logo
ಕನ್ನಡ ಸುದ್ದಿ  /  Karnataka  /  Congress Instigated Banjara Protest In Shikaripura Says Cm Bommai

CM Bommai on Shikaripura Protest: 'ಶಿಕಾರಿಪುರದಲ್ಲಿ ಬಂಜಾರ ಪ್ರತಿಭಟನೆಗೆ ಕಾಂಗ್ರೆಸ್ ಪ್ರಚೋದನೆ' - ಸಿಎಂ ಬೊಮ್ಮಾಯಿ ಆರೋಪ

HT Kannada Desk HT Kannada

Mar 27, 2023 08:42 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

  • ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ. ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಚಿಕ್ಕಬಳ್ಳಾಪುರ: ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ. ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಟ್ರೆಂಡಿಂಗ್​ ಸುದ್ದಿ

Mangalore News: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿಗಳು

Bengaluru Crime News: ಸಹಪಾಠಿ ಬಳಿ 35 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಆರೋಪ; 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಬಂಧನ

Udupi News: ಪಾತ್ರ ಮುಗಿಸಿ, ಬಣ್ಣ ತೆಗೆಯುವಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ್ ಪುತ್ತೂರು

Bangalore News: ಶೂನ್ಯ ಮಳೆಯೊಂದಿಗೆ ಏಪ್ರಿಲ್ ತಿಂಗಳು ಮುಗಿಸಿದ ಬೆಂಗಳೂರು; 1983ರ ಬಳಿಕ ಇದೇ ಮೊದಲು; ವರದಿ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿಯ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಮತ್ತು ಭೋವಿ ಸಮುದಾಯದವರು ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ 'ಮೈತ್ರಿ' ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಶಿಕಾರಿಪುರ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಬಂಜಾರ ಸಮುದಾಯದ ಮೀಸಲಾತಿಯನ್ನು ಸದಾಶಿವ ಆಯೋಗ ಶಿಪಾರಸ್ಸಿನ ಅನ್ವಯದಲ್ಲಿ ಮಾಡಿಲ್ಲ. ನಮ್ಮ ಸಚಿವ ಸಂಪುಟದ ಮೂಲಕ ಮಾಡಿದ್ದೇವೆ. ಅವರಿಗೆ ಎಸ್.ಸಿ ಯಿಂದ ತೆಗೆಯುತ್ತಾರೆ ಎಂಬ ಆತಂಕ ಇತ್ತು. ನಾನೇ ಆದೇಶವನ್ನು ಮಾಡಿ ಭೋವಿ, ಲಂಬಾಣಿ ಎಲ್ಲ ಸಮುದಾಯಗಳು ಎಸ್.ಸಿ ಯಲ್ಲಿಯೇ ಇರುತ್ತವೆ ಎಂದು ತೀರ್ಮಾನ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. 3% ರಿಂದ 4.5% ಕೊಟ್ಟಿದ್ದೇವೆ. ಅವರ ಬೇಡಿಕೆಯಂತೆಯೇ ಸಮುದಾಯದ ರಕ್ಷಣೆ ಮಾಡಿದ್ದೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಸುಮಾರು ಎರಡು ಲಕ್ಷ ಜನರಿಗೆ ಹಕ್ಕುಪತ್ರ ಕೊಡುತ್ತಿದ್ದೇವೆ. ಯಡಿಯೂರಪ್ಪನವರು ತಾಂಡಾ ಅಭಿವೃದ್ಧಿ ನಿಗಮ ಮಾಡಿ, ಮೂಲಭೂತ ಸೌಕರ್ಯ ಕೊಟ್ಟವರು. ಹೀಗಾಗಿ ಯಾವುದೇ ಹಿಂಸೆಗೆ ಅವಕಾಶ ಬೇಡ. ಏನೇ ಇದ್ದರೂ ಕುಳಿತು ಚರ್ಚೆ ಬೇಡ ಮಾಡೋಣ. ಬಂಜಾರ ಸಮುದಾಯವನ್ನು ಮೊದಲಿನಿಂದಲೂ ಬಿಜೆಪಿ ಸರ್ಕಾರ ರಕ್ಷಣೆ ಮಾಡಿಕೊಂಡು ಬಂದಿದೆ. ಮುಂದೆಯೂ ಕೂಡ ಅವರ ರಕ್ಷಣೆ ಮಾಡುತ್ತೇವೆ. ಈ ತರಹದ ತಪ್ಪು ದಾರಿಗೆ ಎಳೆಯುವ ಅವಕಾಶ ಮಾಡಿಕೊಡಬಾರದು. ಕಾಂಗ್ರೆಸ್ ಮಾಡುತ್ತಿರುವ ಕುಖೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.

ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವುದು ಅತ್ಯಂತ ಖಂಡನೀಯ. ಒಂದು ರಾಷ್ಟ್ರೀಯ ಪಕ್ಷ ಮಾಡಿರುವಂತಹದ್ದು ಸಣ್ಣ ಕೆಲಸ. ಜನರ ಮಧ್ಯೆ ಜಗಳ ಹಚ್ಚುವ ಶಕುನಿ ಕಾಂಗ್ರೆಸ್ ಪಕ್ಷ ಎಂದರು.

ಫಲಿತಾಂಶವನ್ನು ಕಾದು ನೋಡಿ

ಸಿಎಂ ಸ್ವಕ್ಷೇತ್ರದಲ್ಲಿ ಗೆಲುವು ಸುಲಭವಿಲ್ಲ ಎಂಬ ಡಿ.ಕೆ ಶಿವಕುಮಾರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಾವು ರಾಜಕಾರಣದಲ್ಲಿ ಆಳವಾಗಿ ಬೇರೂರಿರುವ ಮರ. ರೆಂಬೆ ಕೊಂಬೆಗಳಲ್ಲ. ಇಂತಹ ಬಂಡ ಬಡಾಯಿಗೆ ನಾವು ಜಗ್ಗುವುದಿಲ್ಲ. ಯಾರೆಲ್ಲ ಬರುತ್ತಾರೆ ಬರಲಿ. ನನ್ನ ಕ್ಷೇತ್ರ ಸೇರಿದಂತೆ ಯಾವೆಲ್ಲ ಕ್ಷೇತ್ರದಲ್ಲಿ ಯಾರೆಲ್ಲ ಗೆಲ್ಲುತ್ತಾರೆ ಎನ್ನುವುದನ್ನು ಡಿ.ಕೆ ಶಿವಕುಮಾರ ಕಾದು ನೋಡಲಿ ಎಂದರು.

ವೈದ್ಯಕೀಯ ಕಾಲೇಜು ಅವಶ್ಯಕತೆಯನ್ನು ಈಡೇರಿಸಿದ್ದೇವೆ

ಇಲ್ಲಿ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇತ್ತು. ಡಾ. ಸುಧಾಕರ್ ಅವರು ಇಲ್ಲಿ ಮೆಡಿಕಲ್ ಕಾಲೇಜು ಬೇಕು ಎಂದು ಹಠದಿಂದಲೇ ಸಚಿವರಾಗಿದ್ದರು. ಅದರಂತೆ ಮಂಜೂರಾತಿ ಪಡೆದುಕೊಂಡು ಮೂರು ವರ್ಷದಲ್ಲಿ ಅದ್ಭುತವಾಗಿ ಮೆಡಿಕಲ್ ಕಾಲೇಜು ಕಟ್ಟಿದ್ದಾರೆ. ಎರಡು ವರ್ಷದ ವಿದ್ಯಾರ್ಥಿಗಳಿದ್ದಾರೆ. ಇದೊಂದು ಟಾಪ್ ಒನ್ ಮೆಡಿಕಲ್ ಕಾಲೇಜು ಆಗಲಿ. ಸುಧಾಕರ್ ಅವರ ಛಲ ಮತ್ತು ಸಾಧನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು