logo
ಕನ್ನಡ ಸುದ್ದಿ  /  ಕರ್ನಾಟಕ  /  Prithvi Reddy On Union Budget: ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದ ನೀರಸ ಬಜೆಟ್: ಪೃಥ್ವಿ ರೆಡ್ಡಿ

Prithvi Reddy on Union Budget: ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದ ನೀರಸ ಬಜೆಟ್: ಪೃಥ್ವಿ ರೆಡ್ಡಿ

HT Kannada Desk HT Kannada

Feb 01, 2023 10:00 PM IST

ಬಜೆಟ್​ ಬಗ್ಗೆ ಪೃಥ್ವಿ ರೆಡ್ಡಿ ಪ್ರತಿಕ್ರಿಯೆ

    • ಭಾರತದ ಜ್ವಲಂತ ಸಮಸ್ಯೆಗಳಾದ ಹಣದುಬ್ಬರ, ನಿರುದ್ಯೋಗ ಮುಂತಾದವುಗಳನ್ನು ಪರಿಹರಿಸುವಂತಹ ಆಯವ್ಯಯ ಮಂಡಿಸುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.
ಬಜೆಟ್​ ಬಗ್ಗೆ ಪೃಥ್ವಿ ರೆಡ್ಡಿ ಪ್ರತಿಕ್ರಿಯೆ
ಬಜೆಟ್​ ಬಗ್ಗೆ ಪೃಥ್ವಿ ರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಭಾರತದ ಜ್ವಲಂತ ಸಮಸ್ಯೆಗಳಾದ ಹಣದುಬ್ಬರ, ನಿರುದ್ಯೋಗ ಮುಂತಾದವುಗಳನ್ನು ಪರಿಹರಿಸುವಂತಹ ಆಯವ್ಯಯ ಮಂಡಿಸುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ಟ್ರೆಂಡಿಂಗ್​ ಸುದ್ದಿ

SSLC Result 2024: ತುಮಕೂರು ಜಿಲ್ಲೆಯ ಶಿರಾ ವಿದ್ಯಾರ್ಥಿನಿ ರಾಜ್ಯಕ್ಕೆ 2ನೇ ಸ್ಥಾನ; 625ಕ್ಕೆ 624 ಅಂಕ ಗಳಿಸಿದ ಹರ್ಷಿತಾ

ವಿಧಾನ ಪರಿಷತ್ ಚುನಾವಣೆ; ಮೇಲ್ಮನೆಯ 6 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ, ಕಾಂಗ್ರೆಸ್‌ನಲ್ಲಿ ಹುಮ್ಮಸ್ಸು, ಮೈತ್ರಿ ಗೊಂದಲ ಬಿಜೆಪಿಗೆ

ಎಸ್‌ಎಸ್‌ಎಲ್‌ಸಿ ರಿಸಲ್ಟ್; 5ನೇ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆ, ಶಿರಸಿಯ ಚಿನ್ಮಯಿ, ಶ್ರೀರಾಮ್, ದರ್ಶನ್, ತೃಪ್ತಿ ಸ್ಟೇಟ್ ಟಾಪರ್‌ಗಳು

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 19 ರಿಂದ 7ನೇ ಸ್ಥಾನಕ್ಕೆ ಜಿಗಿತ ಮೈಸೂರು; ಸುದೀಕ್ಷಗೆ 620 ಅಂಕ

ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿದ 2023-24ನೇ ಸಾಲಿನ ಕೇಂದ್ರ ಬಜೆಟ್​​ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ದಿನದಿಂದಲೂ ನಿರುದ್ಯೋಗ ಹಾಗೂ ಹಣದುಬ್ಬರ ಸಮಸ್ಯೆಯನ್ನು ನಿರ್ಲಕ್ಷಿಸುತ್ತಲೇ ಬಂದಿದ್ದಾರೆ. ಪರಿಣಾಮವಾಗಿ, ಉನ್ನತ ಶಿಕ್ಷಣ ಪಡೆದ ವಿದ್ಯಾವಂತರು ಕೂಡ ಸಣ್ಣಸಣ್ಣ ನೌಕರಿಗಳಲ್ಲಿ ತೊಡಗಿಕೊಂಡು ಜೀವನ ನಡೆಸುತ್ತಿದ್ದಾರೆ. ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಜನಸಾಮಾನ್ಯರು ಕಷ್ಟ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಈ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಆಯವ್ಯಯವಾಗಿದ್ದು, ಇದರಲ್ಲಾದರೂ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ” ಎಂದು ಹೇಳಿದರು.

“ಶಿಕ್ಷಣ ಹಾಗೂ ಆರೋಗ್ಯ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಆಮ್‌ ಆದ್ಮಿ ಪಾರ್ಟಿ ಬಲವಾಗಿ ಪ್ರತಿಪಾದಿಸುತ್ತದೆ. ಇದರಿಂದ ಮಾತ್ರ ದೇಶದ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ ಹಾಗೂ ಭವಿಷ್ಯ ಸುಭದ್ರವಾಗಿರುತ್ತದೆ ಎಂದು ನಂಬಿದ್ದೇವೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರು ಬಜೆಟ್‌ನಲ್ಲಿ ಶಿಕ್ಷಣ ವಲಯದ ಅನುದಾನವನ್ನು ಶೇ. 2.64ರಿಂದ ಶೇ. 2.5ಕ್ಕೆ ಇಳಿಸಿದ್ದಾರೆ. ಆರೋಗ್ಯ ವಲಯದ ಅನುದಾನವನ್ನು ಶೇ. 2.2ರಿಂದ ಶೇ. 1.98ಕ್ಕೆ ಇಳಿಕೆ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಹಾಗೂ ಅಪಾಯಕಾರಿ ನಿಲುವು. ಬಜೆಟ್‌ನಲ್ಲಿ ದೊಡ್ಡದೊಡ್ಡ ಕಾರ್ಪೊರೇಟ್‌ ಕಂಪನಿಗಳನ್ನು ಮೆಚ್ಚಿಸಲು ಜನಸಾಮಾನ್ಯರ ಹಿತವನ್ನು ಕಡೆಗಣಿಸಲಾಗಿದೆ” ಎಂದು ಹೇಳಿದರು.

“ಮಹಿಳಾ ಸಮ್ಮಾನ ಉಳಿತಾಯ ಪ್ರಮಾಣಪತ್ರ ಹೆಸರಿನಲ್ಲಿ ಕೇವಲ 7.7% ಬಡ್ಡಿ ನೀಡುವ ಯೋಜನೆಯನ್ನು ಘೋಷಿಸಿರುವುದು ಮಹಿಳೆಯ ಮೂಗಿಗೆ ತುಪ್ಪ ಹಚ್ಚುವ ಕೆಲಸ. ಹಲವು ಬ್ಯಾಂಕ್‌ಗಳು ಇದಕ್ಕಿಂತ ಹೆಚ್ಚಿನ ಬಡ್ಡಿ ನೀಡುತ್ತಿರುವಾಗ, ಮಹಿಳೆಯರಿಗೆ ಈ ಯೋಜನೆಯಿಂದ ಹೆಚ್ಚಿನ ಲಾಭವಾಗದು. ಅದರ ಬದಲು ಮಹಿಳೆಯರಿಗೆ ಮಾಸಿಕ ಆದಾಯ ನೀಡುವ ಹಾಗೂ ಉದ್ಯೋಗ ನೀಡುವ ಯೋಜನೆಗಳನ್ನು ಜಾರಿಗೆ ತರಬೇಕಿತ್ತು. ದೆಹಲಿ ಸರ್ಕಾರದಂತೆ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡುವ ಯೋಜನೆಯನ್ನಾದರೂ ಕೇಂದ್ರ ಸರ್ಕಾರ ಘೋಷಿಸಬಹುದಿತ್ತು” ಎಂದು ಪೃಥ್ವಿ ರೆಡ್ಡಿ ಹೇಳಿದರು.

ಅಮೃತ ಕಾಲ ಅಲ್ಲ, 'ಮಿತ್ರ ಕಾಲದ ಬಜೆಟ್' - ರಾಹುಲ್ ಗಾಂಧಿ

ಕೇಂದ್ರ ಬಜೆಟ್​​ ಬಗ್ಗೆ ಕಿಡಿಕಾರಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅಮೃತ ಕಾಲ ಅಲ್ಲ, 'ಮಿತ್ರ ಕಾಲದ ಬಜೆಟ್' ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಪ್ರಕಾರ 'ಮಿತ್ರ ಕಾಲದ' ಬಜೆಟ್ ಎಂದರೆ ಪ್ರಧಾನಿ ನರೇಂದ್ರ ಮೋದಿಯ ಮಿತ್ರರ (ಶ್ರೀಮಂತರ) ಪರವಾದ ಬಜೆಟ್​. ಬಡವರಿಗೆ ಮತ್ತು ದೇಶದ ನಿರುದ್ಯೋಗಿಗಳಿಗೆ ಏನೂ ಪ್ರಯೋಜನವಾಗದೆ ಶ್ರೀಮಂತರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ ಎಂದರ್ಥ. "ದೇಶದ ಶೇಕಡಾ 1 ರಷ್ಟು ಶ್ರೀಮಂತರು 40% ಸಂಪತ್ತನ್ನು ಹೊಂದಿದ್ದಾರೆ, ಶೇ.50ರಷ್ಟು ಬಡವರು ಶೇ. 64 ರಷ್ಟುಜಿಎಸ್​​ಟಿ ಪಾವತಿಸುತ್ತಾರೆ, 42% ಯುವಕರು ನಿರುದ್ಯೋಗಿಗಳಾಗಿದ್ದಾರೆ - ಆದರೂ, ಪ್ರಧಾನಿ ಕಾಳಜಿ ವಹಿಸುವುದಿಲ್ಲ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದು ಬಜೆಟ್ಟಾ ಅಥವಾ ದಿನಸಿ ಅಂಗಡಿ ರಸೀದಿಯಾ? - ಸುಬ್ರಮಣಿಯನ್ ಸ್ವಾಮಿ

ವಿರೋಧ ಪಕ್ಷಗಳು ಬಜೆಟ್​ ಅನ್ನು ಟೀಕಿಸುವುದು ಸಾಮಾನ್ಯ. ಆದರೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರೇ ತಮ್ಮ ಪಕ್ಷದ ನೇತೃತ್ವದ ಸರ್ಕಾರದ ಬಜೆಟ್​ ಕುರಿತು "ಇದು ಬಜೆಟ್ಟಾ ಅಥವಾ ದಿನಸಿ ಅಂಗಡಿ ರಸೀದಿಯಾ?" ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಸುಬ್ರಮಣಿಯನ್ ಸ್ವಾಮಿ, "ಇದು ಬಜೆಟ್ಟಾ ಅಥವಾ ದಿನಸಿ ಅಂಗಡಿ ಮಾಲೀಕ ನೀಡುವ ರಸೀದಿಯಾ?" ಯೋಗ್ಯವಾದ ಬಜೆಟ್ ಉದ್ದೇಶಗಳೇನು ಎಂಬುದನ್ನು ಬಹಿರಂಗಪಡಿಸಬೇಕು. ಇದು ಜಿಡಿಪಿ ಬೆಳವಣಿಗೆಯ ದರವಾಗಿದ್ದರೆ ಹೂಡಿಕೆಯ ಮಟ್ಟ, ಆದಾಯದ ದರ, ಆದ್ಯತೆಗಳು, ಆರ್ಥಿಕ ಕಾರ್ಯತಂತ್ರ ಮತ್ತು ಸಂಪನ್ಮೂಲ ಕ್ರೋಢೀಕರಣವನ್ನು ಬಹಿರಂಗಪಡಿಸಿ" ಎಂದು ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು