logo
ಕನ್ನಡ ಸುದ್ದಿ  /  ಕರ್ನಾಟಕ  /  ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಜಾರಿ ಮಾಡಿ: ಸಿದ್ದರಾಮಯ್ಯ ಸವಾಲು

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಜಾರಿ ಮಾಡಿ: ಸಿದ್ದರಾಮಯ್ಯ ಸವಾಲು

Umesha Bhatta P H HT Kannada

Apr 30, 2024 11:53 PM IST

ಗಂಗಾವತಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ

  •  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಲೋಕಸಭೆ ಚುನಾವಣೆ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದರು.

ಗಂಗಾವತಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ
ಗಂಗಾವತಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ

ಗಂಗಾವತಿ: ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಕಾಯ್ದೆ(SCP/TSP) ಜಾರಿ ಮಾಡದ ಬಿಜೆಪಿ, ಕೇವಲ ಸುಳ್ಳು ಪತ್ರಿಕಾ ಜಾಹಿರಾತು ಮೂಲಕ ದಲಿತರ ಹಾದಿ ತಪ್ಪಿಸುತ್ತಿದೆ. ಈ ಕಾಯಿದೆಯನ್ನು ಬಿಜೆಪಿ ಮೊದಲು ಜಾರಿಗೊಳಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದರು.

ಟ್ರೆಂಡಿಂಗ್​ ಸುದ್ದಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬೆಂಗಳೂರು ಮೂಲದ ಇಬ್ಬರು ವೈದ್ಯರು ಕೊಯಮತ್ತೂರಿನಲ್ಲಿ ಎನ್‌ಐಎ ವಶಕ್ಕೆ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; ಕಲಾ, ವಾಣಿಜ್ಯ, ವಿಜ್ಞಾನದಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣ

Liquid Nitrogen Paan: ಮದುವೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು 12 ವರ್ಷದ ಬಾಲಕಿ ಹೊಟ್ಟೆಯಲ್ಲಿ ರಂಧ್ರ

Bangalore News?:ಆಸ್ತಿ ತೆರಿಗೆ ಸಂಗ್ರಹ; ಗುರಿ ತಲುಪದ ಬಿಬಿಎಂಪಿ; ತಲುಪಬೇಕಿದ್ದ ಗುರಿ ಏನು? ಸಂಗ್ರಹವಾಗಿದ್ದು ಎಷ್ಟು?

ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ.ಹತ್ತತ್ತು ವರ್ಷ ಪ್ರಧಾನಿ ಆಗಿ ಮೋದಿಗೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಲಿಲ್ಲ. ಬರೀ ಸುಳ್ಞು ಹೇಳ್ಕೊಂಡು ತಿರುಗಿದ್ರು. ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿಯ ಪ್ರಮಾಣವನ್ನು 2 ಕೆಜಿ ಕಡಿತ ಮಾಡಿತ್ತು. ನಾವು ಮತ್ತೆ ಅಧಿಕಾರಕ್ಕೆ ಬಂದು 10 ಕೆಜಿಗೆ ಹೆಚ್ಚಿಸಿದ್ದೇವೆ. ಇದು ಕಾಂಗ್ರೆಸ್ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸರ್ಕಾರ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆ ಯ ಫಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾರತದ ವಿದ್ಯಾವಂತ ಯುವ ಸಮೂಹವನ್ನು ನಂಬಿಸಿದ ಮೋದಿ ಈಗ ಪಕೋಡ ಮಾರಿ ಎಂದು ಹೇಳಿ ಮೂರು ನಾಮ ಬಳಿದಿದ್ದಾರೆ. ಬೆಲೆ ಏರಿಕೆಗೆ ಬ್ರೇಕ್ ಹಾಕ್ತೀನಿ ಎಂದು ನಂಬಿಸಿ ಭಾರತೀಯರಿಗೆ ಮೂರು ನಾಮ ಹಾಕಿದ ಮೋದಿ ಮುಖ ನೋಡಿ ಮತ ಹಾಕಿದ್ರೆ ಆ ಮತಕ್ಕೆ ಗೌರವ ಬರುತ್ತಾ? ಎಂದು ಪ್ರಶ್ನಿಸಿದರು.

ಮೋದಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಮಧ್ಯಮ ವರ್ಗ ಮತ್ತು ಬಡವರಿಗೆ ಸ್ಪಂದಿಸುವ ಸಲುವಾಗಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾವು. ಇದೇ ಕೆಲಸ ಬೊಮ್ಮಾಯಿ, ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದೂ ಏಕೆ ಮಾಡಲಿಲ್ಲ? ನಾನು ಈ ರಾಜ್ಯದ ಎಲ್ಲಾ ಜಾತಿ, ಎಲ್ಲಾ ವರ್ಗಗಳ ಮತ್ತು ಎಲ್ಲಾ ಧರ್ಮಗಳ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ. ಶ್ರಮಿಕರು, ದುಡಿಯುವ ವರ್ಗಗಳು, ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬವ ಕೆಲಸ ಮಾಡುತ್ತಿದ್ದೇವೆ. ನೀವು ನಮಗೆ ಈ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಕೊಡಿ. ಎಂದರು.

ರೆಡ್ಡಿ ವಿರುದ್ದ ಕಿಡಿ

ರಿಪಬ್ಲಿಕ್ ಆಫ್ ಬಳ್ಳಾರಿ ಎನ್ನುವ ಅಪಕೀರ್ತಿಗೆ ಕಾರಣರಾದ ಜನಾರ್ಧನರೆಡ್ಡಿಯವರನ್ನು ಗೆಲ್ಲಿಸಿ ಮಾಡಿದ ತಪ್ಪು ಲೋಕಸಭೆಯಲ್ಲಿ ಮರುಕಳಿಸಬಾರದು. ಅನ್ಸಾರಿ ಗೆದ್ದಿದ್ರೆ ನಮ್ಮ ಸರ್ಕಾರದಲ್ಲಿ ಮಂತ್ರಿ ಆಗಿರ್ತಾ ಇದ್ರು. *ಪಕ್ಷದಿಂದ ಪಕ್ಷಕ್ಕೆ ಪದೇ ಪದೇ ಹಾರುವವರನ್ನು ಬೆಳೆಸಬೇಡಿ‌. ಜನಾರ್ದನರೆಡ್ಡಿಯವರ ಸುಳ್ಳುಗಳನ್ನು ನಂಬಬೇಡಿ. ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರಿಗೆ ಮುಂದೆ ಒಳ್ಳೆ ಭವಿಷ್ಯ ಇದೆ ಎಂದರು.

ಗಂಗಾವತಿ ನನಗೆ ಮನೆ ಇದ್ದಂತೆ

ನನಗೆ ಗಂಗಾವತಿ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ್ಚು ಮತಗಳನ್ನು ಕಾಂಗ್ರೆಸ್ ಗೆ ಕೊಡಿಸಿ ಅಭೂತಪೂರ್ವವಾಗಿ ಗೆಲ್ಲಿಸಿ ಎಂದು ಕರೆ ನೀಡಿದರು.

ಸಚಿವರಾದ ಶಿವರಾಜ ತಂಗಡಗಿ, ಬೈರತಿ ಸುರೇಶ್, ಜಿಲ್ಲೆಯ ಶಾಸಕರುಗಳು, ಮಾಜಿ ಸಚಿವರು ಮತ್ತು ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಮುಖಂಡರುಗಳು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ