ಉರುಡುಗ ನಟನೆಯ ಈ ಸೀರಿಯಲ್‌ ಕುರಿತು ಇಲ್ಲಿದೆ ಸಂಪೂರ್ಣ ವಿವರ

Blink Movie: ಬ್ಲಿಂಕ್‌ ಸಿನಿಮಾದ ಕುರಿತು ಮುಗಿಯದ ವಿಮರ್ಶೆ; ತೆಲುಗು, ತಮಿಳು, ಮಲಯಾಳಂ, ಹಿಂದಿಗೂ ಡಬ್‌ ಆಗುತ್ತಂತೆ ಬ್ಲಿಂಕ್‌

ಜೂನಿಯರ್ ಆರ್ಟಿಸ್ಟ್ ಒಬ್ಬರ ಜೊತೆ ಬೇರೆಯವರ ಜೊತೆ ಇರುವ ಚಿತ್ರಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಆಕೆಗೆ ಬ್ಲಾಕ್ ಮೇಲ್ ಮಾಡಿದ ಆರೋಪ ಜಗದೀಶ್ ಮೇಲಿದೆ. ಆ ಆಪ್ತ ಫೋಟೋಗಳನ್ನಿಟ್ಟುಕೊಂಡು ಬ್ಲಾಕ್‌ ಮೇಲ್‌ ಮಾಡಿದ್ದಾನೆ ಜಗದೀಶ್.‌ ಈ ಕಿರುಕುಳ ತಾಳತಾರದೆ, ನವೆಂಬರ್‌ 29ರಂದು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಬ್ಲಾಕ್‌ಮೇಲ್‌ ಮಾಹಿತಿ ಲಭ್ಯವಾಗಿದೆ.

ನವೆಂಬರ್‌ 27ರಂದು ಆತ್ಮಹತ್ಯೆಗೆ ಶರಣಾದ ಮಹಿಳೆ, ಪುರುಷನೊಂದಿಗೆ ಇದ್ದಾಗ, ಜಗದೀಶ್ ಭಂಡಾರಿ ಆಕೆಗೆ ತಿಳಿಯದಂತೆ ಫೋಟೋ ತೆಗೆದಿದ್ದಾನೆ. ನಂತರ ಆ ಫೋಟೋ ತೋರಿಸಿ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಜಗದೀಶ್‌ನನ್ನು ಪೊಲೀಸರು ಬುಧವಾರ (ಡಿಸೆಂಬರ್ 6) ಬಂಧಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಗೂ ಮತ್ತು ಜಗದೀಶ್‌ಗೂ ಈ ಹಿಂದೆಯೇ ಪರಿಚಯವಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಕಿರುಚಿತ್ರಗಳ ಮೂಲಕವೇ ನಟನೆಯಲ್ಲಿ ಗುರುತಿಸಿಕೊಂಡ ಜಗದೀಶ್‌ ಭಂಡಾರಿ, 2019ರಲ್ಲಿ ಮಲ್ಲೇಶಂ ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿ ಪ್ರವೇಶಿಸಿದರು. ತೆಲುಗಿನ ಹಲವು ಸಿನಿಮಾಗಳಲ್ಲೂ ನಟಿಸಿದರು. ಆದರೆ ಪುಷ್ಪ ಸಿನಿಮಾದ ಕೇಶವ ಪಾತ್ರದಿಂದ ಒಳ್ಳೆಯ ಹೆಸರನ್ನು ಪಡೆದುಕೊಂಡರು ಜಗದೀಶ್‌.

ಅದೇ ಪುಷ್ಪ ಗೆಲುವಿನಲ್ಲಿಯೇ ಪಿಕ್ ಪಾಕೆಟ್, ವಿರಾಟ ಪರ್ವಂ ಮತ್ತು ಬುಟ್ಟ ಬೊಮ್ಮ ಸಿನಿಮಾದಲ್ಲೂ ಜಗದೀಶ್‌ ನಟಿಸಿದರು. ಸತ್ತಿ ಒರ್ದೆಕರಾಲು ಚಿತ್ರದ ಮೂಲಕ ನಾಯಕನಾಗಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಈ ನಡುವೆ ಪುಷ್ಪ 2 ಚಿತ್ರದಲ್ಲಿ ಜಗದೀಶ್ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇದೇ ಎಂದೇ ಹೇಳಲಾಗುತ್ತಿದೆ. ಹೀಗಿರುವಾಗಲೇ ಬಂಧನಕ್ಕೊಳಗಾಗಿದ್ದಾರೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ