ಕನ್ನಡ ಸುದ್ದಿ  /  ಕರ್ನಾಟಕ  /  Ashwath Narayan: 'ಕೈ', ದಳ ಹಿಂದೇಟು ಹಾಕಿದ್ದ 'ಒಳಮೀಸಲಾತಿ ಜಾರಿಗೆ' ತಂದು ಬಿಜೆಪಿ ಹೊಸ ಚರಿತ್ರೆಯನ್ನೇ ಸೃಷ್ಟಿಸಿದೆ: ಅಶ್ವತ್ಥ್ ನಾರಾಯಣ

Ashwath Narayan: 'ಕೈ', ದಳ ಹಿಂದೇಟು ಹಾಕಿದ್ದ 'ಒಳಮೀಸಲಾತಿ ಜಾರಿಗೆ' ತಂದು ಬಿಜೆಪಿ ಹೊಸ ಚರಿತ್ರೆಯನ್ನೇ ಸೃಷ್ಟಿಸಿದೆ: ಅಶ್ವತ್ಥ್ ನಾರಾಯಣ

Raghavendra M Y HT Kannada

Apr 14, 2023 02:59 PM IST

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗವಹಿಸಿದ್ದರು.

  • ರಾಜ್ಯ ಬಿಜೆಪಿ ಸರ್ಕಾರ ದಲಿತರ ಏಳಿಗೆಯ ಗುರಿಯೊಂದಿಗೆ ಮೀಸಲಾತಿಯನ್ನು ಹೆಚ್ಚಿಸಿದ್ದು, ಒಳಮೀಸಲಾತಿಯನ್ನೂ ಜಾರಿಗೆ ತಂದಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗವಹಿಸಿದ್ದರು.
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗವಹಿಸಿದ್ದರು.

ಬೆಂಗಳೂರು: ಒಳಮೀಸಲಾತಿಯನ್ನು (Internal reservation) ಕೊಡಲು ಕಾಂಗ್ರೆಸ್ (Congress), ಜೆಡಿಎಸ್ (JDS) ಗೆ ಭಯವಿತ್ತು. ಆದರೆ ಬಿಜೆಪಿ ಸರ್ಕಾರ (BJP Govt) ಒಳಮೀಸಲಾತಿ ಜಾರಿಗೆ ತರುವ ಮೂಲಕ ಹೊಸ ಚರಿತ್ರೆಯನ್ನೇ ಸೃಷ್ಟಿಸಿದ್ದು, ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ (Dr Ashwath Narayan) ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಬಂದಿಲ್ಲ; ಲೋಕಸಭಾ ಚುನಾವಣೆ ಫಲಿತಾಂಶ ತನಕ ಬರುವ ನಿರೀಕ್ಷೆಯೂ ಇಲ್ಲ, ಎಸ್‌ಐಟಿ ಮೂಲ ಹೇಳಿಕೆ

ವಿಜಯಪುರದಿಂದ ಅಯೋಧ್ಯೆಗೆ ಬೈಕ್ ಸವಾರಿ; ಪ್ರಯಾಣಕ್ಕೆಷ್ಟು ದಿನ, ರೂಟ್ ಯಾವುದು ಶಿವಾನಂದ ಪರೀಟ ಅನುಭವ ಕಥನ

ಬಿಬಿಎಂಪಿಗೆ 10 ವರ್ಷದ ಹಿಂದೆ ಸೇರ್ಪಡೆಯಾದ 110 ಗ್ರಾಮಗಳಿಗೆ ಕಾವೇರಿ 5 ನೇ ಹಂತದಲ್ಲಿ ನೀರಿನ ಸಂಪರ್ಕ, ಅಧಿಕಾರಿಗಳಿಗೆ ಜಲಮಂಡಳಿ ಸೂಚನೆ

Anjali Murder Case; ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ನೆನಪು ಮಾಸುವ ಮೊದಲೇ 20 ವರ್ಷದ ಅಂಜಲಿಯ ಭೀಕರ ಹತ್ಯೆ, 10 ಅಂಶಗಳ ವಿವರ ವರದಿ

ಅಂಬೇಡ್ಕರ್ ಜಯಂತಿ (Ambedkar Jayanti) ಹಿನ್ನೆಲೆಯಲ್ಲಿ ಯಶವಂತಪುರದ ಸಂವಿಧಾನ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಸಮೀಪದ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ದಲಿತರ ಏಳಿಗೆಯ ಗುರಿಯೊಂದಿಗೆ ಮೀಸಲಾತಿಯನ್ನು ಹೆಚ್ಚಿಸಿದ್ದು, ಒಳಮೀಸಲಾತಿಯನ್ನೂ ಜಾರಿಗೆ ತಂದಿದೆ. ಇಂತಹ ಇಚ್ಛಾಶಕ್ತಿಯನ್ನು ಈ ಎರಡೂ ಪಕ್ಷಗಳು ಮಾಡಿಲ್ಲ ಎಂದಿದ್ದಾರೆ.

ಪ್ರತಿಪಕ್ಷಗಳಿಗೆ ನಡುಕ ಉಂಟಾಗಿದೆ

ಮೀಸಲಾತಿ ಪರಿಷ್ಕರಣೆ ಮತ್ತು ಒಳಮೀಸಲಾತಿ ಎರಡನ್ನೂ ಜನಸಂಖ್ಯೆಯ ಪ್ರಮಾಣವನ್ನು ಆಧರಿಸಿ ಜಾರಿಗೊಳಿಸಲಾಗಿದೆ. ಇದಕ್ಕೆ ಯಾವುದೇ ತೊಡಕು ಎದುರಾಗದಂತೆ 9ನೇ ಷೆಡ್ಯೂಲ್‌ಗೆ ಸೇರಿಸಲಾಗುತ್ತಿದೆ. ಇದರಿಂದ ದಲಿತ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗಗಳ ಪ್ರಯೋಜನ ಸಿಗಲಿದೆ. ಇದನ್ನು ಕಂಡು ಪ್ರತಿಪಕ್ಷಗಳಿಗೆ ನಡುಕ ಉಂಟಾಗಿದ್ದು, ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿವೆ. ನಮ್ಮ ಸರ್ಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಒಟ್ಟು ಶೇಕಡ 24ರಷ್ಟು ಮೀಸಲಾತಿ ಕೊಟ್ಟಿದೆ ಅಂತ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೂ ಸೂಕ್ತ ಮೀಸಲಾತಿ ಕೊಡಲಾಗಿದೆ. ಇದನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿದೆ. ದೇಶದಲ್ಲಿ ಇಂದು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ಜನಪರವಾಗಿ ಕೆಲಸ ಮಾಡುತ್ತಿದ್ದರೆ ಅದರ ಹಿಂದೆ ಸಂವಿಧಾನದ ಜನಕರಾದ ಬಾಬಾಸಾಹೇಬ್‌ ಅಂಬೇಡ್ಕರ್ ಅವರೇ ಮೂಲಕಾರಣರಾಗಿದ್ದಾರೆ. ಅವರ ದೂರದರ್ಶಿತ್ವದಿಂದಾಗಿ 140 ಕೋಟಿ ದೇಶವಾಸಿಗಳು ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ. ಜತೆಗೆ ರಾಜ್ಯದಲ್ಲಿ ಅವರು ಭೇಟಿ ನೀಡಿದ್ದ 10 ಸ್ಥಳಗಳನ್ನು ಪುಣ್ಯಸ್ಥಳಗಳನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಅಂತ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಪೌರಕಾರ್ಮಿಕರ ಉದ್ಯೋಗವನ್ನು ಖಾಯಂ ಮಾಡಿದೆ. ಅವರಿಗೆ ಘನತೆ ತಂದುಕೊಡುವ ಆಶಯದಿಂದ ವಿಧಾನಸೌಧದ ಸಮೀಪದಲ್ಲೇ 'ಶ್ರಮಿಕರ ಭವನ'ವನ್ನು ನಿರ್ಮಿಸಲಾಗುತ್ತಿದೆ. ಅಲ್ಲದೆ, ದಲಿತರ ಪರವಾಗಿ ಪಿಟಿಸಿಎಲ್ ಮತ್ತು ದೌರ್ಜನ್ಯ ತಡೆ ಕಾಯ್ದೆಗಳನ್ನು ಶಕ್ತಿಯುತಗೊಳಿಸಲಾಗಿದೆ. ಯಶವಂತಪುರ ಮತ್ತು ಮತ್ತೀಕೆರೆಗಳಲ್ಲಿ ದಲಿತ ಸಮುದಾಯದ ಬಂಧುಗಳಿಗೆ ಸಮರ್ಪಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಅಂಬೇಡ್ಕರ್ ಅವರು ಬಲಿಷ್ಠ ಭಾರತವನ್ನು ಕಟ್ಟುವ ಕನಸು ಕಂಡಿದ್ದರು. ಅದಕ್ಕೆ ತಕ್ಕಂತೆ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನವೆಂಬರ್ ತಿಂಗಳಲ್ಲಿ ದೇಶದಲ್ಲಿ ಸಂವಿಧಾನ ದಿನವನ್ನು ಆಚರಿಸುವ ಸತ್ಸಂಪ್ರದಾಯ ಆರಂಭವಾಗಿದೆ. ಈ ಮೂಲಕ ಸಂವಿಧಾನವನ್ನು ಮನನ ಮಾಡಿಕೊಳ್ಳುವ ಸಂಸ್ಕೃತಿಗೆ ನಾಂದಿ ಹಾಡಲಾಗಿದೆ. ಇದರ ಜತೆಗೆ ಅಂಬೇಡ್ಕರ್ ಅವರ ಬದುಕಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಸ್ಥಳಗಳನ್ನು ಪಂಚತೀರ್ಥ ಕ್ಷೇತ್ರಗಳನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಅವರು ವಿವರಿಸಿದರು.

ಬಿಜೆಪಿ ಸರ್ಕಾರವು ದಲಿತ ಸಮುದಾಯಗಳ ಏಳಿಗೆಗೆ ಹತ್ತಾರು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದಿದೆ. ನಾವು ಅಂಬೇಡ್ಕರ್ ರೂಪಿಸಿದ ಸಂವಿಧಾನವನ್ನು ಪೂಜ್ಯ ಭಾವದಿಂದ ನೋಡುತ್ತೇವೆ. ಹೀಗಾಗಿಯೇ ಮೋದಿಯವರು ಸಂವಿಧಾನವನ್ನು ಧರ್ಮಗ್ರಂಥಗಳಿಗಿಂತ ಹೆಚ್ಚು ಪವಿತ್ರವಾಗಿದೆ ಎಂದು ಬಣ್ಣಿಸಿದ್ದಾರೆ. ನಮ್ಮದು ಎಲ್ಲ ಸಮುದಾಯಗಳನ್ನೂ ಜೊತೆಯಲ್ಲಿ ಕೊಂಡೊಯ್ಯುತ್ತಿರುವ ನೀತಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹೇಳಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ