logo
ಕನ್ನಡ ಸುದ್ದಿ  /  Karnataka  /  Aam Aadmy Party Files Complaint With Lokayukta Against Home Minister Araga Jnanendra

Complaint against Araga Jnanendra: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ಎಎಪಿ ದೂರು.. ಕಾರಣ?

HT Kannada Desk HT Kannada

Aug 26, 2022 05:48 PM IST

ಗೃಹ ಸಚಿವ ಆರಗ ಜ್ಞಾನೇಂದ್ರ

    • ನಿವೇಶನ ಹಂಚಿಕೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ಆಮ್​ ಆದ್ಮಿ ಪಾರ್ಟಿ ದೂರು ನೀಡಿದೆ. 
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಭ್ರಷ್ಟಾಚಾರಕ್ಕೆ ಕಾರಣವಾಗಿದ್ದ ಜಿ ಕೆಟಗರಿ ಸೈಟು ಹಂಚಿಕೆಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಿದ್ದರೂ ಸಹ ಬದಲಿ ನಿವೇಶನ ಹಂಚಿಕೆ ಎಂಬ ವಾಮಮಾರ್ಗವನ್ನು ಹುಡುಕಿಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಇನ್ನಿತರ ಪ್ರಭಾವಿಗಳಿಗೆ ಕೋಟ್ಯಂತರ ರೂಪಾಯಿ ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡಿರುವ ಸರ್ಕಾರದ ನೀತಿಯನ್ನು ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. ಈ ಕೂಡಲೇ ಈ ಬಿಡಿಎ ಆಯುಕ್ತರನ್ನು ವರ್ಗಾವಣೆಗೊಳಿಸಬೇಕೆಂದು ಮೌಖಿಕ ಆದೇಶ ನೀಡಿದೆ. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತರನ್ನು ಭೇಟಿಯಾಗಿ ಇಂದು ಆಮ್ ಆದ್ಮಿ ಪಕ್ಷದಿಂದ ದೂರನ್ನು ದಾಖಲಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಸಿಇಟಿ ಗೊಂದಲ; ಮರುಪರೀಕ್ಷೆ ಇಲ್ಲ, ಪಠ್ಯೇತರ ಪ್ರಶ್ನೆ ಬಿಟ್ಟು ಉಳಿದವುಗಳ ಮೌಲ್ಯಮಾಪನಕ್ಕೆ ತೀರ್ಮಾನ

SSLC Results 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸದ್ಯವೇ ಪ್ರಕಟ, ದಿನಾಂಕ ನಿಗದಿಯಾಗಿಲ್ಲ ಎಂದ ಮಂಡಳಿ

Hassan Sex scandal; ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಸಂಚಲನ, ಬಿಜೆಪಿ ನಾಯಕ ದೇವರಾಜೇ ಗೌಡರ ತುರ್ತು ರಹಸ್ಯ ಪತ್ರ ವೈರಲ್, 5 ಅಂಶಗಳು

Drought: ಕರಾವಳಿ ಜಿಲ್ಲೆಗಳಲ್ಲಿ ಏರಿದ ತಾಪಮಾನ, ನದಿಗಳಲ್ಲಿ ಕಡಿಮೆಯಾದ ನೀರಸೆಲೆ

ಕಳೆದ 4 ವರ್ಷಗಳಿಂದ ಅತಿವೃಷ್ಟಿ ಹಾವಳಿಯಿಂದ ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿದ್ದರು ಸಹ ಅವರುಗಳಿಗೆ ಸೂಕ್ತ ಮನೆಗಳನ್ನು ಕಟ್ಟಿಕೊಡಲು ವಿಫಲರಾಗಿರುವ ಬಿಜೆಪಿ ಸರ್ಕಾರ ಈಗ ತನ್ನ ಮಂತ್ರಿ ಹಾಗೂ ಪ್ರಭಾವಿಗಳಿಗೆ ಈ ರೀತಿಯ ಕೋಟ್ಯಂತರ ರೂಪಾಯಿಗಳ ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡುವ ಪರಿ 40 %ಕಮಿಷನ್ ಬಿಜೆಪಿ ಸರ್ಕಾರದ ಮತ್ತೊಂದು ರೂಪವಾಗಿದೆ ಎಂದು ಬೆಂಗಳೂರು ಎಎಪಿ ನಗರಾಧ್ಯಕ್ಷ ಮೋಹನ್ ದಾಸರಿ ಸರ್ಕಾರಕ್ಕೆ ಛೀಮಾರಿ ಹಾಕಿದರು.

ಸುಪ್ರೀಂಕೋರ್ಟ್ 2021 ರ ಅಕ್ಟೋಬರ್ 29 ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಈ ರೀತಿಯ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆರ್ ಎಂವಿ ಬಡಾವಣೆ ಯಂತಹ ಪ್ರತಿಷ್ಠಿತ ಜಾಗದಲ್ಲಿ ಮಂತ್ರಿ ಮಹೋದಯರುಗಳಿಗೆ ಸೈಟು ಹಂಚಿಕೆಯ ಅವ್ಯವಹಾರಗಳಲ್ಲಿ ಮುಳುಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ದೇಶದ ಅತ್ಯುನ್ನತ್ತ ನ್ಯಾಯಾಲಯಗಳ ಆದೇಶಗಳಿಗೂ ಸಹ ಕಿಂಚಿತ್ತೂ ಕಿಮ್ಮತ್ತು ಈ ಬಿಜೆಪಿ ಸರ್ಕಾರ ನೀಡುತ್ತಿಲ್ಲವೆಂದು ಎಂದು ಮೋಹನ್ ದಾಸರಿ ವಿಷಾದ ವ್ಯಕ್ತಪಡಿಸಿದರು.

ಉಂಡೂ ಹೋದ ಕೊಂಡೂ ಹೋದ ಎಂಬಂತೆ ರಾಜ್ಯದಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ ಗೃಹಸಚಿವ ಆರಗ ಜ್ಞಾನೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈ ಪ್ರಕರಣದಿಂದ ಸ್ಪಷ್ಟವಾಗುತ್ತಿದೆ. ಈ ಕೂಡಲೇ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ವಜಾಗೊಳಿಸಬೇಕು ಅಥವಾ ಮರ್ಯಾದೆಯಿಂದ ತಾವೇ ರಾಜೀನಾಮೆ ನೀಡಬೇಕೆಂದು ರಾಜ್ಯ ವಕ್ತಾರ ಹಾಗೂ ಹಿರಿಯ ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಆಮ್ ಆದ್ಮಿ ಪಕ್ಷವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರವಾದ ಹೋರಾಟಕ್ಕೆ ಇಳಿಯಲಿದೆ ಎಂದು ಸರಕಾರವನ್ನು ಎಚ್ಚರಿಸಿದರು.

ಈ ಹಿಂದೆ ಆಮ್​ ಆದ್ಮಿ ಪಕ್ಷವು ಗಾರಿಕಾ ತರಬೇತಿ ಕೇಂದ್ರದ ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್‌ಕಿಟ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಅಶ್ವತ್ಥ್‌ ನಾರಾಯಣ್‌ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿತ್ತು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು