logo
ಕನ್ನಡ ಸುದ್ದಿ  /  ಕರ್ನಾಟಕ  /  Chikkaballapur: ಬಿಜೆಪಿ ಸೇರಿದ ವಿವಿಧ ಪಕ್ಷಗಳ ಮುಖಂಡರು.. 'ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದೊಡ್ಡ ಪರಿವರ್ತನೆ' ಎಂದ ಸಿಎಂ

Chikkaballapur: ಬಿಜೆಪಿ ಸೇರಿದ ವಿವಿಧ ಪಕ್ಷಗಳ ಮುಖಂಡರು.. 'ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದೊಡ್ಡ ಪರಿವರ್ತನೆ' ಎಂದ ಸಿಎಂ

HT Kannada Desk HT Kannada

Jan 30, 2023 07:02 PM IST

ಬಿಜೆಪಿ ಸೇರಿದ ವಿವಿಧ ಪಕ್ಷಗಳ ಮುಖಂಡರು

    • ಭಾರತೀಯ ಜನತಾ ಪಕ್ಷದ ಜಿಲ್ಲಾ, ಮಂಡಲ, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಈ ಬಾರಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ದೊಡ್ಡ ಬದಲಾವಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಜೆಪಿ ಸೇರಿದ ವಿವಿಧ ಪಕ್ಷಗಳ ಮುಖಂಡರು
ಬಿಜೆಪಿ ಸೇರಿದ ವಿವಿಧ ಪಕ್ಷಗಳ ಮುಖಂಡರು

ಚಿಕ್ಕಬಳ್ಳಾಪುರ: ಭಾರತೀಯ ಜನತಾ ಪಕ್ಷದ ಜಿಲ್ಲಾ, ಮಂಡಲ, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಈ ಬಾರಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ದೊಡ್ಡ ಬದಲಾವಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ರೇವಣ್ಣ ಕೇಸ್‌; ಜರ್ಮನಿಯಿಂದ ಲಂಡನ್‌ಗೆ ಹೊರಟ್ರಾ ಹಾಸನ ಸಂಸದ, 2 ದಿನಗಳ 10 ವಿದ್ಯಮಾನಗಳು

Raghunandan S Kamath Death: ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ನ್ಯಾಚುರಲ್ ಐಸ್ ಕ್ರೀಂನ ರಘುನಂದನ್ ಕಾಮತ್ ಇನ್ನಿಲ್ಲ

ಪ್ರಜ್ವಲ್‌ ರೇವಣ್ಣ ಕೇಸ್‌; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ

ಬಂಟ್ವಾಳ: 3 ವರ್ಷದ ಮಗುವನ್ನು ರಕ್ಷಿಸಲು ಪ್ರಾಣದ ಹಂಗುತೊರೆದು ಬಾವಿಗಳಿದ ಯುವಕ, ಉಮೇಶ್ ಮಠದಬೆಟ್ಟು ಕಾರ್ಯಕ್ಕೆ ಶ್ಲಾಘನೆ

ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪಕ್ಷಗಳ ಮುಖಂಡರು ಹಮ್ಮಿಕೊಂಡಿದ್ದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬೊಮ್ಮಾಯಿ, ಚಿಂತಾಮಣಿ ಕ್ಷೇತ್ರದ ಪ್ರಮುಖರು ಸಚಿವ ಡಾ: ಕೆ.ಸುಧಾಕರ್, ಸಂಸದ ಮುನಿಸ್ವಾಮಿ ಅವರ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರಿರುವುದು ಸಂತಸದ ಸಂಗತಿ. ಅವರಿಗೆಲ್ಲಾ ಹೃದಯತುಂಬಿದ ಸ್ವಾಗತಿಸುತ್ತೇನೆ ಎಂದರು.

ಬಿಜೆಪಿ ಇಡೀ ವಿಶ್ವದಲಿಯೇ ಅತಿ ದೊಡ್ಡ ಪಕ್ಷ. ಏಳು ಕೋಟಿಗಿಂತ ಹೆಚ್ಚು ಕಾರ್ಯಕರ್ತರಿರುವ ಪಕ್ಷ. ಭಾರತ ದೇಶದಲ್ಲಿ ಎಲ್ಲಾ ರಾಜ್ಯಗಳಲ್ಲಿ ಸದೃಢ ಹಾಗೂ ಭವಿಷ್ಯವಿರುವ ಪಕ್ಷವಾಗಿದೆ. ನಾವೆಲ್ಲಾ ಉತ್ತಮ ಭವಿಷ್ಯವಿರುವ ರಾಜಕೀಯ ಪಕ್ಷದ ಹಡಗಿನಲ್ಲಿ ನಾವೆಲ್ಲರೂ ಕುಳಿತಿದ್ದೇವೆ. ನಿಮ್ಮಾ ಪ್ರಯಾಣ ಅತ್ಯಂತ ಯಶಸ್ವಿಯಾಗುತ್ತದೆ. ಕ್ಷೇತ್ರದ ಅಭಿವೃದ್ಧಿಯಾಗುವುದಲ್ಲದೇ ಬರುವ ದಿನಗಳಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು ಸಂಪೂರ್ಣವಾಗಿ ಅಭಿವೃದ್ಧಿಯಾಗಲಿದೆ ಎಂದರು.

ಕಾಂಗ್ರೆಸ್ ಮಾತಿಗೂ ಹಾಗೂ ಕೃತಿಗೂ ವ್ಯತ್ಯಾಸವಿದೆ

ಬಹಳ ದಿನಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಭದ್ರಕೋಟೆ ಎಂದು ತಿಳಿದಿದ್ದವು. ಆದರೆ ಈ ಬಾರಿ ಬದಲಾವಣೆಯಾಗುತ್ತಿದೆ. ವಿಶೇಷವಾಗಿ ಯುವಕರಲ್ಲಿ ಬಹಳ ದೊಡ್ಡ ಬದಲಾವಣೆಯಾಗುತ್ತಿದೆ. ನರೇಂದ್ರ ಮೋದಿಯವರ ನೇತೃತ್ವವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದ್ದು, ಕರ್ನಾಟಕದಲ್ಲಿ ಮತ್ತೆ ಅವರ ಆಶೀರ್ವಾದದಿಂದ ನೂರಕ್ಕೆ ನೂರರಷ್ಟು ಸ್ಪಷ್ಟ ಬಹುಮತದಿಂದ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್‍ನವರು ಬಹಳ ಹತಾಶರಾಗಿದ್ದಾರೆ. ಹೀಗಾಗಿ ಏನೇನೋ ಆಶ್ವಾಸನೆ, ಭರವಸೆಗಳನ್ನು ನೀಡುತ್ತಿದ್ದಾರೆ. ಅನ್ನ ಮಾಡುವಾಗ ಒಂದು ಅಗಳು ಮುಟ್ಟಿನೋಡಿದರೆ ಬೆಂದಿದೆಯೋ ಇಲ್ಲವೋ ಎಂದು ತಿಳಿಯುವಂತೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಅವರ ಆಡಳಿತವನ್ನು ನೋಡಿಯಾಗಿದೆ. ಅವರ ಮಾತುಗಳಿಗೆ ಹಾಗೂ ಕೃತಿಗೆ ವ್ಯತ್ಯಾಸವಿದೆ. ಬರೀ ಸುಳ್ಳನ್ನು ಹೇಳಿಕೊಂಡು, ಸುಳ್ಳಿನ ಮೇಲೆ ತಮ್ಮ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕೆನ್ನುವ ಚಿಂತನೆಯಲ್ಲಿದ್ದಾರೆ .ಆದರೆ ಜನ ಬುದ್ದಿವಂತರಿದ್ದಾರೆ. ಅವರಿಗೆ ಕಾಂಗ್ರೆಸ್ಸಿನ ದುರಾಡಳಿತದ ದೌರ್ಭಾಗ್ಯಗಳ ನೆನಪಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಅವರಿಗೆ ಬೆಂಬಲ ನೀಡುವುದಿಲ್ಲ ಎಂದರು.

ಕುಟುಂಬದ ಸದಸ್ಯರು

ಕೃಷ್ಣಾರೆಡ್ಡಿಯವರು ಈ ಕ್ಷೇತ್ರವನ್ನು ನಿರಂತರವಾಗಿ ಪ್ರತಿನಿಧಿಸಿ ಇಲ್ಲಿಯ ಜನರ ಆಗುಹೋಗುಗಳನ್ನು ಒಬ್ಬ ತಂದೆಯಂತೆ ನೋಡಿಕೊಂಡಿರುವುದು, ಸುಸಂಸ್ಕøತ ರಾಜಕಾರಣವನನ್ನು ಚಿಂತಾಮಣಿಯಲ್ಲಿ ಕಟ್ಟಿರುವುದನ್ನು ಕಣ್ಣಾರೆ ಕಂಡಿದ್ದೇನೆ. ನಮ್ಮ ತಂದೆಯವರ ಜೊತೆಗೆ ಅವರು ಅತ್ಯಂತ ನಿಕಟ ಸ್ನೇಹ ಹಾಗೂ ಉತ್ತಮ ಸಂಬಂಧವಿತ್ತು. ನಮ್ಮ ತಂದೆಯವರ ಸಂಪುಟದಲ್ಲಿ ಗೃಹಸಚಿವರಾಗಿಯೋ ಅವರು ಕಾರ್ಯನಿರ್ವಹಿಸಿದ್ದರು. ಅವರು ರಾಜಕಾರಣದ ಜಿತೆಗೆ ಸಾಮಾಜಿಕ ಸೇವೆಯನ್ನು ಎಂದೂ ಕೈಬಿಟ್ಟಿರಲಿಲ್ಲ.ಸಂಘಸಂಸ್ಥೆಗಳ ಮುಖಾಂತರ, ಎಲ್ಲಾ ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಮಾಡಿರುವ ಸುಸಂಸ್ಕøತ ಮನೆತನಕ್ಕೆ ಸೇರಿರುವವರು. ಅವರ ಮಗಳು ವಾಣಿ, ಸಹೋದರ ಶೇಖರ ರೆಡ್ಡಿಯವರೂ ಸೇರಿರುವುದು ಸಂತೋಷ. ವೇಣುಗೋಪಾಲ್ ಅವರ ನೇತೃತ್ವದಲ್ಲಿ ಇಡೀ ಜಿಲ್ಲೆಯಲ್ಲಿ ಹಲವಾರು ಜನ ಬಿಜೆಪಿ ಗೆ ಸೇರ್ಪಡೆಯಾಗಿದ್ದೀರಿ. ಭಾಜಪ ಕುಟುಂಬದ ಸದಸ್ಯರಾಗಿರುವವರನ್ನು ಕುಟುಂಬದವರಂತೆ ನೋಡಿಕೊಳ್ಳಲಾಗುವುದು ಎಂದರು.

ಬೂತ್ ಮಟ್ಟದ ವಿಜಯ ಸಂಕಲ್ಪ ಯಶಸ್ವಿಗೊಳಿಸಿ

ಇಂದಿನಿಂದ ಬೂತ್ ಮಟ್ಟದಲ್ಲಿ ವಿಜಯ ಸಂಕಲ್ಪ ಕಾರ್ಯಕ್ರಮ ನಡೆಯುತ್ತಿದ್ದು. ಅದನ್ನು ಯಶಸ್ವಿ ಮಾಡಬೇಕು. ಸುಧಾಕರ್, ಮುನಿಸ್ವಾಮಿಯವರು ಯಾವ ಕಾರ್ಯಕ್ರಮ ನಡೆಸಿದರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಈ ಬಾರಿ ಭಾಜಪ ಕಮಲ ಚಿಂತಾಮಣಿಯಲ್ಲಿ ಅರಳುತ್ತದೆ. ಚಿಂತಾಮಣಿಗೆ ಭೇಟಿ ನೀಡಿ ಬೃಹತ್ ರ್ಯಾಲಿ ಮಾಡೋಣ. ಪಕ್ಷ ಕಟ್ಟೋಣ. ಕರ್ನಾಟಕ ದಲ್ಲಿ ಜನಪರ, ಅಭಿವೃದ್ಧಿಪರ ಆಡಳಿತ ನೀಡೋಣ ಎಂದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ