logo
ಕನ್ನಡ ಸುದ್ದಿ  /  ಕರ್ನಾಟಕ  /  Bjp List: ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಭಾರಿ ಕಸರತ್ತು; ಸೂಕ್ತ ಅಭ್ಯರ್ಥಿಗಳನ್ನ ಆರಿಸಿಯೇ ಪಟ್ಟಿ ಬಿಡುಗಡೆ ಮಾಡ್ತೇವೆ: ಸಚಿವ ಸುಧಾಕರ್‌

BJP List: ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಭಾರಿ ಕಸರತ್ತು; ಸೂಕ್ತ ಅಭ್ಯರ್ಥಿಗಳನ್ನ ಆರಿಸಿಯೇ ಪಟ್ಟಿ ಬಿಡುಗಡೆ ಮಾಡ್ತೇವೆ: ಸಚಿವ ಸುಧಾಕರ್‌

HT Kannada Desk HT Kannada

Apr 02, 2023 11:16 AM IST

ಆರೋಗ್ಯ ಸಚಿವ ಡಾ ಕೆ ಸುಧಾಕರ್ (ಫೋಟೋ-ಫೈಲ್)

  • ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಯಾವಾಗಲೂ ಆಡಳಿತ ವಿರೋಧಿ ಅಲೆ ಇರುತ್ತದೆ. ಆದರೆ ಈ ಬಾರಿ ಅದನ್ನು ಮೀರಿ ಪಕ್ಷಕ್ಕೆ ಬೆಂಬಲ ದೊರೆಯಲಿದೆ ಎಂದು ಸಚಿವ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಸಚಿವ ಡಾ ಕೆ ಸುಧಾಕರ್ (ಫೋಟೋ-ಫೈಲ್)
ಆರೋಗ್ಯ ಸಚಿವ ಡಾ ಕೆ ಸುಧಾಕರ್ (ಫೋಟೋ-ಫೈಲ್)

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇತರೆ ರಾಜಕೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಲು ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾರಿ ಕಸರತ್ತು ನಡೆಸುತ್ತಿದೆ.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ನಗರದ ಹೊರಹೊಲಯದ ಖಾಸಗಿ ರೆಸಾರ್ಟ್ ನಲ್ಲಿ ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಮೊದಲ ಪಟ್ಟಿ ಬಿಡುಗಡೆ ಕುರಿತಂತೆ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಮಾತನಾಡಿರುವ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ವರಿಷ್ಠರು ಸೂಕ್ತ ಅಭ್ಯರ್ಥಿಗಳನ್ನು ಆರಿಸಿಯೇ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ. ಬೇರೆ ಪಕ್ಷಗಳಂತೆ ಇಲ್ಲಿ ಅವ್ಯವಸ್ಥಿತವಾಗಿ ಏನೂ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್‌ 13 ರ ತನಕ ಸಮಯ ಇದೆ. ಚುನಾವಣೆಯಲ್ಲಿ ರಣತಂತ್ರ ಮಾಡಬೇಕಾಗುತ್ತದೆ. ಎಲ್ಲರಿಗಿಂತ ಮೊದಲು ಪಟ್ಟಿ ಬಿಡುಗಡೆ ಮಾಡಿದಾಕ್ಷಣ ಗೆಲ್ಲುತ್ತೇವೆ ಎಂದರ್ಥವಲ್ಲ. ಬಿಜೆಪಿಗೆ ತನ್ನದೇ ಆದ ತಂತ್ರವಿದೆ ಎಂದಿದ್ದಾರೆ.

ಶಿಸ್ತಿನ ಪಕ್ಷ ಬಿಜೆಪಿಯಲ್ಲಿ ಎಲ್ಲವೂ ಶಿಸ್ತುಬದ್ಧವಾಗಿ ನಡೆಯುತ್ತೆ

ಅಭ್ಯರ್ಥಿಗಳ ನಡುವೆ ಜಗಳ, ಚೇರ್‌ಗಳು ಮುರಿದುಹೋಗುವಂತಹ ಘಟನೆಗಳು ಬೇರೆ ಪಕ್ಷಗಳಲ್ಲಿ ನಡೆಯುತ್ತಿದೆ. ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಎಲ್ಲವೂ ಶಿಸ್ತುಬದ್ಧವಾಗಿ ನಡೆಯುತ್ತದೆ. ಕಾಂಗ್ರೆಸ್‌ನಲ್ಲಿ ಯಾರೋ ಪ್ರಣಾಳಿಕೆಯನ್ನು ಬರೆದುಕೊಟ್ಟು, ಅದನ್ನು ಒಂದನೇ ಗ್ಯಾರಂಟಿ, ಎರಡನೇ ಗ್ಯಾರಂಟಿ ಎಂದು ಓದುತ್ತಾ ಹೋದರು. ಬಿಜೆಪಿ ಈ ರೀತಿ ಮಾಡಿಲ್ಲ ಎಂದ ಸುಧಾಕರ್ ಕೈ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಪ್ರಣಾಳಿಕೆ ರೂಪಿಸಲು ಬಿಜೆಪಿ ಜನರ ಮುಂದೆ ಹೋಗಿದೆ. ರೈತರು, ಸಣ್ಣ ಕೈಗಾರಿಕಾ ಉದ್ಯಮಿಗಳು, ಕಾರ್ಮಿಕರು ಮೊದಲಾದ ವರ್ಗದ ಜನರ ಕಷ್ಟಗಳನ್ನು ಆಲಿಸಿ, ಅದಕ್ಕೆ ಪೂರಕವಾಗಿ ಪ್ರಣಾಳಿಕೆ ರಚಿಸಲಾಗುತ್ತಿದೆ. ಬಿಜೆಪಿಗೂ ಕಾಂಗ್ರೆಸ್‌ಗೂ ಅಜಗಜಾಂತರ ವ್ಯತ್ಯಾಸವಿದೆ ಅಂತ ಹೇಳಿದ್ದಾರೆ.

‘ಸಿಎಂ ವಿರುದ್ಧ ನಿಂತರೆ ವಿನಯ್ ಕುಲಕರ್ಣಿಗೆ ದೊಡ್ಡ ಅಂತರದ ಸೋಲು’

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚುನಾವಣೆಯಲ್ಲಿ ಎಂದೂ ಸೋತಿಲ್ಲ. ಅವರು ಎಲ್ಲಿ ನಿಂತರೂ ಗೆಲ್ಲುತ್ತಾರೆ. ಶಿಗ್ಗಾವಿಯಲ್ಲಿ ಪೂರಕವಾದ ವಾತಾವರಣ ಇದೆಯೇ, ಇಲ್ಲವೇ ಎಂದು ಯಾರೂ ಹೇಳಿಲ್ಲ. ಶಿಗ್ಗಾವಿಯಲ್ಲಿ ಸ್ಪರ್ಧಿಸಿದರೆ ಅತಿ ಹೆಚ್ಚು ಮತಗಳು ಬೊಮ್ಮಾಯಿಯವರಿಗೆ ದೊರೆಯುತ್ತದೆ. ಬೊಮ್ಮಾಯಿಯವರ ವಿರುದ್ಧ ನಿಂತುಕೊಂಡರೆ, ವಿನಯ್‌ ಕುಲಕರ್ಣಿಯವರು ದೊಡ್ಡ ಅಂತರದಲ್ಲೇ ಸೋಲುತ್ತಾರೆ ಎಂದು ಸಚಿವ ಸುಧಾಕರ್ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯನವರು ವರುಣಾದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಅವರು ಕೋಲಾರದಲ್ಲಿ ಸ್ಪರ್ಧಿಸುತ್ತಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಪಟ್ಟಿಯೇನೂ ಬಿಡುಗಡೆ ಮಾಡಿಲ್ಲ. ಎರಡನೇ ಪಟ್ಟಿ ಬಿಡುಗಡೆ ಮಾಡಲು ಬಹಳ ತಡವಾಗುತ್ತಿದೆ ಎಂದರು.

ಬಿಜೆಪಿಯೇ ಮತ್ತೆ ಅಧಿಕಾರಕ್ಕೆ

ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ನಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ. ಬಿಜೆಪಿಯ ಕಾರ್ಯಕರ್ತರು ಬಹಳ ಉತ್ಸಾಹದಲ್ಲಿದ್ದಾರೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಯಾವಾಗಲೂ ಆಡಳಿತ ವಿರೋಧಿ ಅಲೆ ಇರುತ್ತದೆ. ಆದರೆ ಈ ಬಾರಿ ಅದನ್ನು ಮೀರಿ ಪಕ್ಷಕ್ಕೆ ಬೆಂಬಲ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ