logo
ಕನ್ನಡ ಸುದ್ದಿ  /  ಕರ್ನಾಟಕ  /  Hassan Scandal:ಪ್ರಜ್ವಲ್‌ ಪ್ರಕರಣ, ಹೆಚ್ಚುವರಿ ಇಬ್ಬರು ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

Hassan Scandal:ಪ್ರಜ್ವಲ್‌ ಪ್ರಕರಣ, ಹೆಚ್ಚುವರಿ ಇಬ್ಬರು ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

Umesha Bhatta P H HT Kannada

May 08, 2024 05:25 PM IST

ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರಣೆ ಮತ್ತಿಬ್ಬರು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗಿದೆ.

    • ಹಾಸನದಲ್ಲಿ ನಡೆದಿರುವ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ಇನ್ನೂ ಇಬ್ಬರು ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗಿದೆ.
ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರಣೆ ಮತ್ತಿಬ್ಬರು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗಿದೆ.
ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರಣೆ ಮತ್ತಿಬ್ಬರು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗಿದೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳದ ಪ್ರಕರಣಗಳ ವಿಚಾರಣೆಗೆ ಇನ್ನೂ ಇಬ್ಬರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಶ್ರೀಮತಿ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

Bangalore News: ತಮಿಳುನಾಡಿನಲ್ಲಿ ಗುಂಡು ತಗುಲಿ ಬೆಂಗಳೂರಿನ ಯೋಧ ಸಾವು

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

Bangalore News: ಬೆಂಗಳೂರು ರಸ್ತೆಗಳಲ್ಲಿ ಮರ ಬೀಳುವ ಸನ್ನಿವೇಶವಿದೆಯಾ, ಈ ನಂಬರ್‌ಗಳಿಗೆ ಕರೆ ಮಾಡಿ

ಹಾಸನದಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಇರುವ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಪ್ರಜ್ವಲ್‌ ವಿರುದ್ದ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಅಪಹರಣ ಪ್ರಕರಣಗಳಿದ್ದರೆ, ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣವಿತ್ತು. ಆನಂತರ ಅಪಹರಣ ಪ್ರಕರಣವೂ ದಾಖಲಾಗಿ ಅದರಡಿ ಬಂಧಿಸಲಾಗಿದೆ. ಈ ಎಲ್ಲಾ ಪ್ರಕರಣಗಳ ವಿಚಾರಣೆಗೆ ಸರ್ಕಾರ ಹತ್ತು ದಿನಗಳ ಹಿಂದೆಯೇ ವಿಶೇಷ ತನಿಖಾ ತಂಡ( SIT) ರಚಿಸಿ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್‌, ಎಸ್ಪಿಗಳಾದ ಸೀಮಾ ಲಾಟ್ಕರ್‌, ಡಾ.ಸುಮನ್‌ ಪನ್ನೇಕರ್‌ ಅವರನ್ನೊಳಗೊಂಡ ತಂಡ ರಚಿಸಿದೆ. ಈ ಪ್ರಕರಣ ವಿಚಾರಣೆಗೆ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಜಗದೀಶ್‌ ಅವರನ್ನು ನೇಮಿಸಲಾಗಿದೆ. ಈಗಾಗಲೇ ಈ ಪ್ರಕರಣಗಳ ವಿಚಾರಣೆಯೂ ಶುರುವಾಗಿದೆ. ಆದರೆ ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ಸಮರ್ಥ ವಾದ ಮಂಡನೆ ದೃಷ್ಟಿಯಿಂದ ಹೆಚ್ಚುವರಿಯಾಗಿ ಸರ್ಕಾರಿ ಅಭಿಯೋಜಕರನ್ನು ಬುಧವಾರ ನೇಮಕ ಮಾಡಲಾಗಿದೆ.

ಈ ಪ್ರಕರಣ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿದೆ. ಅಲ್ಲದೇ ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣದ ಜತೆಗೆ ಅತಿ ಗಣ್ಯರು ಭಾಗಿಯಾಗಿರುವ ಆರೋಪಗಳಿರುವುದರಿಂದ ಎಸ್‌ಐಟಿ ನಡೆಸಲಿರುವ ತನಿಖೆಗೆ ಮಹತ್ವವೂ ಇದೆ. ಪ್ರಕರಣಗಳ ತನಿಖೆ ಜತೆಗೆ ನ್ಯಾಯಾಲಯದಲ್ಲಿನ ವಿಚಾರಣೆಯೂ ಪ್ರಮುಖವಾಗಿರುವುದರಿಂದ ಹೆಚ್ಚುವರಿಯಾಗಿ ಇಬ್ಬರು ಅಭಿಯೋಜಕರು ಎಸ್‌ಐಟಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅವರೂ ಈ ಪ್ರಕರಣಗಳಲ್ಲಿನ ಕಾನೂನಾತ್ಮಕ ಹೋರಾಟಕ್ಕೆ ಬೇಕಾದ ಸಂಪೂರ್ಣ ನೆರವನ್ನು ಎಸ್‌ಐಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣ ಈಗಾಗಲೇ ರಾಜಕೀಯ ತಿರುವು ಕೂಡ ಪಡೆದುಕೊಂಡಿದೆ. ಪೆನ್‌ಡ್ರೈವ್‌ ಬಿಡುಗಡೆ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡವಿದೆ, ಎಸ್‌ಐಟಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಕೈಗೊಂಬೆಯಾಗಿದೆ ಎನ್ನುವ ಆರೋಪಗಳು ಜೋರಾಗಿವೆ. ಇದರ ನಡುವೆಯೇ ಎಸ್‌ಐಟಿ ಸಂತ್ರಸ್ತರ ವಿಚಾರಣೆ ಮುಂದುವರೆಸಿದೆ. ಈ ಪ್ರಕರಣದಲ್ಲಿ ಇನ್ನಷ್ಟು ದೂರು, ಮೊಕದ್ದಮೆ ದಾಖಲಾಗುವ ಸೂಚನೆಯೂ ಇರುವುದರಿಂದ ಸಿಬ್ಬಂದಿ, ತಜ್ಞರು ಹಾಗೂ ಅಭಿಯೋಜಕರೊಂದಿಗೆ ಎಸ್‌ಐಟಿ ತಂಡ ಬಲಪಡಿಸುವ ಕೆಲಸ ನಡೆದಿದೆ.

ಈ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಬಂಧಿಸಿ ಈಗಾಗಲೇ ನ್ಯಾಯಾಂಗ ಬಂಧನಕ್ಕೂ ಒಪ್ಪಿಸಲಾಗಿದೆ. ಅವರ ವಿರುದ್ದದ ಪ್ರಕರಣಗಳ ವಿಚಾರಣೆಯೂ ಮುಂದುವರಿಯಲಿದೆ. ಇದರ ನಡುವೆ ಹತ್ತು ದಿನದಿಂದ ತಲೆ ಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಬಂಧನಕ್ಕೂ ಈಗಾಗಲೇ ಬ್ಲೂಕಾರ್ನರ್‌ ನೊಟೀಸ್‌ ಕೂಡ ಜಾರಿಗೊಳಿಸಲಾಗಿದೆ. ಯಾವುದೇ ಕ್ಷಣದಲ್ಲಾದರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಹಾಜರಾಗಬಹುದು. ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯೂ ಇರುವುದರಿಂದ ಈಗಿನಿಂದಲೇ ಅಭಿಯೋಜಕರನ್ನು ನೇಮಿಸಿ ವಿಚಾರಣೆ ಬಲಪಡಿಸುವ ಉದ್ದೇಶವನ್ನೂ ಹೊಂದಲಾಗಿದೆ.

ಹಿಂದೆಯೂ ಕೆಲವು ಪ್ರಕರಣಗಳಲ್ಲಿ ವಿಶೇಷ ಅಭಿಯೋಜಕರ ಜತೆಗೆ ಹೆಚ್ಚುವರಿಯಾಗಿ ಸರ್ಕಾರಿ ಅಭಿಯೋಜಕರನ್ನು ನೇಮಿಸಿದ ಉದಾಹರಣೆಯಿದೆ. ಪ್ರಮುಖ ಪ್ರಕರಣವಾಗಿರುವುದರಿಂದ ತ್ವರಿತ ವಿಚಾರಣೆ, ಎಲ್ಲಾ ಆಯಾಮದಲ್ಲೂ ಪ್ರಕರಣ ಗಮನಿಸಬೇಕಾಗಿರುವುದರಿಂದ ಈ ರೀತಿ ಅಭಿಯೋಜಕರನ್ನು ನೇಮಿಸಲಾಗುತ್ತದೆ ಎನ್ನುವುದು ಕಾನೂನು ತಜ್ಞರ ನುಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ