logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 24; ಬಾಗಲಕೋಟೆ, ಬೆಳಗಾವಿ, ಮೈಸೂರು ಸೇರಿ 8 ಜಿಲ್ಲೆಗಳಲ್ಲಿ ಮಳೆ, ಉತ್ತರ ಒಳನಾಡಲ್ಲಿ ಶಾಖದ ಅಲೆ

ಕರ್ನಾಟಕ ಹವಾಮಾನ ಏಪ್ರಿಲ್‌ 24; ಬಾಗಲಕೋಟೆ, ಬೆಳಗಾವಿ, ಮೈಸೂರು ಸೇರಿ 8 ಜಿಲ್ಲೆಗಳಲ್ಲಿ ಮಳೆ, ಉತ್ತರ ಒಳನಾಡಲ್ಲಿ ಶಾಖದ ಅಲೆ

Umesh Kumar S HT Kannada

Apr 24, 2024 06:17 AM IST

ಕರ್ನಾಟಕ ಹವಾಮಾನ ಏಪ್ರಿಲ್‌ 24; ಹೇಗಿದೆ ಇಂದಿನ ಹವಾಮಾನ

  • ಕರ್ನಾಟಕ ಹವಾಮಾನ ಏಪ್ರಿಲ್ 24: ಕರ್ನಾಟಕದಲ್ಲಿ ಇಂದು ಬಾಗಲಕೋಟೆ, ಬೀದರ್, ಬೆಳಗಾವಿ ಮೈಸೂರು, ಕೊಡಗು ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಲ್ಲಿ ಶಾಖದ ಅಲೆ ಕಾಣಬಹುದು. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ, ತಾಪಮಾನ ಹೆಚ್ಚಳ ಕಂಡಬರಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 24; ಹೇಗಿದೆ ಇಂದಿನ ಹವಾಮಾನ
ಕರ್ನಾಟಕ ಹವಾಮಾನ ಏಪ್ರಿಲ್‌ 24; ಹೇಗಿದೆ ಇಂದಿನ ಹವಾಮಾನ

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಏಪ್ರಿಲ್ 24) ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು. ಗುಡುಗು ಮಿಂಚಿನ ಮುನ್ನೆಚ್ಚರಿಕೆಯನ್ನೂ ನೀಡಲಾಗಿದೆ. ಉಳಿದೆಡೆ ಒಣಹವೆ ಕಂಡುಬರಲಿದೆ. ಅದೇ ರೀತಿ ಬೆಂಗಳೂರು ಮತ್ತು ಸುತ್ತಮುತ್ತ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ತಾಪಮಾನ ಹೆಚ್ಚಳ ಕಂಡುಬರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಹೇಳಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಕೊಡಗು: ಸೋಮವಾರಪೇಟೆ ಸೂರ್ಲಬ್ಬಿಯಲ್ಲಿ 16 ವರ್ಷದ ಬಾಲಕಿಯ ದಾರುಣ ಹತ್ಯೆ, ವಿವಾಹ ಮುಂದೂಡಿದ್ದಕ್ಕೆ 32 ವರ್ಷದ ವ್ಯಕ್ತಿ ಪೈಶಾಚಿಕ ಕೃತ್ಯ

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌; ಸಕಲೇಶಪುರದಲ್ಲಿ ಮೂವರನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು, ಇಬ್ಬರು ಆರೋಪಿಗಳು, ಅವರ ಆಶ್ರಯದಾತ ಬಂಧಿತರು

ಬೆಂಗಳೂರು ಸಂಚಾರ ಸಲಹೆ; ನಾಗವಾರ ಮೇಲ್ಸೇತುವೆ ಬಳಿ ಇಂದಿನಿಂದ ಸರ್ವೀಸ್‌ ರಸ್ತೆ ಬಂದ್‌, ಟೈಮಿಂಗ್ಸ್ ಮತ್ತು ಇತರೆ ವಿವರ

ಮಂಗಳೂರು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ; ಆರೋಪಿ ಬಂಧನ

ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಪ್ರಕಾರ, ಏಪ್ರಿಲ್ 25ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಒಣಹವೆ ಮುಂದುವರಿಯಲಿದೆ. ಏಪ್ರಿಲ್‌ 27 ರ ತನಕ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 24 ರಿಂದ 27ರ ತನಕದ ಅವಧಿಯಲ್ಲಿ ಬಿಸಿ ಮತ್ತು ಆರ್ದ್ರತೆಯ ಪ್ರಮಾಣ ಹೆಚ್ಚಾಗಲಿದೆ.

ಉತ್ತರ ಒಳನಾಡಿನ ಬಾಲಕೋಟೆ, ಬೆಳಗಾವಿ, ಬೀದರ್, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ಬೀಳಬಹುದು. ಜೊತೆಗೆ ಗುಡುಗು ಮಿಂಚು ಕೂಡ ಕಾಣಿಸಬಹುದು. ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು,ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಈ ಪ್ರದೇಶಗಳಲ್ಲಿ ಏಪ್ರಿಲ್ 27ರ ತನಕ ತಾಪಮಾನವು 2 ರಿಂದ 2 ಡಿಗ್ರಿ ಸೆಲ್ಶಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆ ಇದೆ ಎಂದು ವರದಿ ಎಚ್ಚರಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆಯಾಗಬಹುದು. ಗುಡುಗು ಮತ್ತು ಮಿಂಚಿನ ಎಚ್ಚರಿಕೆಯನ್ನೂ ಮಳೆ ಮುನ್ಸೂಚನೆ ವರದಿ ನೀಡಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಶಾಖದ ಅಲೆಯ ಎಚ್ಚರಿಕೆ

ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಏಪ್ರಿಲ್ 27ರ ತನಕ ಶಾಖದ ಅಲೆಗಳ ಎಚ್ಚರಿಕೆಯನ್ನು ಹವಾಮಾನ ಮುನ್ಸೂಚನಾ ವರದಿ ನೀಡಿದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 24), ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 24) ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಮುಂಜಾನೆ ಹೊತ್ತು ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 23) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 23) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 37.6 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 37.6 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 24 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 36)

ಮಂಗಳೂರು – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಚಿತ್ರದುರ್ಗ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಗದಗ – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 61)

ಹೊನ್ನಾವರ – 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಕಲಬುರಗಿ – 28.7 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 49)

ಬೆಳಗಾವಿ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62)

ಕಾರವಾರ – 33.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ