logo
ಕನ್ನಡ ಸುದ್ದಿ  /  ಕರ್ನಾಟಕ  /  Satya Sauri Raju: ಅಂದು ಸ್ಮಶಾನ ನೌಕರರ ಜೊತೆ ಸಿಎಂ ಉಪಹಾರ ಸೇವನೆ, ಈಗ ಸ್ಮಶಾನ ನೌಕರನ ಪುತ್ರಿ ಪ್ರಧಾನಿ ಮೋದಿ ಭೇಟಿಗೆ ಅವಕಾಶ

Satya Sauri Raju: ಅಂದು ಸ್ಮಶಾನ ನೌಕರರ ಜೊತೆ ಸಿಎಂ ಉಪಹಾರ ಸೇವನೆ, ಈಗ ಸ್ಮಶಾನ ನೌಕರನ ಪುತ್ರಿ ಪ್ರಧಾನಿ ಮೋದಿ ಭೇಟಿಗೆ ಅವಕಾಶ

Raghavendra M Y HT Kannada

Mar 26, 2023 09:38 AM IST

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸ್ಮಶಾನ ನೌಕರನ ಪುತ್ರಿ ಸತ್ಯಾ ಸೌರಿರಾಜು ಮತ್ತು ಅರುಂಧತಿ ಜಿ ಹೆಗ್ಗಡೆ.

  • ದಾವಣಗೆರೆಗೆ ಬೀಳ್ಕೊಡುವ ಸಂದರ್ಭದಲ್ಲಿ ವೈಟ್ ಫೀಲ್ಡ್ ಹೆಲಿಪ್ಯಾಡ್ ನಲ್ಲಿ ಸ್ಮಶಾನ ನೌಕರ ಸೌರಿರಾಜ ಅವರ ಪುತ್ರಿ ಸತ್ಯಾ ಸೌರಿರಾಜು ಹಾಗೂ ಮಂಗಳಮುಖಿ ಕಾರ್ಯಕರ್ತೆ ಅರುಂಧತಿ ಜಿ ಹೆಗ್ಗಡೆ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ  ಸ್ಮಶಾನ ನೌಕರನ ಪುತ್ರಿ ಸತ್ಯಾ ಸೌರಿರಾಜು ಮತ್ತು  ಅರುಂಧತಿ ಜಿ ಹೆಗ್ಗಡೆ.
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸ್ಮಶಾನ ನೌಕರನ ಪುತ್ರಿ ಸತ್ಯಾ ಸೌರಿರಾಜು ಮತ್ತು ಅರುಂಧತಿ ಜಿ ಹೆಗ್ಗಡೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ತಮ್ಮ ರೇಸ್ ಕೋರ್ಸ್ ನ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದ್ದು ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಸ್ಮಶಾನ ನೌಕರರೊಬ್ಬರ ಪುತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದೆ.

ಟ್ರೆಂಡಿಂಗ್​ ಸುದ್ದಿ

Mangalore News: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಏರ್ಪೋರ್ಟ್‌ಗೆ ಬಿಗಿ ಭದ್ರತೆ, ವಾರದ ಹಿಂದಿನ ಪ್ರಕರಣ ತಡವಾಗಿ ಬೆಳಕಿಗೆ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಕರ್ನಾಟಕದಲ್ಲಿ 3.25 ಕೋಟಿ, ಬೆಂಗಳೂರಲ್ಲಿ 2.68 ಕೋಟಿ, ದಂಡ ವಸೂಲಿಗೆ ಬಾಕಿ

Prajwal Revanna Scandal: ಪ್ರಜ್ವಲ್ ರೇವಣ್ಣಗೆ ಮತ್ತೆ ಲುಕ್‌ಔಟ್ ನೊಟೀಸ್ ಜಾರಿ ಮಾಡಿದ ಎಸ್‌ಐಟಿ, ನೀವು ತಿಳಿಯಬೇಕಾದ 10 ಅಂಶಗಳಿವು

ಬೆಂಗಳೂರು: ಬ್ಯೂಟಿಷಿಯನ್ ಮನೆಯ ಕೀ ಕದ್ದು ನಕಲಿ ಕೀ ಮಾಡಿಸಿಕೊಂಡು ಕಳವು ಮಾಡಿದ್ದ ಮೂವರು ಕಳ್ಳರ ಬಂಧನ

ನಿನ್ನೆ (ಮಾರ್ಚ್ 25) ಕೆಆರ್ ಪುರ-ವೈಟ್ ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟನೆ ಬಳಿಕ ದಾವಣಗೆರೆಗೆ ಬೀಳ್ಕೊಡುವ ಸಂದರ್ಭದಲ್ಲಿ ವೈಟ್ ಫೀಲ್ಡ್ ಹೆಲಿಪ್ಯಾಡ್ ನಲ್ಲಿ ಸ್ಮಶಾನ ನೌಕರ ಸೌರಿರಾಜ ಅವರ ಪುತ್ರಿ ಸತ್ಯಾ ಸೌರಿರಾಜು ಹಾಗೂ ಮಂಗಳಮುಖಿ ಕಾರ್ಯಕರ್ತೆ ಅರುಂಧತಿ ಜಿ ಹೆಗ್ಗಡೆ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಈ ಮಾಹಿತಿಯನ್ನು ಸಾಮಾಜಿಕ ಕಾರ್ಯಕರ್ತ ವಾದಿರಾಜ ಸಾಮರಸ್ಯ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸತ್ಯಾ ಸೌರಿರಾಜು ಹಾಗೂ ಅರುಂಧತಿ ಜಿ ಹೆಗ್ಗೆಯವರನ್ನು ನೆಟ್ಟಿಗರು ಅಭಿನಂದಿಸಿದ್ದಾರೆ.

'proud daughter of a graveyard digger ಎಂದು ಪ್ರಧಾನಿಯರಿಗೆ ಪರಿಚಯಿಸಿಕೊಂಡೆ ಎಂದು ಸತ್ಯಾ ದೂರವಾಣಿಯಲ್ಲಿ ಹೇಳುವಾಗ ಕಣ್ಣುಗಳು ನೀರಾದವು. ಮಂಗಳಮುಖಿಯರಿಗಾಗಿ ಸದಾ ಮಿಡಿಯುವ ಅರುಂಧತಿ ಜಿ ಹೆಗ್ಗಡೆ ಅವರಿಗೂ ಇದು ಮರೆಯಲಾಗದ ದಿವಾಗಿದೆ ಎಂದು ವಾದಿರಾಜ್ ಅವರು ಬರೆದುಕೊಂಡಿದ್ದಾರೆ.

ಇದೇ ವರ್ಷದ ಜನವರಿ 11 ರಂದು ಸಿಎಂ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ಸ್ ನ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದ್ದರು.

ಈ ವೇಳೆ ಮಾತನಾಡಿದ್ದ ಸಿಎಂ, 40 ಸಾವಿರ ಪೌರ ಕಾರ್ಮಿಕರ ಖಾಯಂಮಾತಿಗೆ ಚಿಂತನೆ ನಡೆದಿದೆ ಎಂದು ಹೇಳಿದ್ದರು. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಒಂದು ಕಾರ್ಯಕ್ರಮಕ್ಕೆ ಹೋಗಿದ್ದೆ. ಅಲ್ಲಿ ಸ್ಮಶಾನದಲ್ಲಿ ಕೆಲಸ ಮಾಡುವ ಓರ್ವ ವ್ಯಕ್ತಿ ಪ್ರಶಸ್ತಿ ಪಡೆದ. ಆಗ ಅವರನ್ನು ಕರೆದು ಮಾತನಾಡಿಸಿದೆ. ನಿಮಗೆ ಎಷ್ಟು ಸಂಬಳ ಬರುತ್ತದೆ ಅಂತ ವಿಚಾರಿಸಿದೆ. ಆಗ ಆತ ಸಂಬಳ ಅಲ್ಲ ಸರ್‌, ನಮ್ಮದು ನೌಕರಿನೇ ಅಲ್ಲ ಎಂದ. ಇದನ್ನು ಕೇಳಿ ನನಗೆ ಬಹಳ ನೋವಾಯಿತು. ಸಮಸ್ಯೆ ಕೇಳಿ ಅವರಿಗೆ ಒಂದು ಸೌಲಭ್ಯ ಕೊಡುವ ನಿರ್ಣಯ ಮಾಡಿದೆ ಅಂತ ಹೇಳಿದ್ದರು.

ಬೆಂಗಳೂರಿನಲ್ಲಿ 117 ಜನರಿಗೆ ಸೇವೆ ಖಾಯಂ ಮಾಡಿದ್ದೇವೆ. ಇನ್ನು ಉಳಿದ 30 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸುತ್ತೇನೆ. 30 ಜನರದ್ದು ವಯಸ್ಸಿನ ಬಗ್ಗೆ ಚರ್ಚೆ ನಡೆಯುತ್ತಿದೆ. ಅದನ್ನು ಪರಿಶೀಲನೆ ಮಾಡುತ್ತೇವೆ. ಇತ್ತೀಚಿಗೆ ಪೌರ ಕಾರ್ಮಿಕರನ್ನು ಸಹ ಖಾಯಂ ಗೊಳಿಸಿದ್ದೇವೆ. 40 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಚಿಂತನೆ ಇದೆ. ಅದನ್ನ ನಾವು ಮಾಡುತ್ತೇವೆ. ಈಗಾಗಲೇ 11 ಸಾವಿರ ಪೌರಕಾರ್ಮಿಕರನ್ನ ಖಾಯಂ ಮಾಡಿದ್ದೇವೆ. ಇನ್ನುಳಿದ ಕಾರ್ಮಿಕರನ್ನೂ ಸಹ ಖಾಯಂ ಮಾಡುತ್ತೇವೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ಬಡವರ ಪರ ಕಾಳಜಿ ಇರುವ ಸರ್ಕಾರ ನಮ್ಮದು. ಇಷ್ಟು ವರ್ಷ ಯಾರು ಇವರ ಕಡೆ ತಿರುಗಿ ನೋಡಿಲ್ಲ. ರಾಜ್ಯ ಆಳುವವರೇ ಆಗಲಿ, ಅಧಿಕಾರಿಯೇ ಆಗಲಿ, ತಿರುಗಿ ನೋಡಿಲ್ಲ. ಆದರೆ, ಸಮಾಜದ ಹಿತ ಕಾಯುವ ಸರ್ಕಾರಗಳು ಬಂದರೆ ಈ ರೀತಿಯ ನಿರ್ಣಯಗಳು ಆಗುತ್ತವೆ. ಬಡವರ ಪರ ಕಳಕಳಿ ಇರುವಂತಹ ಸರ್ಕಾರ ನಮ್ಮದು. ಸ್ಮಶಾನ ಕಾರ್ಮಿಕರು ಎಲ್ಲರಿಗೂ ಮುಕ್ತಿ ಕೊಡುವ ಕೆಲಸ ಮಾಡುತ್ತಾರೆ. ಇವರು ಇಲ್ಲ ಅಂದರೆ ನಮಗೆ ಮುಕ್ತಿಯೇ ಸಿಗುವುದಿಲ್ಲ. ಇವರನ್ನು ಸ್ಮಶಾನ ಕಾರ್ಮಿಕರು ಅಂತಾ ಹೇಳಬೇಡಿ, ಸತ್ಯ ಹರಿಶ್ಚಂದ್ರ ಬಳಗ ಎಂದು ಇನ್ಮುಂದೆ ಕರೆಯಬೇಕು ಎಂದು ಸ್ಥಳದಲ್ಲಿದ್ದ ಬಿಬಿಎಂಪಿ ಕಮಿಷನರ್​ಗೆ ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದರು.

    ಹಂಚಿಕೊಳ್ಳಲು ಲೇಖನಗಳು