ಕನ್ನಡ ಸುದ್ದಿ  /  ಕರ್ನಾಟಕ  /  Dharmasthala: ಡಿ 8ರಿಂದ 12ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ; ಏನೆಲ್ಲಾ ಕಾರ್ಯಕ್ರಮಗಳಿವೆ?

Dharmasthala: ಡಿ 8ರಿಂದ 12ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ; ಏನೆಲ್ಲಾ ಕಾರ್ಯಕ್ರಮಗಳಿವೆ?

HT Kannada Desk HT Kannada

Dec 07, 2023 02:17 PM IST

ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ (ಸಂಗ್ರಹ ಚಿತ್ರ)

    • Dharmasthala Laksha Deepotsava 2023: ರಾತ್ರಿ 12 ಗಂಟೆ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ. ಅಂದು ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಧರ್ಮಸ್ಥಳಕ್ಕೆ ಬಂದು ವೈವಿಧ್ಯಮಯ ಸೇವೆ ಅರ್ಪಿಸುವರು. ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.
ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ (ಸಂಗ್ರಹ ಚಿತ್ರ)
ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ (ಸಂಗ್ರಹ ಚಿತ್ರ)

ಮಂಗಳೂರು: ದೇಶವಿದೇಶಗಳ ಜನರನ್ನೂ ತನ್ನತ್ತ ಆಕರ್ಷಿಸುವ ಸದ್ಭಾವನೆಯ ಕ್ಷೇತ್ರವೆಂದೇ ಹೇಳಲಾಗುವ ಕರ್ನಾಟಕದ ಪವಿತ್ರ ಯಾತ್ರಾ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8 ರಿಂದ 12ರವರೆಗೆ ನಡೆಯಲಿವೆ.

ಟ್ರೆಂಡಿಂಗ್​ ಸುದ್ದಿ

Indian Railways: ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಬೀದರ್‌ನ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ, ಯಾವ ರೈಲು, ಎಲ್ಲಿಯವರೆಗೆ

Bangalore News: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ ವೇಗವಾಗಿ ವಾಹನ ಚಾಲನೆ ಮಾಡಿದರೆ ದಂಡ ಕಟ್ಟ ಬೇಕಾದೀತು, ಹುಷಾರು

ನಮ್ಮಲ್ಲಿ ಒಳಜಗಳ ಇಲ್ಲ, ನಮ್ಮ ಸರ್ಕಾರ ಉರುಳಿಸಿಕೊಳ್ಳಲು ಯಾರಿಂದಲೂ ಆಗೋಲ್ಲ: ಸಿಎಂ ಸಿದ್ದರಾಮಯ್ಯ

Hassan Scandal: 6 ದಿನ ಜೈಲು ವಾಸದ ನಂತರ ಜಾಮೀನಿನ ಮೇಲೆ ರೇವಣ್ಣ ಬಿಡುಗಡೆ

ಡಿ.8ರಂದು ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಹೈಸ್ಕೂಲು ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ ನಡೆಯಲಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್‌ ನಂದನ್ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಉದ್ಘಾಟಿಸುವರು. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ.

ಡಿ. 10ರಂದು ಭಾನುವಾರ ರಾತ್ರಿ 7 ರಿಂದ 10ರ ವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಬಳಗದವರಿಂದ ಗಾನ, ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.

ಡಿ. 11ರಂದು ಸೋಮವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸುವರು. ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.

ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯವಾದಿ ಡಾ. ಎಂ. ಆರ್. ವೆಂಕಟೇಶ್, ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ವಿಜಯಪುರದ ಮಹಮ್ಮದ್ ಗೌಸ್ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ ಗಂಟೆ 8.30ರಿಂದ ಬೆಂಗಳೂರಿನ ಅನುರಾಧಾ ವಿಕ್ರಾಂತ್ ಮತ್ತು ಬಳಗದಿಂದ ನೃತ್ಯ ಪ್ರದರ್ಶನವಿದೆ.

ಸಾಹಿತ್ಯ ಸಮ್ಮೇಳನ:

ಡಿ. 12ರಂದು ಮಂಗಳವಾರ ಸಂಜೆ 5 ಗಂಟೆಗೆ ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ. ಎಸ್. ಸೋಮನಾಥ್ ಉದ್ಘಾಟಿಸುವರು. ಬೆಂಗಳೂರಿನ ಖ್ಯಾತ ಗಮಕಿ ಡಾ.ಎ.ವಿ. ಪ್ರಸನ್ನ ಅಧ್ಯಕ್ಷತೆ ವಹಿಸುವರು.

ಹೊನ್ನಾವರದ ನಿವೃತ್ತ ಉಪನ್ಯಾಸಕ ಡಾ. ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಡಿ ಮತ್ತು ಬಂಟ್ವಾಳದ ಡಾ. ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡುವರು. ರಾತ್ರಿ ಗಂಟೆ 8.30ರಿಂದ ಬೆಂಗಳೂರಿನ ಜತಿನ್ ನೃತ್ಯ ಅಕಾಡೆಮಿಯ ವಿದುಷಿ ಅರ್ಚನಾ ಪುಣ್ಯೇಶ್ ಮತ್ತು ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮವಿದೆ.

ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಡಿ.12 ರಂದು ಮಂಗಳವಾರ ರಾತ್ರಿ 12 ಗಂಟೆ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ. ಅಂದು ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಧರ್ಮಸ್ಥಳಕ್ಕೆ ಬಂದು ವೈವಿಧ್ಯಮಯ ಸೇವೆ ಅರ್ಪಿಸುವರು. ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

ಉತ್ಸವಗಳು:

ಡಿ. 8 ಶುಕ್ರವಾರ: ಹೊಸಕಟ್ಟೆ ಉತ್ಸವ,

ಡಿ. 9 ಶನಿವಾರ: ಕೆರೆಕಟ್ಟೆ ಉತ್ಸವ,

ಡಿ. 10 ಭಾನುವಾರ: ಲಲಿತೋದ್ಯಾನ ಉತ್ಸವ

ಡಿ. 11 ಸೋಮವಾರ: ಕಂಚಿಮಾರುಕಟ್ಟೆ ಉತ್ಸವ,

ಡಿ. 12 ಮಂಗಳವಾರ: ಗೌರಿಮಾರುಕಟ್ಟೆ ಉತ್ಸವ,ಲಕ್ಷದೀಪೋತ್ಸವ,

ಡಿ. 13 ಬುಧವಾರ: ಸಂಜೆ 7 ರಿಂದ ಸಮವಸರಣ ಪೂಜೆ: ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಆವರಣದಲ್ಲಿ ಜರಗಲಿದೆ.

ವರದಿ: ಹರೀಶ ಮಾಂಬಾಡಿ, ಮಂಗಳೂರು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ