ಕನ್ನಡ ಸುದ್ದಿ  /  ಕರ್ನಾಟಕ  /  Engineers' Day 2022: ಇಂದು ಇಂಜಿನಿಯರ್ಸ್‌ ಡೇ- ಇತಿಹಾಸ ಮತ್ತು ಮಹತ್ವ; ನಮ್ಮ ನಾಡಿನ ಚಿರಸ್ಮರಣೀಯ ಸರ್‌ ಎಂ.ವಿಶ್ವೇಶ್ವರಯ್ಯನವರ ಜಯಂತಿ

Engineers' Day 2022: ಇಂದು ಇಂಜಿನಿಯರ್ಸ್‌ ಡೇ- ಇತಿಹಾಸ ಮತ್ತು ಮಹತ್ವ; ನಮ್ಮ ನಾಡಿನ ಚಿರಸ್ಮರಣೀಯ ಸರ್‌ ಎಂ.ವಿಶ್ವೇಶ್ವರಯ್ಯನವರ ಜಯಂತಿ

HT Kannada Desk HT Kannada

Sep 15, 2022 07:51 AM IST

ಭಾರತ ರತ್ನ ಸರ್‌ ಎಂ ವಿಶ್ವೇಶ್ವರಯ್ಯ

    • Sir M Visvesvaraya Birth Anniversary:  ಸರ್​ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನಕ್ಕೆ1955ರಲ್ಲಿ ಪಾತ್ರರಾದರು.  ಭಾರತ ಸರ್ಕಾರವು ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಇಂಜಿನಿಯರ್ಸ್ ಡೇ (Engineers' Day) ಎಂದು 1968 ರಲ್ಲಿ ಘೋಷಿಸಿತು.
ಭಾರತ ರತ್ನ ಸರ್‌ ಎಂ ವಿಶ್ವೇಶ್ವರಯ್ಯ
ಭಾರತ ರತ್ನ ಸರ್‌ ಎಂ ವಿಶ್ವೇಶ್ವರಯ್ಯ (HT)

ಇಂದು ಇಂಜಿನಿಯರ್‌ಗಳ ದಿನ. ಅಭಿಯಂತರರ ದಿನ ಎಂದೂ ಅಚ್ಚಕನ್ನಡದಲ್ಲಿ ಹೇಳುತ್ತಾರೆ. ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮದಿನವೂ ಹೌದು. ಎಂಜಿನಿಯರಿಂಗ್ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸರ್‌ ಎಂ ವಿಶ್ವೇಶ್ವರಯ್ಯನವರು ನೀಡಿರುವ ಗಣನೀಯ ಕೊಡುಗೆಗಳನ್ನು ವೃತ್ತಿಪರವಾಗಿ ಗೌರವಿಸಲು ಭಾರತ ಸರ್ಕಾರವು ಅವರ ಜನ್ಮದಿನವನ್ನು ಇಂಜಿನಿಯರ್ಸ್ ಡೇ (Engineers' Day) ಎಂದು 1968 ರಲ್ಲಿ ಘೋಷಿಸಿತು.

ಟ್ರೆಂಡಿಂಗ್​ ಸುದ್ದಿ

Chikkamagaluru News: ಚಿಕ್ಕಮಗಳೂರಿನಲ್ಲಿ ಭಾರೀ ಗಾತ್ರದ ಸಲಗ ವಿದ್ಯುತ್‌ ಶಾಕ್‌ ಗೆ ಬಲಿ

Bangalore News: ಅಜಾಗರೂಕತೆಯಿಂದ ಕಾರು ಚಾಲನೆ, ಬೆಂಗಳೂರಲ್ಲಿ ಬಾಲಕ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Hassan Scandal: ತಿರುವು ಪಡೆದುಕೊಳ್ಳುತ್ತಿರುವ ಪ್ರಜ್ವಲ್‌ ರೇವಣ್ಣ ಪ್ರಕರಣ, ಜೆಡಿಎಸ್‌ ಶಾಸಕನ ವಿರುದ್ದವೇ ಆರೋಪ, ಮತ್ತಿಬ್ಬರ ಬಂಧನ

ಶಕ್ತಿ ಯೋಜನೆ ನಂತರವೂ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಏರಿಕೆ, ದೂರದ ಪ್ರಯಾಣ ಬೆಳೆಸುವ ಮಹಿಳೆಯರ ಬೇಡಿಕೆಗಳೇನು?

ಆಧುನಿಕ ಭಾರತದ ಅಣೆಕಟ್ಟುಗಳು, ಜಲಾಶಯಗಳು ಮತ್ತು ಜಲವಿದ್ಯುತ್ ಯೋಜನೆಗಳನ್ನು ನಿರ್ಮಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಮಹಾನ್ ರಾಷ್ಟ್ರ-ನಿರ್ಮಾಪಕರಲ್ಲಿ ಅವರು ಅಗ್ರಗಣ್ಯರೆಂದು ಪರಿಗಣಿಸಲಾಗಿದೆ. ಸರ್ ಎಂ ವಿಶ್ವೇಶ್ವರಯ್ಯ ಅವರು ಕರ್ನಾಟಕದ ಕೃಷ್ಣ ರಾಜ ಸಾಗರ ಅಣೆಕಟ್ಟು ಮತ್ತು ಹೈದರಾಬಾದ್‌ನ ಪ್ರವಾಹ ಸಂರಕ್ಷಣಾ ವ್ಯವಸ್ಥೆಯನ್ನು ಒಳಗೊಂಡಂತೆ ಮುಖ್ಯ ಎಂಜಿನಿಯರ್ ಆಗಿ ಹಲವಾರು ವಾಸ್ತುಶಿಲ್ಪದ ಅದ್ಭುತಗಳ ನಿರ್ಮಾಣದ ಉಸ್ತುವಾರಿ ನಿರ್ವಹಿಸಿದವರು.

ಇಂಜಿನಿಯರ್ಸ್ ಡೇ ಮಹತ್ವ

ಸರ್ ಎಂ ವಿಶ್ವೇಶ್ವರಯ್ಯ ಅವರಿ 1903 ರಲ್ಲಿ ಸ್ವಯಂಚಾಲಿತ ತಡೆಗೋಡೆ ನೀರಿನ ಪ್ರವಾಹ ಗೇಟ್‌ಗಳನ್ನು ವಿನ್ಯಾಸಗೊಳಿಸಿ ಪೇಟೆಂಟ್ ಪಡೆದರು. ಇದಕ್ಕೆ ಬ್ಲಾಕ್ ಸಿಸ್ಟಮ್ ಎನ್ನುತ್ತಾರೆ. ಇದು ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿದ್ದು ಅದು ನೀರು ಉಕ್ಕಿ ಹರಿಯುವ ಸಂದರ್ಭದಲ್ಲಿ ಮುಚ್ಚುತ್ತದೆ. ಇದನ್ನು ಮೊದಲು ಪುಣೆಯ ಖಡಕ್ವಾಸ್ಲಾ ಜಲಾಶಯದಲ್ಲಿ ಸ್ಥಾಪಿಸಲಾಯಿತು.

ಕರ್ನಾಟಕದ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಎಂಬ ಸಣ್ಣ ಹಳ್ಳಿಯಲ್ಲಿ 1861 ರಲ್ಲಿ ಜನಿಸಿದ ಸರ್ ಎಂ ವಿಶ್ವೇಶ್ವರಯ್ಯ ಅವರು ಮದ್ರಾಸ್ ವಿಶ್ವವಿದ್ಯಾನಿಲಯದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಅನ್ನು ಅಧ್ಯಯನ ಮಾಡಿದರು ಮತ್ತು ಪುಣೆಯ ವಿಜ್ಞಾನ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಮಾಡಿದರು. 1917 ರಲ್ಲಿ ಅವರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು, ಇದನ್ನು ಈಗ ಬೆಂಗಳೂರಿನ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂದು ಕರೆಯಲಾಗುತ್ತದೆ.

ಕರ್ನಾಟಕದಲ್ಲಿ ಕೃಷ್ಣರಾಜ ಸಾಗರ ಜಲಾಶಯ ನಿರ್ಮಾಣ ಯೋಜನೆಗೆ ಸರ್​ ಎಂ.ವಿಶ್ವೇಶ್ವರಯ್ಯ ಮುಖ್ಯಸ್ಥರಾಗಿದ್ದರು. 1934ರಲ್ಲಿ ಭಾರತದ ಆರ್ಥಿಕತೆಗೆ ಸಂಬಂಧಿಸಿ ಅನೇಕ ಯೋಜನೆಗಳನ್ನು ರೂಪಿಸಿದ ಸಮಿತಿಯಲ್ಲೂ ಅವರ ಪಾತ್ರವಿತ್ತು. ವಿಶ್ವೇಶ್ವರಯ್ಯ ಅವರ ಸಾರ್ವಜನಿಕ ಸೇವೆಯನ್ನು ಗಮನಿಸಿ ಅವರಿಗೆ ʻKnight Commander of the British Indian Empireʼ ಎಂಬ ಬಿರುದನ್ನು ನೀಡಲಾಗಿತ್ತು. 101 ವರ್ಷ ಜೀವನ ನಡೆಸಿದ ವಿಶ್ವೇಶ್ವರಯ್ಯನವರು 1962ರ ಏಪ್ರಿಲ್ 14ರಂದು ನಿಧನರಾದರು.

ಹೈದರಾಬಾದ್‌ ಸಂಸ್ಥಾನದಲ್ಲೂ ಸರ್‌ ಎಂ.ವಿ. ಸೇವೆ

ಹೈದರಾಬಾದ್‌ನಲ್ಲಿ 1908 ರಲ್ಲಿ ಸಂಭವಿಸಿದ ದುರಂತದ ಪ್ರವಾಹದ ನಂತರ, ಆಗಿನ ನಿಜಾಮರು ಒಳಚರಂಡಿ ವ್ಯವಸ್ಥೆಯನ್ನು ವಿನ್ಯಾಸಗೊಳಿಸಲು ಮತ್ತು ನಗರವನ್ನು ಪ್ರವಾಹದಿಂದ ರಕ್ಷಿಸಲು ಸರ್ ಎಂ ವಿಶ್ವೇಶ್ವರಯ್ಯ ಅವರ ಸೇವೆಗಳನ್ನು ವಿನಂತಿಸಿದರು. ಇಂಜಿನಿಯರ್ ಅವರು ಶೇಖರಣಾ ಜಲಾಶಯಗಳ ನಿರ್ಮಾಣವನ್ನು ಪ್ರಸ್ತಾಪಿಸಿದರು ಮತ್ತು ಹೈದರಾಬಾದ್ ಮೂಲಕ ಹರಿಯುವ ಮುಸಿ ನದಿಯ ಮಾಲಿನ್ಯವನ್ನು ತಡೆಗಟ್ಟಲು ನಗರದ ಹೊರಗೆ ಒಳಚರಂಡಿ ಫಾರ್ಮ್ ಅನ್ನು ನಿರ್ಮಿಸಲು ನೆರವಾಗಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ