logo
ಕನ್ನಡ ಸುದ್ದಿ  /  ಕರ್ನಾಟಕ  /  Uppunda Temple Festival: ಫೆ.27ರಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವ

Uppunda temple festival: ಫೆ.27ರಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವ

HT Kannada Desk HT Kannada

Jan 31, 2023 05:14 PM IST

ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ

  • Uppunda temple festival: ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (Uppunda Sri Durgaa Parameshwari Temple) ದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವವು ಫೆ.16 ಹಾಗೂ ಫೆ.27 ರಿಂದ ಮಾರ್ಚ್ 8ರ ತನಕ ನಡೆಯಲಿದೆ. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 25 ವರ್ಷಗಳ ನಂತರ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದೆ.

ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ
ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ

ಉಡುಪಿ: ಬೈಂದೂರಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (Uppunda Sri Durgaa Parameshwari Temple) ದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವವು ಫೆಬ್ರವರಿ 16 ಹಾಗೂ ಫೆಬ್ರವರಿ 27 ರಿಂದ ಮಾರ್ಚ್ 8ರ ತನಕ ನಡೆಯಲಿದೆ. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 25 ವರ್ಷಗಳ ನಂತರ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದೆ.

ಟ್ರೆಂಡಿಂಗ್​ ಸುದ್ದಿ

Hassan Scandal: ಪ್ರಜ್ವಲ್‌ ರೇವಣ್ಣ ವಿಡಿಯೋ ವೈರಲ್‌ಗೆ ಸಿಎಂ, ಡಿಸಿಎಂ ಕಾರಣ: ವಕೀಲ ದೇವರಾಜೇಗೌಡ ಸ್ಪೋಟಕ ಮಾಹಿತಿ

Drought fund: ಮುಂಗಾರು 2023 ಬರ ಪರಿಹಾರ ವಿತರಣೆಗೆ ಕ್ಷಣಗಣನೆ, ಹಣ ಬಂದಿದೆಯೇ ಎಂದು ಹೀಗೆ ಪರೀಕ್ಷಿಸಿ

Indian Railways: ಬೇಸಿಗೆಗೆ ಹುಬ್ಬಳ್ಳಿ, ಬೆಳಗಾವಿಯಿಂದ ಉತ್ತರ ಭಾರತಕ್ಕೆ ವಿಶೇಷ ರೈಲು, ಅರಸೀಕೆರೆ 2 ರೈಲು ಸಂಚಾರ ರದ್ದು

Tumkur News: ತುಮಕೂರು ಜಿಲ್ಲೆಯಲ್ಲಿ ಜಾಲಿ ಮುಳ್ಳಿನ ಮೇಲೆ ಕುಣಿಯುವ ದೇವರನ್ನು ರೇಗಿಸಿ ಚಾಟಿ ಏಟು ತಿನ್ನುವ ಮಜಾ !

ಫೆಬ್ರವರಿ 16ರ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ ಮೂಲಕ ಶುಭ ಕಾರ್ಯದ ಶುಭಾರಂಭ ಆಗಲಿದೆ. ನಂತರದ ಪುಣ್ಯಾಹ, 12 ಕಾಯಿ ಗಣಪತಿ ಹೋಮ, ದುರ್ಗಾ ಹವನ, ಪ್ರಾಯಶ್ಚಿತ್ತ ಕಲಾವೃದ್ಧಿ ಹೋಮ, ಕಲಶಾಭಿಷೇಕ, ವಿಶೇಷ ಪಂಚಾಮೃತ, ವಿಶೇಷ ಮಹಾನೈವೇದ್ಯ, ಮಹಾಜನರಿಂದ ಪ್ರಾಯಶ್ಚಿತ್ತ ಪ್ರಾರ್ಥನೆ, ಸಂತರ್ಪಣೆ ಕಾರ್ಯಗಳು ಮೊದಲ ದಿನ ನಡೆಯಲಿವೆ.

ಫೆಬ್ರವರಿ‌ 27ರ ಬೆಳಗ್ಗೆ 9 ರಿಂದ ಗಣಪತಿ ಪ್ರಾರ್ಥನೆ ಪೂರ್ವಕ ದೇವಿಗೆ ಫಲಕಾಣಿಕೆ ಸಮರ್ಪಣೆ, ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಮಾತೃಕಾ ಪೂಜೆ, ದೇವ ನಾಂದಿ, ಋತಿಧ್ವರ್ಣ, ಮಧುಪರ್ಕ, ಬ್ರಹ್ಮಕೂರ್ಚಹವನ, 6 ಕಾಯಿ ಗಣಹೋಮ, ಬಿಂಬ ಶುದ್ದಿ, ಕಲಶ ಸ್ಥಾಪನೆ, ಶ್ರೀದೇವಿಗೆ ಪ್ರಾಯಶ್ಚಿತ್ತಾಂಗ ಸಪ್ತಶುದ್ಧಿ ಪ್ರಕ್ರಿಯೆಗಳು ಸಂಜೆ 6 ಗಂಟೆಯಿಂದ ಗಣಪತಿ ಪೂಜೆ, ಪುಣ್ಯಾಹ, ಸ್ಥಾನ ಶುದ್ಧಿ ಪೂರ್ವಕ ಪ್ರಸಾದ, ಶುದ್ಧಿ, ರಾಕ್ಷೋಘ್ನ, ವಾಸ್ತು ಹವನ, ಬಲಿ, ರಕ್ಷೆ, ಯಾಗಶಾಲಾ ಪ್ರವೇಶ, ಕಲಶ ಸ್ಥಾಪನೆ, ಅಧಿವಾಸಾದಿ ಹವನಗಳು ನಡೆಯಲಿವೆ.

ಫೆಬ್ರವರಿ 28ರಂದು ಬೆಳಗ್ಗೆ 9ರಿಂದ ಗಣಪತಿ ಪೂಜೆ, ಪುಣ್ಯಾಹ, ಬಿಂಬಗಳಿಗೆ ಹಾಗೂ ಪರಿವಾರ ದೇವರಿಗೆ ನ್ಯಾಸಗಳು, ಜಲಾಧಿವಾಸ ಪ್ರಕ್ರಿಯೆ, ಬಿಂಬ ಶುದ್ಧಿ ಹವನ, ಸ್ಥಾನಶುದ್ಧಿ ಹವನ, ಅಧಿವಾಸ ಹವನ ಕಾರ್ಯಗಳು ನಡೆಯಲಿವೆ. ಅದೇ ದಿನ ಸಂಜೆ 6 ಗಂಟೆಯಿಂದ ಗಣಪತಿ ಪೂಜೆ ಪೂರ್ವಕ ಬಿಂಬ ಶುದ್ಧಿ ಕಲಶಾಭಿಷೇಕ, ಸಪ್ತಾಧಿವಾಸ ವಿಧಿಗಳು, ಮಂತ್ರನ್ಯಾಸಗಳು, ಅಧಿವಾಸ ಶಕ್ತಿ ಹವನಗಳು ನಡೆಯಲಿವೆ.

ಮಾರ್ಚ್ 1 ರಂದು ಬೆಳಗ್ಗೆ 7ರಿಂದ ಗಣಪತಿ ಪೂಜೆ, ಪುಣ್ಯಾಹ, ರತ್ನನ್ಯಾಸ ಹವನಗಳು, ಪ್ರತಿಷ್ಟಾ ಹವನ, ನವಗ್ರಹ ಹವನ, ಬಿಂಬ ಶುದ್ಧಿ, ಬಂಧ ಶುದ್ಧಿ ಕ್ರಿಯೆಗಳು, ಪೀಠ ಪ್ರತಿಷ್ಠಾಪನೆ, ರತ್ನನ್ಯಾಸ ವಿಧಿ, - ಬೆಳಗ್ಗೆ 9ಗಂಟೆ 02 ನಿಮಿಷಕ್ಕೆ ಸಲ್ಲುವ ಮೀನ ಲಗ್ನದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವರ ಪುನಃಪ್ರತಿಷ್ಠೆ, ಈಶ್ವರ ದೇವರ ಪುನಃಪ್ರತಿಷ್ಟೆ, ಅಷ್ಟಬಂಧ ಲೇಪನ, ಜೀವನ್ಯಾಸಗಳು, ಪ್ರಾಣ ಪ್ರತಿಷ್ಟಾಪನೆ, ತತ್ವಹವನ, ಪೂರ್ಣ ಕಲಾಹವನ, ನಿರೀಕ್ಷಾ ಪೂಜೆ, ಧ್ವಜಾರೋಹಣ ಪೂರ್ವಕ ಉತ್ಸವಕ್ರಮಾರಂಭ ನಡೆಯಲಿವೆ.

ಮಾರ್ಚ್ 2 ರಂದು ಗಜಾರೋಹಣೋತ್ಸವ

ಮಾರ್ಚ್ 3 ರಂದು ಅಶ್ವಾರೋಹಣೋತ್ಸವ

ಮಾರ್ಚ್ 4 ರಂದು ಮಯೂರವಾಹನೋತ್ಸವ, ಸಂಜೆ ಗಣಪತಿ ಪೂಜೆ, ಪುಣ್ಯಾಹ, ಬ್ರಹ್ಮಕಲಶ ಸ್ಥಾಪನೆ, ಬಲಿ ಹಾಗೂ ದಿಶಾ ಹೋಮ ನಡೆಯಲಿವೆ.

ಮಾರ್ಚ್ 5 ರಂದು ಉದಯಬಲಿ, ಬ್ರಹ್ಮಕಲಶಾಭಿಷೇಕ, ಪುಷ್ಪಕಸಿಂಹಾರೋಹಣೋತ್ಸವ ಮತ್ತು ರಾತ್ರಿ ರಂಗಪೂಜೆ ನಡೆಯಲಿವೆ.

ಮಾರ್ಚ್ 6 ರಂದು ಮಧ್ಯಾಹ್ನ ಭೂತಬಲಿ, ರಥಾರೋಹಣ, ಶ್ರೀಮನ್ಮಹಾ ರಥೋತ್ಸವ ನಡೆಯಲಿವೆ.

ಮಾರ್ಚ್ 7 ರಂದು ಅವಶಿಷ್ಟ ಹವನಗಳು, ಚೂರ್ಣೋತ್ಸವ ‌ನಡೆಯಲಿವೆ.

ಮಾರ್ಚ್ 8 ರಂದು ಧ್ವಜಾವರೋಹಣ, ಪೂರ್ಣಾಹುತಿ, ಅಂಕುರೋಪಣ, ಪ್ರಸಾದ ವಿತರಣೆ ಹಾಗೂ ನಗರೋತ್ಸವ ನಡೆಯಲಿದೆ.

ಬಿ‌.ಎಸ್. ಸುರೇಶ್ ಶೆಟ್ಟಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದು, ಈಗಾಗಲೇ ಹಲವು ಸಮಿತಿಗಳ ರಚಿಸಿ ಪೂರ್ವಸಿದ್ಧತಾ ಕಾರ್ಯ ಶುರುವಾಗಿದೆ. ಈ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀಮನ್ಮಹಾ ರಥೋತ್ಸವದ ಶುಭಕಾರ್ಯಕ್ಕಾಗಿ ಉದ್ಯಮಿ ಯು.ಬಿ. ಶೆಟ್ಟಿ ಐದು ಲಕ್ಷದ ಐದು ರೂಪಾಯಿಯನ್ನು ಸೇವಾ ರೂಪದಲ್ಲಿ ದೇಗುಲಕ್ಕೆ ನೀಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು