logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದಲ್ಲಿ 10 ದಿನ ಆನ್‌ಲೈನ್‌ನಲ್ಲಿ ಕರೆಂಟ್‌ ಬಿಲ್‌ ಕಟ್ಟುವಂತಿಲ್ಲ; ವಿದ್ಯುತ್‌ ಬಿಲ್‌ ಕಟ್ಟದೆ ಇರುವವರು ಭಯಪಡಬೇಕಿಲ್ಲ

ಕರ್ನಾಟಕದಲ್ಲಿ 10 ದಿನ ಆನ್‌ಲೈನ್‌ನಲ್ಲಿ ಕರೆಂಟ್‌ ಬಿಲ್‌ ಕಟ್ಟುವಂತಿಲ್ಲ; ವಿದ್ಯುತ್‌ ಬಿಲ್‌ ಕಟ್ಟದೆ ಇರುವವರು ಭಯಪಡಬೇಕಿಲ್ಲ

Praveen Chandra B HT Kannada

Mar 07, 2024 07:55 AM IST

ಕರ್ನಾಟಕ ಇಂಧನ ಇಲಾಖೆಯಿಂದ ಸಾಫ್ಟ್‌ವೇರ್‌ ಉನ್ನತೀಕರಣ

    • ಇಂಧನ ಇಲಾಖೆಯ ಸಾಫ್ಟ್ ವೇ‌ರ್ ಉನ್ನತೀಕರಣ ಮಾಡಲಾಗುತ್ತಿದ್ದು, ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ. ಈ ಸಂದರ್ಭದಲ್ಲಿ ಬಿಲ್‌ ಪಾವತಿ ಮಾಡದವರಿಗೆ ವಿದ್ಯುತ್‌ ಕಡಿತ ಮಾಡಲಾಗುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ. (ವರದಿ: ಎಚ್‌. ಮಾರುತಿ)
ಕರ್ನಾಟಕ ಇಂಧನ ಇಲಾಖೆಯಿಂದ ಸಾಫ್ಟ್‌ವೇರ್‌ ಉನ್ನತೀಕರಣ
ಕರ್ನಾಟಕ ಇಂಧನ ಇಲಾಖೆಯಿಂದ ಸಾಫ್ಟ್‌ವೇರ್‌ ಉನ್ನತೀಕರಣ

ಬೆಂಗಳೂರು: ಇಂಧನ ಇಲಾಖೆಯ ಸಾಫ್ಟ್ ವೇ‌ರ್ ಉನ್ನತೀಕರಣ ಮಾಡಲಾಗುತ್ತಿದ್ದು, ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ. ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ.

ಟ್ರೆಂಡಿಂಗ್​ ಸುದ್ದಿ

Environment day: ವಿಶ್ವ ಪರಿಸರ ದಿನಕ್ಕೆ ಜಾಗತಿಕ ತಾಪಮಾನದ ಮೇಲೆ ಪ್ರಬಂಧ ಬರೆಯಿರಿ, 5000 ರೂ. ಬಹುಮಾನ ಪಡೆಯಿರಿ

Vijayapura News: ವಿಜಯಪುರ ಬಿಎಲ್‌ಡಿಇಯಲ್ಲಿ ಕೌಶಲ್ಯಗಳ ಸಂಗಮ, ತಾಂತ್ರಿಕ ಹಬ್ಬದ ಸಡಗರ

Museums Day 2024: ಬೆಂಗಳೂರು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ಮೈಸೂರು ಮ್ಯೂಸಿಯಂಗಳಿಗೆ ಹೊಸ ರೂಪ, ಏನಿದರ ವಿಶೇಷ

Bangalore Mysore Expressway: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಮೊಬೈಲ್ ನಲ್ಲಿ ಮಾತಾಡಿಕೊಂಡು ಡ್ರೈವ್ ಮಾಡಿದರೆ ದಂಡ ಗ್ಯಾರಂಟಿ

ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಿಲ್ಲ

ಆನ್ ಲೈನ್ ಸೇವೆಗಳು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆಯಾಗಲೀ, ಕಡಿತವಾಗಲೀ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ತಿಳಿಸಿದೆ.

ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದೇ ಹೋದಲ್ಲಿ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ ಎಂದೂ ತಿಳಿಸಿದೆ. ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ ಗಳನ್ನು ನೀಡಲಿದ್ದಾರೆ, ಆದರೆ ಈ ಬಿಲ್ ಗಳನ್ನು ಮಾರ್ಚ್ 20 ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ.

ಎಲ್ಲೆಲ್ಲಿ ಆನ್‌ಲೈನ್‌ ಸೇವೆ ಇಲ್ಲ?

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕಂ: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿಹೊಂದಿದ ಮಾಹಿತಿ ತಂತ್ರಜ್ಞರ ತಂಡ 24/7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.

(ವರದಿ: ಎಚ್‌. ಮಾರುತಿ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ