logo
ಕನ್ನಡ ಸುದ್ದಿ  /  ಕರ್ನಾಟಕ  /  Davanagere News: 6 ತಿಂಗಳಿಂದ ಸಂಬಳ ನೀಡದ್ದಕ್ಕೆ ದಾವಣಗೆರೆ ಬೀದಿಯಲ್ಲಿ ಕಡ್ಲೆ ಕಾಯಿ ಗಿಡ ಮತ್ತು ಟೀ ಮಾರಿದ ಅತಿಥಿ ಉಪನ್ಯಾಸಕರು

Davanagere News: 6 ತಿಂಗಳಿಂದ ಸಂಬಳ ನೀಡದ್ದಕ್ಕೆ ದಾವಣಗೆರೆ ಬೀದಿಯಲ್ಲಿ ಕಡ್ಲೆ ಕಾಯಿ ಗಿಡ ಮತ್ತು ಟೀ ಮಾರಿದ ಅತಿಥಿ ಉಪನ್ಯಾಸಕರು

HT Kannada Desk HT Kannada

Dec 14, 2023 08:52 AM IST

ದಾವಣಗೆರೆಯಲ್ಲಿ ಕಡ್ಲೆ ಕಾಯಿ ಗಿಡ ಮತ್ತು ಚಹಾ ಮಾರಾಟ ಮಾಡಿ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು.

  • ಸರ್ಕಾರ ಆರು ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಅತಿಥಿ ಉಪನ್ಯಾಸಕರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು. ಕಡ್ಲೆ ಕಾಯಿ ಗಿಡ ಮತ್ತು ಚಹಾ ಮಾರಾಟ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಕಡ್ಲೆ ಕಾಯಿ ಗಿಡ ಮತ್ತು ಚಹಾ ಮಾರಾಟ ಮಾಡಿ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು.
ದಾವಣಗೆರೆಯಲ್ಲಿ ಕಡ್ಲೆ ಕಾಯಿ ಗಿಡ ಮತ್ತು ಚಹಾ ಮಾರಾಟ ಮಾಡಿ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು.

ದಾವಣಗೆರೆ: ಕಳೆದ ಐದಾರು ತಿಂಗಳಿಂದ ಅತಿಥಿ ಉಪನ್ಯಾಸಕರಿಗೆ ಸಂಬಳವೇ ಆಗಿಲ್ಲ. ಇದರಿಂದ ರೋಸಿ ಹೋಗಿರುವ ಅತಿಥಿ ಉಪನ್ಯಾಸಕರು ಬೀದಿಯಲ್ಲಿ ಕಡ್ಲೆ ಕಾಯಿ ಗಿಡ ಮತ್ತು ಟೀ ಮಾರಾಟ ಮಾಡುವ ಮೂಲಕ ಸಾರ್ವಜನಿಕರ ಮುಂದೆ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ

ಬೆಂಗಳೂರಿನಲ್ಲಿ ಮೇ 18, 19ಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ -Bengaluru Rain

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ; ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು, ಮಹತ್ವದ ತೀರ್ಮಾನ

ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣ; ಮೇ 20ಕ್ಕೆ ಹೆಚ್‌ಡಿ ರೇವಣ್ಣ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್

ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಮತ್ತು ಜಿಲ್ಲಾಧಿಕಾರಿ ಕಚೇರಿ ಬಳಿಯ ದಾವಣಗೆರೆ-ಹರಿಹರ ಸಂಪರ್ಕಿಸುವ ಹಳೆ ಪಿಬಿ ರಸ್ತೆಯಲ್ಲಿ ಅತಿಥಿ ಉಪನ್ಯಾಸಕರು ಈ ರೀತಿಯಲ್ಲಿ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ದ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ದಾವಣಗೆರೆಯ ಸುಮಾರು 50ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ಈ ವೇಳೆ ರಸ್ತೆಯಲ್ಲಿ ಸಾರ್ವಜನಿಕರಿಗೆ ಕಡ್ಲೇಕಾಯಿ ಮಾರಾಟ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದು, ನಾವು ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು. ಸರ್ಕಾರ ನಮಗೆ ಕಳೆದ ಐದಾರು ತಿಂಗಳುಗಳಿಂದ ಸಂಬಳವನ್ನೇ ನೀಡಿಲ್ಲ. ನೀವಾದ್ರೂ ಕಡ್ಲೆಕಾಯಿ ಮತ್ತು ಟೀ ತೆಗೆದುಕೊಂಡು ನಮಗೆ ಸಪೋರ್ಟ್ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಈ ಮೂಲಕ ಸರ್ಕಾರದ ವಿರುದ್ಧ ಈ ವಿನೂತನ ಪ್ರತಿಭಟನೆಯ ಮೂಲಕ ಬೀದಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಪಿಎಚ್‌ಡಿ ಪದವಿ ಮಾಡಿಕೊಂಡು ನೆಟ್ ಮತ್ತು ಸೆಟ್ ಎಂಬ ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದೇವೆ. ರಾಜ್ಯದಲ್ಲಿ 430 ಕಾಲೇಜುಗಳಲ್ಲಿ 14 ಸಾವಿರದಷ್ಟು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ನಮಗೆ ಯಾವುದೇ ಸೇವಾ ಭದ್ರತೆ ಇಲ್ಲ. ಸರ್ಕಾರ ಸಂಬಳವನ್ನ ಸರಿಯಾಗಿ ನೀಡುತ್ತಿಲ್ಲ. ವರ್ಷಕ್ಕೆ ಆರು ಬಾರಿ ಮಾತ್ರ ಸಂಬಳ ನೀಡಲಾಗುತ್ತಿದ್ದು, ಕಳೆದ ಜುಲೈನಿಂದ ಸಂಬಳವನ್ನೇ ನೀಡಿಲ್ಲ ಎಂದು ಭಿತ್ತಿ ಪತ್ರಗಳನ್ನ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು, ಈ ಅತಿಥಿ ಉಪನ್ಯಾಸಕರು ಹಲವಾರು ಬೇಡಿಕೆಗಳನ್ನ ಈಡೇರಿಸುವಂತೆಯೂ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳಬೇಕು. ಸೇವಾ ಭದ್ರತೆ ನೀಡಬೇಕು, ಸಂಬಳ ಹೆಚ್ಚಳ ಮಾಡಬೇಕು ಮತ್ತು ಅತಿಥಿ ಉಪನ್ಯಾಸಕರ ಮೇಲೆ ಆಗುತ್ತಿರುವ ಶೋಷಣೆಯನ್ನು ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ