ಕನ್ನಡ ಸುದ್ದಿ  /  ಕರ್ನಾಟಕ  /  Dakshina Kannada News: ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ

Dakshina Kannada News: ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ

HT Kannada Desk HT Kannada

Sep 12, 2023 01:22 PM IST

ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ

    • ಹರಪ್ಪಾ ನಾಗರೀಕತೆ ಅಥವಾ ತಾಮ್ರ ಶಿಲಾಯುಗ ಸಂಸ್ಕೃತಿಯ ನಂತರ, ಬೃಹತ್ ಶಿಲಾಯುಗದ ಪದರೀಕೃತ ಸನ್ನಿವೇಶದಲ್ಲಿ ದೊರೆತ ಈ ಶಿಲ್ಪಗಳು ಭಾರತೀಯ ಸಾಂಸ್ಕೃತಿಕ ಚರಿತ್ರೆಯ ಅಧ್ಯಯನದ ಮಹತ್ವಪೂರ್ಣ ಪ್ರಾಚ್ಯಾವಶೇಷಗಳಾಗಿವೆ.
ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ
ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಸಮೀಪ ಇರುವ ಮೂಡುಕೊಣಾಜೆಯ ಬೃಹತ್ ಶಿಲಾಯುಗದ ನಿವೇಶನದಲ್ಲಿನ ಕಲ್ಮನೆ ಸಮಾಧಿಗಳ ಒಳಭಾಗದಲ್ಲಿ ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ಪತ್ತೆಯಾಗಿವೆ.

ಟ್ರೆಂಡಿಂಗ್​ ಸುದ್ದಿ

Bengaluru Temperature: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ ಎಫೆಕ್ಟ್; ಮಾರ್ಚ್ ಬಳಿಕ ಅತಿ ಕಡಿಮೆ ತಾಪಮಾನ ದಾಖಲು

Comedk Exam 2024: ಇಂದು ಕಾಮೆಡ್-ಕೆ ಆನ್‌ಲೈನ್ ಪರೀಕ್ಷೆ; ಪ್ರವೇಶ ಪತ್ರದ ಲಿಂಕ್, ಪರೀಕ್ಷಾ ಸಮಯ ಸೇರಿ ಸಂಪೂರ್ಣ ಮಾಹಿತಿ

ಕರ್ನಾಟಕ ಹವಾಮಾನ ಮೇ 12: ರಾಜಧಾನಿ ಬೆಂಗಳೂರು ಸೇರಿ ಇಂದು ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ

Karnataka Rains: ಹುಬ್ಬಳ್ಳಿ ಧಾರವಾಡ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ, ಕೊಚ್ಚಿ ಹೋದ ಕಾರುಗಳು

ಹರಪ್ಪಾ ನಾಗರೀಕತೆ ಅಥವಾ ತಾಮ್ರ ಶಿಲಾಯುಗ ಸಂಸ್ಕೃತಿಯ ನಂತರ, ಬೃಹತ್ ಶಿಲಾಯುಗದ ಪದರೀಕೃತ ಸನ್ನಿವೇಶದಲ್ಲಿ ದೊರೆತ ಈ ಶಿಲ್ಪಗಳು ಭಾರತೀಯ ಸಾಂಸ್ಕೃತಿಕ ಚರಿತ್ರೆಯ ಅಧ್ಯಯನದ ಮಹತ್ವಪೂರ್ಣ ಪ್ರಾಚ್ಯಾವಶೇಷಗಳಾಗಿವೆ. ತುಳುನಾಡಿನ ಮಾತೃಮೂಲೀಯ ಸಾಮಾಜಿಕವ್ಯವಸ್ಥೆಯ ಹಾಗೂ ದೈವಾರಾಧನೆಯ ಪ್ರಾಚೀನತೆಯ ಅತ್ಯಂತ ವಿಶ್ವಾಸಾರ್ಹ ದಾಖಲೆಗಳಾಗಿವೆ ಎಂದು ಶಿರ್ವದ ಮೂಲ್ಕಿ ಸುಂದರರಾಮ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ವಿಭಾಗ ನಿವೃತ್ತ ಪ್ರಾಧ್ಯಾಪಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ. ಸಂಶೋಧನೆಯಲ್ಲಿ ಶ್ರೇಯಸ್ ಮಣಿಪಾಲ್, ಗೌತಮ್ ಬೆಳ್ಮಣ್, ಶ್ರೇಯಸ್ ಬಂಟಕಲ್, ರವೀಂದ್ರ ಕುಶ್ವಾ, ಕಾರ್ತೀಕ್, ಕು.ಅಕ್ಷತಾ ಮತ್ತು ಪ್ರಜ್ಞಾ ಅವರು ತನ್ನೊಂದಿಗೆ ಭಾಗವಹಿಸಿದ್ದರು ಎಂದು ಪ್ರೊ.ಮುರುಗೇಶಿ ತಿಳಿಸಿದರು.

ಕರ್ನಾಟಕದಲ್ಲಿ ಇದೇ ಪ್ರಥಮ

ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ, ಬೃಹತ್ ಶಿಲಾಯುಗದ ಸಮಾಧಿಯ ಒಳಗೆ ಕಾಮಧೇನು ಅಥವಾ ಮಾತೃದೇವತೆಯ ಎರಡು ಶಿಲ್ಪಗಳು ಪತ್ತೆಯಾಗಿವೆ. ಕೈಯಿಂದ ತಯಾರಿಸಿದ ಈ ಶಿಲ್ಪಗಳು, ಮಾನವ ದೇಹ ಮತ್ತು ನಂದಿಯ ಮುಖವನ್ನು ಹೊಂದಿವೆ. ಅವುಗಳ ಸ್ತ್ರೀತತ್ವದ ಸಂಕೇತವಾಗಿ ಎರಡು ಮೊಲೆಗಳನ್ನು ಅಂಟಿಸಲಾಗಿದೆ. ಇಂತಹ ಏಕೈಕ ಶಿಲ್ಪ ಕೇರಳದ ಮಲಪ್ಪುಜದ ಬೃಹತ್ ಶಿಲಾಯುಗದ ಕುಂಭ ಸಮಾಧಿಯಲ್ಲಿ ದೊರೆತಿದೆ. ಇದರ ಹೊರತು ಭಾರತದ ಯಾವುದೇ ನಿವೇಶನದಲ್ಲಿ ಇಂತಹ ಶಿಲ್ಪಗಳು ಪತ್ತೆಯಾಗಿಲ್ಲ. ಆದರೆ, ಇಂತಹ ಶಿಲ್ಪಗಳು ಈಜಿಪ್ಟ್ ನಲ್ಲಿ ವ್ಯಾಪಕವಾಗಿ ಕಂಡುಬಂದಿವೆ ಎಂದು ಪ್ರೊ.ಮುರುಗೇಶಿ ಮಾಹಿತಿ ನೀಡಿದ್ದಾರೆ.

ಶಿಲ್ಪಗಳ ಜೊತೆಯಲ್ಲಿ ಒಂದು ಮಾತೃದೇವತೆಯ ಶಿಲ್ಪ, ಎರಡು ನವಿಲಿನ ಶಿಲ್ಪಗಳು, ಒಂದು ಮಾತೃ ದೇವತೆಯ ಕೈಯ ಭಾಗ ಹಾಗೂ ಒಂದು ಕುದುರೆ? ಮತ್ತು ಒಂದು ಖಚಿತವಾಗಿ ಗುರುತಿಸಲಾಗದ ವಸ್ತು ಕಂಡು ಬಂದಿದೆ. ಇವುಗಳ ಜೊತೆಯಲ್ಲಿ ಕಬ್ಬಿಣದ ತುಣುಕುಗಳು ಮತ್ತು ಎಲುಬಿನ ಚೂರುಗಳು ಪತ್ತೆಯಾಗಿವೆ. ಕೇರಳ ಮತ್ತು ಕರ್ನಾಟಕದ ಕರಾವಳಿಯಲ್ಲಿ ದೊರೆತಿರುವ ಈ ಶಿಲ್ಪಗಳು ಕರ್ನಾಟಕ ಮತ್ತು ಕೇರಳದಲ್ಲಿನ ಮಾತೃಮೂಲೀಯ ಸಂಸ್ಕೃತಿಯ ಪ್ರಬಲ ಸಾಕ್ಷ್ಯಗಳಾಗಿವೆ. ಈ ಶಿಲ್ಪ ಲಕ್ಷಣಗಳು ಇಲ್ಲಿನ ದೈವಾರಾಧನೆಯ ಶಿಲ್ಪಗಳ ಅತ್ಯಂತ ಪ್ರಾಚೀನ ಪುರಾವೆಗಳಾಗಿವೆ. ಈ ಶಿಲ್ಪಗಳ ಕಾಲಮಾನವನ್ನು ಕನಿಷ್ಠ ಕ್ರಿ,ಪೂ 800 ಅಥವಾ 700 ಎಂದು ನಿರ್ಧರಿಸಬಹುದಾಗಿದ್ದು, ಇದು ಇಲ್ಲಿನ ದೈವಾರಾಧನೆಯ ಪ್ರಾಚೀನತೆಗೂ ಸಾಕ್ಷಿಯಾಗಿದೆ ಎಂದವರು ಹೇಳಿದ್ದಾರೆ.

(ವರದಿ: ಹರೀಶ ಮಾಂಬಾಡಿ)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ