logo
ಕನ್ನಡ ಸುದ್ದಿ  /  Entertainment  /  Tollywood Super Star Mahesh Babu Mother Indira Devi Passes Away

mahesh babu mother indira devi passes away: ಟಾಲಿವುಡ್ ನಟ ಮಹೇಶ್ ಬಾಬುಗೆ ಮಾತೃ ವಿಯೋಗ

HT Kannada Desk HT Kannada

Sep 28, 2022 08:19 AM IST

ಟಾಲಿವುಡ್‌ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾಗಿದ್ದಾರೆ.

  • ಟಾಲಿವುಡ್ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ವಿಧಿವಶರಾಗಿದ್ದಾರೆ. ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಹಾಗೂ ಮಹೇಶ್ ಅವರ ತಾಯಿ ಇಂದಿರಾ ದೇವಿ ಇಂದು ಕೊನೆಯುಸಿರೆಳೆದಿದ್ದಾರೆ.

ಟಾಲಿವುಡ್‌ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾಗಿದ್ದಾರೆ.
ಟಾಲಿವುಡ್‌ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾಗಿದ್ದಾರೆ.

ಹೈದರಾಬಾದ್: ಖ್ಯಾತ ನಟ, ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ವಿಧಿವಶರಾಗಿದ್ದಾರೆ. ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಹಾಗೂ ಮಹೇಶ್ ಅವರ ತಾಯಿ ಇಂದಿರಾ ದೇವಿ ಇಂದು ಕೊನೆಯುಸಿರೆಳೆದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೈಕಾಟ್‌ ಸಾಯಿ ಪಲ್ಲವಿ ಅಭಿಯಾನ, ಇವ್ರಿಗೆ ರಾಮಾಯಣದ ಸೀತೆಯಾಗುವ ಅರ್ಹತೆ ಇಲ್ವಂತೆ; ಸಹಜ ಸುಂದರಿ ಮೇಲೆ ಏಕೆ ಕೋಪ, ಇಲ್ಲಿದೆ ವಿವರ

ಆದಿತ್ಯ- ರಂಜನಿ ರಾಘವನ್‌ ಅಭಿನಯದ ಕಾಂಗರೂ ಸಿನಿಮಾ ಮೇ 3ರಂದು ಬಿಡುಗಡೆ; ಪೀಣ್ಯ ಇಂಡಸ್ಟ್ರಿ ಸ್ನೇಹಿತರ ಸಾಹಸವಿದು

Thandel Movie: ನಾಗ ಚೈತನ್ಯ, ಸಾಯಿ ಪಲ್ಲವಿ ನಟನೆಯ ತಾಂಡೇಲ್ ಡಿಜಿಟಲ್‌ ಹಕ್ಕು ಬಿಡುಗಡೆಗೆ ಮುನ್ನವೇ ದಾಖಲೆ ಮೊತ್ತಕ್ಕೆ ಮಾರಾಟ

ರಾಧಾ ರಮಣ ಸೀರಿಯಲ್‌ ನಟಿ ಶ್ವೇತಾ ಪ್ರಸಾದ್ ಸಖತ್‌ ಹಾಟ್‌ ಕಣ್ರೀ;‌ ಬೆಂಗಳೂರು ತಾಪಮಾನ ಏರಿಕೆಗೆ ನೀವೇ ಕಾರಣ ಅಂದ್ರು ಫ್ಯಾನ್ಸ್‌

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯನಿರ್ಮಾಲ ಅವರ ಪರಿಚಯವಾದ ನಂತರ ತೆಲುಗಿನ ಹಿರಿಯ ನಟ ಕೃಷ್ಣ ಅವರು ಇಂದಿರಾದೇವಿಗೆ ವಿಚ್ಛೇದನ ನೀಡಿದ್ದರು. ಆ ನಂತರ ಇಂದಿರಾ ದೇವಿ ಅವರು ಮಹೇಶ್ ಬಾಬು ಅವರ ಬಳಿಯೇ ಇದ್ದರು.

ಕೃಷ್ಣ-ಇಂದಿರಾದೇವಿಗೆ ಐವರು ಮಕ್ಕಳಿದ್ದಾರೆ. ಪುತ್ರರಾದ ರಮೇಶ್ ಬಾಬು ಮತ್ತು ಮಹೇಶ್ ಬಾಬು ಜೊತೆಗೆ ಪುತ್ರಿಯರಾದ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ. ಕೆಲ ತಿಂಗಳ ಹಿಂದೆ ರಮೇಶ್ ಬಾಬು ಕೂಡ ಅನಾರೋಗ್ಯದಿಂದ ನಿಧನರಾದರು. ಇದೀಗ ಇಂದಿರಾದೇವಿ ನಿಧನದಿಂದ ಮಹೇಶ್ ಕುಟುಂಬ ತೀವ್ರ ದುಃಖದಲ್ಲಿದೆ. ಅವರ ನಿಧನಕ್ಕೆ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

"ಶ್ರೀಮತಿ ಇಂದಿರಾ ದೇವಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ತಾಯಿಯ ಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸುತ್ತೇನೆ. ಸೂಪರ್ ಸ್ಟಾರ್ ಕೃಷ್ಣ, ಸಹೋದರ ಮಹೇಶ್ ಬಾಬು ಹಾಗೂ ಕುಟುಂಬದ ಎಲ್ಲ ಸದಸ್ಯರಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಚಿರಂಜೀವಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.

"ಖ್ಯಾತ ನಟ ಹಾಗೂ ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾದೇವಿ ಅವರ ನಿಧನಕ್ಕೆ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಸದಸ್ಯರಿಗೆ ನನ್ನ ತೀವ್ರ ಸಂತಾಪಗಳು ಎಂದು ನಾರಾ ಲೋಕೇಶ್ ಹೇಳಿದ್ದಾರೆ.

ಇಂದಿರಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನಿರ್ಮಾಪಕ ಬಂಡ್ಲ ಗಣೇಶ್ ಟ್ವೀಟ್ ಮಾಡಿದ್ದಾರೆ.

"ಸೂಪರ್ ಸ್ಟಾರ್ ಕೃಷ್ಣ ಅವರ ಕುಟುಂಬದಲ್ಲಿ ಸಂಭವಿಸಿದ ದುರಂತಗಳಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಶ್ರೀಮತಿ ಇಂದಿರಮ್ಮ ಅವರ ನಿಧನದಿಂದ ನಾನು ತೀವ್ರವಾಗಿ ಸಂಚಲನಗೊಂಡಿದ್ದೇನೆ. ಈ ಕುಟುಂಬದ ಬಗ್ಗೆ ನನಗೆ ತುಂಬಾ ಗೌರವವಿದೆ. ನಾನು ಇಂದಿರಮ್ಮನ ಬಗ್ಗೆ ಯಾವಾಗಲೂ ಗೌರವವನ್ನು ಹೊಂದಿದ್ದೇನೆ ಎಂದು ಟಾಲಿವುಡ್ ನಿರ್ದೇಶಕ ಶ್ರೀನುವೈಟ್ಲ ಸಂತಾಪದ ಮಾತುಗಳನ್ನಾಡಿದ್ದಾರೆ.

ಇಂದಿರಾದೇವಿ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ಪದ್ಮಾಲಯ ಸ್ಟುಡಿಯೋದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಅಂತಿಮ ದರ್ಶನಕ್ಕಾಗಿ ಇಡಲಾಗುತ್ತದೆ. ನಂತರ ಮಹಾಪ್ರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

ವಿಭಾಗ

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು