Karnataka News: ಕರ್ನಾಟಕದಲ್ಲಿ ಮುಂದುವರಿದ ವರ್ಗಾವಣೆ ಪರ್ವ; ಪುನಃ 10 ಐಎಎಸ್ ಅಧಿಕಾರಿಗಳ ವರ್ಗಾವಣೆ
Aug 09, 2023 07:44 AM IST
ಕರ್ನಾಟಕದಲ್ಲಿ ಪುನಃ 10 ಐಎಎಸ್ ಅಧಿಕಾರಿಗಳ ವರ್ಗಾವಣೆ
- IAS Officers Transfer: ಕಳೆದ ತಿಂಗಳಷ್ಟೇ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಕರ್ನಾಟಕ ಸರ್ಕಾರ ಇದೀಗ ಮರಳಿ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯದ ವಿವಿಧ ಇಲಾಖೆಗಳಿಗೆ ಅವರನ್ನು ನಿಯೋಜಿಸಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ವರ್ಗಾವಣೆಯ ಪರ್ವ ಮುಂದುವರಿದಿದೆ. ಕಳೆದ ತಿಂಗಳಷ್ಟೇ ಒಂದಿಷ್ಟು ಒಂದಿಷ್ಟು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿದ್ದ ಸರ್ಕಾರ ಈಗ ಪುನಃ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದಾಗಿ ಆದೇಶ ಹೊರಡಿಸಿದೆ.
ಮಂಗಳವಾರ ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿತ್ತು.
ಮೊಹಮ್ಮದ್ ಮೊಹಸಿನ್- ಪ್ರಧಾನ ಕಾರ್ಯದರ್ಶಿ ಕಾರ್ಮಿಕ ಇಲಾಖೆ, ಟಿ.ಎಚ್.ಎಂ.ಕುಮಾರ್ ವ್ಯವಸ್ಥಾಪಕ ನಿರ್ದೇಶಕ ಕೆಎಸ್ಎಸ್ಐಡಿಸಿ, ಆರ್. ಸ್ನೇಹಲ್ ನಿರ್ದೇಶಕಿ (ಐಟಿ) ಬೆಂಗಳೂರು ಮಹಾನಗರ ಪಾಲಿಕೆ, ಪ್ರಭುಲಿಂಗ ಕವಳಿಕಟ್ಟಿ ಆಯುಕ್ತ ಪಶು ಸಂಗೋಪನಾ, ಪಶು ವೈದ್ಯಕೀಯ ಸೇವೆಗಳ ಇಲಾಖೆ, ಜಿ. ಲಕ್ಷ್ಮೀಕಾಂತ ರೆಡ್ಡಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೆಯುಐಡಿವೈ, ಪಾಂಡೆ ರಾಹುಲ್ ತುಕರಾಮ್ ಸಿಇಒ ರಾಯಚೂರು ಜಿಲ್ಲಾ ಪಂಚಾಯಿತಿ, ಎಸ್ಜೆ ಸೋಮಶೇಖರ್ ಸಿಇಒ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ, ಎಸ್. ರಂಗಪ್ಪ, ನಿರ್ದೇಶಕ ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಕಂದಾಯ ಇಲಾಖೆ, ಡಾ. ಎಸ್. ಆಕಾಶ್ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರು ಕಲಬುರ್ಗಿ, ಅನ್ಮೂಲ್ ಜೈನ್ ನೋಂದಣಿ ಇಲಾಖೆ ಡಿಐಜಿ ಬೆಂಗಳೂರು ಹೀಗೆ 10 ಮಂದಿ ಅಧಿಕಾರಗಳನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ
IAS officers:10 ಐಎಎಸ್ ಅಧಿಕಾರಿಗಳ ವರ್ಗಾವಣೆ; ಬದಲಾದ್ರು ದಕ್ಷಿಣ ಕನ್ನಡ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಬಾಗಲಕೋಟೆ ಜಿಲ್ಲಾಧಿಕಾರಿ
ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡಿದ್ದು, 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹ ಬದಲಾಗಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡಿದ್ದು, 10 ಮಂದಿ ಐಎಎಸ್ ಅಧಿಕಾರಿಗಳನ್ನು (IAS Officers)ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹ ಬದಲಾಗಿದ್ದಾರೆ.
ವಿಭಾಗ