logo
ಕನ್ನಡ ಸುದ್ದಿ  /  Karnataka  /  13 Lakh Jobs Created In Private Sector Every Year Says Cm Basavaraj Bommai In Haveri

Jobs in private sector: ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ ಸೃಷ್ಟಿ: ಸಿಎಂ ಬೊಮ್ಮಾಯಿ

HT Kannada Desk HT Kannada

Mar 26, 2023 02:18 PM IST

ಸಿಎಂ ಬಸವರಾಜ ಬೊಮ್ಮಾಯಿ (ಫೋಟೋ ಫೈಲ್)

  • ರಾಜ್ಯದಲ್ಲಿ 1.80 ಲಕ್ಷ ಯುವಕರಿಗೆ ಸ್ಕಿಲ್ ಇಂಡಿಯಾ ಅಡಿ ತರಬೇತಿ ನೀಡಲಾಗಿದೆ. ದೇಶಕ್ಕೆ ಕೌಶಲ್ಯವಿರುವ ಯುವಕರು ಅಗತ್ಯ. ಹೀಗಾಗಿ ಪ್ರಧಾನಿ ಮೋದಿ ಅವರು ಯುವಜನಾಂಗಕ್ಕೆ ಕೌಶಲ್ಯ ನೀಡಿದರೆ ಕೈಗಾರೀಕರಣಕ್ಕೆ ಬಹಳ ದೊಡ್ಡ ಕೊಡುಗೆ ನೀಡಬಹುದು ಎಂದು ಸ್ಕಿಲ್ ಇಂಡಿಯಾ ಯೋಜನೆ ಪ್ರಾರಂಭಿಸಿದ್ದಾರೆಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ (ಫೋಟೋ ಫೈಲ್)
ಸಿಎಂ ಬಸವರಾಜ ಬೊಮ್ಮಾಯಿ (ಫೋಟೋ ಫೈಲ್)

ಶಿಗ್ಗಾವಿ (ಹಾವೇರಿ): ಕಳೆದ ನಾಲ್ಕು ವರ್ಷಗಳಲ್ಲಿ ಪ್ರತಿ ವರ್ಷ ಖಾಸಗಿ ವಲಯದಲ್ಲಿ 13 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Mysuru News: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲೂ ನೀರಿನ ಬವಣೆ, 26 ಗ್ರಾಮಗಳಿಗೆ ಟ್ಯಾಂಕರ್‌ ನೀರು, 113 ಕಡೆ ಮುನ್ನೆಚ್ಚರಿಕೆ

Bangalore Rain: ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆ ಬಿದ್ದದ್ದು ಯಾವ ಬಡಾವಣೆಗಳಲ್ಲಿ

ಕರ್ನಾಟಕ ಹವಾಮಾನ ವರದಿ ಮೇ 3: ದಕ್ಷಿಣ, ಉತ್ತರ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಬರುತ್ತಾ? 6 ಜಿಲ್ಲೆಗಳಿಗೆ ಸಿಹಿಸುದ್ದಿ

Bangalore Rains: ಬೆಂಗಳೂರಲ್ಲಿ ವರುಣ ದರ್ಶನ, ಸತತ 5 ತಿಂಗಳ ನಂತರ ಸುರಿದ ಮಳೆಗೆ ತಂಪಾದ ಉದ್ಯಾನ ನಗರಿ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಕಲ್ಯಾಣ ಗ್ರಾಮದಲ್ಲಿ ನೂತನ ತರಬೇತಿ ಸಂಕೀರ್ಣ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರುವ ಅವರು, ಈ ಮಾಹಿತಿ ಪ್ರಾವಿಡೆಂಟ್ ಫಂಡ್ ಮತ್ತು ಇ. ಎಸ್.ಐ ನಲ್ಲಿ ದಾಖಲಾಗಿರುವ 18 ರಿಂದ 25 ವರ್ಷಗಳೊಳಗಿನವರು ದಾಖಲಿಸಿಕೊಂಡಿರುವುದನ್ನು ಆಧರಿಸಿ, ಅಧ್ಯಯನ ಮಾಡಿ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.

ಭಾರತಕ್ಕೆ ಕೌಶಲ್ಯವಿರುವ ಯುವಕರು ಅಗತ್ಯ. ನಮ್ಮ ಪ್ರಧಾನಿಗಳು ಜನಸಂಖ್ಯೆಯನ್ನು ಬಂಡವಾಳ ಎಂದು ಪರಿಗಣಿಸಿ, ಶೇ 40 ರಷ್ಟಿರುವ ಯುವಜನಾಂಗಕ್ಕೆ ಕೌಶಲ್ಯ ನೀಡಿದರೆ ಕೈಗಾರೀಕರಣಕ್ಕೆ ಬಹಳ ದೊಡ್ಡ ಕೊಡುಗೆ ನೀಡಬಹುದು ಎಂದು ಸ್ಕಿಲ್ ಇಂಡಿಯಾ ಯೋಜನೆ ಪ್ರಾರಂಭ ಮಾಡಿದ್ದಾರೆ.

ಈ ಯೋಜನೆಯಡಿಯಲ್ಲಿ ಹಲವಾರು ವಿಧದ ತರಬೇತಿ ನೀಡಿ ಯುವಕರನ್ನು ತಯಾರು ಮಾಡಬಹುದಾಗಿದೆ. ರಾಜ್ಯದಲ್ಲಿ 1.80 ಲಕ್ಷ ಯುವಕರಿಗೆ ಸ್ಕಿಲ್ ಇಂಡಿಯಾ ಅಡಿ ತರಬೇತಿ ನೀಡಲಾಗಿದೆ ಎಂದರು.

ಅನುತ್ತೀರ್ಣರಾದವರಿಗೂ ಅವಕಾಶ

ಕೇವಲ ಇಂಜಿನಿಯರಿಂಗ್, ಐಟಿ ಬಿಟಿ ಕಲಿತವರಿಗಷ್ಟೇ ಅಲ್ಲ, ಪಿಯುಸಿ ಅನುತ್ತೀರ್ಣರಾದವರಿಗೆ ಕೆಲಸ ದೊರೆಯಬೇಕು, ಆಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಸಾಧ್ಯ ಎಂದು ಹಲವು ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಗ್ಗಾವಿ, ಬಂಕಾಪುರ, ಉಡಚೆನ್ನಾಪುರ ಪಾಲಿಟೆಕ್ನಿಕ್ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ.

ಶಿಗ್ಗಾಂವಿ ಹಾಗೂ ಸವಣೂರು ಐ.ಟಿ. ಐಗಳು ತಲಾ ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಕೆ.ಎಸ್.ಆರ್.ಟಿ. ಐ ಪಾಲಿಟೆಕ್ನಿಕ್ ನಿರ್ಮಾಣವಾಗುತ್ತಿದೆ. ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದ ಕೌಶಲ್ಯಾಭಿವೃದ್ದಿ, ತರಬೇತಿಯನ್ನು ಎಲ್ಲಾ ಸಂಸ್ಥೆಗಳಲ್ಲಿಯೂ ದೊರೆಯುವಂತಾಗಬೇಕೆನ್ನುವ ಕನಸು ನನ್ನದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸವಣೂರಿನಲ್ಲಿ ಜವಳಿ ತರಬೇತಿ ಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿಗ್ಗಾಂವಿಯ ಪಶು ವೈದ್ಯಕೀಯ ಪಾಲಿಟೆಕ್ನಿಕ್ ಅನ್ನು ಆರು ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಎಲ್ಲಾ ಸಂಸ್ಥೆಗಳು ಸದೃಢವಾಗಿ ಬೆಳೆದು ಸಾವಿರಾರು ಯುವಕರಿಗೆ ತರಬೇತಿ ನೀಡಿದರೆ ಜೀವನದಲ್ಲಿ ಮುಂದೆ ಸಾಗುತ್ತಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೋವಿಡ್ ಇದ್ದರೂ ಕೂಡ ಆರ್ಥಿಕತೆ ಕಾಪಾಡಿಕೊಂಡು ಬಂದಿದ್ದರ ಪರಿಣಾಮವಾಗಿ ವಿದೇಶಿ ಬಂಡವಾಳ ಹೆಚ್ಚು ಹರಿದು ಬಂದಿದೆ. ಕರ್ನಾಟಕ ಪ್ರಗತಿಪರ ಆಡಳಿಗಾರರ ಕೈಯಲ್ಲಿ ಇದ್ದುದರಿಂದ ಇದು ಸಾಧ್ಯವಾಗಿದೆ ಎಂದಿದ್ದಾರೆ.

ಸ್ವಾಭಿಮಾನದ ಬದುಕು

ಮುಂದಿನ ದಿನಗಳಲ್ಲಿ ಹೆಚ್ಚಿನ ಆರ್ಥಿಕತೆ, ಮೂಲ ಸೌಕರ್ಯ, ತರಬೇತಿ ಕೇಂದ್ರಗಳು ದೊಡ್ಡ ಪ್ರಮಾಣದಲ್ಲಿ ಆದರೆ ಕರ್ನಾಟಕದ ಯುವಕರಿಗೆ ಕೆಲಸ, ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಎಂಬ ನಿಟ್ಟಿನಲ್ಲಿ ಪ್ರಗತಿಪರ, ದೂರದೃಷ್ಟಿ ಇರುವ ಯುವಕರ ಭವಿಷ್ಯವನ್ನು ಬರೆಯಲು ಈ ನಿರ್ಣಯಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜವಳಿ ಪಾರ್ಕಿನಲ್ಲಿ 10 ಸಾವಿರ ಜನರಿಗೆ ಉದ್ಯೋಗ

ಸುಮಾರು 73 ಕೋಟಿ ರೂ.ಗಳ ಜಿಟಿಟಿಸಿ ಇಲ್ಲಿ ಬರಲಿದೆ. ನಾಲ್ಕು ವರ್ಷಗಳ ಡಿಪ್ಲೊಮಾ ಕೋರ್ಸ್, ಅಲ್ಪಾವಧಿ, ಸರ್ಟಿಫೈಡ್ ಕೋರ್ಸುಗಳು ಲಭ್ಯವಿದೆ. ಜಗತ್ತಿನ ಆಧುನಿಕ ತರಬೇತಿಯನ್ನು ಇಲ್ಲಿ ಪಡೆಯಬಹುದು. ಜವಳಿ ಪಾರ್ಕ್, ಪಶು ವೈದ್ಯಕೀಯ ಪಾಲಿಟೆಕ್ನಿಕ್ ಬರುತ್ತಿದ್ದು, ಜವಳಿ ಪಾರ್ಕಿನಲ್ಲಿಯೇ 10 ಸಾವಿರ ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಇದನ್ನು ಹೊರತುಪಡಿಸಿ 5 ಸಾವಿರ ಜನರಿಗೆ ಗಾರ್ಮೆಂಟ್ ಗಳಲ್ಲಿ ಕೆಲಸ ದೊರೆಯುತ್ತದೆ. ಯುವಕರಿಗೆ ಉದ್ಯೋಗದ ಭವಿಷ್ಯ ಬರೆಯಲು ಕಾರ್ಯಕ್ರಮ ರೂಪಿಸಿದ್ದು ಇದರ ಪ್ರಯೋಜನವನ್ನು ಯುವಕರು ಪಡೆಯಬೇಕೆಂದರು ಎಂದು ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು