logo
ಕನ್ನಡ ಸುದ್ದಿ  /  ಮನರಂಜನೆ  /  Ravi Teja: ತೆಲುಗಿನ ಮಾಸ್‌ ಮಹಾರಾಜ ರವಿತೇಜ ಚಿತ್ರಕ್ಕೆ ಶಿವರಾಜ್‌ಕುಮಾರ್‌ ಸಾಥ್‌; ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್‌ಗೆ ಶಿವಣ್ಣ ವಾಯ್ಸ್

Ravi Teja: ತೆಲುಗಿನ ಮಾಸ್‌ ಮಹಾರಾಜ ರವಿತೇಜ ಚಿತ್ರಕ್ಕೆ ಶಿವರಾಜ್‌ಕುಮಾರ್‌ ಸಾಥ್‌; ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್‌ಗೆ ಶಿವಣ್ಣ ವಾಯ್ಸ್

Rakshitha Sowmya HT Kannada

May 17, 2023 02:04 PM IST

ರವಿತೇಜ ಚಿತ್ರಕ್ಕೆ ಶಿವಣ್ಣ ಸಾಥ್

    • ಹೈದ್ರಾಬಾದ್‌ನ ಸ್ಟುವರ್ಟ್‌ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಂಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ.
ರವಿತೇಜ ಚಿತ್ರಕ್ಕೆ ಶಿವಣ್ಣ ಸಾಥ್
ರವಿತೇಜ ಚಿತ್ರಕ್ಕೆ ಶಿವಣ್ಣ ಸಾಥ್

ಟಾಲಿವುಡ್ ಮಾಸ್ ಮಹಾರಾಜ ರವಿತೇಜ ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ 24ರಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ಳುತ್ತಿರುವ ಫಸ್ಟ್ ಲುಕ್ ಕನ್ನಡ ಝಲಕ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

‘ಒಂದು ವೇಳೆ ಪ್ರಜ್ವಲ್‌ ರೇವಣ್ಣ ಮುಸ್ಲಿಂ ಆಗಿದ್ರೆ, ಸುಮ್ನೆ ಬಿಡ್ತಿದ್ರಾ?’ ಧರ್ಮ ಎಳೆದು ತಂದ ನಟಿ ಸ್ವರಾ ಭಾಸ್ಕರ್‌

Mahesh Babu: ರಾಜಮೌಳಿ ಮುಂದಿನ ಸಿನಿಮಾಕ್ಕೆ ಮಹೇಶ್‌ ಬಾಬು ಹೀರೋ; ಶೂಟಿಂಗ್‌ ಯಾವಾಗ ಆರಂಭ? ಇಲ್ಲಿದೆ ಹೆಚ್ಚಿನ ವಿವರ

‘ಅವ್ನ ಜತೆಗೇನು ಮಾತು, ಅವ್ರನ್ನ ಅಣ್ಣ ಅಂತ ಕರೀ, ಈ ಅನುಮಾನವೇ ಆ ವ್ಯಕ್ತಿ ಜತೆಗಿನ ಬ್ರೇಕಪ್‌ಗೆ ಕಾರಣವಾಯ್ತು’; ತನಿಷಾ ಕುಪ್ಪಂಡ

ಪುನೀತ್‌ ರಾಜ್‌ಕುಮಾರ್‌ ಮೊದಲ ಕೋವಿಡ್‌ ಲಸಿಕೆ ಪಡೆದದ್ದು ಯಾವಾಗ? ಅಪ್ಪು ಸಾವಿಗೂ ಮೊದಲ ಲಸಿಕೆಗೂ ಇಷ್ಟು ತಿಂಗಳ ಅಂತರ

ಕರುನಾಡ ಚಕ್ರವರ್ತಿ ಶಿವಣ್ಣ ತಮ್ಮ ಮ್ಯಾಜಿಕಲ್ ವಾಯ್ಸ್ ಮೂಲಕ ಟೈಗರ್ ನಾಗೇಶ್ವರ್ ರಾವ್ ಪ್ರಪಂಚಕ್ಕೆ ನಿಮ್ಮನ್ನು ಕೊಂಡೊಯ್ಯಲಿದ್ದಾರೆ. ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅಗರ್‌ವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ಅಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ.

70ರ ಕಾಲಘಟ್ಟದ ಹೈದ್ರಾಬಾದ್‌ನ ಸ್ಟುವರ್ಟ್‌ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಂಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಗೆ ಇದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ಟೈಗರ್‌ ನಾಗೇಶ್ವರ್‌ ರಾವ್‌ ತಂಡದೊಂದಿಗೆ ಶಿವರಾಜ್‌ಕುಮಾರ್‌

ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದಾರೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗೆ ಅಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರವನ್ನು ರಿಲೀಸ್ ಮಾಡಲಾಗುತ್ತಿದೆ.

ಮತ್ತಷ್ಟು ಮನರಂಜನೆ ಸುದ್ದಿಗಳು

ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿ ಇನ್ನು ಹಾಗೇ ಇದೆ; ಬಸವರಾಜ ಬೊಮ್ಮಾಯಿ ಬಗ್ಗೆ ಪವನ್‌ ಒಡೆಯರ್‌ ಬೇಸರದ ಮಾತು

ಈ ಬಾರಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಕೆಲವರು ಸಿದ್ದು ಪರ ನಿಂತರೆ ಡಿಕೆ ಶಿವಕುಮಾರ್‌ ಅವರಿಗೂ ಅವಕಾಶ ನೀಡಿ ಎಂದು ಅನೇಕರು ಮನವಿ ಮಾಡುತ್ತಿದ್ದಾರೆ. ಇದರ ನಡುವೆ ಸ್ಯಾಂಡಲ್‌ವುಡ್‌ ನಿರ್ದೇಶಕ ಪವನ್‌ ಒಡೆಯರ್‌ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ವಿರುದ್ಧ ಹರಿಹಾಯ್ದಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಇದೇ ವಿಚಾರವಾಗಿ ಅವರು ಎರಡು ಟ್ವೀಟ್‌ ಮಾಡಿದ್ದಾರೆ. ಪವನ್‌ ಒಡೆಯರ್‌ ಅವರ ಟ್ವೀಟ್‌ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಪೂರ್ತಿ ಸ್ಟೋರಿಗೆ ಈ ಲಿಂಕ್‌ ಒತ್ತಿ.

ಚಿತ್ರರಂಗದ ಹಿಂದೂ-ಮುಸ್ಲಿಂ ಜೋಡಿ ಇವರು; ಕೆಲವರ ಜೀವನ ಹಾಲು ಜೇನು, ಕೆಲವರ ದಾಂಪತ್ಯದಲ್ಲಿ ಬಿರುಕು: ಫೋಟೋ ಗ್ಯಾಲರಿ

ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಅನ್ಯ ಧರ್ಮದವರನ್ನು ಮದುವೆ ಆಗಿದ್ದಾರೆ. ಅದರಲ್ಲಿ ಕೆಲವರು ಜೀವನ ಹಾಲು-ಜೇನು ಆದರೆ ಕೆಲವರು ವಿಚ್ಛೇದನ ಪಡೆದು ದೂರಾಗಿದ್ದಾರೆ. ಚಿತ್ರರಂಗದ ಕೆಲವು ಹಿಂದೂ ಹಾಗೂ ಮುಸ್ಲಿಂ ಜೋಡಿಯ ಫೋಟೋಗಳು ಇಲ್ಲಿವೆ ನೋಡಿ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು