logo
ಕನ್ನಡ ಸುದ್ದಿ  /  ಕರ್ನಾಟಕ  /  Kuwj Conference 2023: ವಿಜಯಪುರದಲ್ಲಿ ಫೆ.4,5ಕ್ಕೆ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ; ವಿಜಯಪುರದಲ್ಲಿ ಸಿದ್ಧತೆ ಪೂರ್ಣ

KUWJ Conference 2023: ವಿಜಯಪುರದಲ್ಲಿ ಫೆ.4,5ಕ್ಕೆ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ; ವಿಜಯಪುರದಲ್ಲಿ ಸಿದ್ಧತೆ ಪೂರ್ಣ

HT Kannada Desk HT Kannada

Jan 31, 2023 10:21 AM IST

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅವರನ್ನು ಗೌರವಿಸಿದ ಮೈಸೂರು ಪತ್ರಕರ್ತರು.

  • KUWJ Conference 2023: ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಫೆ.4 ಮತ್ತು 5 ರಂದು 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅವರನ್ನು ಗೌರವಿಸಿದ ಮೈಸೂರು ಪತ್ರಕರ್ತರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅವರನ್ನು ಗೌರವಿಸಿದ ಮೈಸೂರು ಪತ್ರಕರ್ತರು.

ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವು ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದೊಂದಿಗೆ ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಫೆ.4 ಮತ್ತು 5 ರಂದು 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ

ಸಂಪಾದಕೀಯ: ಸಂತ್ರಸ್ತರ ಮೇಲೆ ಪ್ರಶ್ನೆಗಳ ದಾಳಿ, ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಬಿಚ್ಚಿಕೊಳ್ಳುತ್ತಿದೆ ಸಮಾಜದ ಕರಾಳ ಮುಖ

ಬೆಂಗಳೂರು ಎಡಿಎ ರಂಗಮಂದಿರದಲ್ಲಿ ಕಲಾವಿದೆ ವಿದ್ಯಾಶ್ರೀ ಎಚ್‌ಎಸ್ ಅವರ ಭರತನಾಟ್ಯ ರಂಗಾರೋಹಣ ಇಂದು

MLC Election 2024: ಪ್ರಜ್ವಲ್ ಪ್ರಕರಣ ನಡುವೆಯೇ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ; ಜೂ 6 ಕ್ಕೆ ಫಲಿತಾಂಶ

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಫೆ.4ರಂದು ಬೆಳಗ್ಗೆ 10.30ಕ್ಕೆ ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದರು.

ಸಚಿವ ಗೋವಿಂದ ಕಾರಜೋಳ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಸಚಿವ ಮುರುಗೇಶ ನಿರಾಣಿ ವ್ಯಂಗ್ಯಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಸಚಿವ ಸಿ.ಸಿ.ಪಾಟೀಲ್ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದು, ಹಲವು ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಫೆ.4 ರಂದು ಮಧ್ಯಾಹ್ನ 2ಕ್ಕೆ ನವಮಾಧ್ಯಮಗಳು ಮತ್ತು ಪತ್ರಕರ್ತರು ಎಂಬ ವಿಚಾರಗೋಷ್ಠಿ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಪತ್ರಿಕೆ ಸಂಪಾದಕ ರವಿ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತ ಅನಂತ ಚಿನಿವಾರ ಉದ್ಘಾಟಿಸುವರು.

ಗಡಿಭಾಗದಲ್ಲಿ ಮಾಧ್ಯಮ ಗೋಷ್ಠಿಯನ್ನು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಉದ್ಘಾಟಿಸುವರು. ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅಧ್ಯಕ್ಷತೆ ವಹಿಸುವರು. ಸಂಜೆ ಪ್ರತಿನಿಧಿಗಳ ಸಮಾವೇಶ ನಡೆಯಲಿದೆ.

ಫೆ.5 ರಂದು ಬೆಳಗ್ಗೆ ಸುದ್ದಿ ಮನೆ ಮತ್ತು ಪತ್ರಿಕಾ ವಿತರಕರ ಕುರಿತ ಗೋಷ್ಠಿಯನ್ನು ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಉದ್ಘಾಟಿಸುವರು. ಐಎಫ್ ಡಬ್ಲ್ಯೂಜೆ ಸಂಚಾಲಕ ಎಚ್.ಬಿ.ಮದನಗೌಡ ಅಧ್ಯಕ್ಷತೆ‌ ವಹಿಸುವರು. ಮಾಧ್ಯಮ ಅಕಾಡೆಮಿ ಸದಸ್ಯರಾದ ಸಿ.ಕೆ.ಮಹೇಂದ್ರ, ಕೆ.ವಿ.ಶಿವಕುಮಾರ್, ದೇವೇಂದ್ರಪ್ಪ ಕಪನೂರ, ಜಗನ್ನಾಥ ಶೆಟ್ಟಿ ಬಾಳ, ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಭಾಗವಹಿಸುವರು.

ಸುದ್ದಿ ಮನೆ ಮತ್ತು ಮಹಿಳೆಯರು ಗೋಷ್ಠಿಯನ್ನು ಕಸ್ತೂರಿ ಸಂಪಾದಕಿ ಶಾಂತಲಾ‌ ಧರ್ಮರಾಜ್ ಉದ್ಘಾಟಿಸುವರು. ಪತ್ರಕರ್ತರಾದ ಆಯೇಶಖಾನಂ, ಬಿ.ಕೆ.ಸುಮತಿ, ಕೆ.ಬಿ.ಶುಭ, ಸವಿತಾ ರೈ, ಸುಧಾರಾಣಿ, ಶೀಲಾ ಪ್ರತಾಪ ಸಿಂಹ ತಿವಾರಿ, ಎಂ.ಆರ್.ಸತ್ಯನಾರಾಯಣ ಭಾಗವಹಿಸುವರು.

ಫೆ.5ರ ಅಪರಾಹ್ನ 1.45ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸಚಿವ ಜೆ.ಸಿ.ಮಾಧುಸ್ವಾಮಿ ಸಮಾರೋಪ ಭಾಷಣ ಮಾಡಲಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿವಿಧ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಚಿವರಾದ ಆರ್.ಅಶೋಕ್, ಶಶಿಕಲಾ ಜೊಲ್ಲೆ, ಡಾ.ಕೆ.ಸುಧಾಕರ, ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾಗವಹಿಸುವರು ಎಂದು ಶಿವಾನಂದ ತಗಡೂರು ತಿಳಿಸಿದರು.

ಜಿಲ್ಲಾ ಸಂಘಗಳಿಗೆ ಪ್ರಶಸ್ತಿ: ಸಾಂಘಿಕ ಚಟುವಟಿಕೆ ಮೂಲಕ ಉತ್ತಮ ಸಾಧನೆ ಮಾಡಿರುವ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಶಿವಮೊಗ್ಗ ಜಿಲ್ಲಾ ಸಂಘ ಹಾಗೂ ಯಾದಗಿರಿ ಜಿಲ್ಲಾ ಸಂಘಕ್ಕೆ ಪ್ರಶಸ್ತಿಯನ್ನು ಸಮ್ಮೇಳನದಲ್ಲಿ ನೀಡಲಾಗುತ್ತಿದೆ.

ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳಿಗೆ ಭಾಜನರಾದ ಮೈಸೂರಿನ ಪತ್ರಕರ್ತರಿಗೆ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಮಾತನಾಡಿ, ಸಮ್ಮೇಳದಲ್ಲಿ ಭಾಗವಹಿಸಲು ಮೈಸೂರು ಜಿಲ್ಲೆಯಿಂದ 77 ಪತ್ರಕರ್ತರು ತೆರಳುತ್ತಿದ್ದೇವೆ. ರಾಜ್ಯ ಸಂಘವು ಎಲ್ಲಾ ಜಿಲ್ಲಾ ಸಂಘಗಳನ್ನು ಒಗ್ಗೂಡಿಸಿ ಮುನ್ನ ಡೆಸುತ್ತಿದೆ. ಮೈಸೂರು ಸಂಘಕ್ಕೆ ಮುಡಾದಿಂದ ಸಿಎ ನಿವೇಶನ ಮಂಜೂರಾಗಿದ್ದು ಸದರಿ ನಿವೇಶನದಲ್ಲಿ ಸಂಘದ ಸುಸಜ್ಜಿತ ಭವನ ನಿರ್ಮಿಸಲು ಸರ್ಕಾರದಿಂದ ಅನುದಾನ ಕಲ್ಪಿಸಿಕೊಡುವಂತೆ ರಾಜ್ಯಾಧ್ಯಕ್ಷರಲ್ಲಿ ಮನವಿ ಮಾಡಿದರು.

ಹುಣಸೂರು ತಾಲೂಕಿನ ಗಾವಡಗೆರೆ ಮಠದಲ್ಲಿ ಶೀಘ್ರದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ಆಯೋಜಿಸಲಾಗುವುದು ಎಂದರು.

ಪ್ರಶಸ್ತಿ ಪುರಸ್ಕೃತ ಪತ್ರಕರ್ತಕೂಡ್ಲಿ ಗುರುರಾಜ್, ಎಲ್.ಎಸ್.ಶ್ರೀಕಾಂತ್, ಅವಿನಾಶ್ ಜೈನಹಳ್ಳಿ, ಎಸ್.ಎಸ್.ಸಚ್ಚಿತ್, ಮಹಿ ಮಹೇಶ್ (ವಿಶೇಷ ಪ್ರಶಸ್ತಿ) ಹಾಗೂ `ಮೈಸೂರು ಮಿತ್ರ ಮತ್ತು `ಸ್ಟಾರ್ ಆಫ್ ಮೈಸೂರ್ ಛಾಯಾಗ್ರಾಹಕ ಲಕ್ಷ್ಮೀನಾರಾಯಣ ಯಾದವ್ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚೆಗೆ ನಿಧನ ಹೊಂದಿದ ತಿ. ನರಸೀಪುರದ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಕಿಸಿಕೊಟ್ಟ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಮಂಜುನಾಥ್ ಅವರ ಪತ್ನಿ ಪಾರ್ವತಿ ಇದೇ ವೇಳೆ ಕೃತಜ್ಞತೆ ಸಲ್ಲಿಸಿದರು.

ರಾಜ್ಯ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ರಾಘವೇಂದ್ರ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ನಗರ ಉಪಾಧ್ಯಕ್ಷ ಎಂ.ಎಸ್. ಬಸವಣ್ಣ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್, ನಗರ ಕಾರ್ಯದರ್ಶಿ ರಂಗಸ್ವಾಮಿ ಮತ್ತಿತರರು ಹಾಜರಿದ್ದರು.

    ಹಂಚಿಕೊಳ್ಳಲು ಲೇಖನಗಳು