logo
ಕನ್ನಡ ಸುದ್ದಿ  /  ಕರ್ನಾಟಕ  /  Aap Protest In Bengaluru: ಬಿನ್ನಿ ಪಾಠಶಾಲೆ ನಿವೇಶನ ಕಬಳಿಕೆ ಖಂಡಿಸಿ ಎಎಪಿ ಬೃಹತ್‌ ಪ್ರತಿಭಟನೆ

AAP protest in bengaluru: ಬಿನ್ನಿ ಪಾಠಶಾಲೆ ನಿವೇಶನ ಕಬಳಿಕೆ ಖಂಡಿಸಿ ಎಎಪಿ ಬೃಹತ್‌ ಪ್ರತಿಭಟನೆ

HT Kannada Desk HT Kannada

Oct 06, 2022 02:20 PM IST

ಬಿನ್ನಿ ಶಾಲೆ ನಿವೇಶನ ಕಬಳಿಕೆ ಖಂಡಿಸಿ ಬೆಂಗಳೂರಿನಲ್ಲಿಂದು ಎಎಪಿ ಮುಖಂಡರು, ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

  • ಬೆಂಗಳೂರಿನ ಬಿನ್ನಿಪೇಟೆಯಲ್ಲಿರುವ ಬಿನ್ನಿ ಶಾಲೆಯ ನಿವೇಶನ ಕಬಳಿಸುವ ಸಂಚನ್ನು ವಿರೋಧಿಸಿ ಆಮ್‌ ಆದ್ಮಿ ಪಾರ್ಟಿಯ ಅನೇಕ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದದಾರೆ. 

ಬಿನ್ನಿ ಶಾಲೆ ನಿವೇಶನ ಕಬಳಿಕೆ ಖಂಡಿಸಿ ಬೆಂಗಳೂರಿನಲ್ಲಿಂದು ಎಎಪಿ ಮುಖಂಡರು, ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.
ಬಿನ್ನಿ ಶಾಲೆ ನಿವೇಶನ ಕಬಳಿಕೆ ಖಂಡಿಸಿ ಬೆಂಗಳೂರಿನಲ್ಲಿಂದು ಎಎಪಿ ಮುಖಂಡರು, ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಬಿನ್ನಿಪೇಟೆಯಲ್ಲಿರುವ ಬಿನ್ನಿ ಪಾಠಶಾಲೆಯ ನಿವೇಶನ ಕಬಳಿಸುವ ಸಂಚನ್ನು ವಿರೋಧಿಸಿ ಆಮ್‌ ಆದ್ಮಿ ಪಾರ್ಟಿಯ ಅನೇಕ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಟ್ರೆಂಡಿಂಗ್​ ಸುದ್ದಿ

HD Revanna: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್‌ಐಟಿಯಿಂದ ಜೆಡಿಎಸ್ ಶಾಸಕ ರೇವಣ್ಣ ಬಂಧನ; ಮುಂದೇನಾಗುತ್ತೆ

ಸಂಪಾದಕೀಯ: ತಲೆಮರೆಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ ಹಗರಣದ ಸಂತ್ರಸ್ತೆಯರು, ವ್ಯವಸ್ಥೆಯ ಮೇಲೆ ಭರವಸೆ ಹುಟ್ಟುವುದು ಸುಲಭವಲ್ಲ

Prajwal Revanna Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಸಾಧ್ಯತೆ; ಏನಿದು ಬ್ಲೂ ಕಾರ್ನರ್ ನೋಟಿಸ್

ಕರ್ನಾಟಕ ಹವಾಮಾನ ಮೇ 5: ಬೆಂಗಳೂರು ನಗರ ಸೇರಿ ಇಂದು 8 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ; ಈ ಭಾಗದಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆ

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಆಮ್‌ ಆದ್ಮಿ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮುಖಂಡ ರಾಜಶೇಖರ್ ದೊಡ್ಡಣ್ಣ, ಮೈಸೂರು ಅರಸರು 1902ರಲ್ಲಿ ಬಿನ್ನಿ ಮಿಲ್‌ ಕಾರ್ಖಾನೆಯ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆಂದು ಈ ನಿವೇಶನವನ್ನು ನೀಡಿದ್ದರು. ಸುಮಾರು 120 ವರ್ಷಗಳಿಂದ ಸರ್ಕಾರಿ ಶಾಲೆಗೆ ಬಳಕೆಯಾಗುತ್ತಿರುವ ಈ ಐತಿಹಾಸಿಕ ನಿವೇಶನದ ಅತಿಕ್ರಮಕ್ಕೆ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು.

ಶಾಲೆಯ ನಿರ್ವಹಣೆಗಾಗಿ ಬಂದ ಇಟಿಎ ಸಂಸ್ಥೆ ಹಾಗೂ ಬಿನ್ನಿಪೇಟೆ ನಾಗರಿಕ ಹಿತರಕ್ಷಣಾ ಸಂಸ್ಥೆಯು ಪುನರ್‌ ನಿರ್ಮಾಣದ ನೆಪದಲ್ಲಿ ಶಾಲೆಯ ಕಟ್ಟಡವನ್ನು ಮುಂಭಾಗದಲ್ಲಿ ನಿರ್ಮಿಸಿ, ನಿವೇಶನದ ಹಿಂಭಾಗವನ್ನು ಅತಿಕ್ರಮಣ ಮಾಡುತ್ತಿದೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಈ ನಿವೇಶನವು ಸುಮಾರು 12,000 ಚದರ ಅಡಿಯಿದ್ದು, ಕೋಟ್ಯಂತರ ರೂಪಾಯಿ ಬೆಲೆಯಿದೆ. ಹೀಗೆ ಅತಿಕ್ರಮಣ ಮಾಡಿಕೊಂಡ ನಿವೇಶನವನ್ನು ಹಲವು ಸೈಟುಗಳಾಗಿ ಮಾಡಿ ಮಾರಾಟ ಮಾಡಲು ಅವೆರಡು ಸಂಸ್ಥೆಗಳ ಜೊತೆಗೆ ಬಿನ್ನಿಪೇಟೆಯ ಸ್ಥಳೀಯ ರಾಜಕೀಯ ಪುಡಾರಿಗಳು ಕೈಜೋಡಿಸಿದ್ದಾರೆ ಎಂದು ರಾಜಶೇಖರ್‌ ದೊಡ್ಡಣ್ಣ ಆರೋಪ ಮಾಡಿದ್ದಾರೆ.

ಏಕಾಏಕಿ ಜೆಸಿಬಿ ತಂದು ಶಾಲೆಯ ಕಟ್ಟಡವನ್ನು ಧ್ವಂಸ ಮಾಡುತ್ತಿರುವ ವೇಳೆ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕೋಶ ವ್ಯಕ್ತಪಡಿಸಿದರು. ಅನೇಕ ಸ್ಥಳೀಯ ನಾಗರಿಕರು ಪ್ರತಿಭಟನೆಗೆ ಬೆಂಬಲ ನೀಡಿದರು.

    ಹಂಚಿಕೊಳ್ಳಲು ಲೇಖನಗಳು